Homeಮುಖಪುಟಖೇಲ್ ರತ್ನ ಪ್ರಶಸ್ತಿಯ ಮರುನಾಮಕರಣವಾಗಿದ್ದು ಮೋದಿಯವರ ಟ್ವೀಟ್‌ನಿಂದ ಹೊರತು ಸಾರ್ವಜನಿಕ ಮನವಿಯಿಂದಲ್ಲ!

ಖೇಲ್ ರತ್ನ ಪ್ರಶಸ್ತಿಯ ಮರುನಾಮಕರಣವಾಗಿದ್ದು ಮೋದಿಯವರ ಟ್ವೀಟ್‌ನಿಂದ ಹೊರತು ಸಾರ್ವಜನಿಕ ಮನವಿಯಿಂದಲ್ಲ!

ಆರ್‌ಟಿಐ ಪ್ರಶ್ನೆಗೆ ಉತ್ತರಿಸಿರುವ ಸಚಿವಾಲಯವು ಪ್ರಶಸ್ತಿಯ ಹೆಸರು ಬದಲಾಯಿಸುವಂತೆ ಸಾರ್ವಜನಿಕರಿಂದ ಯಾವುದೇ ಮನವಿಗಳು ಬಂದಿಲ್ಲ ಎಂಬುದನ್ನು ಒಪ್ಪಿಕೊಂಡಿದೆ.

- Advertisement -
- Advertisement -

ಈ ವರ್ಷದ ಆಗಸ್ಟ್‌ನಲ್ಲಿ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತದ ಪುರುಷರ ಹಾಕಿ ತಂಡ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದ ವೇಳೆ ನರೇಂದ್ರ ಮೋದಿ ಸರ್ಕಾರವು ಭಾರತದ ಅತ್ಯುನ್ನತ ಕ್ರೀಡಾ ಗೌರವವಾದ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ಇನ್ನು ಮುಂದೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಮರುನಾಮಕರಣ ಮಾಡಲಾಗುವುದು ಎಂದು ಘೋಷಿಸಿತು. ಈ ಸುದ್ದಿಯನ್ನು ಎಲ್ಲರಿಗಿಂತ ಮೊದಲು ಬ್ರೇಕ್ ಮಾಡಿದವರು ಬೇರ್ಯಾರು ಅಲ್ಲ ಸ್ವತಃ ಪ್ರಧಾನಿ ನರೇಂದ್ರ ಮೋದಿಯೇ ಆಗಿದ್ದರು.

ಆದರೆ ಕೂಡಲೇ ಈ ನಿರ್ಧಾರವು ವಿವಾದ ಹುಟ್ಟುಹಾಕಿತು. ಇದು ಕಾಂಗ್ರೆಸ್‌ಗೆ ಮಾಡುವ ಅವಮಾನ ಮತ್ತು ಕಾಂಗ್ರೆಸ್ ಸಾಧನೆಗಳನ್ನು ಅಳಿಸುವ ಗಿಮಿಕ್ ಎಂದು ಕೆಲವರು ಆರೋಪಿಸಿದರೆ, ಇನ್ನು ಕೆಲವರು ಇದನ್ನು ಕ್ರೀಡಾಪಟುವಿನ ಗೌರವಾರ್ಥವಾಗಿ ಸ್ವಾಗತಿಸಿದ್ದರು. ಇದೇ ಸಂದರ್ಭದಲ್ಲಿ ಮರುನಾಮಕರಣಕ್ಕಾಗಿ ಅನುಸರಿಸಿದ ಅಧಿಕೃತ ವಿಧಾನ ಮತ್ತು ನಿರ್ಧಾರವನ್ನು ಯಾವ ಆಧಾರದ ಮೇಲೆ ತೆಗೆದುಕೊಳ್ಳಲಾಗಿದೆ ಎಂಬುದರ ಕುರಿತು ಪ್ರಶ್ನೆಗಳು ಕೇಳಿಬಂದಿದ್ದವು.

ಆಗಸ್ಟ್ 6 ರಂದು ಟ್ವೀಟ್ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರು “ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್ ಚಂದ್ ಎಂದು ಮರುನಾಮಕರಣ ಮಾಡಲು ಭಾರತದಾದ್ಯಂತ ಅನೇಕರಿಂದ ಮನವಿಗಳನ್ನು ಪಡೆದಿದ್ದೇನೆ. ಅವರ ಭಾವನೆಯನ್ನು ಗೌರವಿಸಿ, ಈ ಮೂಲಕ ಖೇಲ್ ರತ್ನ ಪ್ರಶಸ್ತಿಯನ್ನು ಇನ್ನು ಮುಂದೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಕರೆಯಲಾಗುತ್ತದೆ” ಎಂದಿದ್ದರು.

