Homeಮುಖಪುಟಎನ್‌ಹೆಚ್‌ಆರ್‌ಸಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸರಿಯಾಗಿ ನಡೆದಿಲ್ಲ : ಅಸಮಾಧಾನ ವ್ಯಕ್ತಪಡಿಸಿದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ...

ಎನ್‌ಹೆಚ್‌ಆರ್‌ಸಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸರಿಯಾಗಿ ನಡೆದಿಲ್ಲ : ಅಸಮಾಧಾನ ವ್ಯಕ್ತಪಡಿಸಿದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್‌ಹೆಚ್‌ಆರ್‌ಸಿ) ಅಧ್ಯಕ್ಷರ ನೇಮಕ ಪ್ರಕ್ರಿಯೆ ದೋಷಪೂರಿತವಾಗಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ವಿ ರಾಮಸುಬ್ರಮಣಿಯನ್‌ ಅವರನ್ನು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್‌ಹೆಚ್‌ಆರ್‌ಸಿ) ಅಧ್ಯಕ್ಷರನ್ನಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಸೋಮವಾರ (ಡಿ.23) ನೇಮಿಸಿದ್ದಾರೆ.

ನ್ಯಾ. ರಾಮಸುಬ್ರಮಣಿಯನ್‌ ಅವರ ನೇಮಕ ಪೂರ್ವ ನಿರ್ಧರಿತ, ಇವರ ಆಯ್ಕೆ ಪ್ರಕ್ರಿಯೆ ವೇಳೆ
ಪರಸ್ಪರ ಸಮಾಲೋಚನೆ ಮತ್ತು ಒಮ್ಮತದ ನಿರ್ಧಾರ ಕೈಗೊಳ್ಳುವ ಸ್ಥಾಪಿತ ಸಂಪ್ರದಾಯವನ್ನು ನಿರ್ಲಕ್ಷಿಸಲಾಗಿದೆ ಎಂದು ಇಬ್ಬರು ನಾಯಕರು ಆರೋಪಿಸಿದ್ದಾರೆ.

ಎನ್‌ಹೆಚ್‌ಆರ್‌ಸಿ ಅಧ್ಯಕ್ಷರನ್ನು ಆಯ್ಕೆ ಮಾಡುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಉನ್ನತಾಧಿಕಾರ ಸಮಿತಿಯ ಸದಸ್ಯರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರು ಡಿಸೆಂಬರ್ 18ರಂದು ಸಮಿತಿಯ ಸಭೆಯಲ್ಲಿ ಭಾಗವಹಿಸಿದ್ದರು.

ಸಭೆಯಲ್ಲಿ ಸರ್ಕಾರ ನ್ಯಾಯಮೂರ್ತಿ ವಿ ರಾಮಸುಬ್ರಮಣಿಯನ್‌ ಅವರ ಹೆಸರನ್ನು ಪ್ರಸ್ತಾಪಿಸಿತ್ತು. ಆದರೆ, ರಾಹುಲ್ ಗಾಂಧಿ ಮತ್ತು ಖರ್ಗೆ ಅವರು, ಅಗತ್ಯವಿರುವ ಅರ್ಹತೆ ಮತ್ತು ಒಳಗೊಳ್ಳುವಿಕೆಯ ಅಗತ್ಯವನ್ನು ಪರಿಗಣಿಸಿ, ನ್ಯಾಯಮೂರ್ತಿಗಳಾದ ರೋಹಿಂಟನ್ ಫಾಲಿ ನಾರಿಮನ್ ಮತ್ತು ನ್ಯಾಯಮೂರ್ತಿ ಕುಟ್ಟಿಯಿಲ್ ಮ್ಯಾಥ್ಯೂ ಜೋಸೆಫ್ ಅವರ ಹೆಸರನ್ನು ಪ್ರಸ್ತಾಪಿಸಿ ಭಿನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಅಲ್ಪಸಂಖ್ಯಾತ ಪಾರ್ಸಿ ಸಮುದಾಯದ ಒಬ್ಬ ವಿಶಿಷ್ಟ ನ್ಯಾಯಶಾಸ್ತ್ರಜ್ಞ ನ್ಯಾಯಮೂರ್ತಿ ರೋಹಿಂಟನ್ ಫಾಲಿ ನಾರಿಮನ್ ಅವರು ತಮ್ಮ ಬೌದ್ಧಿಕ ಆಳ ಮತ್ತು ಸಾಂವಿಧಾನಿಕ ಮೌಲ್ಯಗಳಲ್ಲಿ ಹೊಂದಿರುವ ಅಚಲವಾದ ಬದ್ಧತೆಗೆ ಹೆಸರುವಾಸಿಯಾಗಿದ್ದಾರೆ. ಅವರನ್ನು ಎನ್‌ಹೆಚ್‌ಆರ್‌ಸಿ ಅಧ್ಯಕ್ಷರಾಗಿ ನೇಮಿಸುವುದು ಭಾರತದ ಬಹುತ್ವವನ್ನು ಎತ್ತಿ ಹಿಡಿಯಲಿದೆ ಎಂದು ಕಾಂಗ್ರೆಸ್‌ ನಾಯಕರು ಹೇಳಿದ್ದರು.

