HomeಚಳವಳಿNIAಯಿಂದ ಸಮನ್ಸ್‌ ಪಡೆದಿದ್ದ 'ಖಾಲ್ಸಾ ಏಡ್‌' ನೊಬೆಲ್‌ ಶಾಂತಿ ಪುರಸ್ಕಾರಕ್ಕೆ ನಾಮನಿರ್ದೇಶನ!

NIAಯಿಂದ ಸಮನ್ಸ್‌ ಪಡೆದಿದ್ದ ‘ಖಾಲ್ಸಾ ಏಡ್‌’ ನೊಬೆಲ್‌ ಶಾಂತಿ ಪುರಸ್ಕಾರಕ್ಕೆ ನಾಮನಿರ್ದೇಶನ!

ನೊಬೆಲ್‌ ಶಾಂತಿ ಪುರಸ್ಕಾರಕ್ಕೆ ನಾಮ ನಿರ್ದೇಶನಗೊಂಡ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳ ವಿಚಾರಣೆ ಮುಂದೂಡಿದೆ.

- Advertisement -
- Advertisement -

ಕಳೆದ ಎರಡು ತಿಂಗಳಿಂದ ದೆಹಲಿ ಗಡಿಯಲ್ಲಿ ನಡೆಯುತ್ತಿರುವ ರೈತ ಹೋರಾಟಕ್ಕೆ ಬೆನ್ನೆಲುಬಿನಂತಿರುವ ಖಾಲ್ಸಾ ಏಡ್‌ ಎಂಬ ಅಂತಾರಾಷ್ಟ್ರೀಯ ಸೇವಾ ಸಂಸ್ಥೆ 2021ರ ನೊಬೆಲ್‌ ಶಾಂತಿ ಪುರಸ್ಕಾರಕ್ಕೆ ನಾಮನಿರ್ದೇಶನಗೊಂಡಿದೆ. ಈ ಸಂಸ್ಥೆಗೆ ದೇಣಿಗೆ ಹರಿದು ಬರುತ್ತಿರುವ ಹಿನ್ನೆಲೆಯನ್ನು ಪ್ರಶ್ನಿಸಿ ರಾಷ್ಟ್ರೀಯ ತನಿಖಾ ದಳ(NIA)ವು ಜನವರಿ 16 ರಂದು ಸಮನ್ಸ್‌ ನೀಡಿತ್ತು.

ಕೆನಡಾದ ಸಂಸದರಾದ ಉಪಲ್‌ ಅವರು ಖಾಲ್ಸಾ ಸಂಸ್ಥೆಯನ್ನು ನಾಮನಿರ್ದೇಶನಕ್ಕೆ ಮನವಿ ಮಾಡಿ ಜನವರಿ 14 ರಂದು ಪತ್ರ ಬರೆದಿದ್ದರು.

ಇದನ್ನೂ ಓದಿ: ’ರೈತ ಹೋರಾಟಕ್ಕೆ ಹೆಗಲು ಕೊಟ್ಟು ನಿಂತಿದೆ ಖಾಲ್ಸಾ ಏಡ್‌ ಸೇವಾ ಸಂಸ್ಥೆ’

ಇಂಗ್ಲೆಂಡಿನ ಮೂಲದ ಖಾಲ್ಸಾ ಏಡ್‌ ಸಂಸ್ಥೆ 1999 ರಲ್ಲಿ ರವೀಂದರ್‌ ಸಿಂಗ್‌ ಅವರಿಂದ ಸ್ಥಾಪನೆಯಾಯಿತು. ಸಿಖ್‌ ಸಮುದಾಯದ ಈ ಸಂಸ್ಥೆಯು ನಿಧಾನವಾಗಿ ವಿಶ್ವದಾದ್ಯಂತ ತನ್ನ ಸೇವಾ ಚಟುವಟಿಕೆಗಳನ್ನು ವಿಸ್ತರಿಸಿದೆ. “ಮನುಕುಲವನ್ನು ಒಂದೆಂದು ಭಾವಿಸಿ, ಮಾನವೀಯತೆಯ ಸೇವೆ” ಮಾಡುವುದು ಈ ಸಂಸ್ಥೆಯ ಧ್ಯೇಯ.

ಕೆನಡಾ, ಆಸ್ಟ್ರೇಲಿಯಾ ಸೇರಿದಂತೆ ವಿವಿಧ ದೇಶಗಳಲ್ಲಿ ನಿರಂತರವಾಗಿ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿರುವ ಖಾಲ್ಸಾ ಏಡ್‌, ಪ್ರವಾಹ ಸೇರಿದಂತೆ ಯಾವುದೇ ರೀತಿಯ ನೈಸರ್ಗಿಕ ವಿಕೋಪ ಸಂದರ್ಭದಲ್ಲಿ ಎಲ್ಲ ರೀತಿಯ ನೆರವನ್ನು ಒದಗಿಸಿದೆ.

