Homeಮುಖಪುಟಕಾಂಗ್ರೆಸ್ ಅಧ್ಯಕ್ಷರಾಗಿ ಖರ್ಗೆ: ಈ ಐದು ಅಂಶಗಳಿಗೆ ಪ್ರಾಮುಖ್ಯತೆ ಸಿಗುವ ಸಾಧ್ಯತೆ!

ಕಾಂಗ್ರೆಸ್ ಅಧ್ಯಕ್ಷರಾಗಿ ಖರ್ಗೆ: ಈ ಐದು ಅಂಶಗಳಿಗೆ ಪ್ರಾಮುಖ್ಯತೆ ಸಿಗುವ ಸಾಧ್ಯತೆ!

- Advertisement -
- Advertisement -

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ, 80 ವರ್ಷ ವಯಸ್ಸಿನ ಮಲ್ಲಿಕಾರ್ಜುನ ಖರ್ಗೆ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ 98ನೇ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅವರು ಕರ್ನಾಟಕದ ಗುರ್ಮಿಟ್ಕಲ್‌ನಿಂದ ಒಂಬತ್ತು ಬಾರಿ ಶಾಸಕರಾಗಿ, ಗುಲ್ಬರ್ಗಾದಿಂದ ಎರಡು ಬಾರಿ ಸಂಸದರಾಗಿದ್ದಾರೆ. ಜೊತೆಗೆ ಕೇಂದ್ರ ಮತ್ತು ಕರ್ನಾಟಕ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.

ಖರ್ಗೆಯವರ ಆಯ್ಕೆಯು ಐತಿಹಾಸಿಕವಾಗಿದೆ. 50 ವರ್ಷಗಳ ಬಳಿಕ ದಲಿತ ವ್ಯಕ್ತಿಯೊಬ್ಬರು ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. 1970-71ರಲ್ಲಿ ಜಗಜೀವನ್ ರಾಮ್ ಅಧ್ಯಕ್ಷರಾಗಿದ್ದರು. ಕನ್ನಡಿಗರಾದ ಎಸ್.ನಿಜಲಿಂಗಪ್ಪ ಅವರು 1969ರಲ್ಲಿ ಈ ಸ್ಥಾನಕ್ಕೇರಿದ್ದರು. ಆ ಬಳಿಕ ಕಾಂಗ್ರೆಸ್‌ ಅಧ್ಯಕ್ಷಗಿರಿಗೇರಿದ ಕನ್ನಡಿಗ ಎಂಬ ಖ್ಯಾತಿಗೂ ಖರ್ಗೆಯವರು ಪಾತ್ರರಾಗಿದ್ದಾರೆ. 1998ರ ನಂತರದಲ್ಲಿ ಗಾಂಧಿಯೇತರ ಕುಟುಂಬದಿಂದ ಆಯ್ಕೆಯಾದವರಾಗಿಯೂ ಗಮನ ಸೆಳೆದಿದ್ದಾರೆ. ಅಧ್ಯಕ್ಷರಾದ ಖರ್ಗೆಯವರ ಮುಂದೆ ಐದು ಅಂಶಗಳು ಮುಖ್ಯವಾಗಲಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

1. ಏಕತೆಗೆ ಒತ್ತು

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ಪ್ರಚಾರದಲ್ಲಿ ಒಂದು ಅಂಶವು ಗಮನ ಸೆಳೆಯಿತು. ಹಿಂದಿನ ಜಿ-23 ಸದಸ್ಯರಾದ ಭೂಪಿಂದರ್ ಸಿಂಗ್ ಹೂಡಾ, ಮನೀಶ್ ತಿವಾರಿ, ಆನಂದ್ ಶರ್ಮಾ, ಮುಕುಲ್ ವಾಸ್ನಿಕ್ ಮತ್ತು ಪೃಥ್ವಿರಾಜ್ ಚವಾಣ್ ಅವರಿಂದ ಸಕ್ರಿಯ ಬೆಂಬಲವನ್ನು ಖರ್ಗೆಯವರು ಪಡೆದರು.

