Homeಮುಖಪುಟಖೋ ಖೋ ವಿಶ್ವಕಪ್ | ಭಾರತದ ಮಹಿಳೆಯರು, ಪುರುಷರ ತಂಡಗಳು ಚಾಂಪಿಯನ್

ಖೋ ಖೋ ವಿಶ್ವಕಪ್ | ಭಾರತದ ಮಹಿಳೆಯರು, ಪುರುಷರ ತಂಡಗಳು ಚಾಂಪಿಯನ್

- Advertisement -
- Advertisement -

ನವದೆಹಲಿಯ ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣ ಭಾನುವಾರ (ಜ.19) ಮಹತ್ವದ ಸಂದರ್ಭಕ್ಕೆ ಸಾಕ್ಷಿಯಾಯಿತು. ಭಾರತದ ಪುರುಷರು ಮತ್ತು ಮಹಿಳೆಯರ ತಂಡಗಳು ತಮ್ಮ ಫೈನಲ್‌ ಪಂದ್ಯಗಳಲ್ಲಿ ನೇಪಾಳವನ್ನು ಸೋಲಿಸಿ ಚೊಚ್ಚಲ ಖೋ ಖೋ ವಿಶ್ವಕಪ್ ಪ್ರಶಸ್ತಿಗಳನ್ನು ಗೆದ್ದುಕೊಂಡಿತು.

ಕರ್ನಾಟಕದ ಚೈತ್ರಾ ಬಿ. ಅವರ ಅಮೋಘ ಆಟದಿಂದ ಭಾರತದ ಮಹಿಳೆಯರ ತಂಡವು ಖೋ ಖೋ ವಿಶ್ವಕಪ್‌ನ ಫೈನಲ್‌ ಪಂದ್ಯದಲ್ಲಿ ಜಯಭೇರಿ ಬಾರಿಸಿತು. ಅದರ ಬೆನ್ನಲ್ಲೇ ಪುರುಷರ ತಂಡವೂ ಸಾಂಘಿಕ ಆಟ ಪ್ರದರ್ಶಿಸಿ ಚೊಚ್ಚಲ ವಿಶ್ವಕಿರೀಟ ತನ್ನದಾಗಿಸಿಕೊಂಡಿತು. ಎರಡೂ ವಿಭಾಗಗಳಲ್ಲೂ ನೇಪಾಳ ತಂಡವು ರನ್ನರ್ಸ್‌ ಅಪ್‌ ಆಯಿತು.

ಮಹಿಳಾ ತಂಡದ ನಾಯಕಿ ಪ್ರಿಯಾಂಕಾ ಇಂಗಲ್ ಬಹು ಟಚ್ ಪಾಯಿಂಟ್‌ಗಳೊಂದಿಗೆ ಮುನ್ನಡೆ ಸಾಧಿಸಿದರು. ವುಮೆನ್ ಇನ್ ಬ್ಲೂ ತಂಡವು ಸರದಿ 1ರಲ್ಲಿ ಭದ್ರ ಬುನಾದಿ ಹಾಕಲು ಸಹಾಯ ಮಾಡಿದರು. ಅಲ್ಲಿ ಅವರು 14 ಅಂಕಗಳನ್ನು ಗಳಿಸಿದರು. ಈ ಮೂಲಕ ಭಾರತವು ತನ್ನ ಪ್ರಾಬಲ್ಯವನ್ನು ಮುಂದುವರೆಸಿತು. ಅರ್ಧಾವಧಿಯಲ್ಲಿ 34-11 ಮುನ್ನಡೆ ಸಾಧಿಸಿತು, ನಂತರ ಹಿಂತಿರುಗಿ ನೋಡಲಿಲ್ಲ.

ಪಂದ್ಯಾಟದ ಕೊನೆಯ ಸರದಿಯಲ್ಲಿ ಚೈತ್ರಾ ಬಿ ಅವರ ಐದು ನಿಮಿಷಗಳಿಗೂ ಹೆಚ್ಚು ಸಮಯದ ಅದ್ಭುತ ಕನಸಿನ ಓಟವು ಭಾರತವನ್ನು ವಿಜಯಶಾಲಿಯನ್ನಾಗಿ ಮಾಡಿತು. ಖೋ ಖೋ ವಿಶ್ವಕಪ್‌ನ ಮಹಿಳಾ ವಿಭಾಗದ ಮೊದಲ ಚಾಂಪಿಯನ್‌ ಆಗಿ ಭಾರತ ಹೊರ ಹೊಮ್ಮಿತು.

ಪುರುಷರ ತಂಡವೂ ಮೊದಲು ದಾಳಿಗಿಳಿದು ಆಕರ್ಷಕ ನೆಗೆತ, ಸ್ಕೈಡೈವ್‌ ಮೂಲಕ ಮೊಲದ ಸರದಿಯಲ್ಲಿ 26 ಅಂಕಗಳನ್ನು ಕಲೆ ಹಾಕಿತು. ಎರಡನೇ ಸರದಿಯಲ್ಲಿ ಎದುರಾಳಿ ತಂಡವು 18 ಅಂಕ ಪಡೆದರೆ, ಮೂರನೇ ಸರದಿಯಲ್ಲಿ ಮತ್ತೆ ಆತಿಥೇಯ ತಂಡದ ಆಟಗಾರರು 28 ಅಂಕ ಸಂಪಾದಿಸಿ ಅಂತರವನ್ನು ಹಿಗ್ಗಿಸಿಕೊಂಡರು. ಅಂತಿಮ ಸರದಿಯಲ್ಲೂ ಎದುರಾಳಿ ತಂಡ ಹೆಚ್ಚಿನ ಪ್ರತಿರೋಧ ತೋರಲು ಅತಿಥೇಯ ತಂಡ ಅವಕಾಶ ನೀಡಲಿಲ್ಲ.

ಒಟ್ಟು 19 ತಂಡಗಳಿದ್ದ ಮಹಿಳೆಯರ ವಿಭಾಗದಲ್ಲಿ ಭಾರತ ಮತ್ತು ನೇಪಾಳವು ಅಜೇಯವಾಗಿ ಫೈನಲ್‌ ಪ್ರವೇಶಿಸಿದ್ದವು. ಹೀಗಾಗಿ, ಅವುಗಳ ಸೆಣಸಾಟ ಭಾರೀ ಕುತೂಹಲ ಮೂಡಿಸಿತ್ತು. ಆದರೆ, ಅಂತಿಮ ಹಣಾ ಹಣಿಯಲ್ಲಿ 78–40ರಿಂದ ಆತಿಥೇಯ ತಂಡ ಪಾರಮ್ಯ ಮೆರೆಯಿತು.

ಪುರುಷರ ವಿಭಾಗದ ಫೈನಲ್‌ನಲ್ಲಿ ನೇಪಾಳ ತಂಡವನ್ನು 54–36ರಿಂದ ಮಣಿಸಿದ ಭಾರತದ ಪಡೆ ಅಜೇಯವಾಗಿ ಉಳಿಯಿತು. ಪುರುಷರ ವಿಭಾಗದಲ್ಲಿ 20 ತಂಡಗಳು ಭಾಗವಹಿಸಿದ್ದವು.

ಇದನ್ನೂ ಓದಿ : ಗಾಝಾ ಕದನ ವಿರಾಮ | ಮೊದಲ ಹಂತದಲ್ಲಿ ಬಂಧಿತರು, ಒತ್ತೆಯಾಳುಗಳ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...