Homeಮುಖಪುಟಖೇಲ್ ರತ್ನ ಪ್ರಶಸ್ತಿಯ ಮರುನಾಮಕರಣವಾಗಿದ್ದು ಮೋದಿಯವರ ಟ್ವೀಟ್‌ನಿಂದ ಹೊರತು ಸಾರ್ವಜನಿಕ ಮನವಿಯಿಂದಲ್ಲ!

ಖೇಲ್ ರತ್ನ ಪ್ರಶಸ್ತಿಯ ಮರುನಾಮಕರಣವಾಗಿದ್ದು ಮೋದಿಯವರ ಟ್ವೀಟ್‌ನಿಂದ ಹೊರತು ಸಾರ್ವಜನಿಕ ಮನವಿಯಿಂದಲ್ಲ!

ಆರ್‌ಟಿಐ ಪ್ರಶ್ನೆಗೆ ಉತ್ತರಿಸಿರುವ ಸಚಿವಾಲಯವು ಪ್ರಶಸ್ತಿಯ ಹೆಸರು ಬದಲಾಯಿಸುವಂತೆ ಸಾರ್ವಜನಿಕರಿಂದ ಯಾವುದೇ ಮನವಿಗಳು ಬಂದಿಲ್ಲ ಎಂಬುದನ್ನು ಒಪ್ಪಿಕೊಂಡಿದೆ.

- Advertisement -
- Advertisement -

ಈ ವರ್ಷದ ಆಗಸ್ಟ್‌ನಲ್ಲಿ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತದ ಪುರುಷರ ಹಾಕಿ ತಂಡ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದ ವೇಳೆ ನರೇಂದ್ರ ಮೋದಿ ಸರ್ಕಾರವು ಭಾರತದ ಅತ್ಯುನ್ನತ ಕ್ರೀಡಾ ಗೌರವವಾದ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ಇನ್ನು ಮುಂದೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಮರುನಾಮಕರಣ ಮಾಡಲಾಗುವುದು ಎಂದು ಘೋಷಿಸಿತು. ಈ ಸುದ್ದಿಯನ್ನು ಎಲ್ಲರಿಗಿಂತ ಮೊದಲು ಬ್ರೇಕ್ ಮಾಡಿದವರು ಬೇರ್ಯಾರು ಅಲ್ಲ ಸ್ವತಃ ಪ್ರಧಾನಿ ನರೇಂದ್ರ ಮೋದಿಯೇ ಆಗಿದ್ದರು.

ಆದರೆ ಕೂಡಲೇ ಈ ನಿರ್ಧಾರವು ವಿವಾದ ಹುಟ್ಟುಹಾಕಿತು. ಇದು ಕಾಂಗ್ರೆಸ್‌ಗೆ ಮಾಡುವ ಅವಮಾನ ಮತ್ತು ಕಾಂಗ್ರೆಸ್ ಸಾಧನೆಗಳನ್ನು ಅಳಿಸುವ ಗಿಮಿಕ್ ಎಂದು ಕೆಲವರು ಆರೋಪಿಸಿದರೆ, ಇನ್ನು ಕೆಲವರು ಇದನ್ನು ಕ್ರೀಡಾಪಟುವಿನ ಗೌರವಾರ್ಥವಾಗಿ ಸ್ವಾಗತಿಸಿದ್ದರು. ಇದೇ ಸಂದರ್ಭದಲ್ಲಿ ಮರುನಾಮಕರಣಕ್ಕಾಗಿ ಅನುಸರಿಸಿದ ಅಧಿಕೃತ ವಿಧಾನ ಮತ್ತು ನಿರ್ಧಾರವನ್ನು ಯಾವ ಆಧಾರದ ಮೇಲೆ ತೆಗೆದುಕೊಳ್ಳಲಾಗಿದೆ ಎಂಬುದರ ಕುರಿತು ಪ್ರಶ್ನೆಗಳು ಕೇಳಿಬಂದಿದ್ದವು.

ಆಗಸ್ಟ್ 6 ರಂದು ಟ್ವೀಟ್ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರು “ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್ ಚಂದ್ ಎಂದು ಮರುನಾಮಕರಣ ಮಾಡಲು ಭಾರತದಾದ್ಯಂತ ಅನೇಕರಿಂದ ಮನವಿಗಳನ್ನು ಪಡೆದಿದ್ದೇನೆ. ಅವರ ಭಾವನೆಯನ್ನು ಗೌರವಿಸಿ, ಈ ಮೂಲಕ ಖೇಲ್ ರತ್ನ ಪ್ರಶಸ್ತಿಯನ್ನು ಇನ್ನು ಮುಂದೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಕರೆಯಲಾಗುತ್ತದೆ” ಎಂದಿದ್ದರು.

