Homeಮುಖಪುಟಕಾಂಗ್ರೆಸ್ ಅಧ್ಯಕ್ಷರಾಗಿ ಖರ್ಗೆ: ಈ ಐದು ಅಂಶಗಳಿಗೆ ಪ್ರಾಮುಖ್ಯತೆ ಸಿಗುವ ಸಾಧ್ಯತೆ!

ಕಾಂಗ್ರೆಸ್ ಅಧ್ಯಕ್ಷರಾಗಿ ಖರ್ಗೆ: ಈ ಐದು ಅಂಶಗಳಿಗೆ ಪ್ರಾಮುಖ್ಯತೆ ಸಿಗುವ ಸಾಧ್ಯತೆ!

- Advertisement -
- Advertisement -

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ, 80 ವರ್ಷ ವಯಸ್ಸಿನ ಮಲ್ಲಿಕಾರ್ಜುನ ಖರ್ಗೆ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ 98ನೇ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅವರು ಕರ್ನಾಟಕದ ಗುರ್ಮಿಟ್ಕಲ್‌ನಿಂದ ಒಂಬತ್ತು ಬಾರಿ ಶಾಸಕರಾಗಿ, ಗುಲ್ಬರ್ಗಾದಿಂದ ಎರಡು ಬಾರಿ ಸಂಸದರಾಗಿದ್ದಾರೆ. ಜೊತೆಗೆ ಕೇಂದ್ರ ಮತ್ತು ಕರ್ನಾಟಕ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.

ಖರ್ಗೆಯವರ ಆಯ್ಕೆಯು ಐತಿಹಾಸಿಕವಾಗಿದೆ. 50 ವರ್ಷಗಳ ಬಳಿಕ ದಲಿತ ವ್ಯಕ್ತಿಯೊಬ್ಬರು ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. 1970-71ರಲ್ಲಿ ಜಗಜೀವನ್ ರಾಮ್ ಅಧ್ಯಕ್ಷರಾಗಿದ್ದರು. ಕನ್ನಡಿಗರಾದ ಎಸ್.ನಿಜಲಿಂಗಪ್ಪ ಅವರು 1969ರಲ್ಲಿ ಈ ಸ್ಥಾನಕ್ಕೇರಿದ್ದರು. ಆ ಬಳಿಕ ಕಾಂಗ್ರೆಸ್‌ ಅಧ್ಯಕ್ಷಗಿರಿಗೇರಿದ ಕನ್ನಡಿಗ ಎಂಬ ಖ್ಯಾತಿಗೂ ಖರ್ಗೆಯವರು ಪಾತ್ರರಾಗಿದ್ದಾರೆ. 1998ರ ನಂತರದಲ್ಲಿ ಗಾಂಧಿಯೇತರ ಕುಟುಂಬದಿಂದ ಆಯ್ಕೆಯಾದವರಾಗಿಯೂ ಗಮನ ಸೆಳೆದಿದ್ದಾರೆ. ಅಧ್ಯಕ್ಷರಾದ ಖರ್ಗೆಯವರ ಮುಂದೆ ಐದು ಅಂಶಗಳು ಮುಖ್ಯವಾಗಲಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

1. ಏಕತೆಗೆ ಒತ್ತು

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ಪ್ರಚಾರದಲ್ಲಿ ಒಂದು ಅಂಶವು ಗಮನ ಸೆಳೆಯಿತು. ಹಿಂದಿನ ಜಿ-23 ಸದಸ್ಯರಾದ ಭೂಪಿಂದರ್ ಸಿಂಗ್ ಹೂಡಾ, ಮನೀಶ್ ತಿವಾರಿ, ಆನಂದ್ ಶರ್ಮಾ, ಮುಕುಲ್ ವಾಸ್ನಿಕ್ ಮತ್ತು ಪೃಥ್ವಿರಾಜ್ ಚವಾಣ್ ಅವರಿಂದ ಸಕ್ರಿಯ ಬೆಂಬಲವನ್ನು ಖರ್ಗೆಯವರು ಪಡೆದರು.

