Homeಮುಖಪುಟಎನ್‌ಹೆಚ್‌ಆರ್‌ಸಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸರಿಯಾಗಿ ನಡೆದಿಲ್ಲ : ಅಸಮಾಧಾನ ವ್ಯಕ್ತಪಡಿಸಿದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ...

ಎನ್‌ಹೆಚ್‌ಆರ್‌ಸಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸರಿಯಾಗಿ ನಡೆದಿಲ್ಲ : ಅಸಮಾಧಾನ ವ್ಯಕ್ತಪಡಿಸಿದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್‌ಹೆಚ್‌ಆರ್‌ಸಿ) ಅಧ್ಯಕ್ಷರ ನೇಮಕ ಪ್ರಕ್ರಿಯೆ ದೋಷಪೂರಿತವಾಗಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ವಿ ರಾಮಸುಬ್ರಮಣಿಯನ್‌ ಅವರನ್ನು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್‌ಹೆಚ್‌ಆರ್‌ಸಿ) ಅಧ್ಯಕ್ಷರನ್ನಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಸೋಮವಾರ (ಡಿ.23) ನೇಮಿಸಿದ್ದಾರೆ.

ನ್ಯಾ. ರಾಮಸುಬ್ರಮಣಿಯನ್‌ ಅವರ ನೇಮಕ ಪೂರ್ವ ನಿರ್ಧರಿತ, ಇವರ ಆಯ್ಕೆ ಪ್ರಕ್ರಿಯೆ ವೇಳೆ
ಪರಸ್ಪರ ಸಮಾಲೋಚನೆ ಮತ್ತು ಒಮ್ಮತದ ನಿರ್ಧಾರ ಕೈಗೊಳ್ಳುವ ಸ್ಥಾಪಿತ ಸಂಪ್ರದಾಯವನ್ನು ನಿರ್ಲಕ್ಷಿಸಲಾಗಿದೆ ಎಂದು ಇಬ್ಬರು ನಾಯಕರು ಆರೋಪಿಸಿದ್ದಾರೆ.

ಎನ್‌ಹೆಚ್‌ಆರ್‌ಸಿ ಅಧ್ಯಕ್ಷರನ್ನು ಆಯ್ಕೆ ಮಾಡುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಉನ್ನತಾಧಿಕಾರ ಸಮಿತಿಯ ಸದಸ್ಯರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರು ಡಿಸೆಂಬರ್ 18ರಂದು ಸಮಿತಿಯ ಸಭೆಯಲ್ಲಿ ಭಾಗವಹಿಸಿದ್ದರು.

ಸಭೆಯಲ್ಲಿ ಸರ್ಕಾರ ನ್ಯಾಯಮೂರ್ತಿ ವಿ ರಾಮಸುಬ್ರಮಣಿಯನ್‌ ಅವರ ಹೆಸರನ್ನು ಪ್ರಸ್ತಾಪಿಸಿತ್ತು. ಆದರೆ, ರಾಹುಲ್ ಗಾಂಧಿ ಮತ್ತು ಖರ್ಗೆ ಅವರು, ಅಗತ್ಯವಿರುವ ಅರ್ಹತೆ ಮತ್ತು ಒಳಗೊಳ್ಳುವಿಕೆಯ ಅಗತ್ಯವನ್ನು ಪರಿಗಣಿಸಿ, ನ್ಯಾಯಮೂರ್ತಿಗಳಾದ ರೋಹಿಂಟನ್ ಫಾಲಿ ನಾರಿಮನ್ ಮತ್ತು ನ್ಯಾಯಮೂರ್ತಿ ಕುಟ್ಟಿಯಿಲ್ ಮ್ಯಾಥ್ಯೂ ಜೋಸೆಫ್ ಅವರ ಹೆಸರನ್ನು ಪ್ರಸ್ತಾಪಿಸಿ ಭಿನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಅಲ್ಪಸಂಖ್ಯಾತ ಪಾರ್ಸಿ ಸಮುದಾಯದ ಒಬ್ಬ ವಿಶಿಷ್ಟ ನ್ಯಾಯಶಾಸ್ತ್ರಜ್ಞ ನ್ಯಾಯಮೂರ್ತಿ ರೋಹಿಂಟನ್ ಫಾಲಿ ನಾರಿಮನ್ ಅವರು ತಮ್ಮ ಬೌದ್ಧಿಕ ಆಳ ಮತ್ತು ಸಾಂವಿಧಾನಿಕ ಮೌಲ್ಯಗಳಲ್ಲಿ ಹೊಂದಿರುವ ಅಚಲವಾದ ಬದ್ಧತೆಗೆ ಹೆಸರುವಾಸಿಯಾಗಿದ್ದಾರೆ. ಅವರನ್ನು ಎನ್‌ಹೆಚ್‌ಆರ್‌ಸಿ ಅಧ್ಯಕ್ಷರಾಗಿ ನೇಮಿಸುವುದು ಭಾರತದ ಬಹುತ್ವವನ್ನು ಎತ್ತಿ ಹಿಡಿಯಲಿದೆ ಎಂದು ಕಾಂಗ್ರೆಸ್‌ ನಾಯಕರು ಹೇಳಿದ್ದರು.

