Homeಮುಖಪುಟಎನ್‌ಹೆಚ್‌ಆರ್‌ಸಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸರಿಯಾಗಿ ನಡೆದಿಲ್ಲ : ಅಸಮಾಧಾನ ವ್ಯಕ್ತಪಡಿಸಿದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ...

ಎನ್‌ಹೆಚ್‌ಆರ್‌ಸಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸರಿಯಾಗಿ ನಡೆದಿಲ್ಲ : ಅಸಮಾಧಾನ ವ್ಯಕ್ತಪಡಿಸಿದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್‌ಹೆಚ್‌ಆರ್‌ಸಿ) ಅಧ್ಯಕ್ಷರ ನೇಮಕ ಪ್ರಕ್ರಿಯೆ ದೋಷಪೂರಿತವಾಗಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ವಿ ರಾಮಸುಬ್ರಮಣಿಯನ್‌ ಅವರನ್ನು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್‌ಹೆಚ್‌ಆರ್‌ಸಿ) ಅಧ್ಯಕ್ಷರನ್ನಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಸೋಮವಾರ (ಡಿ.23) ನೇಮಿಸಿದ್ದಾರೆ.

ನ್ಯಾ. ರಾಮಸುಬ್ರಮಣಿಯನ್‌ ಅವರ ನೇಮಕ ಪೂರ್ವ ನಿರ್ಧರಿತ, ಇವರ ಆಯ್ಕೆ ಪ್ರಕ್ರಿಯೆ ವೇಳೆ
ಪರಸ್ಪರ ಸಮಾಲೋಚನೆ ಮತ್ತು ಒಮ್ಮತದ ನಿರ್ಧಾರ ಕೈಗೊಳ್ಳುವ ಸ್ಥಾಪಿತ ಸಂಪ್ರದಾಯವನ್ನು ನಿರ್ಲಕ್ಷಿಸಲಾಗಿದೆ ಎಂದು ಇಬ್ಬರು ನಾಯಕರು ಆರೋಪಿಸಿದ್ದಾರೆ.

ಎನ್‌ಹೆಚ್‌ಆರ್‌ಸಿ ಅಧ್ಯಕ್ಷರನ್ನು ಆಯ್ಕೆ ಮಾಡುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಉನ್ನತಾಧಿಕಾರ ಸಮಿತಿಯ ಸದಸ್ಯರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರು ಡಿಸೆಂಬರ್ 18ರಂದು ಸಮಿತಿಯ ಸಭೆಯಲ್ಲಿ ಭಾಗವಹಿಸಿದ್ದರು.

ಸಭೆಯಲ್ಲಿ ಸರ್ಕಾರ ನ್ಯಾಯಮೂರ್ತಿ ವಿ ರಾಮಸುಬ್ರಮಣಿಯನ್‌ ಅವರ ಹೆಸರನ್ನು ಪ್ರಸ್ತಾಪಿಸಿತ್ತು. ಆದರೆ, ರಾಹುಲ್ ಗಾಂಧಿ ಮತ್ತು ಖರ್ಗೆ ಅವರು, ಅಗತ್ಯವಿರುವ ಅರ್ಹತೆ ಮತ್ತು ಒಳಗೊಳ್ಳುವಿಕೆಯ ಅಗತ್ಯವನ್ನು ಪರಿಗಣಿಸಿ, ನ್ಯಾಯಮೂರ್ತಿಗಳಾದ ರೋಹಿಂಟನ್ ಫಾಲಿ ನಾರಿಮನ್ ಮತ್ತು ನ್ಯಾಯಮೂರ್ತಿ ಕುಟ್ಟಿಯಿಲ್ ಮ್ಯಾಥ್ಯೂ ಜೋಸೆಫ್ ಅವರ ಹೆಸರನ್ನು ಪ್ರಸ್ತಾಪಿಸಿ ಭಿನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಅಲ್ಪಸಂಖ್ಯಾತ ಪಾರ್ಸಿ ಸಮುದಾಯದ ಒಬ್ಬ ವಿಶಿಷ್ಟ ನ್ಯಾಯಶಾಸ್ತ್ರಜ್ಞ ನ್ಯಾಯಮೂರ್ತಿ ರೋಹಿಂಟನ್ ಫಾಲಿ ನಾರಿಮನ್ ಅವರು ತಮ್ಮ ಬೌದ್ಧಿಕ ಆಳ ಮತ್ತು ಸಾಂವಿಧಾನಿಕ ಮೌಲ್ಯಗಳಲ್ಲಿ ಹೊಂದಿರುವ ಅಚಲವಾದ ಬದ್ಧತೆಗೆ ಹೆಸರುವಾಸಿಯಾಗಿದ್ದಾರೆ. ಅವರನ್ನು ಎನ್‌ಹೆಚ್‌ಆರ್‌ಸಿ ಅಧ್ಯಕ್ಷರಾಗಿ ನೇಮಿಸುವುದು ಭಾರತದ ಬಹುತ್ವವನ್ನು ಎತ್ತಿ ಹಿಡಿಯಲಿದೆ ಎಂದು ಕಾಂಗ್ರೆಸ್‌ ನಾಯಕರು ಹೇಳಿದ್ದರು.