ಇಲ್ಲಿ ಉಲ್ಲೇಖಿಸಬಹುದಾದ ಕೆಲವು ನೆರವಿನ ಚಟುವಟಿಕೆಗಳು ಇಂತಿವೆ

  • 1999ರ ಟರ್ಕಿ ಭೂಕಂಪದ ವೇಳೆ ಸಂತ್ರಸ್ತರಿಗೆ ಮೂಲ ಸೌಕರ್ಯ.
  • 2000 ದಲ್ಲಿ ಒರಿಸಾದಲ್ಲಿ ಚಂಡಮಾರುತದಿಂದ ಉಂಟಾದ ಅನಾಹುತದ ರಕ್ಷಣಾ ಕಾರ್ಯಕ್ಕೆ ಸ್ವಯಂ ಸೇವಕರ ರವಾನೆ
  • ಆಫ್‌ಘಾನಿಸ್ತಾನದಲ್ಲಿ 2003 ರಲ್ಲಿ ಶೈಕ್ಷಣಿಕ ಉದ್ದೇಶಕ್ಕಾಗಿ ಉಪಕರಣ ಹಾಗೂ ಆರ್ಥಿಕ ನೆರವು.
  • 2016 ರಲ್ಲಿ ಲಂಡನ್‌ನಲ್ಲಿ ಉಂಟಾದ ಪ್ರವಾಹದಿಂದಾಗಿ ಸಂತ್ರಸ್ತರಿಗೆ ಶಿಬಿರಗಳ ಸ್ಥಾಪನೆ ಮತ್ತು ನೆರವು.
  • ಬಾಂಗ್ಲಾ-ಮಯನ್ಮಾರ್‌ ಗಡಿಯಲ್ಲಿದ್ದ ರೊಹಿಂಗ್ಯಾ ನಿರಾಶ್ರಿತರಿಗೆ ಸೇವೆ.
  • 2018 ರಲ್ಲಿ ಇಡೀ ಕೇರಳವನ್ನು ನಡುಗಿಸಿದ ಪ್ರವಾಹದ ವೇಳೆ ಅತಿ ದೊಡ್ಡ ನೆರವಿನ ಕಾರ್ಯವನ್ನು ನಡೆಸಿದ ಹೆಗ್ಗಳಿಕೆ ಖಾಲ್ಸಾ ಸಂಸ್ಥೆಯದ್ದು.

ಈಗ ಪಂಜಾಬಿನಿಂದ ಆರಂಭವಾಗಿ ಕೃಷಿ ನೀತಿಗಳ ವಿರುದ್ಧ ನಡೆಯುತ್ತಿರುವ ಭಾರಿ ಹೋರಾಟಕ್ಕೆ ಸಂಪೂರ್ಣ ಬೆಂಬಲ ಒದಗಿಸಿದ್ದು, ಬಟ್ಟೆ, ಊಟ, ವೈದ್ಯಕೀಯ ನೆರವು ಸೇರಿದಂತೆ ಎಲ್ಲ ರೀತಿಯಲ್ಲೂ ಬೆಂಬಲಕ್ಕೆ ನಿಂತಿದ್ದೆ. ಸರ್ಕಾರ ವಿರುದ್ಧದ ಹೋರಾಟಕ್ಕೆ ಈ ರೀತಿಯಲ್ಲಿ ಬೆನ್ನಿಗೆ ನಿಂತ ಕಾರಣಕ್ಕೆ ಭಯೋತ್ಪಾದಕ ಸಂಸ್ಥೆ ಎಂದು ದೂಷಿಸಿದ್ದು ಅಲ್ಲದೆ, ವಿಚಾರಣೆಗೆ ಕರೆದಿತ್ತು.

ಇದನ್ನೂ ಓದಿ: ಭಯೋತ್ಪಾದಕ ಸಂಘಟನೆಗಳ ನಂಟಿನ ಆರೋಪ: ರೈತ ಹೋರಾಟಗಾರರಿಗೆ NIA ನೋಟಿಸ್

ಆದರೆ ನೊಬೆಲ್‌ ಶಾಂತಿ ಪುರಸ್ಕಾರಕ್ಕೆ ನಾಮ ನಿರ್ದೇಶನಗೊಂಡ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳ ವಿಚಾರಣೆ ಮುಂದೂಡಿದೆ.

ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ


ಇದನ್ನೂ ಓದಿ: ರೈತ ಹೊಸ ಬೆಳೆಯನ್ನು ಬೆಳೆಯಬಲ್ಲ…. ಹೊಸ ನಗರವನ್ನು ಸೃಷ್ಟಿಸಬಲ್ಲ…!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...