Homeಮುಖಪುಟರಾಷ್ಟ್ರ ಮುಂದುವರಿಯಲು ಪ್ರಧಾನಿ ಮೋದಿಯಂತಹ ವ್ಯಕ್ತಿ ಬೇಕು: ಬಿಜೆಪಿ ಸೇರ್ಪಡೆ ಬಳಿಕ ನಟಿ ಖುಷ್ಬೂ

ರಾಷ್ಟ್ರ ಮುಂದುವರಿಯಲು ಪ್ರಧಾನಿ ಮೋದಿಯಂತಹ ವ್ಯಕ್ತಿ ಬೇಕು: ಬಿಜೆಪಿ ಸೇರ್ಪಡೆ ಬಳಿಕ ನಟಿ ಖುಷ್ಬೂ

ಖುಷ್ಬೂ ನಿರ್ಗಮನವು ಮುಂಬರುವ ತಮಿಳುನಾಡು ಚುನಾವಣೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಕಾಂಗ್ರೆಸ್ ಹೇಳಿದೆ.

- Advertisement -
- Advertisement -

ಬಹುಭಾಷಾ ನಟಿ, ರಾಜಕಾರಣಿ ಖುಷ್ಬೂ ಸುಂದರ್ ಕಾಂಗ್ರೆಸ್ ತೊರೆದು ನಿರೀಕ್ಷೆಯಂತೇ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ದೆಹಲಿಯ ಬಿಜೆಪಿ ಪ‍್ರಧಾನ ಕಚೇರಿಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ, ತಮಿಳುನಾಡು ಉಸ್ತುವಾರಿ ಸಿ.ಟಿ ರವಿ ಮತ್ತು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಎಲ್‌.ಮುರುಗನ್ ಸಮ್ಮುಖದಲ್ಲಿ‌ ‌ಅಧಿಕೃತವಾಗಿ ಕಮಲಪಾಳಯ ಸೇರಿದ್ದಾರೆ.

ಬೆಳಗ್ಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಪತ್ರ ಬರೆದಿದ್ದ ನಟಿ ’ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಲು ಬಯಸುವ ನನ್ನಂತಹ ಜನರನ್ನು ತುಳಿಯಲಾಗುತ್ತಿದೆ ಎಂದಿದ್ದರು. ಜೊತೆಗೆ ’ಪಕ್ಷದಲ್ಲಿ ವಾಸ್ತವ ಪರಿಸ್ಥಿತಿಯ ಅರಿವಿಲ್ಲದವರು ಅಥವಾ ಸಾರ್ವಜನಿಕವಾಗಿ ಗುರುತಿಸಿಕೊಳ್ಳದ ವ್ಯಕ್ತಿಗಳು ನಿಯಂತ್ರಣ ಹೇರುತ್ತಿದ್ದಾರೆ’ ಎಂದು ತಮ್ಮ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದರು.

ಬಿಜೆಪಿ ಸೇರ್ಪಡೆ ಬಳಿಕ “ರಾಷ್ಟ್ರವು ಮುಂದುವರಿಯಬೇಕಾದರೆ, ದೇಶವನ್ನು ಸರಿಯಾದ ದಿಕ್ಕಿನಲ್ಲಿ ಕೊಂಡೊಯ್ಯಲು ನಮಗೆ ಪ್ರಧಾನಿ ನರೇಂದ್ರ ಮೋದಿಯಂತಹ ವ್ಯಕ್ತಿ ಬೇಕು” ಎಂದು ಖುಷ್ಬೂ ಸುಂದರ್ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್‌ಗೆ ನಟಿ ಖುಷ್ಬೂ ರಾಜೀನಾಮೆ: ಇಂದು ಬಿಜೆಪಿ ಸೇರುವ ಸಾಧ್ಯತೆ

2021ರ ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ಖುಷ್ಬೂ ಅವರಿಗೆ ಪ್ರಮುಖ ಜವಾಬ್ದಾರಿ ನೀಡುವ ನಿರೀಕ್ಷೆಯಿದೆ. ರಾಜ್ಯಸಭಾ ಸ್ಥಾನ ನೀಡುವ ಬಗ್ಗೆ ವದಂತಿಗಳಿವೆ. “ಖುಷ್ಬೂ ತಮಿಳುನಾಡಿನಲ್ಲಿ ಬಿಜೆಪಿ ಬಗ್ಗೆಯ ಗ್ರಹಿಕೆಯನ್ನು ಬದಲಿಸುತ್ತಾರೆ” ಎಂದು ಬಿಜೆಪಿಯ ತಮಿಳುನಾಡು ಘಟಕ ಹೇಳಿದೆ. ತಮಿಳುನಾಡು ವಿಧಾನಸಭೆ ಚುನಾವಣೆಗೆ ಇನ್ನು ಎಂಟು ತಿಂಗಳು ಬಾಕಿ ಇದೆ.

