Homeಮುಖಪುಟಖೇಲ್ ರತ್ನ ಪ್ರಶಸ್ತಿಯ ಮರುನಾಮಕರಣವಾಗಿದ್ದು ಮೋದಿಯವರ ಟ್ವೀಟ್‌ನಿಂದ ಹೊರತು ಸಾರ್ವಜನಿಕ ಮನವಿಯಿಂದಲ್ಲ!

ಖೇಲ್ ರತ್ನ ಪ್ರಶಸ್ತಿಯ ಮರುನಾಮಕರಣವಾಗಿದ್ದು ಮೋದಿಯವರ ಟ್ವೀಟ್‌ನಿಂದ ಹೊರತು ಸಾರ್ವಜನಿಕ ಮನವಿಯಿಂದಲ್ಲ!

ಆರ್‌ಟಿಐ ಪ್ರಶ್ನೆಗೆ ಉತ್ತರಿಸಿರುವ ಸಚಿವಾಲಯವು ಪ್ರಶಸ್ತಿಯ ಹೆಸರು ಬದಲಾಯಿಸುವಂತೆ ಸಾರ್ವಜನಿಕರಿಂದ ಯಾವುದೇ ಮನವಿಗಳು ಬಂದಿಲ್ಲ ಎಂಬುದನ್ನು ಒಪ್ಪಿಕೊಂಡಿದೆ.

- Advertisement -
- Advertisement -

ಈ ವರ್ಷದ ಆಗಸ್ಟ್‌ನಲ್ಲಿ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತದ ಪುರುಷರ ಹಾಕಿ ತಂಡ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದ ವೇಳೆ ನರೇಂದ್ರ ಮೋದಿ ಸರ್ಕಾರವು ಭಾರತದ ಅತ್ಯುನ್ನತ ಕ್ರೀಡಾ ಗೌರವವಾದ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ಇನ್ನು ಮುಂದೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಮರುನಾಮಕರಣ ಮಾಡಲಾಗುವುದು ಎಂದು ಘೋಷಿಸಿತು. ಈ ಸುದ್ದಿಯನ್ನು ಎಲ್ಲರಿಗಿಂತ ಮೊದಲು ಬ್ರೇಕ್ ಮಾಡಿದವರು ಬೇರ್ಯಾರು ಅಲ್ಲ ಸ್ವತಃ ಪ್ರಧಾನಿ ನರೇಂದ್ರ ಮೋದಿಯೇ ಆಗಿದ್ದರು.

ಆದರೆ ಕೂಡಲೇ ಈ ನಿರ್ಧಾರವು ವಿವಾದ ಹುಟ್ಟುಹಾಕಿತು. ಇದು ಕಾಂಗ್ರೆಸ್‌ಗೆ ಮಾಡುವ ಅವಮಾನ ಮತ್ತು ಕಾಂಗ್ರೆಸ್ ಸಾಧನೆಗಳನ್ನು ಅಳಿಸುವ ಗಿಮಿಕ್ ಎಂದು ಕೆಲವರು ಆರೋಪಿಸಿದರೆ, ಇನ್ನು ಕೆಲವರು ಇದನ್ನು ಕ್ರೀಡಾಪಟುವಿನ ಗೌರವಾರ್ಥವಾಗಿ ಸ್ವಾಗತಿಸಿದ್ದರು. ಇದೇ ಸಂದರ್ಭದಲ್ಲಿ ಮರುನಾಮಕರಣಕ್ಕಾಗಿ ಅನುಸರಿಸಿದ ಅಧಿಕೃತ ವಿಧಾನ ಮತ್ತು ನಿರ್ಧಾರವನ್ನು ಯಾವ ಆಧಾರದ ಮೇಲೆ ತೆಗೆದುಕೊಳ್ಳಲಾಗಿದೆ ಎಂಬುದರ ಕುರಿತು ಪ್ರಶ್ನೆಗಳು ಕೇಳಿಬಂದಿದ್ದವು.

ಆಗಸ್ಟ್ 6 ರಂದು ಟ್ವೀಟ್ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರು “ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್ ಚಂದ್ ಎಂದು ಮರುನಾಮಕರಣ ಮಾಡಲು ಭಾರತದಾದ್ಯಂತ ಅನೇಕರಿಂದ ಮನವಿಗಳನ್ನು ಪಡೆದಿದ್ದೇನೆ. ಅವರ ಭಾವನೆಯನ್ನು ಗೌರವಿಸಿ, ಈ ಮೂಲಕ ಖೇಲ್ ರತ್ನ ಪ್ರಶಸ್ತಿಯನ್ನು ಇನ್ನು ಮುಂದೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಕರೆಯಲಾಗುತ್ತದೆ” ಎಂದಿದ್ದರು.