ಅದೇ ರೀತಿ ಅಲ್ಪಸಂಖ್ಯಾತ ಕ್ರೈಸ್ತ ಸಮುದಾಯಕ್ಕೆ ಸೇರಿದ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶರಾದ ಜಸ್ಟಿಸ್ ಕುಟ್ಟಿಯಿಲ್ ಮ್ಯಾಥ್ಯೂ ಜೋಸೆಫ್ ಅವರು ವೈಯಕ್ತಿಕ ಸ್ವಾತಂತ್ರ್ಯ ಮತ್ತು ತಳ ಸಮುದಾಯಗಳ ರಕ್ಷಣೆಗೆ ಒತ್ತು ನೀಡುವ ತೀರ್ಪುಗಳನ್ನು ನೀಡಿದವರು. ಅವರು ಈ ಮಹತ್ವದ ಸ್ಥಾನಕ್ಕೆ ಆದರ್ಶ ಅಭ್ಯರ್ಥಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಎನ್‌ಹೆಚ್‌ಎಸ್‌ಆರ್‌ಸಿಯ ಇತರ ಸದಸ್ಯ ಸ್ಥಾನಗಳಿಗೆ ನ್ಯಾಯಮೂರ್ತಿ ಎಸ್. ಮುರಳೀಧರ್ ಮತ್ತು ನ್ಯಾಯಮೂರ್ತಿ ಅಕಿಲ್ ಅಬ್ದುಲ್‌ ಹಮೀದ್ ಖುರೇಷಿ ಅವರ ಹೆಸರನ್ನು ಕಾಂಗ್ರೆಸ್ ನಾಯಕರು ಶಿಫಾರಸು ಮಾಡಿದ್ದರು. ಈ ಇಬ್ಬರೂ ಕೂಡ ಮಾನವ ಹಕ್ಕುಗಳನ್ನು ಎತ್ತಿಹಿಡಿದ ಹಿನ್ನೆಲೆಯನ್ನು ಹೊಂದಿದ್ದಾರೆ.

“ನ್ಯಾಯಮೂರ್ತಿ ಎಸ್. ಮುರಳೀಧರ್ ಅವರು ಸಾಮಾಜಿಕ ನ್ಯಾಯದ ಪರ ತೀರ್ಪುಗಳನ್ನು ನೀಡಿದ ಖ್ಯಾತಿ ಹೊಂದಿದ್ದಾರೆ. ಕಸ್ಟಡಿ ಹಿಂಸಾಚಾರಗಳಂತ ಶೋಷಣೆಯನ್ನು ವಿರೋಧಿಸಿ, ನಾಗರಿಕ ಸ್ವಾತಂತ್ರ್ಯಗಳ ರಕ್ಷಣೆಗೆ ಅವರು ಕೊಡುಗೆ ನೀಡಿದ್ದಾರೆ”.

“ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ನ್ಯಾಯಮೂರ್ತಿ ಅಕಿಲ್ ಅಬ್ದುಲ್ ಹಮೀದ್ ಖುರೇಷಿ ಅವರು ಸಾಂವಿಧಾನಿಕ ತತ್ವಗಳನ್ನು ನಿರಂತರವಾಗಿ ಸಮರ್ಥಿಸಿಕೊಂಡವರು. ಅವರು ಸೇವಾವಧಿಯಲ್ಲಿ ತನ್ನ ಕೆಲಸದ ಮೇಲೆ ಬದ್ದತೆ ಹೊಂದಿದ್ದರು. ಅವರನ್ನು ಎನ್‌ಹೆಚ್‌ಆರ್‌ಸಿಗೆ ಸೇರ್ಪಡೆಗೊಳಿಸಿದರೆ, ಎನ್‌ಹೆಚ್‌ಆರ್‌ಸಿಯ ಪರಿಣಾಮಕಾರಿತ್ವ, ವೈವಿಧ್ಯತೆ ಮತ್ತು ಅದರ ಬದ್ಧತೆಗೆ ಕೊಡುಗೆ ನೀಡಲಿದ್ದಾರೆ” ಎಂದು ಭಿನ್ನಾಭಿಪ್ರಾಯಪಟ್ಟಿದ್ದರು. ಆದರೆ, ಸಭೆಯಲ್ಲಿ ಇವುಗಳನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ ಎನ್ನಲಾಗಿದೆ.

