Homeಮುಖಪುಟಕಾಂಗ್ರೆಸ್ ಅಧ್ಯಕ್ಷರಾಗಿ ಖರ್ಗೆ: ಈ ಐದು ಅಂಶಗಳಿಗೆ ಪ್ರಾಮುಖ್ಯತೆ ಸಿಗುವ ಸಾಧ್ಯತೆ!

ಕಾಂಗ್ರೆಸ್ ಅಧ್ಯಕ್ಷರಾಗಿ ಖರ್ಗೆ: ಈ ಐದು ಅಂಶಗಳಿಗೆ ಪ್ರಾಮುಖ್ಯತೆ ಸಿಗುವ ಸಾಧ್ಯತೆ!

- Advertisement -
- Advertisement -

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ, 80 ವರ್ಷ ವಯಸ್ಸಿನ ಮಲ್ಲಿಕಾರ್ಜುನ ಖರ್ಗೆ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ 98ನೇ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅವರು ಕರ್ನಾಟಕದ ಗುರ್ಮಿಟ್ಕಲ್‌ನಿಂದ ಒಂಬತ್ತು ಬಾರಿ ಶಾಸಕರಾಗಿ, ಗುಲ್ಬರ್ಗಾದಿಂದ ಎರಡು ಬಾರಿ ಸಂಸದರಾಗಿದ್ದಾರೆ. ಜೊತೆಗೆ ಕೇಂದ್ರ ಮತ್ತು ಕರ್ನಾಟಕ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.

ಖರ್ಗೆಯವರ ಆಯ್ಕೆಯು ಐತಿಹಾಸಿಕವಾಗಿದೆ. 50 ವರ್ಷಗಳ ಬಳಿಕ ದಲಿತ ವ್ಯಕ್ತಿಯೊಬ್ಬರು ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. 1970-71ರಲ್ಲಿ ಜಗಜೀವನ್ ರಾಮ್ ಅಧ್ಯಕ್ಷರಾಗಿದ್ದರು. ಕನ್ನಡಿಗರಾದ ಎಸ್.ನಿಜಲಿಂಗಪ್ಪ ಅವರು 1969ರಲ್ಲಿ ಈ ಸ್ಥಾನಕ್ಕೇರಿದ್ದರು. ಆ ಬಳಿಕ ಕಾಂಗ್ರೆಸ್‌ ಅಧ್ಯಕ್ಷಗಿರಿಗೇರಿದ ಕನ್ನಡಿಗ ಎಂಬ ಖ್ಯಾತಿಗೂ ಖರ್ಗೆಯವರು ಪಾತ್ರರಾಗಿದ್ದಾರೆ. 1998ರ ನಂತರದಲ್ಲಿ ಗಾಂಧಿಯೇತರ ಕುಟುಂಬದಿಂದ ಆಯ್ಕೆಯಾದವರಾಗಿಯೂ ಗಮನ ಸೆಳೆದಿದ್ದಾರೆ. ಅಧ್ಯಕ್ಷರಾದ ಖರ್ಗೆಯವರ ಮುಂದೆ ಐದು ಅಂಶಗಳು ಮುಖ್ಯವಾಗಲಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

1. ಏಕತೆಗೆ ಒತ್ತು

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ಪ್ರಚಾರದಲ್ಲಿ ಒಂದು ಅಂಶವು ಗಮನ ಸೆಳೆಯಿತು. ಹಿಂದಿನ ಜಿ-23 ಸದಸ್ಯರಾದ ಭೂಪಿಂದರ್ ಸಿಂಗ್ ಹೂಡಾ, ಮನೀಶ್ ತಿವಾರಿ, ಆನಂದ್ ಶರ್ಮಾ, ಮುಕುಲ್ ವಾಸ್ನಿಕ್ ಮತ್ತು ಪೃಥ್ವಿರಾಜ್ ಚವಾಣ್ ಅವರಿಂದ ಸಕ್ರಿಯ ಬೆಂಬಲವನ್ನು ಖರ್ಗೆಯವರು ಪಡೆದರು.