ಜಿ-23 ನಾಯಕರ ಪೈಕಿ ಒಬ್ಬರಾದ ಶಶಿ ತರೂರ್‌ ಅವರು ಚುನಾವಣೆಯ ಪ್ರತಿಸ್ಪರ್ಧಿಯಾಗಿದ್ದಾರೆ ಎಂಬ ವಾಸ್ತವದ ಹೊರತಾಗಿಯೂ ಈ ಬೆಂಬಲ ದೊರಕಿತು. ಪಕ್ಷದ ಅಧ್ಯಕ್ಷ ಸ್ಥಾನದ ಮುಖವಾಗಿ ತೋರಿದ್ದ ಅಶೋಕ್ ಗೆಹ್ಲೋಟ್‌ ಅವರಿಗೆ ಹೋಲಿಸಿದರೆ ಖರ್ಗೆ ಅವರು ಜಿ-23 ಬಗ್ಗೆ ಹೆಚ್ಚು ಸಮಾಧಾನಕರ ನಾಯಕರಾಗಿದ್ದಾರೆ ಎನ್ನಲಾಗುತ್ತಿದೆ.

ಅಧ್ಯಕ್ಷರಾಗಿ ಖರ್ಗೆ ಅವರು ಜಿ-23 ನಾಯಕರ ಕಳವಳಗಳನ್ನು ಪರಿಹರಿಸಲು ಮತ್ತು ಸಾಧ್ಯವಾದಷ್ಟು ಹೆಚ್ಚಿನವರಿಗೆ ಗೌರವಾನ್ವಿತ ರೀತಿಯಲ್ಲಿ ಅವಕಾಶ ಕಲ್ಪಿಸಲು ಕ್ರಮಗಳನ್ನು ತೆಗೆದುಕೊಳ್ಳಬಹುದು.

2. ಸೈದ್ಧಾಂತಿಕ ನಿರಂತರತೆ

ಸೋನಿಯಾ ಗಾಂಧಿಯವರ ಅಧಿಕಾರಾವಧಿಯ ಬಳಿಕ ಹೊಮ್ಮಿರುವ ಸೈದ್ಧಾಂತಿಕ ನಿರಂತರತೆಯನ್ನು ಖರ್ಗೆಯವರು ಅಧ್ಯಕ್ಷರಾಗಿರುವುದು ಧ್ವನಿಸುತ್ತದೆ. ಖರ್ಗೆಯವರು ನಿರಂತರವಾಗಿ ಜಾತ್ಯತೀತತೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸ್ಪಷ್ಟವಾದ ನಿಲುವನ್ನು ತೆಗೆದುಕೊಂಡಿದ್ದಾರೆ. ಇದು ಅವರ ಅಧ್ಯಕ್ಷತೆಯಲ್ಲೂ ಪ್ರತಿಫಲಿಸುವ ಸಾಧ್ಯತೆಯಿದೆ.

ಬೀದರ್ ಜಿಲ್ಲೆಯಿಂದ ಬಂದು ಗುಲ್ಬರ್ಗದಿಂದ ಸಂಸದರಾದ ಖರ್ಗೆ ಅವರು ಸಾಕಷ್ಟು ಮುಸ್ಲಿಂ ಬಾಹುಳ್ಯವುಳ್ಳ ಭಾಗದಲ್ಲಿ ಸಮುದಾಯಗಳೊಂದಿಗೆ ನಿಕಟವಾಗಿದ್ದಾರೆ. ಸಮುದಾಯಗಳ ಬಗೆಗಿರಬೇಕಾದ ಕಾಳಜಿಯನ್ನು ಅರ್ಥಮಾಡಿಕೊಂಡಿದ್ದಾರೆ.

