Homeಮುಖಪುಟಖೇಲ್ ರತ್ನ ಪ್ರಶಸ್ತಿಯ ಮರುನಾಮಕರಣವಾಗಿದ್ದು ಮೋದಿಯವರ ಟ್ವೀಟ್‌ನಿಂದ ಹೊರತು ಸಾರ್ವಜನಿಕ ಮನವಿಯಿಂದಲ್ಲ!

ಖೇಲ್ ರತ್ನ ಪ್ರಶಸ್ತಿಯ ಮರುನಾಮಕರಣವಾಗಿದ್ದು ಮೋದಿಯವರ ಟ್ವೀಟ್‌ನಿಂದ ಹೊರತು ಸಾರ್ವಜನಿಕ ಮನವಿಯಿಂದಲ್ಲ!

ಆರ್‌ಟಿಐ ಪ್ರಶ್ನೆಗೆ ಉತ್ತರಿಸಿರುವ ಸಚಿವಾಲಯವು ಪ್ರಶಸ್ತಿಯ ಹೆಸರು ಬದಲಾಯಿಸುವಂತೆ ಸಾರ್ವಜನಿಕರಿಂದ ಯಾವುದೇ ಮನವಿಗಳು ಬಂದಿಲ್ಲ ಎಂಬುದನ್ನು ಒಪ್ಪಿಕೊಂಡಿದೆ.

- Advertisement -
- Advertisement -

ಈ ವರ್ಷದ ಆಗಸ್ಟ್‌ನಲ್ಲಿ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತದ ಪುರುಷರ ಹಾಕಿ ತಂಡ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದ ವೇಳೆ ನರೇಂದ್ರ ಮೋದಿ ಸರ್ಕಾರವು ಭಾರತದ ಅತ್ಯುನ್ನತ ಕ್ರೀಡಾ ಗೌರವವಾದ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ಇನ್ನು ಮುಂದೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಮರುನಾಮಕರಣ ಮಾಡಲಾಗುವುದು ಎಂದು ಘೋಷಿಸಿತು. ಈ ಸುದ್ದಿಯನ್ನು ಎಲ್ಲರಿಗಿಂತ ಮೊದಲು ಬ್ರೇಕ್ ಮಾಡಿದವರು ಬೇರ್ಯಾರು ಅಲ್ಲ ಸ್ವತಃ ಪ್ರಧಾನಿ ನರೇಂದ್ರ ಮೋದಿಯೇ ಆಗಿದ್ದರು.

ಆದರೆ ಕೂಡಲೇ ಈ ನಿರ್ಧಾರವು ವಿವಾದ ಹುಟ್ಟುಹಾಕಿತು. ಇದು ಕಾಂಗ್ರೆಸ್‌ಗೆ ಮಾಡುವ ಅವಮಾನ ಮತ್ತು ಕಾಂಗ್ರೆಸ್ ಸಾಧನೆಗಳನ್ನು ಅಳಿಸುವ ಗಿಮಿಕ್ ಎಂದು ಕೆಲವರು ಆರೋಪಿಸಿದರೆ, ಇನ್ನು ಕೆಲವರು ಇದನ್ನು ಕ್ರೀಡಾಪಟುವಿನ ಗೌರವಾರ್ಥವಾಗಿ ಸ್ವಾಗತಿಸಿದ್ದರು. ಇದೇ ಸಂದರ್ಭದಲ್ಲಿ ಮರುನಾಮಕರಣಕ್ಕಾಗಿ ಅನುಸರಿಸಿದ ಅಧಿಕೃತ ವಿಧಾನ ಮತ್ತು ನಿರ್ಧಾರವನ್ನು ಯಾವ ಆಧಾರದ ಮೇಲೆ ತೆಗೆದುಕೊಳ್ಳಲಾಗಿದೆ ಎಂಬುದರ ಕುರಿತು ಪ್ರಶ್ನೆಗಳು ಕೇಳಿಬಂದಿದ್ದವು.

ಆಗಸ್ಟ್ 6 ರಂದು ಟ್ವೀಟ್ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರು “ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್ ಚಂದ್ ಎಂದು ಮರುನಾಮಕರಣ ಮಾಡಲು ಭಾರತದಾದ್ಯಂತ ಅನೇಕರಿಂದ ಮನವಿಗಳನ್ನು ಪಡೆದಿದ್ದೇನೆ. ಅವರ ಭಾವನೆಯನ್ನು ಗೌರವಿಸಿ, ಈ ಮೂಲಕ ಖೇಲ್ ರತ್ನ ಪ್ರಶಸ್ತಿಯನ್ನು ಇನ್ನು ಮುಂದೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಕರೆಯಲಾಗುತ್ತದೆ” ಎಂದಿದ್ದರು.