ಜಿ-23 ನಾಯಕರ ಪೈಕಿ ಒಬ್ಬರಾದ ಶಶಿ ತರೂರ್‌ ಅವರು ಚುನಾವಣೆಯ ಪ್ರತಿಸ್ಪರ್ಧಿಯಾಗಿದ್ದಾರೆ ಎಂಬ ವಾಸ್ತವದ ಹೊರತಾಗಿಯೂ ಈ ಬೆಂಬಲ ದೊರಕಿತು. ಪಕ್ಷದ ಅಧ್ಯಕ್ಷ ಸ್ಥಾನದ ಮುಖವಾಗಿ ತೋರಿದ್ದ ಅಶೋಕ್ ಗೆಹ್ಲೋಟ್‌ ಅವರಿಗೆ ಹೋಲಿಸಿದರೆ ಖರ್ಗೆ ಅವರು ಜಿ-23 ಬಗ್ಗೆ ಹೆಚ್ಚು ಸಮಾಧಾನಕರ ನಾಯಕರಾಗಿದ್ದಾರೆ ಎನ್ನಲಾಗುತ್ತಿದೆ.

ಅಧ್ಯಕ್ಷರಾಗಿ ಖರ್ಗೆ ಅವರು ಜಿ-23 ನಾಯಕರ ಕಳವಳಗಳನ್ನು ಪರಿಹರಿಸಲು ಮತ್ತು ಸಾಧ್ಯವಾದಷ್ಟು ಹೆಚ್ಚಿನವರಿಗೆ ಗೌರವಾನ್ವಿತ ರೀತಿಯಲ್ಲಿ ಅವಕಾಶ ಕಲ್ಪಿಸಲು ಕ್ರಮಗಳನ್ನು ತೆಗೆದುಕೊಳ್ಳಬಹುದು.

2. ಸೈದ್ಧಾಂತಿಕ ನಿರಂತರತೆ

ಸೋನಿಯಾ ಗಾಂಧಿಯವರ ಅಧಿಕಾರಾವಧಿಯ ಬಳಿಕ ಹೊಮ್ಮಿರುವ ಸೈದ್ಧಾಂತಿಕ ನಿರಂತರತೆಯನ್ನು ಖರ್ಗೆಯವರು ಅಧ್ಯಕ್ಷರಾಗಿರುವುದು ಧ್ವನಿಸುತ್ತದೆ. ಖರ್ಗೆಯವರು ನಿರಂತರವಾಗಿ ಜಾತ್ಯತೀತತೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸ್ಪಷ್ಟವಾದ ನಿಲುವನ್ನು ತೆಗೆದುಕೊಂಡಿದ್ದಾರೆ. ಇದು ಅವರ ಅಧ್ಯಕ್ಷತೆಯಲ್ಲೂ ಪ್ರತಿಫಲಿಸುವ ಸಾಧ್ಯತೆಯಿದೆ.

ಬೀದರ್ ಜಿಲ್ಲೆಯಿಂದ ಬಂದು ಗುಲ್ಬರ್ಗದಿಂದ ಸಂಸದರಾದ ಖರ್ಗೆ ಅವರು ಸಾಕಷ್ಟು ಮುಸ್ಲಿಂ ಬಾಹುಳ್ಯವುಳ್ಳ ಭಾಗದಲ್ಲಿ ಸಮುದಾಯಗಳೊಂದಿಗೆ ನಿಕಟವಾಗಿದ್ದಾರೆ. ಸಮುದಾಯಗಳ ಬಗೆಗಿರಬೇಕಾದ ಕಾಳಜಿಯನ್ನು ಅರ್ಥಮಾಡಿಕೊಂಡಿದ್ದಾರೆ.

