Homeಮುಖಪುಟಖೋ ಖೋ ವಿಶ್ವಕಪ್ | ಭಾರತದ ಮಹಿಳೆಯರು, ಪುರುಷರ ತಂಡಗಳು ಚಾಂಪಿಯನ್

ಖೋ ಖೋ ವಿಶ್ವಕಪ್ | ಭಾರತದ ಮಹಿಳೆಯರು, ಪುರುಷರ ತಂಡಗಳು ಚಾಂಪಿಯನ್

- Advertisement -
- Advertisement -

ನವದೆಹಲಿಯ ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣ ಭಾನುವಾರ (ಜ.19) ಮಹತ್ವದ ಸಂದರ್ಭಕ್ಕೆ ಸಾಕ್ಷಿಯಾಯಿತು. ಭಾರತದ ಪುರುಷರು ಮತ್ತು ಮಹಿಳೆಯರ ತಂಡಗಳು ತಮ್ಮ ಫೈನಲ್‌ ಪಂದ್ಯಗಳಲ್ಲಿ ನೇಪಾಳವನ್ನು ಸೋಲಿಸಿ ಚೊಚ್ಚಲ ಖೋ ಖೋ ವಿಶ್ವಕಪ್ ಪ್ರಶಸ್ತಿಗಳನ್ನು ಗೆದ್ದುಕೊಂಡಿತು.

ಕರ್ನಾಟಕದ ಚೈತ್ರಾ ಬಿ. ಅವರ ಅಮೋಘ ಆಟದಿಂದ ಭಾರತದ ಮಹಿಳೆಯರ ತಂಡವು ಖೋ ಖೋ ವಿಶ್ವಕಪ್‌ನ ಫೈನಲ್‌ ಪಂದ್ಯದಲ್ಲಿ ಜಯಭೇರಿ ಬಾರಿಸಿತು. ಅದರ ಬೆನ್ನಲ್ಲೇ ಪುರುಷರ ತಂಡವೂ ಸಾಂಘಿಕ ಆಟ ಪ್ರದರ್ಶಿಸಿ ಚೊಚ್ಚಲ ವಿಶ್ವಕಿರೀಟ ತನ್ನದಾಗಿಸಿಕೊಂಡಿತು. ಎರಡೂ ವಿಭಾಗಗಳಲ್ಲೂ ನೇಪಾಳ ತಂಡವು ರನ್ನರ್ಸ್‌ ಅಪ್‌ ಆಯಿತು.

ಮಹಿಳಾ ತಂಡದ ನಾಯಕಿ ಪ್ರಿಯಾಂಕಾ ಇಂಗಲ್ ಬಹು ಟಚ್ ಪಾಯಿಂಟ್‌ಗಳೊಂದಿಗೆ ಮುನ್ನಡೆ ಸಾಧಿಸಿದರು. ವುಮೆನ್ ಇನ್ ಬ್ಲೂ ತಂಡವು ಸರದಿ 1ರಲ್ಲಿ ಭದ್ರ ಬುನಾದಿ ಹಾಕಲು ಸಹಾಯ ಮಾಡಿದರು. ಅಲ್ಲಿ ಅವರು 14 ಅಂಕಗಳನ್ನು ಗಳಿಸಿದರು. ಈ ಮೂಲಕ ಭಾರತವು ತನ್ನ ಪ್ರಾಬಲ್ಯವನ್ನು ಮುಂದುವರೆಸಿತು. ಅರ್ಧಾವಧಿಯಲ್ಲಿ 34-11 ಮುನ್ನಡೆ ಸಾಧಿಸಿತು, ನಂತರ ಹಿಂತಿರುಗಿ ನೋಡಲಿಲ್ಲ.

ಪಂದ್ಯಾಟದ ಕೊನೆಯ ಸರದಿಯಲ್ಲಿ ಚೈತ್ರಾ ಬಿ ಅವರ ಐದು ನಿಮಿಷಗಳಿಗೂ ಹೆಚ್ಚು ಸಮಯದ ಅದ್ಭುತ ಕನಸಿನ ಓಟವು ಭಾರತವನ್ನು ವಿಜಯಶಾಲಿಯನ್ನಾಗಿ ಮಾಡಿತು. ಖೋ ಖೋ ವಿಶ್ವಕಪ್‌ನ ಮಹಿಳಾ ವಿಭಾಗದ ಮೊದಲ ಚಾಂಪಿಯನ್‌ ಆಗಿ ಭಾರತ ಹೊರ ಹೊಮ್ಮಿತು.

ಪುರುಷರ ತಂಡವೂ ಮೊದಲು ದಾಳಿಗಿಳಿದು ಆಕರ್ಷಕ ನೆಗೆತ, ಸ್ಕೈಡೈವ್‌ ಮೂಲಕ ಮೊಲದ ಸರದಿಯಲ್ಲಿ 26 ಅಂಕಗಳನ್ನು ಕಲೆ ಹಾಕಿತು. ಎರಡನೇ ಸರದಿಯಲ್ಲಿ ಎದುರಾಳಿ ತಂಡವು 18 ಅಂಕ ಪಡೆದರೆ, ಮೂರನೇ ಸರದಿಯಲ್ಲಿ ಮತ್ತೆ ಆತಿಥೇಯ ತಂಡದ ಆಟಗಾರರು 28 ಅಂಕ ಸಂಪಾದಿಸಿ ಅಂತರವನ್ನು ಹಿಗ್ಗಿಸಿಕೊಂಡರು. ಅಂತಿಮ ಸರದಿಯಲ್ಲೂ ಎದುರಾಳಿ ತಂಡ ಹೆಚ್ಚಿನ ಪ್ರತಿರೋಧ ತೋರಲು ಅತಿಥೇಯ ತಂಡ ಅವಕಾಶ ನೀಡಲಿಲ್ಲ.

ಒಟ್ಟು 19 ತಂಡಗಳಿದ್ದ ಮಹಿಳೆಯರ ವಿಭಾಗದಲ್ಲಿ ಭಾರತ ಮತ್ತು ನೇಪಾಳವು ಅಜೇಯವಾಗಿ ಫೈನಲ್‌ ಪ್ರವೇಶಿಸಿದ್ದವು. ಹೀಗಾಗಿ, ಅವುಗಳ ಸೆಣಸಾಟ ಭಾರೀ ಕುತೂಹಲ ಮೂಡಿಸಿತ್ತು. ಆದರೆ, ಅಂತಿಮ ಹಣಾ ಹಣಿಯಲ್ಲಿ 78–40ರಿಂದ ಆತಿಥೇಯ ತಂಡ ಪಾರಮ್ಯ ಮೆರೆಯಿತು.

ಪುರುಷರ ವಿಭಾಗದ ಫೈನಲ್‌ನಲ್ಲಿ ನೇಪಾಳ ತಂಡವನ್ನು 54–36ರಿಂದ ಮಣಿಸಿದ ಭಾರತದ ಪಡೆ ಅಜೇಯವಾಗಿ ಉಳಿಯಿತು. ಪುರುಷರ ವಿಭಾಗದಲ್ಲಿ 20 ತಂಡಗಳು ಭಾಗವಹಿಸಿದ್ದವು.

ಇದನ್ನೂ ಓದಿ : ಗಾಝಾ ಕದನ ವಿರಾಮ | ಮೊದಲ ಹಂತದಲ್ಲಿ ಬಂಧಿತರು, ಒತ್ತೆಯಾಳುಗಳ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...