ಅದೇ ರೀತಿ ಅಲ್ಪಸಂಖ್ಯಾತ ಕ್ರೈಸ್ತ ಸಮುದಾಯಕ್ಕೆ ಸೇರಿದ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶರಾದ ಜಸ್ಟಿಸ್ ಕುಟ್ಟಿಯಿಲ್ ಮ್ಯಾಥ್ಯೂ ಜೋಸೆಫ್ ಅವರು ವೈಯಕ್ತಿಕ ಸ್ವಾತಂತ್ರ್ಯ ಮತ್ತು ತಳ ಸಮುದಾಯಗಳ ರಕ್ಷಣೆಗೆ ಒತ್ತು ನೀಡುವ ತೀರ್ಪುಗಳನ್ನು ನೀಡಿದವರು. ಅವರು ಈ ಮಹತ್ವದ ಸ್ಥಾನಕ್ಕೆ ಆದರ್ಶ ಅಭ್ಯರ್ಥಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಎನ್‌ಹೆಚ್‌ಎಸ್‌ಆರ್‌ಸಿಯ ಇತರ ಸದಸ್ಯ ಸ್ಥಾನಗಳಿಗೆ ನ್ಯಾಯಮೂರ್ತಿ ಎಸ್. ಮುರಳೀಧರ್ ಮತ್ತು ನ್ಯಾಯಮೂರ್ತಿ ಅಕಿಲ್ ಅಬ್ದುಲ್‌ ಹಮೀದ್ ಖುರೇಷಿ ಅವರ ಹೆಸರನ್ನು ಕಾಂಗ್ರೆಸ್ ನಾಯಕರು ಶಿಫಾರಸು ಮಾಡಿದ್ದರು. ಈ ಇಬ್ಬರೂ ಕೂಡ ಮಾನವ ಹಕ್ಕುಗಳನ್ನು ಎತ್ತಿಹಿಡಿದ ಹಿನ್ನೆಲೆಯನ್ನು ಹೊಂದಿದ್ದಾರೆ.

“ನ್ಯಾಯಮೂರ್ತಿ ಎಸ್. ಮುರಳೀಧರ್ ಅವರು ಸಾಮಾಜಿಕ ನ್ಯಾಯದ ಪರ ತೀರ್ಪುಗಳನ್ನು ನೀಡಿದ ಖ್ಯಾತಿ ಹೊಂದಿದ್ದಾರೆ. ಕಸ್ಟಡಿ ಹಿಂಸಾಚಾರಗಳಂತ ಶೋಷಣೆಯನ್ನು ವಿರೋಧಿಸಿ, ನಾಗರಿಕ ಸ್ವಾತಂತ್ರ್ಯಗಳ ರಕ್ಷಣೆಗೆ ಅವರು ಕೊಡುಗೆ ನೀಡಿದ್ದಾರೆ”.

“ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ನ್ಯಾಯಮೂರ್ತಿ ಅಕಿಲ್ ಅಬ್ದುಲ್ ಹಮೀದ್ ಖುರೇಷಿ ಅವರು ಸಾಂವಿಧಾನಿಕ ತತ್ವಗಳನ್ನು ನಿರಂತರವಾಗಿ ಸಮರ್ಥಿಸಿಕೊಂಡವರು. ಅವರು ಸೇವಾವಧಿಯಲ್ಲಿ ತನ್ನ ಕೆಲಸದ ಮೇಲೆ ಬದ್ದತೆ ಹೊಂದಿದ್ದರು. ಅವರನ್ನು ಎನ್‌ಹೆಚ್‌ಆರ್‌ಸಿಗೆ ಸೇರ್ಪಡೆಗೊಳಿಸಿದರೆ, ಎನ್‌ಹೆಚ್‌ಆರ್‌ಸಿಯ ಪರಿಣಾಮಕಾರಿತ್ವ, ವೈವಿಧ್ಯತೆ ಮತ್ತು ಅದರ ಬದ್ಧತೆಗೆ ಕೊಡುಗೆ ನೀಡಲಿದ್ದಾರೆ” ಎಂದು ಭಿನ್ನಾಭಿಪ್ರಾಯಪಟ್ಟಿದ್ದರು. ಆದರೆ, ಸಭೆಯಲ್ಲಿ ಇವುಗಳನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ ಎನ್ನಲಾಗಿದೆ.

