Homeಕರ್ನಾಟಕಮತದಾನದ ವಿವರ ತಡವಾಗಿ ಪ್ರಕಟ, ನೋಂದಾಯಿತ ಮತದಾರರ ಮಾಹಿತಿ ಮಾಯ: ಚು. ಆಯೋಗಕ್ಕೆ ಗಂಭೀರ ಪ್ರಶ್ನೆ...

ಮತದಾನದ ವಿವರ ತಡವಾಗಿ ಪ್ರಕಟ, ನೋಂದಾಯಿತ ಮತದಾರರ ಮಾಹಿತಿ ಮಾಯ: ಚು. ಆಯೋಗಕ್ಕೆ ಗಂಭೀರ ಪ್ರಶ್ನೆ ಎತ್ತಿದ ಖರ್ಗೆ

- Advertisement -
- Advertisement -

ಲೋಕಸಭೆ ಚುನಾವಣೆಯ ಮೊದಲ ಮತ್ತು ಎರಡನೇ ಹಂತದ ಮತದಾನದ ಅಂತಿಮ ಅಂಕಿ ಅಂಶಗಳನ್ನು ಬಹಳ ತಡವಾಗಿ ಬಿಡುಗಡೆಗೊಳಿಸಿರುವುದು ಮತ್ತು ಚುನಾವಣಾ ಆಯೋಗದ ವೆಬ್‌ಸೈಟ್‌ನಿಂದ ನೋಂದಾಯಿತ ಮತದಾರರ ಮಾಹಿತಿ ಕಾಣೆಯಾಗಿರುವುದು ಅನುಮಾನಗಳನ್ನು ಹುಟ್ಟು ಹಾಕಿದೆ.

ಇದು ಉದ್ದೇಶಪೂರ್ವಕವಾಗಿ ಮಾಡಿರುವ ಕೃತ್ಯ. ಮತದಾನದ ಫಲಿತಾಂಶ ಬದಲಿಸುವ ಹುನ್ನಾರ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಇಂಡಿಯಾ ಮೈತ್ರಿಕೂಟದ ಪಕ್ಷಗಳ ನಾಯಕರಿಗೆ ಈ ಕುರಿತು ವಿವರವಾದ ಪತ್ರವೊಂದನ್ನು ಬರೆದಿದ್ದಾರೆ.

ಪತ್ರದಲ್ಲಿ, “ಈ ಬಾರಿಯ ಲೋಕಸಭೆ ಚುನಾವಣೆ ಭಾರತದ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸುವ ಹೋರಾಟವಾಗಿದೆ. ಇತ್ತೀಚಿನ ಬೆಳವಣಿಗೆಗಳಿಂದ ಭಾರತೀಯ ಚುನಾವಣಾ ಆಯೋಗದ ಮೇಲಿನ ವಿಶ್ವಾಸಾರ್ಹತೆ ಕಡಿಮೆಯಾಗಿದೆ. ಮೊದಲ ಮತ್ತು ಎರಡನೇ ಹಂತದ ಮತದಾನದ ಅಂಕಿ ಅಂಶಗಳನ್ನು ಇತಿಹಾಸದಲ್ಲೇ ಮೊದಲ ಬಾರಿಗೆ ತಡವಾಗಿ ಬಹಿರಂಗಗೊಳಿಸಲಾಗಿದೆ” ಎಂದು ತಿಳಿಸಿದ್ದಾರೆ.

ಮೂರನೇ ಹಂತದ ಮತದಾನಕ್ಕೆ ನೋಂದಾಯಿತ ಮತದಾರರ ಅಂತಿಮ ಪಟ್ಟಿಯನ್ನೂ ಬಿಡುಗಡೆ ಮಾಡಿಲ್ಲಎಂದು ವಿವಿಧ ಮಾಧ್ಯಮಗಳ ವರದಿಗಳ ಮೂಲಕ ತಿಳಿದು ಬಂದಿದೆ. ಇದು ಅತ್ಯಂತ ದಿಗ್ಭ್ರಮೆಗೊಳಿಸುವ ಸಂಗತಿಯಾಗಿದೆ. ಈ ಎಲ್ಲಾ ಬೆಳವಣಿಗೆಗಳು ಭಾರತದ ಚುನಾವಣಾ ಆಯೋಗದ ಕಾರ್ಯನಿರ್ವಹಣೆಯ ಮೇಲೆ ಕರಾಳ ಛಾಯೆ ಮೂಡಿಸಿದೆ. ಚುನಾವಣಾ ಆಯೋಗ ಭಾರತದ ರಾಜ್ಯಗಳು ಮತ್ತು ಅದರ ಜನರ ಸಾಮೂಹಿಕ ಪ್ರಯತ್ನದಿಂದ ಸ್ಥಾಪಿಸಲಾದ ಸಂಸ್ಥೆಯಾಗಿದೆ ಎಂದು ಖರ್ಗೆ ಹೇಳಿದ್ದಾರೆ.

