Homeಮುಖಪುಟಕಾಂಗ್ರೆಸ್ ಅಧ್ಯಕ್ಷರಾಗಿ ಖರ್ಗೆ: ಈ ಐದು ಅಂಶಗಳಿಗೆ ಪ್ರಾಮುಖ್ಯತೆ ಸಿಗುವ ಸಾಧ್ಯತೆ!

ಕಾಂಗ್ರೆಸ್ ಅಧ್ಯಕ್ಷರಾಗಿ ಖರ್ಗೆ: ಈ ಐದು ಅಂಶಗಳಿಗೆ ಪ್ರಾಮುಖ್ಯತೆ ಸಿಗುವ ಸಾಧ್ಯತೆ!

- Advertisement -
- Advertisement -

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ, 80 ವರ್ಷ ವಯಸ್ಸಿನ ಮಲ್ಲಿಕಾರ್ಜುನ ಖರ್ಗೆ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ 98ನೇ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅವರು ಕರ್ನಾಟಕದ ಗುರ್ಮಿಟ್ಕಲ್‌ನಿಂದ ಒಂಬತ್ತು ಬಾರಿ ಶಾಸಕರಾಗಿ, ಗುಲ್ಬರ್ಗಾದಿಂದ ಎರಡು ಬಾರಿ ಸಂಸದರಾಗಿದ್ದಾರೆ. ಜೊತೆಗೆ ಕೇಂದ್ರ ಮತ್ತು ಕರ್ನಾಟಕ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.

ಖರ್ಗೆಯವರ ಆಯ್ಕೆಯು ಐತಿಹಾಸಿಕವಾಗಿದೆ. 50 ವರ್ಷಗಳ ಬಳಿಕ ದಲಿತ ವ್ಯಕ್ತಿಯೊಬ್ಬರು ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. 1970-71ರಲ್ಲಿ ಜಗಜೀವನ್ ರಾಮ್ ಅಧ್ಯಕ್ಷರಾಗಿದ್ದರು. ಕನ್ನಡಿಗರಾದ ಎಸ್.ನಿಜಲಿಂಗಪ್ಪ ಅವರು 1969ರಲ್ಲಿ ಈ ಸ್ಥಾನಕ್ಕೇರಿದ್ದರು. ಆ ಬಳಿಕ ಕಾಂಗ್ರೆಸ್‌ ಅಧ್ಯಕ್ಷಗಿರಿಗೇರಿದ ಕನ್ನಡಿಗ ಎಂಬ ಖ್ಯಾತಿಗೂ ಖರ್ಗೆಯವರು ಪಾತ್ರರಾಗಿದ್ದಾರೆ. 1998ರ ನಂತರದಲ್ಲಿ ಗಾಂಧಿಯೇತರ ಕುಟುಂಬದಿಂದ ಆಯ್ಕೆಯಾದವರಾಗಿಯೂ ಗಮನ ಸೆಳೆದಿದ್ದಾರೆ. ಅಧ್ಯಕ್ಷರಾದ ಖರ್ಗೆಯವರ ಮುಂದೆ ಐದು ಅಂಶಗಳು ಮುಖ್ಯವಾಗಲಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

1. ಏಕತೆಗೆ ಒತ್ತು

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ಪ್ರಚಾರದಲ್ಲಿ ಒಂದು ಅಂಶವು ಗಮನ ಸೆಳೆಯಿತು. ಹಿಂದಿನ ಜಿ-23 ಸದಸ್ಯರಾದ ಭೂಪಿಂದರ್ ಸಿಂಗ್ ಹೂಡಾ, ಮನೀಶ್ ತಿವಾರಿ, ಆನಂದ್ ಶರ್ಮಾ, ಮುಕುಲ್ ವಾಸ್ನಿಕ್ ಮತ್ತು ಪೃಥ್ವಿರಾಜ್ ಚವಾಣ್ ಅವರಿಂದ ಸಕ್ರಿಯ ಬೆಂಬಲವನ್ನು ಖರ್ಗೆಯವರು ಪಡೆದರು.