3. ರಾಹುಲ್ ಗಾಂಧಿ ಪಕ್ಷದ ಮುಖವಾದರೆ, ಪಕ್ಷ ಸಂಘಟನೆಯಲ್ಲಿ ಖರ್ಗೆ  

ಅಧ್ಯಕ್ಷ ಚುನಾವಣೆ ನಡೆಯುತ್ತಿದ್ದರೂ ರಾಹುಲ್ ಗಾಂಧಿಯನ್ನೇ ಪ್ರಧಾನವಾಗಿಟ್ಟುಕೊಂಡು ಭಾರತ್ ಜೋಡೋ ಯಾತ್ರೆ ಮುಂದುವರೆದಿದೆ. ಖರ್ಗೆ ಅವರು ಪಕ್ಷದ ಸಂಘಟನಾ ಮತ್ತು ದೈನಂದಿನ ವ್ಯವಹಾರಗಳನ್ನು ನಿರ್ವಹಿಸಿದರೆ, ರಾಹುಲ್ ಗಾಂಧಿ ಅವರು ಮುಖ್ಯ ರಾಜಕೀಯ ಮುಖವಾಗಿ ಹೊಮ್ಮಬಹುದು.

ಖರ್ಗೆ ಅವರು ರಾಹುಲ್ ಗಾಂಧಿಯವರ ನಿಕಟವರ್ತಿ ಎನ್ನಲಾಗುತ್ತಿದೆ. ಆದರೆ ರಾಹುಲ್‌ ಗಾಂಧಿಯವರು, “ಪಕ್ಷದಲ್ಲಿ ನನ್ನ ಸ್ಥಾನವೇನು ಎಂಬುದನ್ನು ಪಕ್ಷದ ಅಧ್ಯಕ್ಷರು ನಿರ್ಧರಿಸಲಿದ್ದಾರೆ” ಎಂದಿದ್ದಾರೆ.

4. ಪಕ್ಷದ ಕಾರ್ಯನಿರ್ವಹಣೆಯಲ್ಲಿ ಯಥಾಸ್ಥಿತಿ

ತರೂರ್ ಅವರಂತೆ ಖರ್ಗೆಯವರು ಅಧ್ಯಕ್ಷ ಸ್ಥಾನದ ಚುನಾವಣಾ ಪ್ರಚಾರದ ಸಮಯದಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿಲ್ಲ. ಈ ವರ್ಷದ ಆರಂಭದಲ್ಲಿ ಉದಯಪುರ ಚಿಂತನ್ ಶಿಬಿರದಲ್ಲಿ ಮಾಡಲಾದ ಘೋಷಣೆಯೇ ತಮ್ಮ ಪ್ರಣಾಳಿಕೆ ಎಂದು ಹೇಳಿದರು. ಸಾಂಸ್ಥಿಕ ವಿಷಯಗಳಲ್ಲಿ ಹೆಚ್ಚಿನ ಮಟ್ಟದ ಯಥಾಸ್ಥಿತಿ ಇರುವ ಸಾಧ್ಯತೆಯಿದೆ ಎಂಬುದನ್ನು ಇದು ಸೂಚಿಸುತ್ತದೆ.

ಆದಾಗ್ಯೂ ಬಹು ಕಾಯಾಧ್ಯಕ್ಷ ಸ್ಥಾನದಂತಹ ಹಲವಾರು ಹೊಸ ಹುದ್ದೆಗಳನ್ನು ಅನ್ವೇಷಿಸಲಾಗುತ್ತಿದೆ. ಪಕ್ಷ ಸಂಘಟನೆಯಲ್ಲೂ ಕೆಲವು ಬದಲಾವಣೆಗಳಾಗಬಹುದು.

