Homeಚಳವಳಿ’ರೈತ ಹೋರಾಟಕ್ಕೆ ಹೆಗಲು ಕೊಟ್ಟು ನಿಂತಿದೆ ಖಾಲ್ಸಾ ಏಡ್‌ ಸೇವಾ ಸಂಸ್ಥೆ’

’ರೈತ ಹೋರಾಟಕ್ಕೆ ಹೆಗಲು ಕೊಟ್ಟು ನಿಂತಿದೆ ಖಾಲ್ಸಾ ಏಡ್‌ ಸೇವಾ ಸಂಸ್ಥೆ’

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ವಿರೋಧಿಸಿ ಕಳೆದ 42 ದಿನಗಳಿಂದ ದೆಹಲಿಯ ಗಡಿಗಳಲ್ಲಿ ರೈತರು ಹೋರಾಟ ನಡೆಸುತ್ತಿದ್ದಾರೆ. ದೆಹಲಿಯ ಗಡಿಯಾದ ಟಿಕ್ರಿ ಗಡಿಯಲ್ಲಿ ಕೂಡಾ ಕಳೆದ ಎರಡು ದಿನಗಳಿಂದ ಬಿಡದೇ ಸುರಿಯುತ್ತಿರುವ ಮಳೆಯಲ್ಲಿಯೂ ರೈತರು ಒಂದಿಷ್ಟು ಕದಲದೇ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ಕೊರೆಯುವ ಚಳಿ ಮತ್ತು ಮಳೆಯಿಂದಾಗಿ ಪ್ರತಿಭಟನಾ ನಿರತ ರೈತರಿಗೆ ವಿವಿಧ ರೀತಿಯ ಸಮಸ್ಯೆಗಳು ಎದುರಾಗುತ್ತಿದ್ದು, ಖಾಲ್ಸಾ ಏಡ್‌ ಸಂಸ್ಥೆ ಎಲ್ಲ ರೀತಿಯ ನೆರವು ನೀಡುವ ಮೂಲಕ ಹೋರಾಟಕ್ಕೆ ಬಲ ತುಂಬಿದೆ.

ಇದನ್ನೂ ಓದಿ: ರೈತ ಹೋರಾಟ: 7 ನೇ ಸುತ್ತಿನ ಮಾತುಕತೆ ವಿಫಲ – ಜನವರಿ 8 ಕ್ಕೆ ಮತ್ತೊಂದು ಸಭೆ

ದೆಹಲಿಯ ಸಿಂಘು ಮತ್ತು ಟಿಕ್ರಿ ಗಡಿಯಲ್ಲಿ ಈ ಸಂಸ್ಥೆಯು 2 ಮಾಲ್‌ಗಳನ್ನು ನಿರ್ಮಿಸಿದ್ದು, ದೈನಂದಿನ ಬಳಕೆಗೆ ಬೇಕಾದ ಎಲ್ಲಾ ವಸ್ತುಗಳನ್ನು ಉಚಿತವಾಗಿ ಪಡೆದುಕೊಳ್ಳಲು ಅವಕಾಶ ಮಾಡಿಕೊಟ್ಟಿದೆ. ದೆಹಲಿಯಲ್ಲಿ ರೈತರ ಹೋರಾಟ ಶುರುವಿನಿಂದ ಇಂದಿನವರೆಗೂ ಊಟ, ಬಟ್ಟೆ, ಆಶ್ರಯ, ಆರೋಗ್ಯ ಚಿಕಿತ್ಸೆ ಸೇರಿದಂತೆ ಎಲ್ಲಾ ರೀತಿಯಲ್ಲಿ ಹೋರಾಟವನ್ನು ಪೂರೈಸುತ್ತಿದೆ. ಖಾಲ್ಸಾದ ಸೇವಾ ಚಟುವಟಿಕೆಗಳಿಗೆ ವಿವಿಧ ದೇಶಗಳಿಂದ ಬೆಂಬಲ ಲಭ್ಯವಾಗಿದೆ.

PC: Mass Media Foundation

ಖಾಲ್ಸಾ ಏಡ್ ಅಂತರಾಷ್ಟ್ರೀಯ ಸರ್ಕಾರೇತರ ಸಂಸ್ಥೆಯಾಗಿದ್ದು, 1999 ರಲ್ಲಿ ರವೀಂದರ್ ಸಿಂಗ್ ಎಂಬುವವರು ಈ ಸಂಸ್ಥೆಯನ್ನು ಸ್ಥಾಪಿಸಿದರು. ರಾಷ್ಟ್ರೀಯ ವಿಪತ್ತು ಸಂದರ್ಭಗಳಲ್ಲಿ ಪರಿಹಾರ ಕಾರ್ಯಗಳನ್ನು ನಡೆಸುತ್ತಾ ಬಂದಿದೆ.

ಮಯನ್ಮಾರ್, ಯಮೆನ್, ಗ್ರೀಸ್, ಗಲ್ಫ್ ರಾಷ್ಟ್ರಗಳು ಸೇರಿದಂತೆ ಹಲವಾರು ರಾಷ್ಟ್ರಗಳಲ್ಲಿ ಸೇವಾ ಕಾರ್ಯಗಳನ್ನು ನಡೆಸಿದೆ. ಬಾಂಗ್ಲಾದೇಶದಲ್ಲಿ ಆಶ್ರಯ ಪಡೆದಿದ್ದ ರೊಹಿಂಗ್ಯಾ ನಿರಾಶ್ರಿತರ ಪರವಾಗಿ ಕೆಲಸ ಮಾಡಿದೆ.
2018 ರ ಕೇರಳ ಪ್ರವಾಹ ಸಂದರ್ಭದಲ್ಲಿ ಈ ಸಂಸ್ಥೆಯು ಪ್ರತಿದಿನ 15 ಸಾವಿರ ಜನರಿಗೆ ಊಟದ ವ್ಯವಸ್ಥೆಯನ್ನು ಒದಗಿಸಿತ್ತು.

ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ

ಇದನ್ನೂ ಓದಿ: ರೈತ ಹೋರಾಟ ಅಪ್‌ಡೇಟ್ಸ್: 7ನೇ ಸುತ್ತಿನ ಮಾತುಕತೆ ವಿಫಲ – ಹೋರಾಟದ ಮುಂದೇನು ದಾರಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...