Homeಮುಖಪುಟಕಾಂಗ್ರೆಸ್ ಅಧ್ಯಕ್ಷರಾಗಿ ಖರ್ಗೆ: ಈ ಐದು ಅಂಶಗಳಿಗೆ ಪ್ರಾಮುಖ್ಯತೆ ಸಿಗುವ ಸಾಧ್ಯತೆ!

ಕಾಂಗ್ರೆಸ್ ಅಧ್ಯಕ್ಷರಾಗಿ ಖರ್ಗೆ: ಈ ಐದು ಅಂಶಗಳಿಗೆ ಪ್ರಾಮುಖ್ಯತೆ ಸಿಗುವ ಸಾಧ್ಯತೆ!

- Advertisement -
- Advertisement -

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ, 80 ವರ್ಷ ವಯಸ್ಸಿನ ಮಲ್ಲಿಕಾರ್ಜುನ ಖರ್ಗೆ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ 98ನೇ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅವರು ಕರ್ನಾಟಕದ ಗುರ್ಮಿಟ್ಕಲ್‌ನಿಂದ ಒಂಬತ್ತು ಬಾರಿ ಶಾಸಕರಾಗಿ, ಗುಲ್ಬರ್ಗಾದಿಂದ ಎರಡು ಬಾರಿ ಸಂಸದರಾಗಿದ್ದಾರೆ. ಜೊತೆಗೆ ಕೇಂದ್ರ ಮತ್ತು ಕರ್ನಾಟಕ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.

ಖರ್ಗೆಯವರ ಆಯ್ಕೆಯು ಐತಿಹಾಸಿಕವಾಗಿದೆ. 50 ವರ್ಷಗಳ ಬಳಿಕ ದಲಿತ ವ್ಯಕ್ತಿಯೊಬ್ಬರು ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. 1970-71ರಲ್ಲಿ ಜಗಜೀವನ್ ರಾಮ್ ಅಧ್ಯಕ್ಷರಾಗಿದ್ದರು. ಕನ್ನಡಿಗರಾದ ಎಸ್.ನಿಜಲಿಂಗಪ್ಪ ಅವರು 1969ರಲ್ಲಿ ಈ ಸ್ಥಾನಕ್ಕೇರಿದ್ದರು. ಆ ಬಳಿಕ ಕಾಂಗ್ರೆಸ್‌ ಅಧ್ಯಕ್ಷಗಿರಿಗೇರಿದ ಕನ್ನಡಿಗ ಎಂಬ ಖ್ಯಾತಿಗೂ ಖರ್ಗೆಯವರು ಪಾತ್ರರಾಗಿದ್ದಾರೆ. 1998ರ ನಂತರದಲ್ಲಿ ಗಾಂಧಿಯೇತರ ಕುಟುಂಬದಿಂದ ಆಯ್ಕೆಯಾದವರಾಗಿಯೂ ಗಮನ ಸೆಳೆದಿದ್ದಾರೆ. ಅಧ್ಯಕ್ಷರಾದ ಖರ್ಗೆಯವರ ಮುಂದೆ ಐದು ಅಂಶಗಳು ಮುಖ್ಯವಾಗಲಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

1. ಏಕತೆಗೆ ಒತ್ತು

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ಪ್ರಚಾರದಲ್ಲಿ ಒಂದು ಅಂಶವು ಗಮನ ಸೆಳೆಯಿತು. ಹಿಂದಿನ ಜಿ-23 ಸದಸ್ಯರಾದ ಭೂಪಿಂದರ್ ಸಿಂಗ್ ಹೂಡಾ, ಮನೀಶ್ ತಿವಾರಿ, ಆನಂದ್ ಶರ್ಮಾ, ಮುಕುಲ್ ವಾಸ್ನಿಕ್ ಮತ್ತು ಪೃಥ್ವಿರಾಜ್ ಚವಾಣ್ ಅವರಿಂದ ಸಕ್ರಿಯ ಬೆಂಬಲವನ್ನು ಖರ್ಗೆಯವರು ಪಡೆದರು.