ಮೊದಲ ಮತ್ತು ಎರಡನೇ ಹಂತದ ಅಂತಿಮ ಮತದಾನದ ಶೇಕಡಾವಾರು ಅಂಕಿ ಅಂಶಗಳ ಬಿಡುಗಡೆಯಲ್ಲಿನ ಅತಿಯಾದ ವಿಳಂಬ ಅಂಕಿ ಅಂಶಗಳ ಗುಣಮಟ್ಟದ ಮೇಲೆ ಗಂಭೀರ ಅನುಮಾನಗಳನ್ನು ಹುಟ್ಟು ಹಾಕಿದೆ. ನನ್ನ 52 ವರ್ಷಗಳ ರಾಜಕೀಯ ಜೀವನದಲ್ಲಿ ಇಷ್ಟೊಂದು ವಿಳಂಬವಾಗಿ ಮತದಾನದ ಅಂಕಿ ಅಂಶ ಬಿಡುಗಡೆ ಮಾಡಿರುವುದನ್ನು ಎಂದಿಗೂ ನೋಡಿಲ್ಲ. ಮತದಾನ ನಡೆದ ಗಂಟೆಗಳ ಒಳಗೆ ಅಂಕಿ ಅಂಶ ಬಿಡುಗಡೆಯಾಗುತ್ತಿತ್ತು. ಹಾಗಾಗಿ, ಈ ಕೆಳಗಿನ ಪ್ರಶ್ನೆಗಳನ್ನು ನಾವು ಕೇಳಬೇಕಾಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಪತ್ರದಲ್ಲಿ ಹೇಳಿದ್ದಾರೆ.

ಖರ್ಗೆ ಪ್ರಸ್ತಾಪಿಸಿದ ಪ್ರಶ್ನೆಗಳು ಹೀಗಿವೆ..

1. ಏಪ್ರಿಲ್ 30, 2024 ರಂದು ಚುನಾವಣಾ ಆಯೋಗ 2024ರ ಲೋಕಸಭೆಯ ಚುನಾವಣೆಯ ಮೊದಲ ಮತ್ತು ಎರಡನೇ ಹಂತದ ಮತದಾನದ ಅಂತಿಮ ಶೇಕಡವಾರು ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದೆ. ಮೊದಲ ಹಂತದ ಮತದಾನದ 11 ದಿನಗಳ ನಂತರ (19 ಏಪ್ರಿಲ್ 2024) ಮತ್ತು ಎರಡನೇ ಹಂತದ ಮತದಾನದ 4 ದಿನಗಳ ನಂತರ (26 ಏಪ್ರಿಲ್ 2024) ಡೇಟಾ ಬಿಡುಗಡೆ ಮಾಡಲಾಗಿದೆ. ಈ ನಿಟ್ಟಿನಲ್ಲಿ ಚುನಾವಣಾ ಆಯೋಗಕ್ಕೆ ನಮ್ಮ ಮೊದಲ ಪ್ರಶ್ನೆ ಏನೆಂದರೆ.. ಆಯೋಗವು ಮತದಾನದ ಅಂಕಿ ಅಂಶಗಳನ್ನು ಬಿಡುಗಡೆ ಮಾಡಲು ಇಷ್ಟೊಂದು ವಿಳಂಬ ಮಾಡಿದ್ದು ಏಕೆ?

