Homeಮುಖಪುಟಕಾಂಗ್ರೆಸ್ ಅಧ್ಯಕ್ಷರಾಗಿ ಖರ್ಗೆ: ಈ ಐದು ಅಂಶಗಳಿಗೆ ಪ್ರಾಮುಖ್ಯತೆ ಸಿಗುವ ಸಾಧ್ಯತೆ!

ಕಾಂಗ್ರೆಸ್ ಅಧ್ಯಕ್ಷರಾಗಿ ಖರ್ಗೆ: ಈ ಐದು ಅಂಶಗಳಿಗೆ ಪ್ರಾಮುಖ್ಯತೆ ಸಿಗುವ ಸಾಧ್ಯತೆ!

- Advertisement -
- Advertisement -

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ, 80 ವರ್ಷ ವಯಸ್ಸಿನ ಮಲ್ಲಿಕಾರ್ಜುನ ಖರ್ಗೆ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ 98ನೇ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅವರು ಕರ್ನಾಟಕದ ಗುರ್ಮಿಟ್ಕಲ್‌ನಿಂದ ಒಂಬತ್ತು ಬಾರಿ ಶಾಸಕರಾಗಿ, ಗುಲ್ಬರ್ಗಾದಿಂದ ಎರಡು ಬಾರಿ ಸಂಸದರಾಗಿದ್ದಾರೆ. ಜೊತೆಗೆ ಕೇಂದ್ರ ಮತ್ತು ಕರ್ನಾಟಕ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.

ಖರ್ಗೆಯವರ ಆಯ್ಕೆಯು ಐತಿಹಾಸಿಕವಾಗಿದೆ. 50 ವರ್ಷಗಳ ಬಳಿಕ ದಲಿತ ವ್ಯಕ್ತಿಯೊಬ್ಬರು ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. 1970-71ರಲ್ಲಿ ಜಗಜೀವನ್ ರಾಮ್ ಅಧ್ಯಕ್ಷರಾಗಿದ್ದರು. ಕನ್ನಡಿಗರಾದ ಎಸ್.ನಿಜಲಿಂಗಪ್ಪ ಅವರು 1969ರಲ್ಲಿ ಈ ಸ್ಥಾನಕ್ಕೇರಿದ್ದರು. ಆ ಬಳಿಕ ಕಾಂಗ್ರೆಸ್‌ ಅಧ್ಯಕ್ಷಗಿರಿಗೇರಿದ ಕನ್ನಡಿಗ ಎಂಬ ಖ್ಯಾತಿಗೂ ಖರ್ಗೆಯವರು ಪಾತ್ರರಾಗಿದ್ದಾರೆ. 1998ರ ನಂತರದಲ್ಲಿ ಗಾಂಧಿಯೇತರ ಕುಟುಂಬದಿಂದ ಆಯ್ಕೆಯಾದವರಾಗಿಯೂ ಗಮನ ಸೆಳೆದಿದ್ದಾರೆ. ಅಧ್ಯಕ್ಷರಾದ ಖರ್ಗೆಯವರ ಮುಂದೆ ಐದು ಅಂಶಗಳು ಮುಖ್ಯವಾಗಲಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

1. ಏಕತೆಗೆ ಒತ್ತು

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ಪ್ರಚಾರದಲ್ಲಿ ಒಂದು ಅಂಶವು ಗಮನ ಸೆಳೆಯಿತು. ಹಿಂದಿನ ಜಿ-23 ಸದಸ್ಯರಾದ ಭೂಪಿಂದರ್ ಸಿಂಗ್ ಹೂಡಾ, ಮನೀಶ್ ತಿವಾರಿ, ಆನಂದ್ ಶರ್ಮಾ, ಮುಕುಲ್ ವಾಸ್ನಿಕ್ ಮತ್ತು ಪೃಥ್ವಿರಾಜ್ ಚವಾಣ್ ಅವರಿಂದ ಸಕ್ರಿಯ ಬೆಂಬಲವನ್ನು ಖರ್ಗೆಯವರು ಪಡೆದರು.

