Homeಮುಖಪುಟಕಾಂಗ್ರೆಸ್ ಅಧ್ಯಕ್ಷರಾಗಿ ಖರ್ಗೆ: ಈ ಐದು ಅಂಶಗಳಿಗೆ ಪ್ರಾಮುಖ್ಯತೆ ಸಿಗುವ ಸಾಧ್ಯತೆ!

ಕಾಂಗ್ರೆಸ್ ಅಧ್ಯಕ್ಷರಾಗಿ ಖರ್ಗೆ: ಈ ಐದು ಅಂಶಗಳಿಗೆ ಪ್ರಾಮುಖ್ಯತೆ ಸಿಗುವ ಸಾಧ್ಯತೆ!

- Advertisement -
- Advertisement -

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ, 80 ವರ್ಷ ವಯಸ್ಸಿನ ಮಲ್ಲಿಕಾರ್ಜುನ ಖರ್ಗೆ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ 98ನೇ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅವರು ಕರ್ನಾಟಕದ ಗುರ್ಮಿಟ್ಕಲ್‌ನಿಂದ ಒಂಬತ್ತು ಬಾರಿ ಶಾಸಕರಾಗಿ, ಗುಲ್ಬರ್ಗಾದಿಂದ ಎರಡು ಬಾರಿ ಸಂಸದರಾಗಿದ್ದಾರೆ. ಜೊತೆಗೆ ಕೇಂದ್ರ ಮತ್ತು ಕರ್ನಾಟಕ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.

ಖರ್ಗೆಯವರ ಆಯ್ಕೆಯು ಐತಿಹಾಸಿಕವಾಗಿದೆ. 50 ವರ್ಷಗಳ ಬಳಿಕ ದಲಿತ ವ್ಯಕ್ತಿಯೊಬ್ಬರು ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. 1970-71ರಲ್ಲಿ ಜಗಜೀವನ್ ರಾಮ್ ಅಧ್ಯಕ್ಷರಾಗಿದ್ದರು. ಕನ್ನಡಿಗರಾದ ಎಸ್.ನಿಜಲಿಂಗಪ್ಪ ಅವರು 1969ರಲ್ಲಿ ಈ ಸ್ಥಾನಕ್ಕೇರಿದ್ದರು. ಆ ಬಳಿಕ ಕಾಂಗ್ರೆಸ್‌ ಅಧ್ಯಕ್ಷಗಿರಿಗೇರಿದ ಕನ್ನಡಿಗ ಎಂಬ ಖ್ಯಾತಿಗೂ ಖರ್ಗೆಯವರು ಪಾತ್ರರಾಗಿದ್ದಾರೆ. 1998ರ ನಂತರದಲ್ಲಿ ಗಾಂಧಿಯೇತರ ಕುಟುಂಬದಿಂದ ಆಯ್ಕೆಯಾದವರಾಗಿಯೂ ಗಮನ ಸೆಳೆದಿದ್ದಾರೆ. ಅಧ್ಯಕ್ಷರಾದ ಖರ್ಗೆಯವರ ಮುಂದೆ ಐದು ಅಂಶಗಳು ಮುಖ್ಯವಾಗಲಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

1. ಏಕತೆಗೆ ಒತ್ತು

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ಪ್ರಚಾರದಲ್ಲಿ ಒಂದು ಅಂಶವು ಗಮನ ಸೆಳೆಯಿತು. ಹಿಂದಿನ ಜಿ-23 ಸದಸ್ಯರಾದ ಭೂಪಿಂದರ್ ಸಿಂಗ್ ಹೂಡಾ, ಮನೀಶ್ ತಿವಾರಿ, ಆನಂದ್ ಶರ್ಮಾ, ಮುಕುಲ್ ವಾಸ್ನಿಕ್ ಮತ್ತು ಪೃಥ್ವಿರಾಜ್ ಚವಾಣ್ ಅವರಿಂದ ಸಕ್ರಿಯ ಬೆಂಬಲವನ್ನು ಖರ್ಗೆಯವರು ಪಡೆದರು.

