Homeಮುಖಪುಟರಾಜ್ಯಸಭಾ ಕಡತದಿಂದ ಮೋದಿ ವಿರುದ್ಧದ ತಮ್ಮ ಹೇಳಿಕೆ ತಗೆದಿದ್ದಕ್ಕೆ ಖರ್ಗೆ ಆಕ್ಷೇಪ

ರಾಜ್ಯಸಭಾ ಕಡತದಿಂದ ಮೋದಿ ವಿರುದ್ಧದ ತಮ್ಮ ಹೇಳಿಕೆ ತಗೆದಿದ್ದಕ್ಕೆ ಖರ್ಗೆ ಆಕ್ಷೇಪ

- Advertisement -
- Advertisement -

ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಗುರುವಾರ ಸದನವನ್ನುದ್ದೇಶಿಸಿ ಮಾತನಾಡುವಾಗ ತಮ್ಮ ಕೆಲವು ಹೇಳಿಕೆಗಳನ್ನು ಕಡತದಿಂದ ತಗೆದುಹಾಕಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.

ಬುಧವಾರ ಸದನದಲ್ಲಿ ಮಲ್ಲಿಕಾರ್ಜುನ ಖರ್ಗೆಯವರು, “ಕಳೆದ ಎರಡೂವರೆ ವರ್ಷಗಳಲ್ಲಿ” ಅದಾನಿ ಸಮೂಹದ ಸಂಪತ್ತಿನ ಏರಿಕೆಯನ್ನು ಪ್ರಶ್ನಿಸಿ ಪ್ರಧಾನಿ ಮೋದಿ ಮತ್ತು ಅವರ ಸರ್ಕಾರವನ್ನು ಗುರಿಯಾಗಿಸಿ ಟೀಕಿಸಿದ್ದರು. ಆದರೆ ಆ ನಂತರ ಸದನದ ದಾಖಲೆಗಳಿಂದ ಖರ್ಗೆಯವರ ಕೆಲವು ಟೀಕೆಗಳನ್ನು ತೆಗೆದುಹಾಕಲಾಗಿದೆ.

ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆಯವರು ಅದಾನಿ ಸಂಸ್ಥೆಯ ವಂಚನೆ ಬಗ್ಗೆ ಮಾತನಾಡುತ್ತ ಪ್ರಧಾನಿಯನ್ನು ಟೀಕಿಸಿದ್ದಾರೆ. ಆದರೆ ಅದನ್ನು ರಾಜ್ಯಸಭಾ ಕಡತದಿಂದ ತಗೆದುಹಾಕಲಾಗಿದೆ. ಇದನ್ನು ನಾವು ‘ಸೆನ್ಸಾರ್‍‌ಶಿಪ್’ ಎಂದು ಹೇಳುತ್ತೇವೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

”ಪ್ರಧಾನಿ ಮೋದಿಯವರ ಆತ್ಮೀಯ ಸ್ನೇಹಿತರೊಬ್ಬರ ಸಂಪತ್ತು 2.5 (ಎರಡೂವರೆ) ವರ್ಷಗಳಲ್ಲಿ 13 ಪಟ್ಟು ಹೆಚ್ಚಾಗಿದೆ. 2014ರಲ್ಲಿ 50,000 ಕೋಟಿಯಷ್ಟಿದ್ದ ಅವರ ಸಂಪತ್ತು 2019ರಲ್ಲಿ 1 ಲಕ್ಷ ಕೋಟಿ ಆಯಿತು. ಕೇವಲ ಎರಡು ವರ್ಷಗಳಲ್ಲಿ ಅವರ ಆಸ್ತಿ 12 ಲಕ್ಷ ಕೋಟಿ ರೂ.ಗೆ ತಲುಪಲು ಏನೆಲ್ಲಾ ಮ್ಯಾಜಿಕ್ ನಡೆದಿದೆ ಎಂದು ನನಗೆ ಗೊತ್ತಿಲ್ಲ” ಎಂದು ಖರ್ಗೆ ಕುಟುಕಿದ್ದಾರೆ. ಇದರ ನಡುವೆ ಬಿಜೆಪಿ ಸಂಸದರು ಪ್ರತಿಭಟನೆಯನ್ನೂ ನಡೆಸಿದ್ದಾರೆ ಎಂದರು.