ಜಿ-23 ನಾಯಕರ ಪೈಕಿ ಒಬ್ಬರಾದ ಶಶಿ ತರೂರ್‌ ಅವರು ಚುನಾವಣೆಯ ಪ್ರತಿಸ್ಪರ್ಧಿಯಾಗಿದ್ದಾರೆ ಎಂಬ ವಾಸ್ತವದ ಹೊರತಾಗಿಯೂ ಈ ಬೆಂಬಲ ದೊರಕಿತು. ಪಕ್ಷದ ಅಧ್ಯಕ್ಷ ಸ್ಥಾನದ ಮುಖವಾಗಿ ತೋರಿದ್ದ ಅಶೋಕ್ ಗೆಹ್ಲೋಟ್‌ ಅವರಿಗೆ ಹೋಲಿಸಿದರೆ ಖರ್ಗೆ ಅವರು ಜಿ-23 ಬಗ್ಗೆ ಹೆಚ್ಚು ಸಮಾಧಾನಕರ ನಾಯಕರಾಗಿದ್ದಾರೆ ಎನ್ನಲಾಗುತ್ತಿದೆ.

ಅಧ್ಯಕ್ಷರಾಗಿ ಖರ್ಗೆ ಅವರು ಜಿ-23 ನಾಯಕರ ಕಳವಳಗಳನ್ನು ಪರಿಹರಿಸಲು ಮತ್ತು ಸಾಧ್ಯವಾದಷ್ಟು ಹೆಚ್ಚಿನವರಿಗೆ ಗೌರವಾನ್ವಿತ ರೀತಿಯಲ್ಲಿ ಅವಕಾಶ ಕಲ್ಪಿಸಲು ಕ್ರಮಗಳನ್ನು ತೆಗೆದುಕೊಳ್ಳಬಹುದು.

2. ಸೈದ್ಧಾಂತಿಕ ನಿರಂತರತೆ

ಸೋನಿಯಾ ಗಾಂಧಿಯವರ ಅಧಿಕಾರಾವಧಿಯ ಬಳಿಕ ಹೊಮ್ಮಿರುವ ಸೈದ್ಧಾಂತಿಕ ನಿರಂತರತೆಯನ್ನು ಖರ್ಗೆಯವರು ಅಧ್ಯಕ್ಷರಾಗಿರುವುದು ಧ್ವನಿಸುತ್ತದೆ. ಖರ್ಗೆಯವರು ನಿರಂತರವಾಗಿ ಜಾತ್ಯತೀತತೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸ್ಪಷ್ಟವಾದ ನಿಲುವನ್ನು ತೆಗೆದುಕೊಂಡಿದ್ದಾರೆ. ಇದು ಅವರ ಅಧ್ಯಕ್ಷತೆಯಲ್ಲೂ ಪ್ರತಿಫಲಿಸುವ ಸಾಧ್ಯತೆಯಿದೆ.

ಬೀದರ್ ಜಿಲ್ಲೆಯಿಂದ ಬಂದು ಗುಲ್ಬರ್ಗದಿಂದ ಸಂಸದರಾದ ಖರ್ಗೆ ಅವರು ಸಾಕಷ್ಟು ಮುಸ್ಲಿಂ ಬಾಹುಳ್ಯವುಳ್ಳ ಭಾಗದಲ್ಲಿ ಸಮುದಾಯಗಳೊಂದಿಗೆ ನಿಕಟವಾಗಿದ್ದಾರೆ. ಸಮುದಾಯಗಳ ಬಗೆಗಿರಬೇಕಾದ ಕಾಳಜಿಯನ್ನು ಅರ್ಥಮಾಡಿಕೊಂಡಿದ್ದಾರೆ.

