Homeಮುಖಪುಟರಾಜ್ಯಸಭಾ ಕಡತದಿಂದ ಮೋದಿ ವಿರುದ್ಧದ ತಮ್ಮ ಹೇಳಿಕೆ ತಗೆದಿದ್ದಕ್ಕೆ ಖರ್ಗೆ ಆಕ್ಷೇಪ

ರಾಜ್ಯಸಭಾ ಕಡತದಿಂದ ಮೋದಿ ವಿರುದ್ಧದ ತಮ್ಮ ಹೇಳಿಕೆ ತಗೆದಿದ್ದಕ್ಕೆ ಖರ್ಗೆ ಆಕ್ಷೇಪ

- Advertisement -
- Advertisement -

ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಗುರುವಾರ ಸದನವನ್ನುದ್ದೇಶಿಸಿ ಮಾತನಾಡುವಾಗ ತಮ್ಮ ಕೆಲವು ಹೇಳಿಕೆಗಳನ್ನು ಕಡತದಿಂದ ತಗೆದುಹಾಕಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.

ಬುಧವಾರ ಸದನದಲ್ಲಿ ಮಲ್ಲಿಕಾರ್ಜುನ ಖರ್ಗೆಯವರು, “ಕಳೆದ ಎರಡೂವರೆ ವರ್ಷಗಳಲ್ಲಿ” ಅದಾನಿ ಸಮೂಹದ ಸಂಪತ್ತಿನ ಏರಿಕೆಯನ್ನು ಪ್ರಶ್ನಿಸಿ ಪ್ರಧಾನಿ ಮೋದಿ ಮತ್ತು ಅವರ ಸರ್ಕಾರವನ್ನು ಗುರಿಯಾಗಿಸಿ ಟೀಕಿಸಿದ್ದರು. ಆದರೆ ಆ ನಂತರ ಸದನದ ದಾಖಲೆಗಳಿಂದ ಖರ್ಗೆಯವರ ಕೆಲವು ಟೀಕೆಗಳನ್ನು ತೆಗೆದುಹಾಕಲಾಗಿದೆ.

ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆಯವರು ಅದಾನಿ ಸಂಸ್ಥೆಯ ವಂಚನೆ ಬಗ್ಗೆ ಮಾತನಾಡುತ್ತ ಪ್ರಧಾನಿಯನ್ನು ಟೀಕಿಸಿದ್ದಾರೆ. ಆದರೆ ಅದನ್ನು ರಾಜ್ಯಸಭಾ ಕಡತದಿಂದ ತಗೆದುಹಾಕಲಾಗಿದೆ. ಇದನ್ನು ನಾವು ‘ಸೆನ್ಸಾರ್‍‌ಶಿಪ್’ ಎಂದು ಹೇಳುತ್ತೇವೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

”ಪ್ರಧಾನಿ ಮೋದಿಯವರ ಆತ್ಮೀಯ ಸ್ನೇಹಿತರೊಬ್ಬರ ಸಂಪತ್ತು 2.5 (ಎರಡೂವರೆ) ವರ್ಷಗಳಲ್ಲಿ 13 ಪಟ್ಟು ಹೆಚ್ಚಾಗಿದೆ. 2014ರಲ್ಲಿ 50,000 ಕೋಟಿಯಷ್ಟಿದ್ದ ಅವರ ಸಂಪತ್ತು 2019ರಲ್ಲಿ 1 ಲಕ್ಷ ಕೋಟಿ ಆಯಿತು. ಕೇವಲ ಎರಡು ವರ್ಷಗಳಲ್ಲಿ ಅವರ ಆಸ್ತಿ 12 ಲಕ್ಷ ಕೋಟಿ ರೂ.ಗೆ ತಲುಪಲು ಏನೆಲ್ಲಾ ಮ್ಯಾಜಿಕ್ ನಡೆದಿದೆ ಎಂದು ನನಗೆ ಗೊತ್ತಿಲ್ಲ” ಎಂದು ಖರ್ಗೆ ಕುಟುಕಿದ್ದಾರೆ. ಇದರ ನಡುವೆ ಬಿಜೆಪಿ ಸಂಸದರು ಪ್ರತಿಭಟನೆಯನ್ನೂ ನಡೆಸಿದ್ದಾರೆ ಎಂದರು.