3. ರಾಹುಲ್ ಗಾಂಧಿ ಪಕ್ಷದ ಮುಖವಾದರೆ, ಪಕ್ಷ ಸಂಘಟನೆಯಲ್ಲಿ ಖರ್ಗೆ  

ಅಧ್ಯಕ್ಷ ಚುನಾವಣೆ ನಡೆಯುತ್ತಿದ್ದರೂ ರಾಹುಲ್ ಗಾಂಧಿಯನ್ನೇ ಪ್ರಧಾನವಾಗಿಟ್ಟುಕೊಂಡು ಭಾರತ್ ಜೋಡೋ ಯಾತ್ರೆ ಮುಂದುವರೆದಿದೆ. ಖರ್ಗೆ ಅವರು ಪಕ್ಷದ ಸಂಘಟನಾ ಮತ್ತು ದೈನಂದಿನ ವ್ಯವಹಾರಗಳನ್ನು ನಿರ್ವಹಿಸಿದರೆ, ರಾಹುಲ್ ಗಾಂಧಿ ಅವರು ಮುಖ್ಯ ರಾಜಕೀಯ ಮುಖವಾಗಿ ಹೊಮ್ಮಬಹುದು.

ಖರ್ಗೆ ಅವರು ರಾಹುಲ್ ಗಾಂಧಿಯವರ ನಿಕಟವರ್ತಿ ಎನ್ನಲಾಗುತ್ತಿದೆ. ಆದರೆ ರಾಹುಲ್‌ ಗಾಂಧಿಯವರು, “ಪಕ್ಷದಲ್ಲಿ ನನ್ನ ಸ್ಥಾನವೇನು ಎಂಬುದನ್ನು ಪಕ್ಷದ ಅಧ್ಯಕ್ಷರು ನಿರ್ಧರಿಸಲಿದ್ದಾರೆ” ಎಂದಿದ್ದಾರೆ.

4. ಪಕ್ಷದ ಕಾರ್ಯನಿರ್ವಹಣೆಯಲ್ಲಿ ಯಥಾಸ್ಥಿತಿ

ತರೂರ್ ಅವರಂತೆ ಖರ್ಗೆಯವರು ಅಧ್ಯಕ್ಷ ಸ್ಥಾನದ ಚುನಾವಣಾ ಪ್ರಚಾರದ ಸಮಯದಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿಲ್ಲ. ಈ ವರ್ಷದ ಆರಂಭದಲ್ಲಿ ಉದಯಪುರ ಚಿಂತನ್ ಶಿಬಿರದಲ್ಲಿ ಮಾಡಲಾದ ಘೋಷಣೆಯೇ ತಮ್ಮ ಪ್ರಣಾಳಿಕೆ ಎಂದು ಹೇಳಿದರು. ಸಾಂಸ್ಥಿಕ ವಿಷಯಗಳಲ್ಲಿ ಹೆಚ್ಚಿನ ಮಟ್ಟದ ಯಥಾಸ್ಥಿತಿ ಇರುವ ಸಾಧ್ಯತೆಯಿದೆ ಎಂಬುದನ್ನು ಇದು ಸೂಚಿಸುತ್ತದೆ.

ಆದಾಗ್ಯೂ ಬಹು ಕಾಯಾಧ್ಯಕ್ಷ ಸ್ಥಾನದಂತಹ ಹಲವಾರು ಹೊಸ ಹುದ್ದೆಗಳನ್ನು ಅನ್ವೇಷಿಸಲಾಗುತ್ತಿದೆ. ಪಕ್ಷ ಸಂಘಟನೆಯಲ್ಲೂ ಕೆಲವು ಬದಲಾವಣೆಗಳಾಗಬಹುದು.