3. ರಾಹುಲ್ ಗಾಂಧಿ ಪಕ್ಷದ ಮುಖವಾದರೆ, ಪಕ್ಷ ಸಂಘಟನೆಯಲ್ಲಿ ಖರ್ಗೆ  

ಅಧ್ಯಕ್ಷ ಚುನಾವಣೆ ನಡೆಯುತ್ತಿದ್ದರೂ ರಾಹುಲ್ ಗಾಂಧಿಯನ್ನೇ ಪ್ರಧಾನವಾಗಿಟ್ಟುಕೊಂಡು ಭಾರತ್ ಜೋಡೋ ಯಾತ್ರೆ ಮುಂದುವರೆದಿದೆ. ಖರ್ಗೆ ಅವರು ಪಕ್ಷದ ಸಂಘಟನಾ ಮತ್ತು ದೈನಂದಿನ ವ್ಯವಹಾರಗಳನ್ನು ನಿರ್ವಹಿಸಿದರೆ, ರಾಹುಲ್ ಗಾಂಧಿ ಅವರು ಮುಖ್ಯ ರಾಜಕೀಯ ಮುಖವಾಗಿ ಹೊಮ್ಮಬಹುದು.

ಖರ್ಗೆ ಅವರು ರಾಹುಲ್ ಗಾಂಧಿಯವರ ನಿಕಟವರ್ತಿ ಎನ್ನಲಾಗುತ್ತಿದೆ. ಆದರೆ ರಾಹುಲ್‌ ಗಾಂಧಿಯವರು, “ಪಕ್ಷದಲ್ಲಿ ನನ್ನ ಸ್ಥಾನವೇನು ಎಂಬುದನ್ನು ಪಕ್ಷದ ಅಧ್ಯಕ್ಷರು ನಿರ್ಧರಿಸಲಿದ್ದಾರೆ” ಎಂದಿದ್ದಾರೆ.

4. ಪಕ್ಷದ ಕಾರ್ಯನಿರ್ವಹಣೆಯಲ್ಲಿ ಯಥಾಸ್ಥಿತಿ

ತರೂರ್ ಅವರಂತೆ ಖರ್ಗೆಯವರು ಅಧ್ಯಕ್ಷ ಸ್ಥಾನದ ಚುನಾವಣಾ ಪ್ರಚಾರದ ಸಮಯದಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿಲ್ಲ. ಈ ವರ್ಷದ ಆರಂಭದಲ್ಲಿ ಉದಯಪುರ ಚಿಂತನ್ ಶಿಬಿರದಲ್ಲಿ ಮಾಡಲಾದ ಘೋಷಣೆಯೇ ತಮ್ಮ ಪ್ರಣಾಳಿಕೆ ಎಂದು ಹೇಳಿದರು. ಸಾಂಸ್ಥಿಕ ವಿಷಯಗಳಲ್ಲಿ ಹೆಚ್ಚಿನ ಮಟ್ಟದ ಯಥಾಸ್ಥಿತಿ ಇರುವ ಸಾಧ್ಯತೆಯಿದೆ ಎಂಬುದನ್ನು ಇದು ಸೂಚಿಸುತ್ತದೆ.

ಆದಾಗ್ಯೂ ಬಹು ಕಾಯಾಧ್ಯಕ್ಷ ಸ್ಥಾನದಂತಹ ಹಲವಾರು ಹೊಸ ಹುದ್ದೆಗಳನ್ನು ಅನ್ವೇಷಿಸಲಾಗುತ್ತಿದೆ. ಪಕ್ಷ ಸಂಘಟನೆಯಲ್ಲೂ ಕೆಲವು ಬದಲಾವಣೆಗಳಾಗಬಹುದು.