ಜಿ-23 ನಾಯಕರ ಪೈಕಿ ಒಬ್ಬರಾದ ಶಶಿ ತರೂರ್‌ ಅವರು ಚುನಾವಣೆಯ ಪ್ರತಿಸ್ಪರ್ಧಿಯಾಗಿದ್ದಾರೆ ಎಂಬ ವಾಸ್ತವದ ಹೊರತಾಗಿಯೂ ಈ ಬೆಂಬಲ ದೊರಕಿತು. ಪಕ್ಷದ ಅಧ್ಯಕ್ಷ ಸ್ಥಾನದ ಮುಖವಾಗಿ ತೋರಿದ್ದ ಅಶೋಕ್ ಗೆಹ್ಲೋಟ್‌ ಅವರಿಗೆ ಹೋಲಿಸಿದರೆ ಖರ್ಗೆ ಅವರು ಜಿ-23 ಬಗ್ಗೆ ಹೆಚ್ಚು ಸಮಾಧಾನಕರ ನಾಯಕರಾಗಿದ್ದಾರೆ ಎನ್ನಲಾಗುತ್ತಿದೆ.

ಅಧ್ಯಕ್ಷರಾಗಿ ಖರ್ಗೆ ಅವರು ಜಿ-23 ನಾಯಕರ ಕಳವಳಗಳನ್ನು ಪರಿಹರಿಸಲು ಮತ್ತು ಸಾಧ್ಯವಾದಷ್ಟು ಹೆಚ್ಚಿನವರಿಗೆ ಗೌರವಾನ್ವಿತ ರೀತಿಯಲ್ಲಿ ಅವಕಾಶ ಕಲ್ಪಿಸಲು ಕ್ರಮಗಳನ್ನು ತೆಗೆದುಕೊಳ್ಳಬಹುದು.

2. ಸೈದ್ಧಾಂತಿಕ ನಿರಂತರತೆ

ಸೋನಿಯಾ ಗಾಂಧಿಯವರ ಅಧಿಕಾರಾವಧಿಯ ಬಳಿಕ ಹೊಮ್ಮಿರುವ ಸೈದ್ಧಾಂತಿಕ ನಿರಂತರತೆಯನ್ನು ಖರ್ಗೆಯವರು ಅಧ್ಯಕ್ಷರಾಗಿರುವುದು ಧ್ವನಿಸುತ್ತದೆ. ಖರ್ಗೆಯವರು ನಿರಂತರವಾಗಿ ಜಾತ್ಯತೀತತೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸ್ಪಷ್ಟವಾದ ನಿಲುವನ್ನು ತೆಗೆದುಕೊಂಡಿದ್ದಾರೆ. ಇದು ಅವರ ಅಧ್ಯಕ್ಷತೆಯಲ್ಲೂ ಪ್ರತಿಫಲಿಸುವ ಸಾಧ್ಯತೆಯಿದೆ.

ಬೀದರ್ ಜಿಲ್ಲೆಯಿಂದ ಬಂದು ಗುಲ್ಬರ್ಗದಿಂದ ಸಂಸದರಾದ ಖರ್ಗೆ ಅವರು ಸಾಕಷ್ಟು ಮುಸ್ಲಿಂ ಬಾಹುಳ್ಯವುಳ್ಳ ಭಾಗದಲ್ಲಿ ಸಮುದಾಯಗಳೊಂದಿಗೆ ನಿಕಟವಾಗಿದ್ದಾರೆ. ಸಮುದಾಯಗಳ ಬಗೆಗಿರಬೇಕಾದ ಕಾಳಜಿಯನ್ನು ಅರ್ಥಮಾಡಿಕೊಂಡಿದ್ದಾರೆ.