ಜಿ-23 ನಾಯಕರ ಪೈಕಿ ಒಬ್ಬರಾದ ಶಶಿ ತರೂರ್‌ ಅವರು ಚುನಾವಣೆಯ ಪ್ರತಿಸ್ಪರ್ಧಿಯಾಗಿದ್ದಾರೆ ಎಂಬ ವಾಸ್ತವದ ಹೊರತಾಗಿಯೂ ಈ ಬೆಂಬಲ ದೊರಕಿತು. ಪಕ್ಷದ ಅಧ್ಯಕ್ಷ ಸ್ಥಾನದ ಮುಖವಾಗಿ ತೋರಿದ್ದ ಅಶೋಕ್ ಗೆಹ್ಲೋಟ್‌ ಅವರಿಗೆ ಹೋಲಿಸಿದರೆ ಖರ್ಗೆ ಅವರು ಜಿ-23 ಬಗ್ಗೆ ಹೆಚ್ಚು ಸಮಾಧಾನಕರ ನಾಯಕರಾಗಿದ್ದಾರೆ ಎನ್ನಲಾಗುತ್ತಿದೆ.

ಅಧ್ಯಕ್ಷರಾಗಿ ಖರ್ಗೆ ಅವರು ಜಿ-23 ನಾಯಕರ ಕಳವಳಗಳನ್ನು ಪರಿಹರಿಸಲು ಮತ್ತು ಸಾಧ್ಯವಾದಷ್ಟು ಹೆಚ್ಚಿನವರಿಗೆ ಗೌರವಾನ್ವಿತ ರೀತಿಯಲ್ಲಿ ಅವಕಾಶ ಕಲ್ಪಿಸಲು ಕ್ರಮಗಳನ್ನು ತೆಗೆದುಕೊಳ್ಳಬಹುದು.

2. ಸೈದ್ಧಾಂತಿಕ ನಿರಂತರತೆ

ಸೋನಿಯಾ ಗಾಂಧಿಯವರ ಅಧಿಕಾರಾವಧಿಯ ಬಳಿಕ ಹೊಮ್ಮಿರುವ ಸೈದ್ಧಾಂತಿಕ ನಿರಂತರತೆಯನ್ನು ಖರ್ಗೆಯವರು ಅಧ್ಯಕ್ಷರಾಗಿರುವುದು ಧ್ವನಿಸುತ್ತದೆ. ಖರ್ಗೆಯವರು ನಿರಂತರವಾಗಿ ಜಾತ್ಯತೀತತೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸ್ಪಷ್ಟವಾದ ನಿಲುವನ್ನು ತೆಗೆದುಕೊಂಡಿದ್ದಾರೆ. ಇದು ಅವರ ಅಧ್ಯಕ್ಷತೆಯಲ್ಲೂ ಪ್ರತಿಫಲಿಸುವ ಸಾಧ್ಯತೆಯಿದೆ.

ಬೀದರ್ ಜಿಲ್ಲೆಯಿಂದ ಬಂದು ಗುಲ್ಬರ್ಗದಿಂದ ಸಂಸದರಾದ ಖರ್ಗೆ ಅವರು ಸಾಕಷ್ಟು ಮುಸ್ಲಿಂ ಬಾಹುಳ್ಯವುಳ್ಳ ಭಾಗದಲ್ಲಿ ಸಮುದಾಯಗಳೊಂದಿಗೆ ನಿಕಟವಾಗಿದ್ದಾರೆ. ಸಮುದಾಯಗಳ ಬಗೆಗಿರಬೇಕಾದ ಕಾಳಜಿಯನ್ನು ಅರ್ಥಮಾಡಿಕೊಂಡಿದ್ದಾರೆ.