ಕಾಂಗ್ರೆಸ್ ಕಾರ್ಯಕಾರಿ ಸಮಿತಿಯನ್ನು ಪುನರ್ ರಚಿಸಬಹುದು. ಖರ್ಗೆ ಅವರು ಕೆಲವು ಹೊಸ ಪ್ರಧಾನ ಕಾರ್ಯದರ್ಶಿಗಳನ್ನೂ ನೇಮಿಸಬಹುದು. ಈಗಿನ ಪದಾಧಿಕಾರಿಗಳನ್ನು ಎಷ್ಟರ ಮಟ್ಟಿಗೆ ಬದಲಾಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ರಾಜಸ್ಥಾನದಲ್ಲಿ ಏನು ಮಾಡಬೇಕು ಎಂಬುದು ಖರ್ಗೆ ಅವರ ಮುಂದಿರುವ ಮತ್ತೊಂದು ಸವಾಲು. ಶೋಕಾಸ್ ನೋಟಿಸ್ ನೀಡಿದ ಗೆಹ್ಲೋಟ್ ನಿಷ್ಠಾವಂತರಿಗೆ ಶಿಕ್ಷೆಯಾಗುತ್ತದೆಯೇ? ಗೆಹ್ಲೋಟ್ ಕೂಡ ಕ್ರಮ ಎದುರಿಸುತ್ತಾರೆಯೇ? ಹೊಸ ಕಾಂಗ್ರೆಸ್ ಅಧ್ಯಕ್ಷರು ಸಚಿನ್ ಪೈಲಟ್‌ಗೆ ಹೇಗೆ ಅವಕಾಶ ಕಲ್ಪಿಸುತ್ತಾರೆ? ಎಂಬ ಪ್ರಶ್ನೆಗಳಿವೆ.

5. ಕರ್ನಾಟಕದತ್ತ ಗಮನ

ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಚುನಾವಣೆಗಳು ಬರುತ್ತಿವೆ. ನಂತರ ತ್ರಿಪುರಾ, ಮೇಘಾಲಯ ಮತ್ತು ನಾಗಾಲ್ಯಾಂಡ್ ಚುನಾವಣೆಗಳು 2023ರ ಆರಂಭದಲ್ಲಿ ಎದುರಾಗಲಿವೆ. ಆದರೆ ಪಕ್ಷದ ಅಧ್ಯಕ್ಷರಾಗಿ ಖರ್ಗೆ ಅವರಿಗೆ ನಿಜವಾದ ಪರೀಕ್ಷೆ ಎದುರಾಗುವುದು 2023ರ ಬೇಸಿಗೆಯಲ್ಲಿ ನಡೆಯುವ ಚುನಾವಣೆಯಲ್ಲಿ ಎಂಬುದು ಸ್ಪಷ್ಟ. ಏಕೆಂದರೆ ತಮ್ಮ ತವರು ರಾಜ್ಯವಾದ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.

ಇದನ್ನೂ ಓದಿರಿ: ಕಾರ್ಮಿಕನ ಪುತ್ರರಾದ ಖರ್ಗೆ ಕಾಂಗ್ರೆಸ್‌ ಅಧ್ಯಕ್ಷ ಹುದ್ದೆಯವರೆಗೆ ಬೆಳೆದ ಯಶೋಗಾಥೆ

ಕರ್ನಾಟಕವನ್ನು ಗೆಲ್ಲುವುದು ಕಾಂಗ್ರೆಸ್‌ಗೆ ನಿರ್ಣಾಯಕವಾಗಿದೆ. ಏಕೆಂದರೆ ಕರ್ನಾಟಕದಲ್ಲಿ ಸರ್ಕಾರವನ್ನು ರಚಿಸಿದರೆ 2024ರ ಲೋಕಸಭಾ ಚುನಾವಣೆಯ ಪೂರ್ವದಲ್ಲಿ ಸಹಾಯವಾಗುತ್ತದೆ. ಖರ್ಗೆಯವರು ಪಕ್ಷದ ಅಧ್ಯಕ್ಷರಾಗುವುದರಿಂದ ಪಕ್ಷಕ್ಕೆ ಸ್ವಲ್ಪ ಲಾಭವಾಗಬಹುದು.

ಕರ್ನಾಟಕ ರಾಜ್ಯದಲ್ಲಿ ನಾಯಕತ್ವದ ಪ್ರಶ್ನೆಯನ್ನು ಪರಿಹರಿಸುವುದು ಮುಖ್ಯವಾಗುತ್ತದೆ. ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವೆ ಸಮತೋಲನ ಸಾಧಿಸುವುದು ಖರ್ಗೆಯವರ ಮುಂದಿರುವ ಸವಾಲಾಗಿದೆ.

ವರದಿ ಕೃಪೆ: ದಿ ಕ್ವಿಂಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...