ಆದರೆ ನರೇಂದ್ರ ಮೋದಿಯವರ ಪ್ರತಿಪಾದನೆಯಂತೆ ಪ್ರಶಸ್ತಿಯ ಹೆಸರು ಬದಲಾಯಿಸಲು ಬಂದ ಮನವಿಗಳ ಕುರಿತು ಒಂದೇ ಒಂದು ದಾಖಲೆಗಳನ್ನು ಒದಗಿಸಲು ಕ್ರೀಡಾ ಮತ್ತು ಯುವಜನ ಇಲಾಖೆಯು ವಿಫಲವಾಗಿದೆ ಎಂದು ದಿ ವೈರ್ ವರದಿ ಮಾಡಿದೆ. ಬದಲಿಗೆ ನರೇಂದ್ರ ಮೋದಿಯವರು ಟ್ವೀಟ್ ಮಾಡಿದ ನಂತರವೇ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ಮರುನಾಮಕರಣ ಮಾಡಲು ಸಚಿವಾಲಯ ನಿರ್ಧರಿಸಿದೆ ಮತ್ತು ಅಧಿಕಾರಿಗಳು ತರಾತುರಿಯಲ್ಲಿ ಸುತ್ತೋಲೆ ಹೊರಡಿಸಿದ್ದಾರೆ ಎಂದು ವೈರ್ ಆರೋಪಿಸಿದೆ.

ಈ ಕುರಿತು ಎಷ್ಟು ಜನರು ಮನವಿ ಸಲ್ಲಿಸಿದ್ದಾರೆ? ಅದರ ಪ್ರತಿಗಳನ್ನು ನೀಡಿ ಎಂದು ದಿ ವೈರ್ ಸಲ್ಲಿಸಿದ ಆರ್‌ಟಿಐ ಪ್ರಶ್ನೆಗೆ ಉತ್ತರಿಸಿರುವ ಸಚಿವಾಲಯವು ಪ್ರಶಸ್ತಿಯ ಹೆಸರು ಬದಲಾಯಿಸುವಂತೆ ಸಾರ್ವಜನಿಕರಿಂದ ಯಾವುದೇ ಮನವಿಗಳು ಬಂದಿಲ್ಲ ಎಂಬುದನ್ನು ಒಪ್ಪಿಕೊಂಡಿದೆ. ಪ್ರಧಾನ ಮಂತ್ರಿಗೆ ಬರೆಯಲಾದ ಯಾವುದೇ ಪತ್ರವನ್ನು ಅದರ ವಿಷಯದ ಆಧಾರದ ಮೇಲೆ ವಿಲೇವಾರಿ ಮಾಡಲು ಸಂಬಂಧಿಸಿದ ಸಚಿವಾಲಯ ಅಥವಾ ಇಲಾಖೆಗೆ ವರ್ಗಾಯಿಸಲಾಗುತ್ತದೆ.

ಅಲ್ಲದೇ ಸಚಿವಾಲಯವು ನಿರ್ಧಾರಕ್ಕೆ ಬರವು ಮೊದಲು ಈ ವಿಷಯಕ್ಕೆ ಸಂಬಂಧಿಸಿದ್ದ ಪಾಲುದಾರರ ಜೊತೆ ಚರ್ಚಿಸಿಲ್ಲ. ಕೇವಲ ಪ್ರಧಾನಿಯವರ ಟ್ವೀಟ್ ನಂತರ ಹೆಸರು ಬದಲಿಸಿದೆ. ಇನ್ನು ಸರಳವಾಗಿ ಹೇಳಬೇಕೆಂದರೆ ಮೊದಲು ಟ್ವೀಟ್ ಮಾಡಿದ ನಂತರವೆ ಪ್ರಶಸ್ತಿಯ ಹೆಸರು ಬದಲಿಸಲಾಗಿದೆ!

ಮೂರು ಬಾರಿ ಒಲಿಂಪಿಕ್ ಚಿನ್ನದ ಪದಕ ವಿಜೇತ, ಮೇಜರ್ ಧ್ಯಾನ್ ಚಂದ್ ಅವರು ದೇಶದ ಶ್ರೇಷ್ಠ ಹಾಕಿ ಆಟಗಾರ ಎಂದು ಪರಿಗಣಿಸಲ್ಪಟ್ಟಿದ್ದಾರೆ. ಅವರ ಜನ್ಮದಿನವಾದ ಆಗಸ್ಟ್ 29 ರಂದು ಭಾರತದ ರಾಷ್ಟ್ರೀಯ ಕ್ರೀಡಾ ದಿನವಾಗಿ ಆಚರಿಸಲಾಗುತ್ತದೆ. ಪ್ರತಿ ವರ್ಷ ಈ ದಿನದಂದು ದೇಶದ ಅತ್ಯುನ್ನತ ಕ್ರೀಡಾ ಗೌರವಗಳಾದ ರಾಜೀವ್ ಗಾಂಧಿ ಖೇಲ್‌ ರತ್ನ, ಅರ್ಜುನ ಮತ್ತು ದ್ರೋಣಾಚಾರ್ಯ ಪ್ರಶಸ್ತಿಗಳನ್ನು ವಿತರಿಸಲಾಗುತ್ತದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ರಾಯಚೂರಿನಲ್ಲಿ ಮಸೀದಿ ಕೆಡವಿದಾಗ ದೇವಾಲಯ ಪತ್ತೆಯಾಯಿತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...