3. ರಾಹುಲ್ ಗಾಂಧಿ ಪಕ್ಷದ ಮುಖವಾದರೆ, ಪಕ್ಷ ಸಂಘಟನೆಯಲ್ಲಿ ಖರ್ಗೆ  

ಅಧ್ಯಕ್ಷ ಚುನಾವಣೆ ನಡೆಯುತ್ತಿದ್ದರೂ ರಾಹುಲ್ ಗಾಂಧಿಯನ್ನೇ ಪ್ರಧಾನವಾಗಿಟ್ಟುಕೊಂಡು ಭಾರತ್ ಜೋಡೋ ಯಾತ್ರೆ ಮುಂದುವರೆದಿದೆ. ಖರ್ಗೆ ಅವರು ಪಕ್ಷದ ಸಂಘಟನಾ ಮತ್ತು ದೈನಂದಿನ ವ್ಯವಹಾರಗಳನ್ನು ನಿರ್ವಹಿಸಿದರೆ, ರಾಹುಲ್ ಗಾಂಧಿ ಅವರು ಮುಖ್ಯ ರಾಜಕೀಯ ಮುಖವಾಗಿ ಹೊಮ್ಮಬಹುದು.

ಖರ್ಗೆ ಅವರು ರಾಹುಲ್ ಗಾಂಧಿಯವರ ನಿಕಟವರ್ತಿ ಎನ್ನಲಾಗುತ್ತಿದೆ. ಆದರೆ ರಾಹುಲ್‌ ಗಾಂಧಿಯವರು, “ಪಕ್ಷದಲ್ಲಿ ನನ್ನ ಸ್ಥಾನವೇನು ಎಂಬುದನ್ನು ಪಕ್ಷದ ಅಧ್ಯಕ್ಷರು ನಿರ್ಧರಿಸಲಿದ್ದಾರೆ” ಎಂದಿದ್ದಾರೆ.

4. ಪಕ್ಷದ ಕಾರ್ಯನಿರ್ವಹಣೆಯಲ್ಲಿ ಯಥಾಸ್ಥಿತಿ

ತರೂರ್ ಅವರಂತೆ ಖರ್ಗೆಯವರು ಅಧ್ಯಕ್ಷ ಸ್ಥಾನದ ಚುನಾವಣಾ ಪ್ರಚಾರದ ಸಮಯದಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿಲ್ಲ. ಈ ವರ್ಷದ ಆರಂಭದಲ್ಲಿ ಉದಯಪುರ ಚಿಂತನ್ ಶಿಬಿರದಲ್ಲಿ ಮಾಡಲಾದ ಘೋಷಣೆಯೇ ತಮ್ಮ ಪ್ರಣಾಳಿಕೆ ಎಂದು ಹೇಳಿದರು. ಸಾಂಸ್ಥಿಕ ವಿಷಯಗಳಲ್ಲಿ ಹೆಚ್ಚಿನ ಮಟ್ಟದ ಯಥಾಸ್ಥಿತಿ ಇರುವ ಸಾಧ್ಯತೆಯಿದೆ ಎಂಬುದನ್ನು ಇದು ಸೂಚಿಸುತ್ತದೆ.

ಆದಾಗ್ಯೂ ಬಹು ಕಾಯಾಧ್ಯಕ್ಷ ಸ್ಥಾನದಂತಹ ಹಲವಾರು ಹೊಸ ಹುದ್ದೆಗಳನ್ನು ಅನ್ವೇಷಿಸಲಾಗುತ್ತಿದೆ. ಪಕ್ಷ ಸಂಘಟನೆಯಲ್ಲೂ ಕೆಲವು ಬದಲಾವಣೆಗಳಾಗಬಹುದು.