2. ಈ ಹಿಂದೆಯೆಲ್ಲ ಆಯೋಗವು ಮತದಾನದ ನಡೆದ 24 ಗಂಟೆಗಳ ಒಳಗೆ ಅಂತಿಮ ಅಂಕಿ ಅಂಶಗಳನ್ನು ಪ್ರಕಟಿಸುತ್ತಿತ್ತು. ಈ ಬಾರಿ ಏನು ಬದಲಾಗಿದೆ? ರಾಜಕೀಯ ಪಕ್ಷಗಳು ಮತ್ತು ರಾಜಕೀಯ ಕಾರ್ಯಕರ್ತರು ಪದೇ ಪದೇ ಪ್ರಶ್ನಿಸುತ್ತಿದ್ದರೂ, ವಿಳಂಬವನ್ನು ಸಮರ್ಥಿಸಲು ಆಯೋಗ ಯಾವುದೇ ಸ್ಪಷ್ಟೀಕರಣವನ್ನು ನೀಡಲು ವಿಫಲವಾಗಿದ್ದು ಏಕೆ? ಇವಿಎಂಗಳಲ್ಲಿ ಸಮಸ್ಯೆ ಇದೆಯೇ?

3. ಮೊದಲ ಹಂತದಲ್ಲಿ 102 ಸ್ಥಾನಗಳಿಗೆ ನಡೆದ ಮತದಾನದ ಅಂಕಿ ಅಂಶಗಳನ್ನು19 ಏಪ್ರಿಲ್ 2024 ರಂದು ಸಂಜೆ 7 ಗಂಟೆಗೆ ಬಿಡುಗಡೆ ಮಾಡಿದ್ದ ಚುನಾವಣಾ ಆಯೋಗ, ಅಂದಾಜು 60% ಮತದಾನವಾಗಿದೆ ಎಂದಿತ್ತು. ಎರಡನೇ ಹಂತದಲ್ಲಿ 88 ಸ್ಥಾನಗಳಿಗೆ ನಡೆದ ಅಂದಾಜು ಮತದಾನದ ಪ್ರಮಾಣ 60.96 % ಎಂದಿತ್ತು.
ಈ ಎಲ್ಲಾ ಅಂಕಿ ಅಂಶಗಳು ಮಾಧ್ಯಮಗಳಲ್ಲಿ ವ್ಯಾಪಕವಾಗಿ ವರದಿಯಾಗಿದೆ.

ಆದರೆ, ಏಪ್ರಿಲ್ 20 ರಂದು, ಆಯೋಗವು ಮೊದಲ ಹಂತದ ಮತದಾನದ ಪ್ರಮಾಣವನ್ನು 65.5% ಕ್ಕೆ ಮತ್ತು 27ರಂದು ಎರಡನೇ ಹಂತದ ಮತದಾನದ ಪ್ರಮಾಣವನ್ನು 66.7% ಕ್ಕೆ ಹೆಚ್ಚಿಸಿದೆ. ಅಂತಿಮವಾಗಿ ಏಪ್ರಿಲ್ 30 ರಂದು ಬಿಡುಗಡೆ ಮಾಡಿದ ಅಂಕಿ ಅಂಶಗಳಲ್ಲಿ ಮೊದಲ ಹಂತದಲ್ಲಿ 66.14% ಮತ್ತು ಎರಡನೇ ಹಂತದಲ್ಲಿ 66.71% ಮತದಾನವಾಗಿದೆ ಎಂದು ದೃಢೀಕರಿಸಿದೆ. ಈ ರೀತಿ ಬದಲಾವಣೆಯಾಗಿದ್ದು ಏಕೆ?

4. ಏಪ್ರಿಲ್ 19ರಂದು ಮೊದಲ ಹಂತದ ಮತದಾನದ ದಿನ ಸಂಜೆ 7 ಗಂಟೆಯ ಹೊತ್ತಿಗೆ ಬಿಡುಗಡೆ ಮಾಡಲಾದ ಅಂದಾಜು ಅಂಕಿ ಅಂಶಕ್ಕಿಂತ, ಏಪ್ರಿಲ್ 30ರಂದು ಬಿಡುಗಡೆ ಮಾಡಲಾದ ಅಂತಿಮ ಅಂಕಿ ಅಂಶದಲ್ಲಿ ಮತದಾನದ ಪ್ರಮಾಣ ಶೇ. 5.5ರಷ್ಟು ಹೆಚ್ಚಳವಾಗಿದ್ದು ಏಕೆ?