ಜಿ-23 ನಾಯಕರ ಪೈಕಿ ಒಬ್ಬರಾದ ಶಶಿ ತರೂರ್‌ ಅವರು ಚುನಾವಣೆಯ ಪ್ರತಿಸ್ಪರ್ಧಿಯಾಗಿದ್ದಾರೆ ಎಂಬ ವಾಸ್ತವದ ಹೊರತಾಗಿಯೂ ಈ ಬೆಂಬಲ ದೊರಕಿತು. ಪಕ್ಷದ ಅಧ್ಯಕ್ಷ ಸ್ಥಾನದ ಮುಖವಾಗಿ ತೋರಿದ್ದ ಅಶೋಕ್ ಗೆಹ್ಲೋಟ್‌ ಅವರಿಗೆ ಹೋಲಿಸಿದರೆ ಖರ್ಗೆ ಅವರು ಜಿ-23 ಬಗ್ಗೆ ಹೆಚ್ಚು ಸಮಾಧಾನಕರ ನಾಯಕರಾಗಿದ್ದಾರೆ ಎನ್ನಲಾಗುತ್ತಿದೆ.

ಅಧ್ಯಕ್ಷರಾಗಿ ಖರ್ಗೆ ಅವರು ಜಿ-23 ನಾಯಕರ ಕಳವಳಗಳನ್ನು ಪರಿಹರಿಸಲು ಮತ್ತು ಸಾಧ್ಯವಾದಷ್ಟು ಹೆಚ್ಚಿನವರಿಗೆ ಗೌರವಾನ್ವಿತ ರೀತಿಯಲ್ಲಿ ಅವಕಾಶ ಕಲ್ಪಿಸಲು ಕ್ರಮಗಳನ್ನು ತೆಗೆದುಕೊಳ್ಳಬಹುದು.

2. ಸೈದ್ಧಾಂತಿಕ ನಿರಂತರತೆ

ಸೋನಿಯಾ ಗಾಂಧಿಯವರ ಅಧಿಕಾರಾವಧಿಯ ಬಳಿಕ ಹೊಮ್ಮಿರುವ ಸೈದ್ಧಾಂತಿಕ ನಿರಂತರತೆಯನ್ನು ಖರ್ಗೆಯವರು ಅಧ್ಯಕ್ಷರಾಗಿರುವುದು ಧ್ವನಿಸುತ್ತದೆ. ಖರ್ಗೆಯವರು ನಿರಂತರವಾಗಿ ಜಾತ್ಯತೀತತೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸ್ಪಷ್ಟವಾದ ನಿಲುವನ್ನು ತೆಗೆದುಕೊಂಡಿದ್ದಾರೆ. ಇದು ಅವರ ಅಧ್ಯಕ್ಷತೆಯಲ್ಲೂ ಪ್ರತಿಫಲಿಸುವ ಸಾಧ್ಯತೆಯಿದೆ.

ಬೀದರ್ ಜಿಲ್ಲೆಯಿಂದ ಬಂದು ಗುಲ್ಬರ್ಗದಿಂದ ಸಂಸದರಾದ ಖರ್ಗೆ ಅವರು ಸಾಕಷ್ಟು ಮುಸ್ಲಿಂ ಬಾಹುಳ್ಯವುಳ್ಳ ಭಾಗದಲ್ಲಿ ಸಮುದಾಯಗಳೊಂದಿಗೆ ನಿಕಟವಾಗಿದ್ದಾರೆ. ಸಮುದಾಯಗಳ ಬಗೆಗಿರಬೇಕಾದ ಕಾಳಜಿಯನ್ನು ಅರ್ಥಮಾಡಿಕೊಂಡಿದ್ದಾರೆ.