ಕಾಂಗ್ರೆಸ್ ಕಾರ್ಯಕಾರಿ ಸಮಿತಿಯನ್ನು ಪುನರ್ ರಚಿಸಬಹುದು. ಖರ್ಗೆ ಅವರು ಕೆಲವು ಹೊಸ ಪ್ರಧಾನ ಕಾರ್ಯದರ್ಶಿಗಳನ್ನೂ ನೇಮಿಸಬಹುದು. ಈಗಿನ ಪದಾಧಿಕಾರಿಗಳನ್ನು ಎಷ್ಟರ ಮಟ್ಟಿಗೆ ಬದಲಾಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ರಾಜಸ್ಥಾನದಲ್ಲಿ ಏನು ಮಾಡಬೇಕು ಎಂಬುದು ಖರ್ಗೆ ಅವರ ಮುಂದಿರುವ ಮತ್ತೊಂದು ಸವಾಲು. ಶೋಕಾಸ್ ನೋಟಿಸ್ ನೀಡಿದ ಗೆಹ್ಲೋಟ್ ನಿಷ್ಠಾವಂತರಿಗೆ ಶಿಕ್ಷೆಯಾಗುತ್ತದೆಯೇ? ಗೆಹ್ಲೋಟ್ ಕೂಡ ಕ್ರಮ ಎದುರಿಸುತ್ತಾರೆಯೇ? ಹೊಸ ಕಾಂಗ್ರೆಸ್ ಅಧ್ಯಕ್ಷರು ಸಚಿನ್ ಪೈಲಟ್‌ಗೆ ಹೇಗೆ ಅವಕಾಶ ಕಲ್ಪಿಸುತ್ತಾರೆ? ಎಂಬ ಪ್ರಶ್ನೆಗಳಿವೆ.

5. ಕರ್ನಾಟಕದತ್ತ ಗಮನ

ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಚುನಾವಣೆಗಳು ಬರುತ್ತಿವೆ. ನಂತರ ತ್ರಿಪುರಾ, ಮೇಘಾಲಯ ಮತ್ತು ನಾಗಾಲ್ಯಾಂಡ್ ಚುನಾವಣೆಗಳು 2023ರ ಆರಂಭದಲ್ಲಿ ಎದುರಾಗಲಿವೆ. ಆದರೆ ಪಕ್ಷದ ಅಧ್ಯಕ್ಷರಾಗಿ ಖರ್ಗೆ ಅವರಿಗೆ ನಿಜವಾದ ಪರೀಕ್ಷೆ ಎದುರಾಗುವುದು 2023ರ ಬೇಸಿಗೆಯಲ್ಲಿ ನಡೆಯುವ ಚುನಾವಣೆಯಲ್ಲಿ ಎಂಬುದು ಸ್ಪಷ್ಟ. ಏಕೆಂದರೆ ತಮ್ಮ ತವರು ರಾಜ್ಯವಾದ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.

ಇದನ್ನೂ ಓದಿರಿ: ಕಾರ್ಮಿಕನ ಪುತ್ರರಾದ ಖರ್ಗೆ ಕಾಂಗ್ರೆಸ್‌ ಅಧ್ಯಕ್ಷ ಹುದ್ದೆಯವರೆಗೆ ಬೆಳೆದ ಯಶೋಗಾಥೆ

ಕರ್ನಾಟಕವನ್ನು ಗೆಲ್ಲುವುದು ಕಾಂಗ್ರೆಸ್‌ಗೆ ನಿರ್ಣಾಯಕವಾಗಿದೆ. ಏಕೆಂದರೆ ಕರ್ನಾಟಕದಲ್ಲಿ ಸರ್ಕಾರವನ್ನು ರಚಿಸಿದರೆ 2024ರ ಲೋಕಸಭಾ ಚುನಾವಣೆಯ ಪೂರ್ವದಲ್ಲಿ ಸಹಾಯವಾಗುತ್ತದೆ. ಖರ್ಗೆಯವರು ಪಕ್ಷದ ಅಧ್ಯಕ್ಷರಾಗುವುದರಿಂದ ಪಕ್ಷಕ್ಕೆ ಸ್ವಲ್ಪ ಲಾಭವಾಗಬಹುದು.

ಕರ್ನಾಟಕ ರಾಜ್ಯದಲ್ಲಿ ನಾಯಕತ್ವದ ಪ್ರಶ್ನೆಯನ್ನು ಪರಿಹರಿಸುವುದು ಮುಖ್ಯವಾಗುತ್ತದೆ. ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವೆ ಸಮತೋಲನ ಸಾಧಿಸುವುದು ಖರ್ಗೆಯವರ ಮುಂದಿರುವ ಸವಾಲಾಗಿದೆ.

ವರದಿ ಕೃಪೆ: ದಿ ಕ್ವಿಂಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...