3. ರಾಹುಲ್ ಗಾಂಧಿ ಪಕ್ಷದ ಮುಖವಾದರೆ, ಪಕ್ಷ ಸಂಘಟನೆಯಲ್ಲಿ ಖರ್ಗೆ  

ಅಧ್ಯಕ್ಷ ಚುನಾವಣೆ ನಡೆಯುತ್ತಿದ್ದರೂ ರಾಹುಲ್ ಗಾಂಧಿಯನ್ನೇ ಪ್ರಧಾನವಾಗಿಟ್ಟುಕೊಂಡು ಭಾರತ್ ಜೋಡೋ ಯಾತ್ರೆ ಮುಂದುವರೆದಿದೆ. ಖರ್ಗೆ ಅವರು ಪಕ್ಷದ ಸಂಘಟನಾ ಮತ್ತು ದೈನಂದಿನ ವ್ಯವಹಾರಗಳನ್ನು ನಿರ್ವಹಿಸಿದರೆ, ರಾಹುಲ್ ಗಾಂಧಿ ಅವರು ಮುಖ್ಯ ರಾಜಕೀಯ ಮುಖವಾಗಿ ಹೊಮ್ಮಬಹುದು.

ಖರ್ಗೆ ಅವರು ರಾಹುಲ್ ಗಾಂಧಿಯವರ ನಿಕಟವರ್ತಿ ಎನ್ನಲಾಗುತ್ತಿದೆ. ಆದರೆ ರಾಹುಲ್‌ ಗಾಂಧಿಯವರು, “ಪಕ್ಷದಲ್ಲಿ ನನ್ನ ಸ್ಥಾನವೇನು ಎಂಬುದನ್ನು ಪಕ್ಷದ ಅಧ್ಯಕ್ಷರು ನಿರ್ಧರಿಸಲಿದ್ದಾರೆ” ಎಂದಿದ್ದಾರೆ.

4. ಪಕ್ಷದ ಕಾರ್ಯನಿರ್ವಹಣೆಯಲ್ಲಿ ಯಥಾಸ್ಥಿತಿ

ತರೂರ್ ಅವರಂತೆ ಖರ್ಗೆಯವರು ಅಧ್ಯಕ್ಷ ಸ್ಥಾನದ ಚುನಾವಣಾ ಪ್ರಚಾರದ ಸಮಯದಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿಲ್ಲ. ಈ ವರ್ಷದ ಆರಂಭದಲ್ಲಿ ಉದಯಪುರ ಚಿಂತನ್ ಶಿಬಿರದಲ್ಲಿ ಮಾಡಲಾದ ಘೋಷಣೆಯೇ ತಮ್ಮ ಪ್ರಣಾಳಿಕೆ ಎಂದು ಹೇಳಿದರು. ಸಾಂಸ್ಥಿಕ ವಿಷಯಗಳಲ್ಲಿ ಹೆಚ್ಚಿನ ಮಟ್ಟದ ಯಥಾಸ್ಥಿತಿ ಇರುವ ಸಾಧ್ಯತೆಯಿದೆ ಎಂಬುದನ್ನು ಇದು ಸೂಚಿಸುತ್ತದೆ.

ಆದಾಗ್ಯೂ ಬಹು ಕಾಯಾಧ್ಯಕ್ಷ ಸ್ಥಾನದಂತಹ ಹಲವಾರು ಹೊಸ ಹುದ್ದೆಗಳನ್ನು ಅನ್ವೇಷಿಸಲಾಗುತ್ತಿದೆ. ಪಕ್ಷ ಸಂಘಟನೆಯಲ್ಲೂ ಕೆಲವು ಬದಲಾವಣೆಗಳಾಗಬಹುದು.