3. ರಾಹುಲ್ ಗಾಂಧಿ ಪಕ್ಷದ ಮುಖವಾದರೆ, ಪಕ್ಷ ಸಂಘಟನೆಯಲ್ಲಿ ಖರ್ಗೆ  

ಅಧ್ಯಕ್ಷ ಚುನಾವಣೆ ನಡೆಯುತ್ತಿದ್ದರೂ ರಾಹುಲ್ ಗಾಂಧಿಯನ್ನೇ ಪ್ರಧಾನವಾಗಿಟ್ಟುಕೊಂಡು ಭಾರತ್ ಜೋಡೋ ಯಾತ್ರೆ ಮುಂದುವರೆದಿದೆ. ಖರ್ಗೆ ಅವರು ಪಕ್ಷದ ಸಂಘಟನಾ ಮತ್ತು ದೈನಂದಿನ ವ್ಯವಹಾರಗಳನ್ನು ನಿರ್ವಹಿಸಿದರೆ, ರಾಹುಲ್ ಗಾಂಧಿ ಅವರು ಮುಖ್ಯ ರಾಜಕೀಯ ಮುಖವಾಗಿ ಹೊಮ್ಮಬಹುದು.

ಖರ್ಗೆ ಅವರು ರಾಹುಲ್ ಗಾಂಧಿಯವರ ನಿಕಟವರ್ತಿ ಎನ್ನಲಾಗುತ್ತಿದೆ. ಆದರೆ ರಾಹುಲ್‌ ಗಾಂಧಿಯವರು, “ಪಕ್ಷದಲ್ಲಿ ನನ್ನ ಸ್ಥಾನವೇನು ಎಂಬುದನ್ನು ಪಕ್ಷದ ಅಧ್ಯಕ್ಷರು ನಿರ್ಧರಿಸಲಿದ್ದಾರೆ” ಎಂದಿದ್ದಾರೆ.

4. ಪಕ್ಷದ ಕಾರ್ಯನಿರ್ವಹಣೆಯಲ್ಲಿ ಯಥಾಸ್ಥಿತಿ

ತರೂರ್ ಅವರಂತೆ ಖರ್ಗೆಯವರು ಅಧ್ಯಕ್ಷ ಸ್ಥಾನದ ಚುನಾವಣಾ ಪ್ರಚಾರದ ಸಮಯದಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿಲ್ಲ. ಈ ವರ್ಷದ ಆರಂಭದಲ್ಲಿ ಉದಯಪುರ ಚಿಂತನ್ ಶಿಬಿರದಲ್ಲಿ ಮಾಡಲಾದ ಘೋಷಣೆಯೇ ತಮ್ಮ ಪ್ರಣಾಳಿಕೆ ಎಂದು ಹೇಳಿದರು. ಸಾಂಸ್ಥಿಕ ವಿಷಯಗಳಲ್ಲಿ ಹೆಚ್ಚಿನ ಮಟ್ಟದ ಯಥಾಸ್ಥಿತಿ ಇರುವ ಸಾಧ್ಯತೆಯಿದೆ ಎಂಬುದನ್ನು ಇದು ಸೂಚಿಸುತ್ತದೆ.

ಆದಾಗ್ಯೂ ಬಹು ಕಾಯಾಧ್ಯಕ್ಷ ಸ್ಥಾನದಂತಹ ಹಲವಾರು ಹೊಸ ಹುದ್ದೆಗಳನ್ನು ಅನ್ವೇಷಿಸಲಾಗುತ್ತಿದೆ. ಪಕ್ಷ ಸಂಘಟನೆಯಲ್ಲೂ ಕೆಲವು ಬದಲಾವಣೆಗಳಾಗಬಹುದು.