ಜಿ-23 ನಾಯಕರ ಪೈಕಿ ಒಬ್ಬರಾದ ಶಶಿ ತರೂರ್‌ ಅವರು ಚುನಾವಣೆಯ ಪ್ರತಿಸ್ಪರ್ಧಿಯಾಗಿದ್ದಾರೆ ಎಂಬ ವಾಸ್ತವದ ಹೊರತಾಗಿಯೂ ಈ ಬೆಂಬಲ ದೊರಕಿತು. ಪಕ್ಷದ ಅಧ್ಯಕ್ಷ ಸ್ಥಾನದ ಮುಖವಾಗಿ ತೋರಿದ್ದ ಅಶೋಕ್ ಗೆಹ್ಲೋಟ್‌ ಅವರಿಗೆ ಹೋಲಿಸಿದರೆ ಖರ್ಗೆ ಅವರು ಜಿ-23 ಬಗ್ಗೆ ಹೆಚ್ಚು ಸಮಾಧಾನಕರ ನಾಯಕರಾಗಿದ್ದಾರೆ ಎನ್ನಲಾಗುತ್ತಿದೆ.

ಅಧ್ಯಕ್ಷರಾಗಿ ಖರ್ಗೆ ಅವರು ಜಿ-23 ನಾಯಕರ ಕಳವಳಗಳನ್ನು ಪರಿಹರಿಸಲು ಮತ್ತು ಸಾಧ್ಯವಾದಷ್ಟು ಹೆಚ್ಚಿನವರಿಗೆ ಗೌರವಾನ್ವಿತ ರೀತಿಯಲ್ಲಿ ಅವಕಾಶ ಕಲ್ಪಿಸಲು ಕ್ರಮಗಳನ್ನು ತೆಗೆದುಕೊಳ್ಳಬಹುದು.

2. ಸೈದ್ಧಾಂತಿಕ ನಿರಂತರತೆ

ಸೋನಿಯಾ ಗಾಂಧಿಯವರ ಅಧಿಕಾರಾವಧಿಯ ಬಳಿಕ ಹೊಮ್ಮಿರುವ ಸೈದ್ಧಾಂತಿಕ ನಿರಂತರತೆಯನ್ನು ಖರ್ಗೆಯವರು ಅಧ್ಯಕ್ಷರಾಗಿರುವುದು ಧ್ವನಿಸುತ್ತದೆ. ಖರ್ಗೆಯವರು ನಿರಂತರವಾಗಿ ಜಾತ್ಯತೀತತೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸ್ಪಷ್ಟವಾದ ನಿಲುವನ್ನು ತೆಗೆದುಕೊಂಡಿದ್ದಾರೆ. ಇದು ಅವರ ಅಧ್ಯಕ್ಷತೆಯಲ್ಲೂ ಪ್ರತಿಫಲಿಸುವ ಸಾಧ್ಯತೆಯಿದೆ.

ಬೀದರ್ ಜಿಲ್ಲೆಯಿಂದ ಬಂದು ಗುಲ್ಬರ್ಗದಿಂದ ಸಂಸದರಾದ ಖರ್ಗೆ ಅವರು ಸಾಕಷ್ಟು ಮುಸ್ಲಿಂ ಬಾಹುಳ್ಯವುಳ್ಳ ಭಾಗದಲ್ಲಿ ಸಮುದಾಯಗಳೊಂದಿಗೆ ನಿಕಟವಾಗಿದ್ದಾರೆ. ಸಮುದಾಯಗಳ ಬಗೆಗಿರಬೇಕಾದ ಕಾಳಜಿಯನ್ನು ಅರ್ಥಮಾಡಿಕೊಂಡಿದ್ದಾರೆ.

