Homeಮುಖಪುಟಖೇಲ್ ರತ್ನ ಪ್ರಶಸ್ತಿಯ ಮರುನಾಮಕರಣವಾಗಿದ್ದು ಮೋದಿಯವರ ಟ್ವೀಟ್‌ನಿಂದ ಹೊರತು ಸಾರ್ವಜನಿಕ ಮನವಿಯಿಂದಲ್ಲ!

ಖೇಲ್ ರತ್ನ ಪ್ರಶಸ್ತಿಯ ಮರುನಾಮಕರಣವಾಗಿದ್ದು ಮೋದಿಯವರ ಟ್ವೀಟ್‌ನಿಂದ ಹೊರತು ಸಾರ್ವಜನಿಕ ಮನವಿಯಿಂದಲ್ಲ!

ಆರ್‌ಟಿಐ ಪ್ರಶ್ನೆಗೆ ಉತ್ತರಿಸಿರುವ ಸಚಿವಾಲಯವು ಪ್ರಶಸ್ತಿಯ ಹೆಸರು ಬದಲಾಯಿಸುವಂತೆ ಸಾರ್ವಜನಿಕರಿಂದ ಯಾವುದೇ ಮನವಿಗಳು ಬಂದಿಲ್ಲ ಎಂಬುದನ್ನು ಒಪ್ಪಿಕೊಂಡಿದೆ.

- Advertisement -
- Advertisement -

ಈ ವರ್ಷದ ಆಗಸ್ಟ್‌ನಲ್ಲಿ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತದ ಪುರುಷರ ಹಾಕಿ ತಂಡ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದ ವೇಳೆ ನರೇಂದ್ರ ಮೋದಿ ಸರ್ಕಾರವು ಭಾರತದ ಅತ್ಯುನ್ನತ ಕ್ರೀಡಾ ಗೌರವವಾದ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ಇನ್ನು ಮುಂದೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಮರುನಾಮಕರಣ ಮಾಡಲಾಗುವುದು ಎಂದು ಘೋಷಿಸಿತು. ಈ ಸುದ್ದಿಯನ್ನು ಎಲ್ಲರಿಗಿಂತ ಮೊದಲು ಬ್ರೇಕ್ ಮಾಡಿದವರು ಬೇರ್ಯಾರು ಅಲ್ಲ ಸ್ವತಃ ಪ್ರಧಾನಿ ನರೇಂದ್ರ ಮೋದಿಯೇ ಆಗಿದ್ದರು.

ಆದರೆ ಕೂಡಲೇ ಈ ನಿರ್ಧಾರವು ವಿವಾದ ಹುಟ್ಟುಹಾಕಿತು. ಇದು ಕಾಂಗ್ರೆಸ್‌ಗೆ ಮಾಡುವ ಅವಮಾನ ಮತ್ತು ಕಾಂಗ್ರೆಸ್ ಸಾಧನೆಗಳನ್ನು ಅಳಿಸುವ ಗಿಮಿಕ್ ಎಂದು ಕೆಲವರು ಆರೋಪಿಸಿದರೆ, ಇನ್ನು ಕೆಲವರು ಇದನ್ನು ಕ್ರೀಡಾಪಟುವಿನ ಗೌರವಾರ್ಥವಾಗಿ ಸ್ವಾಗತಿಸಿದ್ದರು. ಇದೇ ಸಂದರ್ಭದಲ್ಲಿ ಮರುನಾಮಕರಣಕ್ಕಾಗಿ ಅನುಸರಿಸಿದ ಅಧಿಕೃತ ವಿಧಾನ ಮತ್ತು ನಿರ್ಧಾರವನ್ನು ಯಾವ ಆಧಾರದ ಮೇಲೆ ತೆಗೆದುಕೊಳ್ಳಲಾಗಿದೆ ಎಂಬುದರ ಕುರಿತು ಪ್ರಶ್ನೆಗಳು ಕೇಳಿಬಂದಿದ್ದವು.

ಆಗಸ್ಟ್ 6 ರಂದು ಟ್ವೀಟ್ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರು “ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್ ಚಂದ್ ಎಂದು ಮರುನಾಮಕರಣ ಮಾಡಲು ಭಾರತದಾದ್ಯಂತ ಅನೇಕರಿಂದ ಮನವಿಗಳನ್ನು ಪಡೆದಿದ್ದೇನೆ. ಅವರ ಭಾವನೆಯನ್ನು ಗೌರವಿಸಿ, ಈ ಮೂಲಕ ಖೇಲ್ ರತ್ನ ಪ್ರಶಸ್ತಿಯನ್ನು ಇನ್ನು ಮುಂದೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಕರೆಯಲಾಗುತ್ತದೆ” ಎಂದಿದ್ದರು.

