Homeಮುಖಪುಟಖೇಲ್ ರತ್ನ ಪ್ರಶಸ್ತಿಯ ಮರುನಾಮಕರಣವಾಗಿದ್ದು ಮೋದಿಯವರ ಟ್ವೀಟ್‌ನಿಂದ ಹೊರತು ಸಾರ್ವಜನಿಕ ಮನವಿಯಿಂದಲ್ಲ!

ಖೇಲ್ ರತ್ನ ಪ್ರಶಸ್ತಿಯ ಮರುನಾಮಕರಣವಾಗಿದ್ದು ಮೋದಿಯವರ ಟ್ವೀಟ್‌ನಿಂದ ಹೊರತು ಸಾರ್ವಜನಿಕ ಮನವಿಯಿಂದಲ್ಲ!

ಆರ್‌ಟಿಐ ಪ್ರಶ್ನೆಗೆ ಉತ್ತರಿಸಿರುವ ಸಚಿವಾಲಯವು ಪ್ರಶಸ್ತಿಯ ಹೆಸರು ಬದಲಾಯಿಸುವಂತೆ ಸಾರ್ವಜನಿಕರಿಂದ ಯಾವುದೇ ಮನವಿಗಳು ಬಂದಿಲ್ಲ ಎಂಬುದನ್ನು ಒಪ್ಪಿಕೊಂಡಿದೆ.

- Advertisement -
- Advertisement -

ಈ ವರ್ಷದ ಆಗಸ್ಟ್‌ನಲ್ಲಿ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತದ ಪುರುಷರ ಹಾಕಿ ತಂಡ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದ ವೇಳೆ ನರೇಂದ್ರ ಮೋದಿ ಸರ್ಕಾರವು ಭಾರತದ ಅತ್ಯುನ್ನತ ಕ್ರೀಡಾ ಗೌರವವಾದ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ಇನ್ನು ಮುಂದೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಮರುನಾಮಕರಣ ಮಾಡಲಾಗುವುದು ಎಂದು ಘೋಷಿಸಿತು. ಈ ಸುದ್ದಿಯನ್ನು ಎಲ್ಲರಿಗಿಂತ ಮೊದಲು ಬ್ರೇಕ್ ಮಾಡಿದವರು ಬೇರ್ಯಾರು ಅಲ್ಲ ಸ್ವತಃ ಪ್ರಧಾನಿ ನರೇಂದ್ರ ಮೋದಿಯೇ ಆಗಿದ್ದರು.

ಆದರೆ ಕೂಡಲೇ ಈ ನಿರ್ಧಾರವು ವಿವಾದ ಹುಟ್ಟುಹಾಕಿತು. ಇದು ಕಾಂಗ್ರೆಸ್‌ಗೆ ಮಾಡುವ ಅವಮಾನ ಮತ್ತು ಕಾಂಗ್ರೆಸ್ ಸಾಧನೆಗಳನ್ನು ಅಳಿಸುವ ಗಿಮಿಕ್ ಎಂದು ಕೆಲವರು ಆರೋಪಿಸಿದರೆ, ಇನ್ನು ಕೆಲವರು ಇದನ್ನು ಕ್ರೀಡಾಪಟುವಿನ ಗೌರವಾರ್ಥವಾಗಿ ಸ್ವಾಗತಿಸಿದ್ದರು. ಇದೇ ಸಂದರ್ಭದಲ್ಲಿ ಮರುನಾಮಕರಣಕ್ಕಾಗಿ ಅನುಸರಿಸಿದ ಅಧಿಕೃತ ವಿಧಾನ ಮತ್ತು ನಿರ್ಧಾರವನ್ನು ಯಾವ ಆಧಾರದ ಮೇಲೆ ತೆಗೆದುಕೊಳ್ಳಲಾಗಿದೆ ಎಂಬುದರ ಕುರಿತು ಪ್ರಶ್ನೆಗಳು ಕೇಳಿಬಂದಿದ್ದವು.

ಆಗಸ್ಟ್ 6 ರಂದು ಟ್ವೀಟ್ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರು “ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್ ಚಂದ್ ಎಂದು ಮರುನಾಮಕರಣ ಮಾಡಲು ಭಾರತದಾದ್ಯಂತ ಅನೇಕರಿಂದ ಮನವಿಗಳನ್ನು ಪಡೆದಿದ್ದೇನೆ. ಅವರ ಭಾವನೆಯನ್ನು ಗೌರವಿಸಿ, ಈ ಮೂಲಕ ಖೇಲ್ ರತ್ನ ಪ್ರಶಸ್ತಿಯನ್ನು ಇನ್ನು ಮುಂದೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಕರೆಯಲಾಗುತ್ತದೆ” ಎಂದಿದ್ದರು.