ಹೊಸದಾಗಿ ನೇಮಕಗೊಂಡಿರುವ ಎನ್‌ಹೆಚ್‌ಆರ್‌ಸಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ವೇಳೆ ಪರಸ್ಪರ ಸಮಾಲೋಚನೆ ಮತ್ತು ಒಮ್ಮತದ ನಿರ್ಧಾರದ ಸ್ಥಾಪಿತ ಸಂಪ್ರದಾಯವನ್ನು ನಿರ್ಲಕ್ಷಿಸಲಾಗಿದೆ. ಇದು ಅತ್ಯಂತ ಕಳವಳಕಾರಿ ಬೆಳವಣಿಗೆ. ಸಮಿತಿಯ ಸಭೆಯಲ್ಲಿ ಎತ್ತಿದ ಕೆಲವೊಂದು ಗಂಭೀರ ವಿಷಯಗಳನ್ನು ಬದಿಗೊತ್ತಿ, ಕೇವಲ ಸಂಖ್ಯಾತ್ಮಕ ಬಹುಮತದ ಆಧಾರದಲ್ಲಿ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ ಎಂದು ರಾಹುಲ್ ಗಾಂಧಿ ಮತ್ತು ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಭಿನ್ನಬಿಪ್ರಾಯದ ಪತ್ರ ಬರೆದಿದ್ದಾರೆ.

ಎನ್‌ಹೆಚ್‌ಆರ್‌ಸಿಯು ಎಲ್ಲಾ ನಾಗರಿಕರ, ವಿಶೇಷವಾಗಿ ಸಮಾಜದಲ್ಲಿ ತುಳಿತಕ್ಕೊಳಗಾದ ಮತ್ತು ತಳಮಟ್ಟದ ವರ್ಗಗಳ ಮೂಲಭೂತ ಮಾನವ ಹಕ್ಕುಗಳನ್ನು ರಕ್ಷಿಸುವ ಕಾರ್ಯವನ್ನು ಹೊಂದಿರುವ ಪ್ರಮುಖ ಶಾಸನಬದ್ಧ ಸಂಸ್ಥೆಯಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಎನ್‌ಹೆಚ್‌ಆರ್‌ಸಿಯ ಪ್ರಮುಖರು ರಾಷ್ಟ್ರದ ಪ್ರಾದೇಶಿಕ, ಜಾತಿ, ಸಮುದಾಯ ಮತ್ತು ಧಾರ್ಮಿಕ ವೈವಿಧ್ಯತೆಯನ್ನು ಎತ್ತಿ ಹಿಡಿಯಬೇಕಿದೆ. ಈ ವಿಷಯಗಳಲ್ಲಿ ಸಮತೋಲನ ಕಾಯ್ದುಕೊಳ್ಳಬೇಕಿದೆ. ಎಲ್ಲರನ್ನೂ ಒಳಗೊಳ್ಳುವ ವೈವಿದ್ಯಮಯ ತೀರ್ಮಾನಗಳು ಇಲ್ಲಿ ಪ್ರಾಥಮಿಕ ಮಾನದಂಡವಾಗಬೇಕು. ಅಲ್ಲದೆ, ಕೇವಲ ಸಾಂಖ್ಯಿಕ ಬಹುಮತವಲ್ಲ ಎಂದು ಇಬ್ಬರು ನಾಯಕರು ಒತ್ತಿ ಹೇಳಿದ್ದಾರೆ.

ಇದನ್ನೂ ಓದಿ : ಎನ್‌ಹೆಚ್‌ಆರ್‌ಸಿ ಅಧ್ಯಕ್ಷರಾಗಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ ರಾಮಸುಬ್ರಮಣಿಯನ್ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...