Homeಮುಖಪುಟಕಾಂಗ್ರೆಸ್ ಅಧ್ಯಕ್ಷರಾಗಿ ಖರ್ಗೆ: ಈ ಐದು ಅಂಶಗಳಿಗೆ ಪ್ರಾಮುಖ್ಯತೆ ಸಿಗುವ ಸಾಧ್ಯತೆ!

ಕಾಂಗ್ರೆಸ್ ಅಧ್ಯಕ್ಷರಾಗಿ ಖರ್ಗೆ: ಈ ಐದು ಅಂಶಗಳಿಗೆ ಪ್ರಾಮುಖ್ಯತೆ ಸಿಗುವ ಸಾಧ್ಯತೆ!

- Advertisement -
- Advertisement -

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ, 80 ವರ್ಷ ವಯಸ್ಸಿನ ಮಲ್ಲಿಕಾರ್ಜುನ ಖರ್ಗೆ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ 98ನೇ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅವರು ಕರ್ನಾಟಕದ ಗುರ್ಮಿಟ್ಕಲ್‌ನಿಂದ ಒಂಬತ್ತು ಬಾರಿ ಶಾಸಕರಾಗಿ, ಗುಲ್ಬರ್ಗಾದಿಂದ ಎರಡು ಬಾರಿ ಸಂಸದರಾಗಿದ್ದಾರೆ. ಜೊತೆಗೆ ಕೇಂದ್ರ ಮತ್ತು ಕರ್ನಾಟಕ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.

ಖರ್ಗೆಯವರ ಆಯ್ಕೆಯು ಐತಿಹಾಸಿಕವಾಗಿದೆ. 50 ವರ್ಷಗಳ ಬಳಿಕ ದಲಿತ ವ್ಯಕ್ತಿಯೊಬ್ಬರು ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. 1970-71ರಲ್ಲಿ ಜಗಜೀವನ್ ರಾಮ್ ಅಧ್ಯಕ್ಷರಾಗಿದ್ದರು. ಕನ್ನಡಿಗರಾದ ಎಸ್.ನಿಜಲಿಂಗಪ್ಪ ಅವರು 1969ರಲ್ಲಿ ಈ ಸ್ಥಾನಕ್ಕೇರಿದ್ದರು. ಆ ಬಳಿಕ ಕಾಂಗ್ರೆಸ್‌ ಅಧ್ಯಕ್ಷಗಿರಿಗೇರಿದ ಕನ್ನಡಿಗ ಎಂಬ ಖ್ಯಾತಿಗೂ ಖರ್ಗೆಯವರು ಪಾತ್ರರಾಗಿದ್ದಾರೆ. 1998ರ ನಂತರದಲ್ಲಿ ಗಾಂಧಿಯೇತರ ಕುಟುಂಬದಿಂದ ಆಯ್ಕೆಯಾದವರಾಗಿಯೂ ಗಮನ ಸೆಳೆದಿದ್ದಾರೆ. ಅಧ್ಯಕ್ಷರಾದ ಖರ್ಗೆಯವರ ಮುಂದೆ ಐದು ಅಂಶಗಳು ಮುಖ್ಯವಾಗಲಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

1. ಏಕತೆಗೆ ಒತ್ತು

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ಪ್ರಚಾರದಲ್ಲಿ ಒಂದು ಅಂಶವು ಗಮನ ಸೆಳೆಯಿತು. ಹಿಂದಿನ ಜಿ-23 ಸದಸ್ಯರಾದ ಭೂಪಿಂದರ್ ಸಿಂಗ್ ಹೂಡಾ, ಮನೀಶ್ ತಿವಾರಿ, ಆನಂದ್ ಶರ್ಮಾ, ಮುಕುಲ್ ವಾಸ್ನಿಕ್ ಮತ್ತು ಪೃಥ್ವಿರಾಜ್ ಚವಾಣ್ ಅವರಿಂದ ಸಕ್ರಿಯ ಬೆಂಬಲವನ್ನು ಖರ್ಗೆಯವರು ಪಡೆದರು.