ಇದನ್ನೂ ಓದಿ: ರಾಹುಲ್ ಗಾಂಧಿ ಪಪ್ಪು ಅಲ್ಲ, ಅವರು ಬಿಜೆಪಿಗರನ್ನೇ ಪಪ್ಪು ಮಾಡಿದ್ದಾರೆ: ಆದಿರ್ ಚೌಧರಿ

”ನಾನು ಸತ್ಯವನ್ನು ಮಾತನಾಡಿದರೆ ಅದು ದೇಶವಿರೋಧಿಯಾಗುತ್ತದೆಯೇ? ನಾನು ದೇಶವಿರೋಧಿ ಅಲ್ಲ, ನಾನು ಇಲ್ಲಿ ಎಲ್ಲರಿಗಿಂತಲೂ ಹೆಚ್ಚು ದೇಶಭಕ್ತನಾಗಿದ್ದೇನೆ. ನಾನು ‘ಭೂಮಿ-ಪುತ್ರ’. ನೀವು ದೇಶವನ್ನು ಲೂಟಿ ಮಾಡುತ್ತಿದ್ದೀರಿ, ಆದರೆ ನನ್ನನ್ನು ದೇಶವಿರೋಧಿ ಎನ್ನುತ್ತಿದ್ದೀರಿ” ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.

ಪ್ರಧಾನಿ ನರೇಂದ್ರ ಮೋದಿ ಯಾವುದಕ್ಕೂ ಹೆದರುವುದಿಲ್ಲ ಎನ್ನುವುದಾದರೆ, ಅದಾನಿ-ಹಿಂಡನ್‌ಬರ್ಗ್ ವಿವಾದದ ಕುರಿತು ಜಂಟಿ ಸಂಸದೀಯ ತನಿಖೆ ನಡೆಸಲು ಯಾಕೆ ಹೆದರುತ್ತಿದ್ದಾರೆ ಎಂದು ಖರ್ಗೆ ಪ್ರಶ್ನಿಸಿದರು. ಖರ್ಗೆಯವರ ಈ ಹೇಳಿಕೆಗಳಲ್ಲಿ ಕೆಲವನ್ನು ಕಡತದಿಂದ ತಗೆದುಹಾಕಲಾಗಿದೆ.

ರಾಷ್ಟ್ರಪತಿಗಳ ಭಾಷಣಕ್ಕೆ ಧನ್ಯವಾದ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಚರ್ಚೆಗಳು ಜೋರಾಗಿ ನಡೆದವು. ಇಂದು ಉಭಯ ಸದನಗಳು ಕೇಂದ್ರ ಬಜೆಟ್ 2023 ಅನ್ನು ಚರ್ಚಿಸಲು ಸಿದ್ಧವಾಗಿವೆ.

ಇಂದು ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಉತ್ತರ ನೀಡಲಿದ್ದಾರೆ. ಬುಧವಾರ ಲೋಕಸಭೆಯಲ್ಲಿ ಮಾಡಿದ ಭಾಷಣದಲ್ಲಿ, 140 ಕೋಟಿ ಜನರು ತಮ್ಮ ಸರ್ಕಾರದ ಮೇಲೆ ನಂಬಿಕೆ ಇಟ್ಟಿರುವ “ರಕ್ಷಣಾತ್ಮಕ ಗುರಾಣಿ” ಎಂದು ಪ್ರಧಾನಿ ಮೋದಿ ಹೇಳಿದರು. ವಿಪಕ್ಷಗಳ ಆರೋಪಗಳಿಂದ ಅಥವಾ ಸುಳ್ಳು ಆರೋಪಗಳಿಂದ ಜನರ ನಂಬಿಕೆಯನ್ನು ಸುಳ್ಳು ಮಾಡಲು ಸಾಧ್ಯವಿಲ್ಲ ಎಂದರು.

ಈ ನಡುವೆ ಪ್ರತಿಪಕ್ಷಗಳು “ಅದಾನಿ, ಅದಾನಿ,” ಮತ್ತು “ಜೆಪಿಸಿ, ಜೆಪಿಸಿ” ಎಂದು ಕೂಗಿದರು. ಆಗ ಮೋದಿ ಸ್ವಲ್ಪ ಹೊತ್ತು ಭಾಷಣ ನಿಲ್ಲಿಸಿ, ನಂತರ ಭಾಷಣ ಮುಂದುವರೆಸಿದರು. ಅದಾನಿ ಗುಂಪಿನ ಬಗ್ಗೆ ರಾಹುಲ್ ಗಾಂಧಿಯವರು ಮಾಡಿದ ಆರೋಪಗಳ ಬಗ್ಗೆ ಮೋದಿ ಎಲ್ಲೂ ಉಲ್ಲೇಖಿಸಲಿಲ್ಲ.

ಈ ಬಗ್ಗೆ ರಾಹುಲ್ ಗಾಂಧಿ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಧಾನಿಯವರು ಅದಾನಿಗೆ ರಕ್ಷಣೆ ನೀಡುತ್ತಿದ್ದಾರೆ ಮತ್ತು ಅದಾನಿ ಬಗ್ಗೆ ನಾವು ಎತ್ತಿರುವ ಪ್ರಶ್ನೆಗಳಿಗೆ ಉತ್ತರವನ್ನು ನೀಡಲಿಲ್ಲ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...