ಕಾಂಗ್ರೆಸ್ ಕಾರ್ಯಕಾರಿ ಸಮಿತಿಯನ್ನು ಪುನರ್ ರಚಿಸಬಹುದು. ಖರ್ಗೆ ಅವರು ಕೆಲವು ಹೊಸ ಪ್ರಧಾನ ಕಾರ್ಯದರ್ಶಿಗಳನ್ನೂ ನೇಮಿಸಬಹುದು. ಈಗಿನ ಪದಾಧಿಕಾರಿಗಳನ್ನು ಎಷ್ಟರ ಮಟ್ಟಿಗೆ ಬದಲಾಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ರಾಜಸ್ಥಾನದಲ್ಲಿ ಏನು ಮಾಡಬೇಕು ಎಂಬುದು ಖರ್ಗೆ ಅವರ ಮುಂದಿರುವ ಮತ್ತೊಂದು ಸವಾಲು. ಶೋಕಾಸ್ ನೋಟಿಸ್ ನೀಡಿದ ಗೆಹ್ಲೋಟ್ ನಿಷ್ಠಾವಂತರಿಗೆ ಶಿಕ್ಷೆಯಾಗುತ್ತದೆಯೇ? ಗೆಹ್ಲೋಟ್ ಕೂಡ ಕ್ರಮ ಎದುರಿಸುತ್ತಾರೆಯೇ? ಹೊಸ ಕಾಂಗ್ರೆಸ್ ಅಧ್ಯಕ್ಷರು ಸಚಿನ್ ಪೈಲಟ್‌ಗೆ ಹೇಗೆ ಅವಕಾಶ ಕಲ್ಪಿಸುತ್ತಾರೆ? ಎಂಬ ಪ್ರಶ್ನೆಗಳಿವೆ.

5. ಕರ್ನಾಟಕದತ್ತ ಗಮನ

ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಚುನಾವಣೆಗಳು ಬರುತ್ತಿವೆ. ನಂತರ ತ್ರಿಪುರಾ, ಮೇಘಾಲಯ ಮತ್ತು ನಾಗಾಲ್ಯಾಂಡ್ ಚುನಾವಣೆಗಳು 2023ರ ಆರಂಭದಲ್ಲಿ ಎದುರಾಗಲಿವೆ. ಆದರೆ ಪಕ್ಷದ ಅಧ್ಯಕ್ಷರಾಗಿ ಖರ್ಗೆ ಅವರಿಗೆ ನಿಜವಾದ ಪರೀಕ್ಷೆ ಎದುರಾಗುವುದು 2023ರ ಬೇಸಿಗೆಯಲ್ಲಿ ನಡೆಯುವ ಚುನಾವಣೆಯಲ್ಲಿ ಎಂಬುದು ಸ್ಪಷ್ಟ. ಏಕೆಂದರೆ ತಮ್ಮ ತವರು ರಾಜ್ಯವಾದ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.

ಇದನ್ನೂ ಓದಿರಿ: ಕಾರ್ಮಿಕನ ಪುತ್ರರಾದ ಖರ್ಗೆ ಕಾಂಗ್ರೆಸ್‌ ಅಧ್ಯಕ್ಷ ಹುದ್ದೆಯವರೆಗೆ ಬೆಳೆದ ಯಶೋಗಾಥೆ

ಕರ್ನಾಟಕವನ್ನು ಗೆಲ್ಲುವುದು ಕಾಂಗ್ರೆಸ್‌ಗೆ ನಿರ್ಣಾಯಕವಾಗಿದೆ. ಏಕೆಂದರೆ ಕರ್ನಾಟಕದಲ್ಲಿ ಸರ್ಕಾರವನ್ನು ರಚಿಸಿದರೆ 2024ರ ಲೋಕಸಭಾ ಚುನಾವಣೆಯ ಪೂರ್ವದಲ್ಲಿ ಸಹಾಯವಾಗುತ್ತದೆ. ಖರ್ಗೆಯವರು ಪಕ್ಷದ ಅಧ್ಯಕ್ಷರಾಗುವುದರಿಂದ ಪಕ್ಷಕ್ಕೆ ಸ್ವಲ್ಪ ಲಾಭವಾಗಬಹುದು.

ಕರ್ನಾಟಕ ರಾಜ್ಯದಲ್ಲಿ ನಾಯಕತ್ವದ ಪ್ರಶ್ನೆಯನ್ನು ಪರಿಹರಿಸುವುದು ಮುಖ್ಯವಾಗುತ್ತದೆ. ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವೆ ಸಮತೋಲನ ಸಾಧಿಸುವುದು ಖರ್ಗೆಯವರ ಮುಂದಿರುವ ಸವಾಲಾಗಿದೆ.

ವರದಿ ಕೃಪೆ: ದಿ ಕ್ವಿಂಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...