3. ರಾಹುಲ್ ಗಾಂಧಿ ಪಕ್ಷದ ಮುಖವಾದರೆ, ಪಕ್ಷ ಸಂಘಟನೆಯಲ್ಲಿ ಖರ್ಗೆ  

ಅಧ್ಯಕ್ಷ ಚುನಾವಣೆ ನಡೆಯುತ್ತಿದ್ದರೂ ರಾಹುಲ್ ಗಾಂಧಿಯನ್ನೇ ಪ್ರಧಾನವಾಗಿಟ್ಟುಕೊಂಡು ಭಾರತ್ ಜೋಡೋ ಯಾತ್ರೆ ಮುಂದುವರೆದಿದೆ. ಖರ್ಗೆ ಅವರು ಪಕ್ಷದ ಸಂಘಟನಾ ಮತ್ತು ದೈನಂದಿನ ವ್ಯವಹಾರಗಳನ್ನು ನಿರ್ವಹಿಸಿದರೆ, ರಾಹುಲ್ ಗಾಂಧಿ ಅವರು ಮುಖ್ಯ ರಾಜಕೀಯ ಮುಖವಾಗಿ ಹೊಮ್ಮಬಹುದು.

ಖರ್ಗೆ ಅವರು ರಾಹುಲ್ ಗಾಂಧಿಯವರ ನಿಕಟವರ್ತಿ ಎನ್ನಲಾಗುತ್ತಿದೆ. ಆದರೆ ರಾಹುಲ್‌ ಗಾಂಧಿಯವರು, “ಪಕ್ಷದಲ್ಲಿ ನನ್ನ ಸ್ಥಾನವೇನು ಎಂಬುದನ್ನು ಪಕ್ಷದ ಅಧ್ಯಕ್ಷರು ನಿರ್ಧರಿಸಲಿದ್ದಾರೆ” ಎಂದಿದ್ದಾರೆ.

4. ಪಕ್ಷದ ಕಾರ್ಯನಿರ್ವಹಣೆಯಲ್ಲಿ ಯಥಾಸ್ಥಿತಿ

ತರೂರ್ ಅವರಂತೆ ಖರ್ಗೆಯವರು ಅಧ್ಯಕ್ಷ ಸ್ಥಾನದ ಚುನಾವಣಾ ಪ್ರಚಾರದ ಸಮಯದಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿಲ್ಲ. ಈ ವರ್ಷದ ಆರಂಭದಲ್ಲಿ ಉದಯಪುರ ಚಿಂತನ್ ಶಿಬಿರದಲ್ಲಿ ಮಾಡಲಾದ ಘೋಷಣೆಯೇ ತಮ್ಮ ಪ್ರಣಾಳಿಕೆ ಎಂದು ಹೇಳಿದರು. ಸಾಂಸ್ಥಿಕ ವಿಷಯಗಳಲ್ಲಿ ಹೆಚ್ಚಿನ ಮಟ್ಟದ ಯಥಾಸ್ಥಿತಿ ಇರುವ ಸಾಧ್ಯತೆಯಿದೆ ಎಂಬುದನ್ನು ಇದು ಸೂಚಿಸುತ್ತದೆ.

ಆದಾಗ್ಯೂ ಬಹು ಕಾಯಾಧ್ಯಕ್ಷ ಸ್ಥಾನದಂತಹ ಹಲವಾರು ಹೊಸ ಹುದ್ದೆಗಳನ್ನು ಅನ್ವೇಷಿಸಲಾಗುತ್ತಿದೆ. ಪಕ್ಷ ಸಂಘಟನೆಯಲ್ಲೂ ಕೆಲವು ಬದಲಾವಣೆಗಳಾಗಬಹುದು.