ಕಾಂಗ್ರೆಸ್ ಕಾರ್ಯಕಾರಿ ಸಮಿತಿಯನ್ನು ಪುನರ್ ರಚಿಸಬಹುದು. ಖರ್ಗೆ ಅವರು ಕೆಲವು ಹೊಸ ಪ್ರಧಾನ ಕಾರ್ಯದರ್ಶಿಗಳನ್ನೂ ನೇಮಿಸಬಹುದು. ಈಗಿನ ಪದಾಧಿಕಾರಿಗಳನ್ನು ಎಷ್ಟರ ಮಟ್ಟಿಗೆ ಬದಲಾಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ರಾಜಸ್ಥಾನದಲ್ಲಿ ಏನು ಮಾಡಬೇಕು ಎಂಬುದು ಖರ್ಗೆ ಅವರ ಮುಂದಿರುವ ಮತ್ತೊಂದು ಸವಾಲು. ಶೋಕಾಸ್ ನೋಟಿಸ್ ನೀಡಿದ ಗೆಹ್ಲೋಟ್ ನಿಷ್ಠಾವಂತರಿಗೆ ಶಿಕ್ಷೆಯಾಗುತ್ತದೆಯೇ? ಗೆಹ್ಲೋಟ್ ಕೂಡ ಕ್ರಮ ಎದುರಿಸುತ್ತಾರೆಯೇ? ಹೊಸ ಕಾಂಗ್ರೆಸ್ ಅಧ್ಯಕ್ಷರು ಸಚಿನ್ ಪೈಲಟ್‌ಗೆ ಹೇಗೆ ಅವಕಾಶ ಕಲ್ಪಿಸುತ್ತಾರೆ? ಎಂಬ ಪ್ರಶ್ನೆಗಳಿವೆ.

5. ಕರ್ನಾಟಕದತ್ತ ಗಮನ

ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಚುನಾವಣೆಗಳು ಬರುತ್ತಿವೆ. ನಂತರ ತ್ರಿಪುರಾ, ಮೇಘಾಲಯ ಮತ್ತು ನಾಗಾಲ್ಯಾಂಡ್ ಚುನಾವಣೆಗಳು 2023ರ ಆರಂಭದಲ್ಲಿ ಎದುರಾಗಲಿವೆ. ಆದರೆ ಪಕ್ಷದ ಅಧ್ಯಕ್ಷರಾಗಿ ಖರ್ಗೆ ಅವರಿಗೆ ನಿಜವಾದ ಪರೀಕ್ಷೆ ಎದುರಾಗುವುದು 2023ರ ಬೇಸಿಗೆಯಲ್ಲಿ ನಡೆಯುವ ಚುನಾವಣೆಯಲ್ಲಿ ಎಂಬುದು ಸ್ಪಷ್ಟ. ಏಕೆಂದರೆ ತಮ್ಮ ತವರು ರಾಜ್ಯವಾದ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.

ಇದನ್ನೂ ಓದಿರಿ: ಕಾರ್ಮಿಕನ ಪುತ್ರರಾದ ಖರ್ಗೆ ಕಾಂಗ್ರೆಸ್‌ ಅಧ್ಯಕ್ಷ ಹುದ್ದೆಯವರೆಗೆ ಬೆಳೆದ ಯಶೋಗಾಥೆ

ಕರ್ನಾಟಕವನ್ನು ಗೆಲ್ಲುವುದು ಕಾಂಗ್ರೆಸ್‌ಗೆ ನಿರ್ಣಾಯಕವಾಗಿದೆ. ಏಕೆಂದರೆ ಕರ್ನಾಟಕದಲ್ಲಿ ಸರ್ಕಾರವನ್ನು ರಚಿಸಿದರೆ 2024ರ ಲೋಕಸಭಾ ಚುನಾವಣೆಯ ಪೂರ್ವದಲ್ಲಿ ಸಹಾಯವಾಗುತ್ತದೆ. ಖರ್ಗೆಯವರು ಪಕ್ಷದ ಅಧ್ಯಕ್ಷರಾಗುವುದರಿಂದ ಪಕ್ಷಕ್ಕೆ ಸ್ವಲ್ಪ ಲಾಭವಾಗಬಹುದು.

ಕರ್ನಾಟಕ ರಾಜ್ಯದಲ್ಲಿ ನಾಯಕತ್ವದ ಪ್ರಶ್ನೆಯನ್ನು ಪರಿಹರಿಸುವುದು ಮುಖ್ಯವಾಗುತ್ತದೆ. ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವೆ ಸಮತೋಲನ ಸಾಧಿಸುವುದು ಖರ್ಗೆಯವರ ಮುಂದಿರುವ ಸವಾಲಾಗಿದೆ.

ವರದಿ ಕೃಪೆ: ದಿ ಕ್ವಿಂಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...