ಆದರೆ ನರೇಂದ್ರ ಮೋದಿಯವರ ಪ್ರತಿಪಾದನೆಯಂತೆ ಪ್ರಶಸ್ತಿಯ ಹೆಸರು ಬದಲಾಯಿಸಲು ಬಂದ ಮನವಿಗಳ ಕುರಿತು ಒಂದೇ ಒಂದು ದಾಖಲೆಗಳನ್ನು ಒದಗಿಸಲು ಕ್ರೀಡಾ ಮತ್ತು ಯುವಜನ ಇಲಾಖೆಯು ವಿಫಲವಾಗಿದೆ ಎಂದು ದಿ ವೈರ್ ವರದಿ ಮಾಡಿದೆ. ಬದಲಿಗೆ ನರೇಂದ್ರ ಮೋದಿಯವರು ಟ್ವೀಟ್ ಮಾಡಿದ ನಂತರವೇ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ಮರುನಾಮಕರಣ ಮಾಡಲು ಸಚಿವಾಲಯ ನಿರ್ಧರಿಸಿದೆ ಮತ್ತು ಅಧಿಕಾರಿಗಳು ತರಾತುರಿಯಲ್ಲಿ ಸುತ್ತೋಲೆ ಹೊರಡಿಸಿದ್ದಾರೆ ಎಂದು ವೈರ್ ಆರೋಪಿಸಿದೆ.

ಈ ಕುರಿತು ಎಷ್ಟು ಜನರು ಮನವಿ ಸಲ್ಲಿಸಿದ್ದಾರೆ? ಅದರ ಪ್ರತಿಗಳನ್ನು ನೀಡಿ ಎಂದು ದಿ ವೈರ್ ಸಲ್ಲಿಸಿದ ಆರ್‌ಟಿಐ ಪ್ರಶ್ನೆಗೆ ಉತ್ತರಿಸಿರುವ ಸಚಿವಾಲಯವು ಪ್ರಶಸ್ತಿಯ ಹೆಸರು ಬದಲಾಯಿಸುವಂತೆ ಸಾರ್ವಜನಿಕರಿಂದ ಯಾವುದೇ ಮನವಿಗಳು ಬಂದಿಲ್ಲ ಎಂಬುದನ್ನು ಒಪ್ಪಿಕೊಂಡಿದೆ. ಪ್ರಧಾನ ಮಂತ್ರಿಗೆ ಬರೆಯಲಾದ ಯಾವುದೇ ಪತ್ರವನ್ನು ಅದರ ವಿಷಯದ ಆಧಾರದ ಮೇಲೆ ವಿಲೇವಾರಿ ಮಾಡಲು ಸಂಬಂಧಿಸಿದ ಸಚಿವಾಲಯ ಅಥವಾ ಇಲಾಖೆಗೆ ವರ್ಗಾಯಿಸಲಾಗುತ್ತದೆ.

ಅಲ್ಲದೇ ಸಚಿವಾಲಯವು ನಿರ್ಧಾರಕ್ಕೆ ಬರವು ಮೊದಲು ಈ ವಿಷಯಕ್ಕೆ ಸಂಬಂಧಿಸಿದ್ದ ಪಾಲುದಾರರ ಜೊತೆ ಚರ್ಚಿಸಿಲ್ಲ. ಕೇವಲ ಪ್ರಧಾನಿಯವರ ಟ್ವೀಟ್ ನಂತರ ಹೆಸರು ಬದಲಿಸಿದೆ. ಇನ್ನು ಸರಳವಾಗಿ ಹೇಳಬೇಕೆಂದರೆ ಮೊದಲು ಟ್ವೀಟ್ ಮಾಡಿದ ನಂತರವೆ ಪ್ರಶಸ್ತಿಯ ಹೆಸರು ಬದಲಿಸಲಾಗಿದೆ!

ಮೂರು ಬಾರಿ ಒಲಿಂಪಿಕ್ ಚಿನ್ನದ ಪದಕ ವಿಜೇತ, ಮೇಜರ್ ಧ್ಯಾನ್ ಚಂದ್ ಅವರು ದೇಶದ ಶ್ರೇಷ್ಠ ಹಾಕಿ ಆಟಗಾರ ಎಂದು ಪರಿಗಣಿಸಲ್ಪಟ್ಟಿದ್ದಾರೆ. ಅವರ ಜನ್ಮದಿನವಾದ ಆಗಸ್ಟ್ 29 ರಂದು ಭಾರತದ ರಾಷ್ಟ್ರೀಯ ಕ್ರೀಡಾ ದಿನವಾಗಿ ಆಚರಿಸಲಾಗುತ್ತದೆ. ಪ್ರತಿ ವರ್ಷ ಈ ದಿನದಂದು ದೇಶದ ಅತ್ಯುನ್ನತ ಕ್ರೀಡಾ ಗೌರವಗಳಾದ ರಾಜೀವ್ ಗಾಂಧಿ ಖೇಲ್‌ ರತ್ನ, ಅರ್ಜುನ ಮತ್ತು ದ್ರೋಣಾಚಾರ್ಯ ಪ್ರಶಸ್ತಿಗಳನ್ನು ವಿತರಿಸಲಾಗುತ್ತದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ರಾಯಚೂರಿನಲ್ಲಿ ಮಸೀದಿ ಕೆಡವಿದಾಗ ದೇವಾಲಯ ಪತ್ತೆಯಾಯಿತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...