Homeಮುಖಪುಟಖೋ ಖೋ ವಿಶ್ವಕಪ್ | ಭಾರತದ ಮಹಿಳೆಯರು, ಪುರುಷರ ತಂಡಗಳು ಚಾಂಪಿಯನ್

ಖೋ ಖೋ ವಿಶ್ವಕಪ್ | ಭಾರತದ ಮಹಿಳೆಯರು, ಪುರುಷರ ತಂಡಗಳು ಚಾಂಪಿಯನ್

- Advertisement -
- Advertisement -

ನವದೆಹಲಿಯ ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣ ಭಾನುವಾರ (ಜ.19) ಮಹತ್ವದ ಸಂದರ್ಭಕ್ಕೆ ಸಾಕ್ಷಿಯಾಯಿತು. ಭಾರತದ ಪುರುಷರು ಮತ್ತು ಮಹಿಳೆಯರ ತಂಡಗಳು ತಮ್ಮ ಫೈನಲ್‌ ಪಂದ್ಯಗಳಲ್ಲಿ ನೇಪಾಳವನ್ನು ಸೋಲಿಸಿ ಚೊಚ್ಚಲ ಖೋ ಖೋ ವಿಶ್ವಕಪ್ ಪ್ರಶಸ್ತಿಗಳನ್ನು ಗೆದ್ದುಕೊಂಡಿತು.

ಕರ್ನಾಟಕದ ಚೈತ್ರಾ ಬಿ. ಅವರ ಅಮೋಘ ಆಟದಿಂದ ಭಾರತದ ಮಹಿಳೆಯರ ತಂಡವು ಖೋ ಖೋ ವಿಶ್ವಕಪ್‌ನ ಫೈನಲ್‌ ಪಂದ್ಯದಲ್ಲಿ ಜಯಭೇರಿ ಬಾರಿಸಿತು. ಅದರ ಬೆನ್ನಲ್ಲೇ ಪುರುಷರ ತಂಡವೂ ಸಾಂಘಿಕ ಆಟ ಪ್ರದರ್ಶಿಸಿ ಚೊಚ್ಚಲ ವಿಶ್ವಕಿರೀಟ ತನ್ನದಾಗಿಸಿಕೊಂಡಿತು. ಎರಡೂ ವಿಭಾಗಗಳಲ್ಲೂ ನೇಪಾಳ ತಂಡವು ರನ್ನರ್ಸ್‌ ಅಪ್‌ ಆಯಿತು.

ಮಹಿಳಾ ತಂಡದ ನಾಯಕಿ ಪ್ರಿಯಾಂಕಾ ಇಂಗಲ್ ಬಹು ಟಚ್ ಪಾಯಿಂಟ್‌ಗಳೊಂದಿಗೆ ಮುನ್ನಡೆ ಸಾಧಿಸಿದರು. ವುಮೆನ್ ಇನ್ ಬ್ಲೂ ತಂಡವು ಸರದಿ 1ರಲ್ಲಿ ಭದ್ರ ಬುನಾದಿ ಹಾಕಲು ಸಹಾಯ ಮಾಡಿದರು. ಅಲ್ಲಿ ಅವರು 14 ಅಂಕಗಳನ್ನು ಗಳಿಸಿದರು. ಈ ಮೂಲಕ ಭಾರತವು ತನ್ನ ಪ್ರಾಬಲ್ಯವನ್ನು ಮುಂದುವರೆಸಿತು. ಅರ್ಧಾವಧಿಯಲ್ಲಿ 34-11 ಮುನ್ನಡೆ ಸಾಧಿಸಿತು, ನಂತರ ಹಿಂತಿರುಗಿ ನೋಡಲಿಲ್ಲ.

ಪಂದ್ಯಾಟದ ಕೊನೆಯ ಸರದಿಯಲ್ಲಿ ಚೈತ್ರಾ ಬಿ ಅವರ ಐದು ನಿಮಿಷಗಳಿಗೂ ಹೆಚ್ಚು ಸಮಯದ ಅದ್ಭುತ ಕನಸಿನ ಓಟವು ಭಾರತವನ್ನು ವಿಜಯಶಾಲಿಯನ್ನಾಗಿ ಮಾಡಿತು. ಖೋ ಖೋ ವಿಶ್ವಕಪ್‌ನ ಮಹಿಳಾ ವಿಭಾಗದ ಮೊದಲ ಚಾಂಪಿಯನ್‌ ಆಗಿ ಭಾರತ ಹೊರ ಹೊಮ್ಮಿತು.

ಪುರುಷರ ತಂಡವೂ ಮೊದಲು ದಾಳಿಗಿಳಿದು ಆಕರ್ಷಕ ನೆಗೆತ, ಸ್ಕೈಡೈವ್‌ ಮೂಲಕ ಮೊಲದ ಸರದಿಯಲ್ಲಿ 26 ಅಂಕಗಳನ್ನು ಕಲೆ ಹಾಕಿತು. ಎರಡನೇ ಸರದಿಯಲ್ಲಿ ಎದುರಾಳಿ ತಂಡವು 18 ಅಂಕ ಪಡೆದರೆ, ಮೂರನೇ ಸರದಿಯಲ್ಲಿ ಮತ್ತೆ ಆತಿಥೇಯ ತಂಡದ ಆಟಗಾರರು 28 ಅಂಕ ಸಂಪಾದಿಸಿ ಅಂತರವನ್ನು ಹಿಗ್ಗಿಸಿಕೊಂಡರು. ಅಂತಿಮ ಸರದಿಯಲ್ಲೂ ಎದುರಾಳಿ ತಂಡ ಹೆಚ್ಚಿನ ಪ್ರತಿರೋಧ ತೋರಲು ಅತಿಥೇಯ ತಂಡ ಅವಕಾಶ ನೀಡಲಿಲ್ಲ.

ಒಟ್ಟು 19 ತಂಡಗಳಿದ್ದ ಮಹಿಳೆಯರ ವಿಭಾಗದಲ್ಲಿ ಭಾರತ ಮತ್ತು ನೇಪಾಳವು ಅಜೇಯವಾಗಿ ಫೈನಲ್‌ ಪ್ರವೇಶಿಸಿದ್ದವು. ಹೀಗಾಗಿ, ಅವುಗಳ ಸೆಣಸಾಟ ಭಾರೀ ಕುತೂಹಲ ಮೂಡಿಸಿತ್ತು. ಆದರೆ, ಅಂತಿಮ ಹಣಾ ಹಣಿಯಲ್ಲಿ 78–40ರಿಂದ ಆತಿಥೇಯ ತಂಡ ಪಾರಮ್ಯ ಮೆರೆಯಿತು.

ಪುರುಷರ ವಿಭಾಗದ ಫೈನಲ್‌ನಲ್ಲಿ ನೇಪಾಳ ತಂಡವನ್ನು 54–36ರಿಂದ ಮಣಿಸಿದ ಭಾರತದ ಪಡೆ ಅಜೇಯವಾಗಿ ಉಳಿಯಿತು. ಪುರುಷರ ವಿಭಾಗದಲ್ಲಿ 20 ತಂಡಗಳು ಭಾಗವಹಿಸಿದ್ದವು.

ಇದನ್ನೂ ಓದಿ : ಗಾಝಾ ಕದನ ವಿರಾಮ | ಮೊದಲ ಹಂತದಲ್ಲಿ ಬಂಧಿತರು, ಒತ್ತೆಯಾಳುಗಳ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...