ಜಿ-23 ನಾಯಕರ ಪೈಕಿ ಒಬ್ಬರಾದ ಶಶಿ ತರೂರ್‌ ಅವರು ಚುನಾವಣೆಯ ಪ್ರತಿಸ್ಪರ್ಧಿಯಾಗಿದ್ದಾರೆ ಎಂಬ ವಾಸ್ತವದ ಹೊರತಾಗಿಯೂ ಈ ಬೆಂಬಲ ದೊರಕಿತು. ಪಕ್ಷದ ಅಧ್ಯಕ್ಷ ಸ್ಥಾನದ ಮುಖವಾಗಿ ತೋರಿದ್ದ ಅಶೋಕ್ ಗೆಹ್ಲೋಟ್‌ ಅವರಿಗೆ ಹೋಲಿಸಿದರೆ ಖರ್ಗೆ ಅವರು ಜಿ-23 ಬಗ್ಗೆ ಹೆಚ್ಚು ಸಮಾಧಾನಕರ ನಾಯಕರಾಗಿದ್ದಾರೆ ಎನ್ನಲಾಗುತ್ತಿದೆ.

ಅಧ್ಯಕ್ಷರಾಗಿ ಖರ್ಗೆ ಅವರು ಜಿ-23 ನಾಯಕರ ಕಳವಳಗಳನ್ನು ಪರಿಹರಿಸಲು ಮತ್ತು ಸಾಧ್ಯವಾದಷ್ಟು ಹೆಚ್ಚಿನವರಿಗೆ ಗೌರವಾನ್ವಿತ ರೀತಿಯಲ್ಲಿ ಅವಕಾಶ ಕಲ್ಪಿಸಲು ಕ್ರಮಗಳನ್ನು ತೆಗೆದುಕೊಳ್ಳಬಹುದು.

2. ಸೈದ್ಧಾಂತಿಕ ನಿರಂತರತೆ

ಸೋನಿಯಾ ಗಾಂಧಿಯವರ ಅಧಿಕಾರಾವಧಿಯ ಬಳಿಕ ಹೊಮ್ಮಿರುವ ಸೈದ್ಧಾಂತಿಕ ನಿರಂತರತೆಯನ್ನು ಖರ್ಗೆಯವರು ಅಧ್ಯಕ್ಷರಾಗಿರುವುದು ಧ್ವನಿಸುತ್ತದೆ. ಖರ್ಗೆಯವರು ನಿರಂತರವಾಗಿ ಜಾತ್ಯತೀತತೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸ್ಪಷ್ಟವಾದ ನಿಲುವನ್ನು ತೆಗೆದುಕೊಂಡಿದ್ದಾರೆ. ಇದು ಅವರ ಅಧ್ಯಕ್ಷತೆಯಲ್ಲೂ ಪ್ರತಿಫಲಿಸುವ ಸಾಧ್ಯತೆಯಿದೆ.

ಬೀದರ್ ಜಿಲ್ಲೆಯಿಂದ ಬಂದು ಗುಲ್ಬರ್ಗದಿಂದ ಸಂಸದರಾದ ಖರ್ಗೆ ಅವರು ಸಾಕಷ್ಟು ಮುಸ್ಲಿಂ ಬಾಹುಳ್ಯವುಳ್ಳ ಭಾಗದಲ್ಲಿ ಸಮುದಾಯಗಳೊಂದಿಗೆ ನಿಕಟವಾಗಿದ್ದಾರೆ. ಸಮುದಾಯಗಳ ಬಗೆಗಿರಬೇಕಾದ ಕಾಳಜಿಯನ್ನು ಅರ್ಥಮಾಡಿಕೊಂಡಿದ್ದಾರೆ.