ಆದರೆ ನರೇಂದ್ರ ಮೋದಿಯವರ ಪ್ರತಿಪಾದನೆಯಂತೆ ಪ್ರಶಸ್ತಿಯ ಹೆಸರು ಬದಲಾಯಿಸಲು ಬಂದ ಮನವಿಗಳ ಕುರಿತು ಒಂದೇ ಒಂದು ದಾಖಲೆಗಳನ್ನು ಒದಗಿಸಲು ಕ್ರೀಡಾ ಮತ್ತು ಯುವಜನ ಇಲಾಖೆಯು ವಿಫಲವಾಗಿದೆ ಎಂದು ದಿ ವೈರ್ ವರದಿ ಮಾಡಿದೆ. ಬದಲಿಗೆ ನರೇಂದ್ರ ಮೋದಿಯವರು ಟ್ವೀಟ್ ಮಾಡಿದ ನಂತರವೇ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ಮರುನಾಮಕರಣ ಮಾಡಲು ಸಚಿವಾಲಯ ನಿರ್ಧರಿಸಿದೆ ಮತ್ತು ಅಧಿಕಾರಿಗಳು ತರಾತುರಿಯಲ್ಲಿ ಸುತ್ತೋಲೆ ಹೊರಡಿಸಿದ್ದಾರೆ ಎಂದು ವೈರ್ ಆರೋಪಿಸಿದೆ.

ಈ ಕುರಿತು ಎಷ್ಟು ಜನರು ಮನವಿ ಸಲ್ಲಿಸಿದ್ದಾರೆ? ಅದರ ಪ್ರತಿಗಳನ್ನು ನೀಡಿ ಎಂದು ದಿ ವೈರ್ ಸಲ್ಲಿಸಿದ ಆರ್‌ಟಿಐ ಪ್ರಶ್ನೆಗೆ ಉತ್ತರಿಸಿರುವ ಸಚಿವಾಲಯವು ಪ್ರಶಸ್ತಿಯ ಹೆಸರು ಬದಲಾಯಿಸುವಂತೆ ಸಾರ್ವಜನಿಕರಿಂದ ಯಾವುದೇ ಮನವಿಗಳು ಬಂದಿಲ್ಲ ಎಂಬುದನ್ನು ಒಪ್ಪಿಕೊಂಡಿದೆ. ಪ್ರಧಾನ ಮಂತ್ರಿಗೆ ಬರೆಯಲಾದ ಯಾವುದೇ ಪತ್ರವನ್ನು ಅದರ ವಿಷಯದ ಆಧಾರದ ಮೇಲೆ ವಿಲೇವಾರಿ ಮಾಡಲು ಸಂಬಂಧಿಸಿದ ಸಚಿವಾಲಯ ಅಥವಾ ಇಲಾಖೆಗೆ ವರ್ಗಾಯಿಸಲಾಗುತ್ತದೆ.

ಅಲ್ಲದೇ ಸಚಿವಾಲಯವು ನಿರ್ಧಾರಕ್ಕೆ ಬರವು ಮೊದಲು ಈ ವಿಷಯಕ್ಕೆ ಸಂಬಂಧಿಸಿದ್ದ ಪಾಲುದಾರರ ಜೊತೆ ಚರ್ಚಿಸಿಲ್ಲ. ಕೇವಲ ಪ್ರಧಾನಿಯವರ ಟ್ವೀಟ್ ನಂತರ ಹೆಸರು ಬದಲಿಸಿದೆ. ಇನ್ನು ಸರಳವಾಗಿ ಹೇಳಬೇಕೆಂದರೆ ಮೊದಲು ಟ್ವೀಟ್ ಮಾಡಿದ ನಂತರವೆ ಪ್ರಶಸ್ತಿಯ ಹೆಸರು ಬದಲಿಸಲಾಗಿದೆ!

ಮೂರು ಬಾರಿ ಒಲಿಂಪಿಕ್ ಚಿನ್ನದ ಪದಕ ವಿಜೇತ, ಮೇಜರ್ ಧ್ಯಾನ್ ಚಂದ್ ಅವರು ದೇಶದ ಶ್ರೇಷ್ಠ ಹಾಕಿ ಆಟಗಾರ ಎಂದು ಪರಿಗಣಿಸಲ್ಪಟ್ಟಿದ್ದಾರೆ. ಅವರ ಜನ್ಮದಿನವಾದ ಆಗಸ್ಟ್ 29 ರಂದು ಭಾರತದ ರಾಷ್ಟ್ರೀಯ ಕ್ರೀಡಾ ದಿನವಾಗಿ ಆಚರಿಸಲಾಗುತ್ತದೆ. ಪ್ರತಿ ವರ್ಷ ಈ ದಿನದಂದು ದೇಶದ ಅತ್ಯುನ್ನತ ಕ್ರೀಡಾ ಗೌರವಗಳಾದ ರಾಜೀವ್ ಗಾಂಧಿ ಖೇಲ್‌ ರತ್ನ, ಅರ್ಜುನ ಮತ್ತು ದ್ರೋಣಾಚಾರ್ಯ ಪ್ರಶಸ್ತಿಗಳನ್ನು ವಿತರಿಸಲಾಗುತ್ತದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ರಾಯಚೂರಿನಲ್ಲಿ ಮಸೀದಿ ಕೆಡವಿದಾಗ ದೇವಾಲಯ ಪತ್ತೆಯಾಯಿತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...