ಕಾಂಗ್ರೆಸ್ ಕಾರ್ಯಕಾರಿ ಸಮಿತಿಯನ್ನು ಪುನರ್ ರಚಿಸಬಹುದು. ಖರ್ಗೆ ಅವರು ಕೆಲವು ಹೊಸ ಪ್ರಧಾನ ಕಾರ್ಯದರ್ಶಿಗಳನ್ನೂ ನೇಮಿಸಬಹುದು. ಈಗಿನ ಪದಾಧಿಕಾರಿಗಳನ್ನು ಎಷ್ಟರ ಮಟ್ಟಿಗೆ ಬದಲಾಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ರಾಜಸ್ಥಾನದಲ್ಲಿ ಏನು ಮಾಡಬೇಕು ಎಂಬುದು ಖರ್ಗೆ ಅವರ ಮುಂದಿರುವ ಮತ್ತೊಂದು ಸವಾಲು. ಶೋಕಾಸ್ ನೋಟಿಸ್ ನೀಡಿದ ಗೆಹ್ಲೋಟ್ ನಿಷ್ಠಾವಂತರಿಗೆ ಶಿಕ್ಷೆಯಾಗುತ್ತದೆಯೇ? ಗೆಹ್ಲೋಟ್ ಕೂಡ ಕ್ರಮ ಎದುರಿಸುತ್ತಾರೆಯೇ? ಹೊಸ ಕಾಂಗ್ರೆಸ್ ಅಧ್ಯಕ್ಷರು ಸಚಿನ್ ಪೈಲಟ್‌ಗೆ ಹೇಗೆ ಅವಕಾಶ ಕಲ್ಪಿಸುತ್ತಾರೆ? ಎಂಬ ಪ್ರಶ್ನೆಗಳಿವೆ.

5. ಕರ್ನಾಟಕದತ್ತ ಗಮನ

ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಚುನಾವಣೆಗಳು ಬರುತ್ತಿವೆ. ನಂತರ ತ್ರಿಪುರಾ, ಮೇಘಾಲಯ ಮತ್ತು ನಾಗಾಲ್ಯಾಂಡ್ ಚುನಾವಣೆಗಳು 2023ರ ಆರಂಭದಲ್ಲಿ ಎದುರಾಗಲಿವೆ. ಆದರೆ ಪಕ್ಷದ ಅಧ್ಯಕ್ಷರಾಗಿ ಖರ್ಗೆ ಅವರಿಗೆ ನಿಜವಾದ ಪರೀಕ್ಷೆ ಎದುರಾಗುವುದು 2023ರ ಬೇಸಿಗೆಯಲ್ಲಿ ನಡೆಯುವ ಚುನಾವಣೆಯಲ್ಲಿ ಎಂಬುದು ಸ್ಪಷ್ಟ. ಏಕೆಂದರೆ ತಮ್ಮ ತವರು ರಾಜ್ಯವಾದ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.

ಇದನ್ನೂ ಓದಿರಿ: ಕಾರ್ಮಿಕನ ಪುತ್ರರಾದ ಖರ್ಗೆ ಕಾಂಗ್ರೆಸ್‌ ಅಧ್ಯಕ್ಷ ಹುದ್ದೆಯವರೆಗೆ ಬೆಳೆದ ಯಶೋಗಾಥೆ

ಕರ್ನಾಟಕವನ್ನು ಗೆಲ್ಲುವುದು ಕಾಂಗ್ರೆಸ್‌ಗೆ ನಿರ್ಣಾಯಕವಾಗಿದೆ. ಏಕೆಂದರೆ ಕರ್ನಾಟಕದಲ್ಲಿ ಸರ್ಕಾರವನ್ನು ರಚಿಸಿದರೆ 2024ರ ಲೋಕಸಭಾ ಚುನಾವಣೆಯ ಪೂರ್ವದಲ್ಲಿ ಸಹಾಯವಾಗುತ್ತದೆ. ಖರ್ಗೆಯವರು ಪಕ್ಷದ ಅಧ್ಯಕ್ಷರಾಗುವುದರಿಂದ ಪಕ್ಷಕ್ಕೆ ಸ್ವಲ್ಪ ಲಾಭವಾಗಬಹುದು.

ಕರ್ನಾಟಕ ರಾಜ್ಯದಲ್ಲಿ ನಾಯಕತ್ವದ ಪ್ರಶ್ನೆಯನ್ನು ಪರಿಹರಿಸುವುದು ಮುಖ್ಯವಾಗುತ್ತದೆ. ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವೆ ಸಮತೋಲನ ಸಾಧಿಸುವುದು ಖರ್ಗೆಯವರ ಮುಂದಿರುವ ಸವಾಲಾಗಿದೆ.

ವರದಿ ಕೃಪೆ: ದಿ ಕ್ವಿಂಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...