2014ರಲ್ಲಿ ಸೋನಿಯಾ ಗಾಂಧಿ ಜೊತೆಗಿನ ಭೇಟಿ ಬಳಿಕ ನಟಿ ಡಿಎಂಕೆ ತೊರೆದ ಕಾಂಗ್ರೆಸ್‌ಗೆ ಸೇರ್ಪಡೆಯಾದರು. ಆದರೆ 2019ರ ಲೋಕಸಭಾ ಚುನಾವಣೆಯ ಡಿಎಂಕೆ–ಕಾಂಗ್ರೆಸ್‌ ಮೈತ್ರಿಯಲ್ಲಿ ಅವರಿಗೆ ಟಿಕೆಟ್‌ ಸಿಗಲಿಲ್ಲ, ಅಲ್ಲದೇ ರಾಜ್ಯಸಭೆಗೂ ಆಯ್ಕೆ ಮಾಡಲಿಲ್ಲ.

ನಟಿಯ ಪಕ್ಷ ಸೇರ್ಪಡೆ ಬಗ್ಗೆ ಟ್ವೀಟ್‌ ಮಾಡಿರುವ ಸಿ.ಟಿ ರವಿ, ‘ ತಮಿಳುನಾಡಿನಲ್ಲಿ ಬಿಜೆಪಿಯನ್ನು ಬಲಪಡಿಸಲು ಖುಷ್ಬೂ ಅವರು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ತಿರುಮುರುಗನ್‌ ಅವರ ನೇತೃತ್ವದಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂಬ ವಿಶ್ವಾಸ ನನಗೆ ಇದೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಂಡ್ಯ: ರೈತ ಮಸೂದೆಗಳನ್ನು ವಿರೋಧಿಸಿ ರಾಜ್ಯ ಮಟ್ಟದ ಬೃಹತ್ ಸಮಾವೇಶ

ಇತ್ತ ಕಾಂಗ್ರೆಸ್ ಕೂಡ ಖುಷ್ಬೂ ಬಿಜೆಪಿ ಸೇರ್ಪಡೆಯಾಗಿರುವ ಕುರಿತು ಪ್ರತಿಕ್ರಿಯೆ ನೀಡಿದೆ. ಪಕ್ಷವನ್ನು ತೊರೆದ ನಟಿಗೆ “ಸೈದ್ಧಾಂತಿಕ ಬದ್ಧತೆ” ಇಲ್ಲ ಮತ್ತು ಅವರ ನಿರ್ಗಮನವು ಮುಂಬರುವ ತಮಿಳುನಾಡು ಚುನಾವಣೆಯ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಕಾಂಗ್ರೆಸ್ ಹೇಳಿದೆ.

“ಅವರು ಬಿಜೆಪಿಗೆ ಸೇರಿರುವುದು ದುರದೃಷ್ಟಕರ. ಇದು ತಮಿಳುನಾಡು ರಾಜಕೀಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ” ಎಂದು  ತಮಿಳುನಾಡಿನ ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

90ರ ದಶಕದಲ್ಲಿ ತಮಿಳುನಾಡಿನ ಅತ್ಯಂತ ಜನಪ್ರಿಯ ಸ್ಟಾರ್‌ ನಟ-ನಟಿಯರಲ್ಲಿ ಖುಷ್ಬೂ ಸಹ ಒಬ್ಬರಾಗಿದ್ದರು. ಆ ಸಮಯದಲ್ಲಿ ಅಭಿಮಾನಿಗಳು ಅವರಿಗಾಗಿಯೇ ದೇವಾಲಯವನ್ನೂ ಕಟ್ಟಿದ್ದರು. ಅವರು ಹಿರಿತೆರೆಯ ಜೊತೆಗೆ ಕಿರುತೆರೆಗಳಲ್ಲೂ ಕಾಣಿಸಿಕೊಂಡಿದ್ದಾರೆ.


ಇದನ್ನೂ ಓದಿ: ಮೋದಿಗೆ 8,400 ಕೋಟಿ ರೂ. ವಿಮಾನ; ಸೈನಿಕರಿಗೆ ಬುಲ್ಲೆಟ್‌ಪ್ರೂಫ್ ರಹಿತ ಟ್ರಕ್!: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...