ಆದರೆ ನರೇಂದ್ರ ಮೋದಿಯವರ ಪ್ರತಿಪಾದನೆಯಂತೆ ಪ್ರಶಸ್ತಿಯ ಹೆಸರು ಬದಲಾಯಿಸಲು ಬಂದ ಮನವಿಗಳ ಕುರಿತು ಒಂದೇ ಒಂದು ದಾಖಲೆಗಳನ್ನು ಒದಗಿಸಲು ಕ್ರೀಡಾ ಮತ್ತು ಯುವಜನ ಇಲಾಖೆಯು ವಿಫಲವಾಗಿದೆ ಎಂದು ದಿ ವೈರ್ ವರದಿ ಮಾಡಿದೆ. ಬದಲಿಗೆ ನರೇಂದ್ರ ಮೋದಿಯವರು ಟ್ವೀಟ್ ಮಾಡಿದ ನಂತರವೇ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ಮರುನಾಮಕರಣ ಮಾಡಲು ಸಚಿವಾಲಯ ನಿರ್ಧರಿಸಿದೆ ಮತ್ತು ಅಧಿಕಾರಿಗಳು ತರಾತುರಿಯಲ್ಲಿ ಸುತ್ತೋಲೆ ಹೊರಡಿಸಿದ್ದಾರೆ ಎಂದು ವೈರ್ ಆರೋಪಿಸಿದೆ.

ಈ ಕುರಿತು ಎಷ್ಟು ಜನರು ಮನವಿ ಸಲ್ಲಿಸಿದ್ದಾರೆ? ಅದರ ಪ್ರತಿಗಳನ್ನು ನೀಡಿ ಎಂದು ದಿ ವೈರ್ ಸಲ್ಲಿಸಿದ ಆರ್‌ಟಿಐ ಪ್ರಶ್ನೆಗೆ ಉತ್ತರಿಸಿರುವ ಸಚಿವಾಲಯವು ಪ್ರಶಸ್ತಿಯ ಹೆಸರು ಬದಲಾಯಿಸುವಂತೆ ಸಾರ್ವಜನಿಕರಿಂದ ಯಾವುದೇ ಮನವಿಗಳು ಬಂದಿಲ್ಲ ಎಂಬುದನ್ನು ಒಪ್ಪಿಕೊಂಡಿದೆ. ಪ್ರಧಾನ ಮಂತ್ರಿಗೆ ಬರೆಯಲಾದ ಯಾವುದೇ ಪತ್ರವನ್ನು ಅದರ ವಿಷಯದ ಆಧಾರದ ಮೇಲೆ ವಿಲೇವಾರಿ ಮಾಡಲು ಸಂಬಂಧಿಸಿದ ಸಚಿವಾಲಯ ಅಥವಾ ಇಲಾಖೆಗೆ ವರ್ಗಾಯಿಸಲಾಗುತ್ತದೆ.

ಅಲ್ಲದೇ ಸಚಿವಾಲಯವು ನಿರ್ಧಾರಕ್ಕೆ ಬರವು ಮೊದಲು ಈ ವಿಷಯಕ್ಕೆ ಸಂಬಂಧಿಸಿದ್ದ ಪಾಲುದಾರರ ಜೊತೆ ಚರ್ಚಿಸಿಲ್ಲ. ಕೇವಲ ಪ್ರಧಾನಿಯವರ ಟ್ವೀಟ್ ನಂತರ ಹೆಸರು ಬದಲಿಸಿದೆ. ಇನ್ನು ಸರಳವಾಗಿ ಹೇಳಬೇಕೆಂದರೆ ಮೊದಲು ಟ್ವೀಟ್ ಮಾಡಿದ ನಂತರವೆ ಪ್ರಶಸ್ತಿಯ ಹೆಸರು ಬದಲಿಸಲಾಗಿದೆ!

ಮೂರು ಬಾರಿ ಒಲಿಂಪಿಕ್ ಚಿನ್ನದ ಪದಕ ವಿಜೇತ, ಮೇಜರ್ ಧ್ಯಾನ್ ಚಂದ್ ಅವರು ದೇಶದ ಶ್ರೇಷ್ಠ ಹಾಕಿ ಆಟಗಾರ ಎಂದು ಪರಿಗಣಿಸಲ್ಪಟ್ಟಿದ್ದಾರೆ. ಅವರ ಜನ್ಮದಿನವಾದ ಆಗಸ್ಟ್ 29 ರಂದು ಭಾರತದ ರಾಷ್ಟ್ರೀಯ ಕ್ರೀಡಾ ದಿನವಾಗಿ ಆಚರಿಸಲಾಗುತ್ತದೆ. ಪ್ರತಿ ವರ್ಷ ಈ ದಿನದಂದು ದೇಶದ ಅತ್ಯುನ್ನತ ಕ್ರೀಡಾ ಗೌರವಗಳಾದ ರಾಜೀವ್ ಗಾಂಧಿ ಖೇಲ್‌ ರತ್ನ, ಅರ್ಜುನ ಮತ್ತು ದ್ರೋಣಾಚಾರ್ಯ ಪ್ರಶಸ್ತಿಗಳನ್ನು ವಿತರಿಸಲಾಗುತ್ತದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ರಾಯಚೂರಿನಲ್ಲಿ ಮಸೀದಿ ಕೆಡವಿದಾಗ ದೇವಾಲಯ ಪತ್ತೆಯಾಯಿತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...