ಇದನ್ನೂ ಓದಿ: ರಾಹುಲ್ ಗಾಂಧಿ ಪಪ್ಪು ಅಲ್ಲ, ಅವರು ಬಿಜೆಪಿಗರನ್ನೇ ಪಪ್ಪು ಮಾಡಿದ್ದಾರೆ: ಆದಿರ್ ಚೌಧರಿ

”ನಾನು ಸತ್ಯವನ್ನು ಮಾತನಾಡಿದರೆ ಅದು ದೇಶವಿರೋಧಿಯಾಗುತ್ತದೆಯೇ? ನಾನು ದೇಶವಿರೋಧಿ ಅಲ್ಲ, ನಾನು ಇಲ್ಲಿ ಎಲ್ಲರಿಗಿಂತಲೂ ಹೆಚ್ಚು ದೇಶಭಕ್ತನಾಗಿದ್ದೇನೆ. ನಾನು ‘ಭೂಮಿ-ಪುತ್ರ’. ನೀವು ದೇಶವನ್ನು ಲೂಟಿ ಮಾಡುತ್ತಿದ್ದೀರಿ, ಆದರೆ ನನ್ನನ್ನು ದೇಶವಿರೋಧಿ ಎನ್ನುತ್ತಿದ್ದೀರಿ” ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.

ಪ್ರಧಾನಿ ನರೇಂದ್ರ ಮೋದಿ ಯಾವುದಕ್ಕೂ ಹೆದರುವುದಿಲ್ಲ ಎನ್ನುವುದಾದರೆ, ಅದಾನಿ-ಹಿಂಡನ್‌ಬರ್ಗ್ ವಿವಾದದ ಕುರಿತು ಜಂಟಿ ಸಂಸದೀಯ ತನಿಖೆ ನಡೆಸಲು ಯಾಕೆ ಹೆದರುತ್ತಿದ್ದಾರೆ ಎಂದು ಖರ್ಗೆ ಪ್ರಶ್ನಿಸಿದರು. ಖರ್ಗೆಯವರ ಈ ಹೇಳಿಕೆಗಳಲ್ಲಿ ಕೆಲವನ್ನು ಕಡತದಿಂದ ತಗೆದುಹಾಕಲಾಗಿದೆ.

ರಾಷ್ಟ್ರಪತಿಗಳ ಭಾಷಣಕ್ಕೆ ಧನ್ಯವಾದ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಚರ್ಚೆಗಳು ಜೋರಾಗಿ ನಡೆದವು. ಇಂದು ಉಭಯ ಸದನಗಳು ಕೇಂದ್ರ ಬಜೆಟ್ 2023 ಅನ್ನು ಚರ್ಚಿಸಲು ಸಿದ್ಧವಾಗಿವೆ.

ಇಂದು ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಉತ್ತರ ನೀಡಲಿದ್ದಾರೆ. ಬುಧವಾರ ಲೋಕಸಭೆಯಲ್ಲಿ ಮಾಡಿದ ಭಾಷಣದಲ್ಲಿ, 140 ಕೋಟಿ ಜನರು ತಮ್ಮ ಸರ್ಕಾರದ ಮೇಲೆ ನಂಬಿಕೆ ಇಟ್ಟಿರುವ “ರಕ್ಷಣಾತ್ಮಕ ಗುರಾಣಿ” ಎಂದು ಪ್ರಧಾನಿ ಮೋದಿ ಹೇಳಿದರು. ವಿಪಕ್ಷಗಳ ಆರೋಪಗಳಿಂದ ಅಥವಾ ಸುಳ್ಳು ಆರೋಪಗಳಿಂದ ಜನರ ನಂಬಿಕೆಯನ್ನು ಸುಳ್ಳು ಮಾಡಲು ಸಾಧ್ಯವಿಲ್ಲ ಎಂದರು.

ಈ ನಡುವೆ ಪ್ರತಿಪಕ್ಷಗಳು “ಅದಾನಿ, ಅದಾನಿ,” ಮತ್ತು “ಜೆಪಿಸಿ, ಜೆಪಿಸಿ” ಎಂದು ಕೂಗಿದರು. ಆಗ ಮೋದಿ ಸ್ವಲ್ಪ ಹೊತ್ತು ಭಾಷಣ ನಿಲ್ಲಿಸಿ, ನಂತರ ಭಾಷಣ ಮುಂದುವರೆಸಿದರು. ಅದಾನಿ ಗುಂಪಿನ ಬಗ್ಗೆ ರಾಹುಲ್ ಗಾಂಧಿಯವರು ಮಾಡಿದ ಆರೋಪಗಳ ಬಗ್ಗೆ ಮೋದಿ ಎಲ್ಲೂ ಉಲ್ಲೇಖಿಸಲಿಲ್ಲ.

ಈ ಬಗ್ಗೆ ರಾಹುಲ್ ಗಾಂಧಿ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಧಾನಿಯವರು ಅದಾನಿಗೆ ರಕ್ಷಣೆ ನೀಡುತ್ತಿದ್ದಾರೆ ಮತ್ತು ಅದಾನಿ ಬಗ್ಗೆ ನಾವು ಎತ್ತಿರುವ ಪ್ರಶ್ನೆಗಳಿಗೆ ಉತ್ತರವನ್ನು ನೀಡಲಿಲ್ಲ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...