ಹೊಸದಾಗಿ ನೇಮಕಗೊಂಡಿರುವ ಎನ್‌ಹೆಚ್‌ಆರ್‌ಸಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ವೇಳೆ ಪರಸ್ಪರ ಸಮಾಲೋಚನೆ ಮತ್ತು ಒಮ್ಮತದ ನಿರ್ಧಾರದ ಸ್ಥಾಪಿತ ಸಂಪ್ರದಾಯವನ್ನು ನಿರ್ಲಕ್ಷಿಸಲಾಗಿದೆ. ಇದು ಅತ್ಯಂತ ಕಳವಳಕಾರಿ ಬೆಳವಣಿಗೆ. ಸಮಿತಿಯ ಸಭೆಯಲ್ಲಿ ಎತ್ತಿದ ಕೆಲವೊಂದು ಗಂಭೀರ ವಿಷಯಗಳನ್ನು ಬದಿಗೊತ್ತಿ, ಕೇವಲ ಸಂಖ್ಯಾತ್ಮಕ ಬಹುಮತದ ಆಧಾರದಲ್ಲಿ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ ಎಂದು ರಾಹುಲ್ ಗಾಂಧಿ ಮತ್ತು ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಭಿನ್ನಬಿಪ್ರಾಯದ ಪತ್ರ ಬರೆದಿದ್ದಾರೆ.

ಎನ್‌ಹೆಚ್‌ಆರ್‌ಸಿಯು ಎಲ್ಲಾ ನಾಗರಿಕರ, ವಿಶೇಷವಾಗಿ ಸಮಾಜದಲ್ಲಿ ತುಳಿತಕ್ಕೊಳಗಾದ ಮತ್ತು ತಳಮಟ್ಟದ ವರ್ಗಗಳ ಮೂಲಭೂತ ಮಾನವ ಹಕ್ಕುಗಳನ್ನು ರಕ್ಷಿಸುವ ಕಾರ್ಯವನ್ನು ಹೊಂದಿರುವ ಪ್ರಮುಖ ಶಾಸನಬದ್ಧ ಸಂಸ್ಥೆಯಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಎನ್‌ಹೆಚ್‌ಆರ್‌ಸಿಯ ಪ್ರಮುಖರು ರಾಷ್ಟ್ರದ ಪ್ರಾದೇಶಿಕ, ಜಾತಿ, ಸಮುದಾಯ ಮತ್ತು ಧಾರ್ಮಿಕ ವೈವಿಧ್ಯತೆಯನ್ನು ಎತ್ತಿ ಹಿಡಿಯಬೇಕಿದೆ. ಈ ವಿಷಯಗಳಲ್ಲಿ ಸಮತೋಲನ ಕಾಯ್ದುಕೊಳ್ಳಬೇಕಿದೆ. ಎಲ್ಲರನ್ನೂ ಒಳಗೊಳ್ಳುವ ವೈವಿದ್ಯಮಯ ತೀರ್ಮಾನಗಳು ಇಲ್ಲಿ ಪ್ರಾಥಮಿಕ ಮಾನದಂಡವಾಗಬೇಕು. ಅಲ್ಲದೆ, ಕೇವಲ ಸಾಂಖ್ಯಿಕ ಬಹುಮತವಲ್ಲ ಎಂದು ಇಬ್ಬರು ನಾಯಕರು ಒತ್ತಿ ಹೇಳಿದ್ದಾರೆ.

ಇದನ್ನೂ ಓದಿ : ಎನ್‌ಹೆಚ್‌ಆರ್‌ಸಿ ಅಧ್ಯಕ್ಷರಾಗಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ ರಾಮಸುಬ್ರಮಣಿಯನ್ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...