ಅದೇ ರೀತಿ ಅಲ್ಪಸಂಖ್ಯಾತ ಕ್ರೈಸ್ತ ಸಮುದಾಯಕ್ಕೆ ಸೇರಿದ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶರಾದ ಜಸ್ಟಿಸ್ ಕುಟ್ಟಿಯಿಲ್ ಮ್ಯಾಥ್ಯೂ ಜೋಸೆಫ್ ಅವರು ವೈಯಕ್ತಿಕ ಸ್ವಾತಂತ್ರ್ಯ ಮತ್ತು ತಳ ಸಮುದಾಯಗಳ ರಕ್ಷಣೆಗೆ ಒತ್ತು ನೀಡುವ ತೀರ್ಪುಗಳನ್ನು ನೀಡಿದವರು. ಅವರು ಈ ಮಹತ್ವದ ಸ್ಥಾನಕ್ಕೆ ಆದರ್ಶ ಅಭ್ಯರ್ಥಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಎನ್‌ಹೆಚ್‌ಎಸ್‌ಆರ್‌ಸಿಯ ಇತರ ಸದಸ್ಯ ಸ್ಥಾನಗಳಿಗೆ ನ್ಯಾಯಮೂರ್ತಿ ಎಸ್. ಮುರಳೀಧರ್ ಮತ್ತು ನ್ಯಾಯಮೂರ್ತಿ ಅಕಿಲ್ ಅಬ್ದುಲ್‌ ಹಮೀದ್ ಖುರೇಷಿ ಅವರ ಹೆಸರನ್ನು ಕಾಂಗ್ರೆಸ್ ನಾಯಕರು ಶಿಫಾರಸು ಮಾಡಿದ್ದರು. ಈ ಇಬ್ಬರೂ ಕೂಡ ಮಾನವ ಹಕ್ಕುಗಳನ್ನು ಎತ್ತಿಹಿಡಿದ ಹಿನ್ನೆಲೆಯನ್ನು ಹೊಂದಿದ್ದಾರೆ.

“ನ್ಯಾಯಮೂರ್ತಿ ಎಸ್. ಮುರಳೀಧರ್ ಅವರು ಸಾಮಾಜಿಕ ನ್ಯಾಯದ ಪರ ತೀರ್ಪುಗಳನ್ನು ನೀಡಿದ ಖ್ಯಾತಿ ಹೊಂದಿದ್ದಾರೆ. ಕಸ್ಟಡಿ ಹಿಂಸಾಚಾರಗಳಂತ ಶೋಷಣೆಯನ್ನು ವಿರೋಧಿಸಿ, ನಾಗರಿಕ ಸ್ವಾತಂತ್ರ್ಯಗಳ ರಕ್ಷಣೆಗೆ ಅವರು ಕೊಡುಗೆ ನೀಡಿದ್ದಾರೆ”.

“ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ನ್ಯಾಯಮೂರ್ತಿ ಅಕಿಲ್ ಅಬ್ದುಲ್ ಹಮೀದ್ ಖುರೇಷಿ ಅವರು ಸಾಂವಿಧಾನಿಕ ತತ್ವಗಳನ್ನು ನಿರಂತರವಾಗಿ ಸಮರ್ಥಿಸಿಕೊಂಡವರು. ಅವರು ಸೇವಾವಧಿಯಲ್ಲಿ ತನ್ನ ಕೆಲಸದ ಮೇಲೆ ಬದ್ದತೆ ಹೊಂದಿದ್ದರು. ಅವರನ್ನು ಎನ್‌ಹೆಚ್‌ಆರ್‌ಸಿಗೆ ಸೇರ್ಪಡೆಗೊಳಿಸಿದರೆ, ಎನ್‌ಹೆಚ್‌ಆರ್‌ಸಿಯ ಪರಿಣಾಮಕಾರಿತ್ವ, ವೈವಿಧ್ಯತೆ ಮತ್ತು ಅದರ ಬದ್ಧತೆಗೆ ಕೊಡುಗೆ ನೀಡಲಿದ್ದಾರೆ” ಎಂದು ಭಿನ್ನಾಭಿಪ್ರಾಯಪಟ್ಟಿದ್ದರು. ಆದರೆ, ಸಭೆಯಲ್ಲಿ ಇವುಗಳನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ ಎನ್ನಲಾಗಿದೆ.

