Homeಮುಖಪುಟಖೋ ಖೋ ವಿಶ್ವಕಪ್ | ಭಾರತದ ಮಹಿಳೆಯರು, ಪುರುಷರ ತಂಡಗಳು ಚಾಂಪಿಯನ್

ಖೋ ಖೋ ವಿಶ್ವಕಪ್ | ಭಾರತದ ಮಹಿಳೆಯರು, ಪುರುಷರ ತಂಡಗಳು ಚಾಂಪಿಯನ್

- Advertisement -
- Advertisement -

ನವದೆಹಲಿಯ ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣ ಭಾನುವಾರ (ಜ.19) ಮಹತ್ವದ ಸಂದರ್ಭಕ್ಕೆ ಸಾಕ್ಷಿಯಾಯಿತು. ಭಾರತದ ಪುರುಷರು ಮತ್ತು ಮಹಿಳೆಯರ ತಂಡಗಳು ತಮ್ಮ ಫೈನಲ್‌ ಪಂದ್ಯಗಳಲ್ಲಿ ನೇಪಾಳವನ್ನು ಸೋಲಿಸಿ ಚೊಚ್ಚಲ ಖೋ ಖೋ ವಿಶ್ವಕಪ್ ಪ್ರಶಸ್ತಿಗಳನ್ನು ಗೆದ್ದುಕೊಂಡಿತು.

ಕರ್ನಾಟಕದ ಚೈತ್ರಾ ಬಿ. ಅವರ ಅಮೋಘ ಆಟದಿಂದ ಭಾರತದ ಮಹಿಳೆಯರ ತಂಡವು ಖೋ ಖೋ ವಿಶ್ವಕಪ್‌ನ ಫೈನಲ್‌ ಪಂದ್ಯದಲ್ಲಿ ಜಯಭೇರಿ ಬಾರಿಸಿತು. ಅದರ ಬೆನ್ನಲ್ಲೇ ಪುರುಷರ ತಂಡವೂ ಸಾಂಘಿಕ ಆಟ ಪ್ರದರ್ಶಿಸಿ ಚೊಚ್ಚಲ ವಿಶ್ವಕಿರೀಟ ತನ್ನದಾಗಿಸಿಕೊಂಡಿತು. ಎರಡೂ ವಿಭಾಗಗಳಲ್ಲೂ ನೇಪಾಳ ತಂಡವು ರನ್ನರ್ಸ್‌ ಅಪ್‌ ಆಯಿತು.

ಮಹಿಳಾ ತಂಡದ ನಾಯಕಿ ಪ್ರಿಯಾಂಕಾ ಇಂಗಲ್ ಬಹು ಟಚ್ ಪಾಯಿಂಟ್‌ಗಳೊಂದಿಗೆ ಮುನ್ನಡೆ ಸಾಧಿಸಿದರು. ವುಮೆನ್ ಇನ್ ಬ್ಲೂ ತಂಡವು ಸರದಿ 1ರಲ್ಲಿ ಭದ್ರ ಬುನಾದಿ ಹಾಕಲು ಸಹಾಯ ಮಾಡಿದರು. ಅಲ್ಲಿ ಅವರು 14 ಅಂಕಗಳನ್ನು ಗಳಿಸಿದರು. ಈ ಮೂಲಕ ಭಾರತವು ತನ್ನ ಪ್ರಾಬಲ್ಯವನ್ನು ಮುಂದುವರೆಸಿತು. ಅರ್ಧಾವಧಿಯಲ್ಲಿ 34-11 ಮುನ್ನಡೆ ಸಾಧಿಸಿತು, ನಂತರ ಹಿಂತಿರುಗಿ ನೋಡಲಿಲ್ಲ.

ಪಂದ್ಯಾಟದ ಕೊನೆಯ ಸರದಿಯಲ್ಲಿ ಚೈತ್ರಾ ಬಿ ಅವರ ಐದು ನಿಮಿಷಗಳಿಗೂ ಹೆಚ್ಚು ಸಮಯದ ಅದ್ಭುತ ಕನಸಿನ ಓಟವು ಭಾರತವನ್ನು ವಿಜಯಶಾಲಿಯನ್ನಾಗಿ ಮಾಡಿತು. ಖೋ ಖೋ ವಿಶ್ವಕಪ್‌ನ ಮಹಿಳಾ ವಿಭಾಗದ ಮೊದಲ ಚಾಂಪಿಯನ್‌ ಆಗಿ ಭಾರತ ಹೊರ ಹೊಮ್ಮಿತು.

ಪುರುಷರ ತಂಡವೂ ಮೊದಲು ದಾಳಿಗಿಳಿದು ಆಕರ್ಷಕ ನೆಗೆತ, ಸ್ಕೈಡೈವ್‌ ಮೂಲಕ ಮೊಲದ ಸರದಿಯಲ್ಲಿ 26 ಅಂಕಗಳನ್ನು ಕಲೆ ಹಾಕಿತು. ಎರಡನೇ ಸರದಿಯಲ್ಲಿ ಎದುರಾಳಿ ತಂಡವು 18 ಅಂಕ ಪಡೆದರೆ, ಮೂರನೇ ಸರದಿಯಲ್ಲಿ ಮತ್ತೆ ಆತಿಥೇಯ ತಂಡದ ಆಟಗಾರರು 28 ಅಂಕ ಸಂಪಾದಿಸಿ ಅಂತರವನ್ನು ಹಿಗ್ಗಿಸಿಕೊಂಡರು. ಅಂತಿಮ ಸರದಿಯಲ್ಲೂ ಎದುರಾಳಿ ತಂಡ ಹೆಚ್ಚಿನ ಪ್ರತಿರೋಧ ತೋರಲು ಅತಿಥೇಯ ತಂಡ ಅವಕಾಶ ನೀಡಲಿಲ್ಲ.

ಒಟ್ಟು 19 ತಂಡಗಳಿದ್ದ ಮಹಿಳೆಯರ ವಿಭಾಗದಲ್ಲಿ ಭಾರತ ಮತ್ತು ನೇಪಾಳವು ಅಜೇಯವಾಗಿ ಫೈನಲ್‌ ಪ್ರವೇಶಿಸಿದ್ದವು. ಹೀಗಾಗಿ, ಅವುಗಳ ಸೆಣಸಾಟ ಭಾರೀ ಕುತೂಹಲ ಮೂಡಿಸಿತ್ತು. ಆದರೆ, ಅಂತಿಮ ಹಣಾ ಹಣಿಯಲ್ಲಿ 78–40ರಿಂದ ಆತಿಥೇಯ ತಂಡ ಪಾರಮ್ಯ ಮೆರೆಯಿತು.

ಪುರುಷರ ವಿಭಾಗದ ಫೈನಲ್‌ನಲ್ಲಿ ನೇಪಾಳ ತಂಡವನ್ನು 54–36ರಿಂದ ಮಣಿಸಿದ ಭಾರತದ ಪಡೆ ಅಜೇಯವಾಗಿ ಉಳಿಯಿತು. ಪುರುಷರ ವಿಭಾಗದಲ್ಲಿ 20 ತಂಡಗಳು ಭಾಗವಹಿಸಿದ್ದವು.

ಇದನ್ನೂ ಓದಿ : ಗಾಝಾ ಕದನ ವಿರಾಮ | ಮೊದಲ ಹಂತದಲ್ಲಿ ಬಂಧಿತರು, ಒತ್ತೆಯಾಳುಗಳ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...