ಆದರೆ ನರೇಂದ್ರ ಮೋದಿಯವರ ಪ್ರತಿಪಾದನೆಯಂತೆ ಪ್ರಶಸ್ತಿಯ ಹೆಸರು ಬದಲಾಯಿಸಲು ಬಂದ ಮನವಿಗಳ ಕುರಿತು ಒಂದೇ ಒಂದು ದಾಖಲೆಗಳನ್ನು ಒದಗಿಸಲು ಕ್ರೀಡಾ ಮತ್ತು ಯುವಜನ ಇಲಾಖೆಯು ವಿಫಲವಾಗಿದೆ ಎಂದು ದಿ ವೈರ್ ವರದಿ ಮಾಡಿದೆ. ಬದಲಿಗೆ ನರೇಂದ್ರ ಮೋದಿಯವರು ಟ್ವೀಟ್ ಮಾಡಿದ ನಂತರವೇ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ಮರುನಾಮಕರಣ ಮಾಡಲು ಸಚಿವಾಲಯ ನಿರ್ಧರಿಸಿದೆ ಮತ್ತು ಅಧಿಕಾರಿಗಳು ತರಾತುರಿಯಲ್ಲಿ ಸುತ್ತೋಲೆ ಹೊರಡಿಸಿದ್ದಾರೆ ಎಂದು ವೈರ್ ಆರೋಪಿಸಿದೆ.

ಈ ಕುರಿತು ಎಷ್ಟು ಜನರು ಮನವಿ ಸಲ್ಲಿಸಿದ್ದಾರೆ? ಅದರ ಪ್ರತಿಗಳನ್ನು ನೀಡಿ ಎಂದು ದಿ ವೈರ್ ಸಲ್ಲಿಸಿದ ಆರ್‌ಟಿಐ ಪ್ರಶ್ನೆಗೆ ಉತ್ತರಿಸಿರುವ ಸಚಿವಾಲಯವು ಪ್ರಶಸ್ತಿಯ ಹೆಸರು ಬದಲಾಯಿಸುವಂತೆ ಸಾರ್ವಜನಿಕರಿಂದ ಯಾವುದೇ ಮನವಿಗಳು ಬಂದಿಲ್ಲ ಎಂಬುದನ್ನು ಒಪ್ಪಿಕೊಂಡಿದೆ. ಪ್ರಧಾನ ಮಂತ್ರಿಗೆ ಬರೆಯಲಾದ ಯಾವುದೇ ಪತ್ರವನ್ನು ಅದರ ವಿಷಯದ ಆಧಾರದ ಮೇಲೆ ವಿಲೇವಾರಿ ಮಾಡಲು ಸಂಬಂಧಿಸಿದ ಸಚಿವಾಲಯ ಅಥವಾ ಇಲಾಖೆಗೆ ವರ್ಗಾಯಿಸಲಾಗುತ್ತದೆ.

ಅಲ್ಲದೇ ಸಚಿವಾಲಯವು ನಿರ್ಧಾರಕ್ಕೆ ಬರವು ಮೊದಲು ಈ ವಿಷಯಕ್ಕೆ ಸಂಬಂಧಿಸಿದ್ದ ಪಾಲುದಾರರ ಜೊತೆ ಚರ್ಚಿಸಿಲ್ಲ. ಕೇವಲ ಪ್ರಧಾನಿಯವರ ಟ್ವೀಟ್ ನಂತರ ಹೆಸರು ಬದಲಿಸಿದೆ. ಇನ್ನು ಸರಳವಾಗಿ ಹೇಳಬೇಕೆಂದರೆ ಮೊದಲು ಟ್ವೀಟ್ ಮಾಡಿದ ನಂತರವೆ ಪ್ರಶಸ್ತಿಯ ಹೆಸರು ಬದಲಿಸಲಾಗಿದೆ!

ಮೂರು ಬಾರಿ ಒಲಿಂಪಿಕ್ ಚಿನ್ನದ ಪದಕ ವಿಜೇತ, ಮೇಜರ್ ಧ್ಯಾನ್ ಚಂದ್ ಅವರು ದೇಶದ ಶ್ರೇಷ್ಠ ಹಾಕಿ ಆಟಗಾರ ಎಂದು ಪರಿಗಣಿಸಲ್ಪಟ್ಟಿದ್ದಾರೆ. ಅವರ ಜನ್ಮದಿನವಾದ ಆಗಸ್ಟ್ 29 ರಂದು ಭಾರತದ ರಾಷ್ಟ್ರೀಯ ಕ್ರೀಡಾ ದಿನವಾಗಿ ಆಚರಿಸಲಾಗುತ್ತದೆ. ಪ್ರತಿ ವರ್ಷ ಈ ದಿನದಂದು ದೇಶದ ಅತ್ಯುನ್ನತ ಕ್ರೀಡಾ ಗೌರವಗಳಾದ ರಾಜೀವ್ ಗಾಂಧಿ ಖೇಲ್‌ ರತ್ನ, ಅರ್ಜುನ ಮತ್ತು ದ್ರೋಣಾಚಾರ್ಯ ಪ್ರಶಸ್ತಿಗಳನ್ನು ವಿತರಿಸಲಾಗುತ್ತದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ರಾಯಚೂರಿನಲ್ಲಿ ಮಸೀದಿ ಕೆಡವಿದಾಗ ದೇವಾಲಯ ಪತ್ತೆಯಾಯಿತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...