ಹೊಸದಾಗಿ ನೇಮಕಗೊಂಡಿರುವ ಎನ್‌ಹೆಚ್‌ಆರ್‌ಸಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ವೇಳೆ ಪರಸ್ಪರ ಸಮಾಲೋಚನೆ ಮತ್ತು ಒಮ್ಮತದ ನಿರ್ಧಾರದ ಸ್ಥಾಪಿತ ಸಂಪ್ರದಾಯವನ್ನು ನಿರ್ಲಕ್ಷಿಸಲಾಗಿದೆ. ಇದು ಅತ್ಯಂತ ಕಳವಳಕಾರಿ ಬೆಳವಣಿಗೆ. ಸಮಿತಿಯ ಸಭೆಯಲ್ಲಿ ಎತ್ತಿದ ಕೆಲವೊಂದು ಗಂಭೀರ ವಿಷಯಗಳನ್ನು ಬದಿಗೊತ್ತಿ, ಕೇವಲ ಸಂಖ್ಯಾತ್ಮಕ ಬಹುಮತದ ಆಧಾರದಲ್ಲಿ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ ಎಂದು ರಾಹುಲ್ ಗಾಂಧಿ ಮತ್ತು ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಭಿನ್ನಬಿಪ್ರಾಯದ ಪತ್ರ ಬರೆದಿದ್ದಾರೆ.

ಎನ್‌ಹೆಚ್‌ಆರ್‌ಸಿಯು ಎಲ್ಲಾ ನಾಗರಿಕರ, ವಿಶೇಷವಾಗಿ ಸಮಾಜದಲ್ಲಿ ತುಳಿತಕ್ಕೊಳಗಾದ ಮತ್ತು ತಳಮಟ್ಟದ ವರ್ಗಗಳ ಮೂಲಭೂತ ಮಾನವ ಹಕ್ಕುಗಳನ್ನು ರಕ್ಷಿಸುವ ಕಾರ್ಯವನ್ನು ಹೊಂದಿರುವ ಪ್ರಮುಖ ಶಾಸನಬದ್ಧ ಸಂಸ್ಥೆಯಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಎನ್‌ಹೆಚ್‌ಆರ್‌ಸಿಯ ಪ್ರಮುಖರು ರಾಷ್ಟ್ರದ ಪ್ರಾದೇಶಿಕ, ಜಾತಿ, ಸಮುದಾಯ ಮತ್ತು ಧಾರ್ಮಿಕ ವೈವಿಧ್ಯತೆಯನ್ನು ಎತ್ತಿ ಹಿಡಿಯಬೇಕಿದೆ. ಈ ವಿಷಯಗಳಲ್ಲಿ ಸಮತೋಲನ ಕಾಯ್ದುಕೊಳ್ಳಬೇಕಿದೆ. ಎಲ್ಲರನ್ನೂ ಒಳಗೊಳ್ಳುವ ವೈವಿದ್ಯಮಯ ತೀರ್ಮಾನಗಳು ಇಲ್ಲಿ ಪ್ರಾಥಮಿಕ ಮಾನದಂಡವಾಗಬೇಕು. ಅಲ್ಲದೆ, ಕೇವಲ ಸಾಂಖ್ಯಿಕ ಬಹುಮತವಲ್ಲ ಎಂದು ಇಬ್ಬರು ನಾಯಕರು ಒತ್ತಿ ಹೇಳಿದ್ದಾರೆ.

ಇದನ್ನೂ ಓದಿ : ಎನ್‌ಹೆಚ್‌ಆರ್‌ಸಿ ಅಧ್ಯಕ್ಷರಾಗಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ ರಾಮಸುಬ್ರಮಣಿಯನ್ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...