ಆದರೆ ನರೇಂದ್ರ ಮೋದಿಯವರ ಪ್ರತಿಪಾದನೆಯಂತೆ ಪ್ರಶಸ್ತಿಯ ಹೆಸರು ಬದಲಾಯಿಸಲು ಬಂದ ಮನವಿಗಳ ಕುರಿತು ಒಂದೇ ಒಂದು ದಾಖಲೆಗಳನ್ನು ಒದಗಿಸಲು ಕ್ರೀಡಾ ಮತ್ತು ಯುವಜನ ಇಲಾಖೆಯು ವಿಫಲವಾಗಿದೆ ಎಂದು ದಿ ವೈರ್ ವರದಿ ಮಾಡಿದೆ. ಬದಲಿಗೆ ನರೇಂದ್ರ ಮೋದಿಯವರು ಟ್ವೀಟ್ ಮಾಡಿದ ನಂತರವೇ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ಮರುನಾಮಕರಣ ಮಾಡಲು ಸಚಿವಾಲಯ ನಿರ್ಧರಿಸಿದೆ ಮತ್ತು ಅಧಿಕಾರಿಗಳು ತರಾತುರಿಯಲ್ಲಿ ಸುತ್ತೋಲೆ ಹೊರಡಿಸಿದ್ದಾರೆ ಎಂದು ವೈರ್ ಆರೋಪಿಸಿದೆ.

ಈ ಕುರಿತು ಎಷ್ಟು ಜನರು ಮನವಿ ಸಲ್ಲಿಸಿದ್ದಾರೆ? ಅದರ ಪ್ರತಿಗಳನ್ನು ನೀಡಿ ಎಂದು ದಿ ವೈರ್ ಸಲ್ಲಿಸಿದ ಆರ್‌ಟಿಐ ಪ್ರಶ್ನೆಗೆ ಉತ್ತರಿಸಿರುವ ಸಚಿವಾಲಯವು ಪ್ರಶಸ್ತಿಯ ಹೆಸರು ಬದಲಾಯಿಸುವಂತೆ ಸಾರ್ವಜನಿಕರಿಂದ ಯಾವುದೇ ಮನವಿಗಳು ಬಂದಿಲ್ಲ ಎಂಬುದನ್ನು ಒಪ್ಪಿಕೊಂಡಿದೆ. ಪ್ರಧಾನ ಮಂತ್ರಿಗೆ ಬರೆಯಲಾದ ಯಾವುದೇ ಪತ್ರವನ್ನು ಅದರ ವಿಷಯದ ಆಧಾರದ ಮೇಲೆ ವಿಲೇವಾರಿ ಮಾಡಲು ಸಂಬಂಧಿಸಿದ ಸಚಿವಾಲಯ ಅಥವಾ ಇಲಾಖೆಗೆ ವರ್ಗಾಯಿಸಲಾಗುತ್ತದೆ.

ಅಲ್ಲದೇ ಸಚಿವಾಲಯವು ನಿರ್ಧಾರಕ್ಕೆ ಬರವು ಮೊದಲು ಈ ವಿಷಯಕ್ಕೆ ಸಂಬಂಧಿಸಿದ್ದ ಪಾಲುದಾರರ ಜೊತೆ ಚರ್ಚಿಸಿಲ್ಲ. ಕೇವಲ ಪ್ರಧಾನಿಯವರ ಟ್ವೀಟ್ ನಂತರ ಹೆಸರು ಬದಲಿಸಿದೆ. ಇನ್ನು ಸರಳವಾಗಿ ಹೇಳಬೇಕೆಂದರೆ ಮೊದಲು ಟ್ವೀಟ್ ಮಾಡಿದ ನಂತರವೆ ಪ್ರಶಸ್ತಿಯ ಹೆಸರು ಬದಲಿಸಲಾಗಿದೆ!

ಮೂರು ಬಾರಿ ಒಲಿಂಪಿಕ್ ಚಿನ್ನದ ಪದಕ ವಿಜೇತ, ಮೇಜರ್ ಧ್ಯಾನ್ ಚಂದ್ ಅವರು ದೇಶದ ಶ್ರೇಷ್ಠ ಹಾಕಿ ಆಟಗಾರ ಎಂದು ಪರಿಗಣಿಸಲ್ಪಟ್ಟಿದ್ದಾರೆ. ಅವರ ಜನ್ಮದಿನವಾದ ಆಗಸ್ಟ್ 29 ರಂದು ಭಾರತದ ರಾಷ್ಟ್ರೀಯ ಕ್ರೀಡಾ ದಿನವಾಗಿ ಆಚರಿಸಲಾಗುತ್ತದೆ. ಪ್ರತಿ ವರ್ಷ ಈ ದಿನದಂದು ದೇಶದ ಅತ್ಯುನ್ನತ ಕ್ರೀಡಾ ಗೌರವಗಳಾದ ರಾಜೀವ್ ಗಾಂಧಿ ಖೇಲ್‌ ರತ್ನ, ಅರ್ಜುನ ಮತ್ತು ದ್ರೋಣಾಚಾರ್ಯ ಪ್ರಶಸ್ತಿಗಳನ್ನು ವಿತರಿಸಲಾಗುತ್ತದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ರಾಯಚೂರಿನಲ್ಲಿ ಮಸೀದಿ ಕೆಡವಿದಾಗ ದೇವಾಲಯ ಪತ್ತೆಯಾಯಿತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...