3. ರಾಹುಲ್ ಗಾಂಧಿ ಪಕ್ಷದ ಮುಖವಾದರೆ, ಪಕ್ಷ ಸಂಘಟನೆಯಲ್ಲಿ ಖರ್ಗೆ  

ಅಧ್ಯಕ್ಷ ಚುನಾವಣೆ ನಡೆಯುತ್ತಿದ್ದರೂ ರಾಹುಲ್ ಗಾಂಧಿಯನ್ನೇ ಪ್ರಧಾನವಾಗಿಟ್ಟುಕೊಂಡು ಭಾರತ್ ಜೋಡೋ ಯಾತ್ರೆ ಮುಂದುವರೆದಿದೆ. ಖರ್ಗೆ ಅವರು ಪಕ್ಷದ ಸಂಘಟನಾ ಮತ್ತು ದೈನಂದಿನ ವ್ಯವಹಾರಗಳನ್ನು ನಿರ್ವಹಿಸಿದರೆ, ರಾಹುಲ್ ಗಾಂಧಿ ಅವರು ಮುಖ್ಯ ರಾಜಕೀಯ ಮುಖವಾಗಿ ಹೊಮ್ಮಬಹುದು.

ಖರ್ಗೆ ಅವರು ರಾಹುಲ್ ಗಾಂಧಿಯವರ ನಿಕಟವರ್ತಿ ಎನ್ನಲಾಗುತ್ತಿದೆ. ಆದರೆ ರಾಹುಲ್‌ ಗಾಂಧಿಯವರು, “ಪಕ್ಷದಲ್ಲಿ ನನ್ನ ಸ್ಥಾನವೇನು ಎಂಬುದನ್ನು ಪಕ್ಷದ ಅಧ್ಯಕ್ಷರು ನಿರ್ಧರಿಸಲಿದ್ದಾರೆ” ಎಂದಿದ್ದಾರೆ.

4. ಪಕ್ಷದ ಕಾರ್ಯನಿರ್ವಹಣೆಯಲ್ಲಿ ಯಥಾಸ್ಥಿತಿ

ತರೂರ್ ಅವರಂತೆ ಖರ್ಗೆಯವರು ಅಧ್ಯಕ್ಷ ಸ್ಥಾನದ ಚುನಾವಣಾ ಪ್ರಚಾರದ ಸಮಯದಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿಲ್ಲ. ಈ ವರ್ಷದ ಆರಂಭದಲ್ಲಿ ಉದಯಪುರ ಚಿಂತನ್ ಶಿಬಿರದಲ್ಲಿ ಮಾಡಲಾದ ಘೋಷಣೆಯೇ ತಮ್ಮ ಪ್ರಣಾಳಿಕೆ ಎಂದು ಹೇಳಿದರು. ಸಾಂಸ್ಥಿಕ ವಿಷಯಗಳಲ್ಲಿ ಹೆಚ್ಚಿನ ಮಟ್ಟದ ಯಥಾಸ್ಥಿತಿ ಇರುವ ಸಾಧ್ಯತೆಯಿದೆ ಎಂಬುದನ್ನು ಇದು ಸೂಚಿಸುತ್ತದೆ.

ಆದಾಗ್ಯೂ ಬಹು ಕಾಯಾಧ್ಯಕ್ಷ ಸ್ಥಾನದಂತಹ ಹಲವಾರು ಹೊಸ ಹುದ್ದೆಗಳನ್ನು ಅನ್ವೇಷಿಸಲಾಗುತ್ತಿದೆ. ಪಕ್ಷ ಸಂಘಟನೆಯಲ್ಲೂ ಕೆಲವು ಬದಲಾವಣೆಗಳಾಗಬಹುದು.