ಕಾಂಗ್ರೆಸ್ ಕಾರ್ಯಕಾರಿ ಸಮಿತಿಯನ್ನು ಪುನರ್ ರಚಿಸಬಹುದು. ಖರ್ಗೆ ಅವರು ಕೆಲವು ಹೊಸ ಪ್ರಧಾನ ಕಾರ್ಯದರ್ಶಿಗಳನ್ನೂ ನೇಮಿಸಬಹುದು. ಈಗಿನ ಪದಾಧಿಕಾರಿಗಳನ್ನು ಎಷ್ಟರ ಮಟ್ಟಿಗೆ ಬದಲಾಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ರಾಜಸ್ಥಾನದಲ್ಲಿ ಏನು ಮಾಡಬೇಕು ಎಂಬುದು ಖರ್ಗೆ ಅವರ ಮುಂದಿರುವ ಮತ್ತೊಂದು ಸವಾಲು. ಶೋಕಾಸ್ ನೋಟಿಸ್ ನೀಡಿದ ಗೆಹ್ಲೋಟ್ ನಿಷ್ಠಾವಂತರಿಗೆ ಶಿಕ್ಷೆಯಾಗುತ್ತದೆಯೇ? ಗೆಹ್ಲೋಟ್ ಕೂಡ ಕ್ರಮ ಎದುರಿಸುತ್ತಾರೆಯೇ? ಹೊಸ ಕಾಂಗ್ರೆಸ್ ಅಧ್ಯಕ್ಷರು ಸಚಿನ್ ಪೈಲಟ್‌ಗೆ ಹೇಗೆ ಅವಕಾಶ ಕಲ್ಪಿಸುತ್ತಾರೆ? ಎಂಬ ಪ್ರಶ್ನೆಗಳಿವೆ.

5. ಕರ್ನಾಟಕದತ್ತ ಗಮನ

ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಚುನಾವಣೆಗಳು ಬರುತ್ತಿವೆ. ನಂತರ ತ್ರಿಪುರಾ, ಮೇಘಾಲಯ ಮತ್ತು ನಾಗಾಲ್ಯಾಂಡ್ ಚುನಾವಣೆಗಳು 2023ರ ಆರಂಭದಲ್ಲಿ ಎದುರಾಗಲಿವೆ. ಆದರೆ ಪಕ್ಷದ ಅಧ್ಯಕ್ಷರಾಗಿ ಖರ್ಗೆ ಅವರಿಗೆ ನಿಜವಾದ ಪರೀಕ್ಷೆ ಎದುರಾಗುವುದು 2023ರ ಬೇಸಿಗೆಯಲ್ಲಿ ನಡೆಯುವ ಚುನಾವಣೆಯಲ್ಲಿ ಎಂಬುದು ಸ್ಪಷ್ಟ. ಏಕೆಂದರೆ ತಮ್ಮ ತವರು ರಾಜ್ಯವಾದ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.

ಇದನ್ನೂ ಓದಿರಿ: ಕಾರ್ಮಿಕನ ಪುತ್ರರಾದ ಖರ್ಗೆ ಕಾಂಗ್ರೆಸ್‌ ಅಧ್ಯಕ್ಷ ಹುದ್ದೆಯವರೆಗೆ ಬೆಳೆದ ಯಶೋಗಾಥೆ

ಕರ್ನಾಟಕವನ್ನು ಗೆಲ್ಲುವುದು ಕಾಂಗ್ರೆಸ್‌ಗೆ ನಿರ್ಣಾಯಕವಾಗಿದೆ. ಏಕೆಂದರೆ ಕರ್ನಾಟಕದಲ್ಲಿ ಸರ್ಕಾರವನ್ನು ರಚಿಸಿದರೆ 2024ರ ಲೋಕಸಭಾ ಚುನಾವಣೆಯ ಪೂರ್ವದಲ್ಲಿ ಸಹಾಯವಾಗುತ್ತದೆ. ಖರ್ಗೆಯವರು ಪಕ್ಷದ ಅಧ್ಯಕ್ಷರಾಗುವುದರಿಂದ ಪಕ್ಷಕ್ಕೆ ಸ್ವಲ್ಪ ಲಾಭವಾಗಬಹುದು.

ಕರ್ನಾಟಕ ರಾಜ್ಯದಲ್ಲಿ ನಾಯಕತ್ವದ ಪ್ರಶ್ನೆಯನ್ನು ಪರಿಹರಿಸುವುದು ಮುಖ್ಯವಾಗುತ್ತದೆ. ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವೆ ಸಮತೋಲನ ಸಾಧಿಸುವುದು ಖರ್ಗೆಯವರ ಮುಂದಿರುವ ಸವಾಲಾಗಿದೆ.

ವರದಿ ಕೃಪೆ: ದಿ ಕ್ವಿಂಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...