ಕಾಂಗ್ರೆಸ್ ಕಾರ್ಯಕಾರಿ ಸಮಿತಿಯನ್ನು ಪುನರ್ ರಚಿಸಬಹುದು. ಖರ್ಗೆ ಅವರು ಕೆಲವು ಹೊಸ ಪ್ರಧಾನ ಕಾರ್ಯದರ್ಶಿಗಳನ್ನೂ ನೇಮಿಸಬಹುದು. ಈಗಿನ ಪದಾಧಿಕಾರಿಗಳನ್ನು ಎಷ್ಟರ ಮಟ್ಟಿಗೆ ಬದಲಾಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ರಾಜಸ್ಥಾನದಲ್ಲಿ ಏನು ಮಾಡಬೇಕು ಎಂಬುದು ಖರ್ಗೆ ಅವರ ಮುಂದಿರುವ ಮತ್ತೊಂದು ಸವಾಲು. ಶೋಕಾಸ್ ನೋಟಿಸ್ ನೀಡಿದ ಗೆಹ್ಲೋಟ್ ನಿಷ್ಠಾವಂತರಿಗೆ ಶಿಕ್ಷೆಯಾಗುತ್ತದೆಯೇ? ಗೆಹ್ಲೋಟ್ ಕೂಡ ಕ್ರಮ ಎದುರಿಸುತ್ತಾರೆಯೇ? ಹೊಸ ಕಾಂಗ್ರೆಸ್ ಅಧ್ಯಕ್ಷರು ಸಚಿನ್ ಪೈಲಟ್‌ಗೆ ಹೇಗೆ ಅವಕಾಶ ಕಲ್ಪಿಸುತ್ತಾರೆ? ಎಂಬ ಪ್ರಶ್ನೆಗಳಿವೆ.

5. ಕರ್ನಾಟಕದತ್ತ ಗಮನ

ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಚುನಾವಣೆಗಳು ಬರುತ್ತಿವೆ. ನಂತರ ತ್ರಿಪುರಾ, ಮೇಘಾಲಯ ಮತ್ತು ನಾಗಾಲ್ಯಾಂಡ್ ಚುನಾವಣೆಗಳು 2023ರ ಆರಂಭದಲ್ಲಿ ಎದುರಾಗಲಿವೆ. ಆದರೆ ಪಕ್ಷದ ಅಧ್ಯಕ್ಷರಾಗಿ ಖರ್ಗೆ ಅವರಿಗೆ ನಿಜವಾದ ಪರೀಕ್ಷೆ ಎದುರಾಗುವುದು 2023ರ ಬೇಸಿಗೆಯಲ್ಲಿ ನಡೆಯುವ ಚುನಾವಣೆಯಲ್ಲಿ ಎಂಬುದು ಸ್ಪಷ್ಟ. ಏಕೆಂದರೆ ತಮ್ಮ ತವರು ರಾಜ್ಯವಾದ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.

ಇದನ್ನೂ ಓದಿರಿ: ಕಾರ್ಮಿಕನ ಪುತ್ರರಾದ ಖರ್ಗೆ ಕಾಂಗ್ರೆಸ್‌ ಅಧ್ಯಕ್ಷ ಹುದ್ದೆಯವರೆಗೆ ಬೆಳೆದ ಯಶೋಗಾಥೆ

ಕರ್ನಾಟಕವನ್ನು ಗೆಲ್ಲುವುದು ಕಾಂಗ್ರೆಸ್‌ಗೆ ನಿರ್ಣಾಯಕವಾಗಿದೆ. ಏಕೆಂದರೆ ಕರ್ನಾಟಕದಲ್ಲಿ ಸರ್ಕಾರವನ್ನು ರಚಿಸಿದರೆ 2024ರ ಲೋಕಸಭಾ ಚುನಾವಣೆಯ ಪೂರ್ವದಲ್ಲಿ ಸಹಾಯವಾಗುತ್ತದೆ. ಖರ್ಗೆಯವರು ಪಕ್ಷದ ಅಧ್ಯಕ್ಷರಾಗುವುದರಿಂದ ಪಕ್ಷಕ್ಕೆ ಸ್ವಲ್ಪ ಲಾಭವಾಗಬಹುದು.

ಕರ್ನಾಟಕ ರಾಜ್ಯದಲ್ಲಿ ನಾಯಕತ್ವದ ಪ್ರಶ್ನೆಯನ್ನು ಪರಿಹರಿಸುವುದು ಮುಖ್ಯವಾಗುತ್ತದೆ. ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವೆ ಸಮತೋಲನ ಸಾಧಿಸುವುದು ಖರ್ಗೆಯವರ ಮುಂದಿರುವ ಸವಾಲಾಗಿದೆ.

ವರದಿ ಕೃಪೆ: ದಿ ಕ್ವಿಂಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...