ಕಾಂಗ್ರೆಸ್ ಕಾರ್ಯಕಾರಿ ಸಮಿತಿಯನ್ನು ಪುನರ್ ರಚಿಸಬಹುದು. ಖರ್ಗೆ ಅವರು ಕೆಲವು ಹೊಸ ಪ್ರಧಾನ ಕಾರ್ಯದರ್ಶಿಗಳನ್ನೂ ನೇಮಿಸಬಹುದು. ಈಗಿನ ಪದಾಧಿಕಾರಿಗಳನ್ನು ಎಷ್ಟರ ಮಟ್ಟಿಗೆ ಬದಲಾಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ರಾಜಸ್ಥಾನದಲ್ಲಿ ಏನು ಮಾಡಬೇಕು ಎಂಬುದು ಖರ್ಗೆ ಅವರ ಮುಂದಿರುವ ಮತ್ತೊಂದು ಸವಾಲು. ಶೋಕಾಸ್ ನೋಟಿಸ್ ನೀಡಿದ ಗೆಹ್ಲೋಟ್ ನಿಷ್ಠಾವಂತರಿಗೆ ಶಿಕ್ಷೆಯಾಗುತ್ತದೆಯೇ? ಗೆಹ್ಲೋಟ್ ಕೂಡ ಕ್ರಮ ಎದುರಿಸುತ್ತಾರೆಯೇ? ಹೊಸ ಕಾಂಗ್ರೆಸ್ ಅಧ್ಯಕ್ಷರು ಸಚಿನ್ ಪೈಲಟ್‌ಗೆ ಹೇಗೆ ಅವಕಾಶ ಕಲ್ಪಿಸುತ್ತಾರೆ? ಎಂಬ ಪ್ರಶ್ನೆಗಳಿವೆ.

5. ಕರ್ನಾಟಕದತ್ತ ಗಮನ

ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಚುನಾವಣೆಗಳು ಬರುತ್ತಿವೆ. ನಂತರ ತ್ರಿಪುರಾ, ಮೇಘಾಲಯ ಮತ್ತು ನಾಗಾಲ್ಯಾಂಡ್ ಚುನಾವಣೆಗಳು 2023ರ ಆರಂಭದಲ್ಲಿ ಎದುರಾಗಲಿವೆ. ಆದರೆ ಪಕ್ಷದ ಅಧ್ಯಕ್ಷರಾಗಿ ಖರ್ಗೆ ಅವರಿಗೆ ನಿಜವಾದ ಪರೀಕ್ಷೆ ಎದುರಾಗುವುದು 2023ರ ಬೇಸಿಗೆಯಲ್ಲಿ ನಡೆಯುವ ಚುನಾವಣೆಯಲ್ಲಿ ಎಂಬುದು ಸ್ಪಷ್ಟ. ಏಕೆಂದರೆ ತಮ್ಮ ತವರು ರಾಜ್ಯವಾದ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.

ಇದನ್ನೂ ಓದಿರಿ: ಕಾರ್ಮಿಕನ ಪುತ್ರರಾದ ಖರ್ಗೆ ಕಾಂಗ್ರೆಸ್‌ ಅಧ್ಯಕ್ಷ ಹುದ್ದೆಯವರೆಗೆ ಬೆಳೆದ ಯಶೋಗಾಥೆ

ಕರ್ನಾಟಕವನ್ನು ಗೆಲ್ಲುವುದು ಕಾಂಗ್ರೆಸ್‌ಗೆ ನಿರ್ಣಾಯಕವಾಗಿದೆ. ಏಕೆಂದರೆ ಕರ್ನಾಟಕದಲ್ಲಿ ಸರ್ಕಾರವನ್ನು ರಚಿಸಿದರೆ 2024ರ ಲೋಕಸಭಾ ಚುನಾವಣೆಯ ಪೂರ್ವದಲ್ಲಿ ಸಹಾಯವಾಗುತ್ತದೆ. ಖರ್ಗೆಯವರು ಪಕ್ಷದ ಅಧ್ಯಕ್ಷರಾಗುವುದರಿಂದ ಪಕ್ಷಕ್ಕೆ ಸ್ವಲ್ಪ ಲಾಭವಾಗಬಹುದು.

ಕರ್ನಾಟಕ ರಾಜ್ಯದಲ್ಲಿ ನಾಯಕತ್ವದ ಪ್ರಶ್ನೆಯನ್ನು ಪರಿಹರಿಸುವುದು ಮುಖ್ಯವಾಗುತ್ತದೆ. ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವೆ ಸಮತೋಲನ ಸಾಧಿಸುವುದು ಖರ್ಗೆಯವರ ಮುಂದಿರುವ ಸವಾಲಾಗಿದೆ.

ವರದಿ ಕೃಪೆ: ದಿ ಕ್ವಿಂಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....