ಏಪ್ರಿಲ್ 26ರಂದು ಎರಡನೇ ಹಂತದ ಮತದಾನದ ದಿನ ಸಂಜೆ 7 ಗಂಟೆಯ ಹೊತ್ತಿಗೆ ಬಿಡುಗಡೆ ಮಾಡಲಾದ ಅಂದಾಜು ಅಂಕಿ ಅಂಶಕ್ಕಿಂತ, ಏಪ್ರಿಲ್ 30ರಂದು ಬಿಡುಗಡೆ ಮಾಡಲಾದ ಅಂತಿಮ ಅಂಕಿ ಅಂಶದಲ್ಲಿ ಮತದಾನ ಪ್ರಮಾಣ 5.74ರಷ್ಟು ಹೆಚ್ಚಳವಾಗಿದ್ದು ಹೇಗೆ?

5.ಪ್ರತೀ ಲೋಕಸಭೆ ಮತ್ತು ವಿಧಾನಸಭೆ ಕ್ಷೇತ್ರಗಳಲ್ಲಿ ನೋಂದಾಯಿತ ಮತದಾರರು ಮತ್ತು ಹಕ್ಕು ಚಲಾಯಿಸಿದ ಮತದಾರರ ಅಂಕಿ ಅಂಶಗಳನ್ನು ಇನ್ನೂ ಬಿಡುಗಡೆ ಮಾಡಿಲ್ಲ ಏಕೆ? ಆ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದರೆ ಶೇ.5ರಷ್ಟು ಮತದಾನ ಹೇಗೆ ಹೆಚ್ಚಾಯಿತು ಎಂದು ನಮಗೆ ತಿಳಿದುಕೊಳ್ಳಬಹುದು.

ಸಾರ್ವಜನಿಕ ವಲಯದಲ್ಲಿ ಎದ್ದಿರುವ ಈ ಪ್ರಶ್ನೆಗಳನ್ನು ನಿವಾರಿಸಲು ಚುನಾವಣಾ ಆಯೋಗ ಪ್ರತಿ ಲೋಕಸಭೆ ಕ್ಷೇತ್ರದ ಮತದಾರರ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದರೆ ಸಾಲದು. ಪ್ರತಿ ಮತಗಟ್ಟೆಯಲ್ಲಿನ ಮತದಾನದ ದತ್ತಾಂಶವನ್ನೂ ಬಿಡುಗಡೆ ಮಾಡಬೇಕು. ಇದರ ಜೊತೆಗೆ ಪ್ರತಿ ಮತಗಟ್ಟೆ, ವಿಧಾನಸಭೆ ಮತ್ತು ಲೋಕಸಭೆ ಕ್ಷೇತ್ರಗಳಲ್ಲಿ ರಾಜಕೀಯ ಪಕ್ಷಗಳು ಸಲ್ಲಿಸಿರುವ ದೂರುಗಳನ್ನು ತಿಳಿಸಬೇಕು ಎಂದು ಖರ್ಗೆ ಪತ್ರದಲ್ಲಿ ಆಗ್ರಹಿಸಿದ್ದಾರೆ.

ಮೇಲೆ ಉಲ್ಲೇಖಿಸಿದ ಎಲ್ಲಾ ಪ್ರಶ್ನೆಗಳನ್ನು ಇಂಡಿಯಾ ಮೈತ್ರಿಕೂಟದ ನಾಯಕರು ಎತ್ತಬೇಕು. ಈ ಮೂಲಕ ನಮ್ಮ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸಲು ಒಗ್ಗಟ್ಟಿನ ಪ್ರಯತ್ನ ಮಾಡಬೇಕು ಎಂದು ಖರ್ಗೆ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ : ಲೋಕಸಭೆ ಚುನಾವಣೆ : ಕರ್ನಾಟಕದ 14 ಸೇರಿ ದೇಶದ 93 ಕ್ಷೇತ್ರಗಳಲ್ಲಿ ಇಂದು ಮತದಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...