Homeಕರ್ನಾಟಕದೇವನಹಳ್ಳಿ| ಕೆಐಎಡಿಬಿ ಅಂತಿಮ ಅಧಿಸೂಚನೆ ಪ್ರತಿ ಸುಟ್ಟು ಆಕ್ರೋಶ; ಸರ್ಕಾರದ ವಿರುದ್ಧ ಸೆಟೆದು ನಿಂತ ಚನ್ನರಾಯಪಟ್ಟಣ...

ದೇವನಹಳ್ಳಿ| ಕೆಐಎಡಿಬಿ ಅಂತಿಮ ಅಧಿಸೂಚನೆ ಪ್ರತಿ ಸುಟ್ಟು ಆಕ್ರೋಶ; ಸರ್ಕಾರದ ವಿರುದ್ಧ ಸೆಟೆದು ನಿಂತ ಚನ್ನರಾಯಪಟ್ಟಣ ರೈತರು

- Advertisement -
- Advertisement -

ರೈತರ ಪ್ರತಿರೋಧವನ್ನೂ ಲೆಕ್ಕಿಸದೆ ಬಲವಂತದ ಭೂಸ್ವಾಧೀನಕ್ಕೆ ಮುಂದಾಗಿರುವ ಸರ್ಕಾರ, ಎರಡು ದಿನಗಳ ಹಿಂದಷ್ಟೇ ಚನ್ನರಾಯಪಟ್ಟಣ ಹೋಬಳಿಯ ಎಂಟು ಹಳ್ಳಿಗಳಿಗೆ ಅಂತಿಮ ಅಧಿಸೂಚನೆಯನ್ನು ಹೊರಡಿಸಿದೆ. ಈ ಬಗ್ಗೆ ಆಕ್ರೋಶಗೊಂಡಿರುವ ರೈತರು, ಚನ್ನರಾಯಪಟ್ಟಣ ನಾಡ ಕಚೇರಿ ಮುಂಭಾಗದ ಧರಣಿ ಸ್ಥಳದಲ್ಲಿ ಸಭೆ ನಡೆಸಿದರು. ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಹೊರಡಿಸಿರುವ ಅಂತಿಮ‌ ಅಧಿಸೂಚನೆಯನ್ನು ಸುಡುವ ಮೂಲಕ ಪ್ರತಿರೋಧ ವ್ಯಕ್ತಪಡಿಸಿದರು.

“ಯಾವುದೇ ಕಾರಣಕ್ಕೂ ಭೂಮಿ ಬಿಡುವ ಪ್ರಶ್ನೆಯೇ ಇಲ್ಲ, ನಮ್ಮ ಪ್ರಾಣತ್ಯಾಗವಾದರೂ ಸರಿ ನಾವು ಭೂಮಿ ಬಿಡುವುದಿಲ್ಲ, ಭೂಮಿ ತಂಟೆಗೆ ಬಂದವರನ್ನೂ ಸುಮ್ಮನೆ ಬಿಡುವುದಿಲ್ಲ” ಎಂದು ರೈತರು ಸರ್ಕಾರದ ವಿರುದ್ಧ ಸೆಟೆದು ನಿಂತಿದ್ದಾರೆ.

ಕಳೆದ ಮೂರುವರೆ ವರ್ಷಗಳಿಂದ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ 1777 ಎಕರೆ ಭೂಸ್ವಾಧೀನವನ್ನು ವಿರೋಧಿಸಿ ನಿರಂತರ ಧರಣಿ ನಡೆಸುತ್ತಿದ್ದರೂ, ಈ ಪೈಕಿ ಇದುವರೆಗೂ ಎರಡು ಹಂತದಲ್ಲಿ 10 ಹಳ್ಳಿಗಳ 1280 ಎಕರೆ ಭೂಮಿಗೆ ಅಂತಿಮ ಅಧಿಸೂಚನೆಯನ್ನು ಹೊರಡಿಸಿದೆ. ಈ ಸರ್ಕಾರದ ಆದೇಶವನ್ನು ಖಂಡಿಸಿ ಮಾತನಾಡಿದ ರೈತರು “ಜನರ ಸಂಪೂರ್ಣ ವಿರೋಧದ ನಡುವೆಯು ಸರ್ಕಾರ ಬಲವಂತವಾಗಿ ಭೂಸ್ವಾಧೀನಕ್ಕೆ ಮುಂದಾಗಿರುವುದು ರೈತಸಮುದಾಯಕ್ಕೆ ಮಾಡುತ್ತಿರುವ ದ್ರೋಹ, ಇದನ್ನು ಸಹಿಸಲು ಸಾದ್ಯವೇ ಇಲ್ಲ” ಎಂದು ಆಕ್ರೋಶ ಹೊರಹಾಕಿದರು.

“ಈ ವಚನ ಭ್ರಷ್ಟ ಸರ್ಕಾರ, ಮಾತು ತಪ್ಪಿದ ಮುಖ್ಯಮಂತ್ರಿ ಮತ್ತು ಮಂತ್ರಿಗಳು ನಾಳೆ ನಮ್ಮ ಜಿಲ್ಲೆಯಲ್ಲಿ ಸಾಧನೆ ಸಮಾವೇಶ ಮಾಡುತ್ತಿದ್ದು, ಬಡ ರೈತರ ಭೂಮಿ ಕಸಿದುಕೊಂಡು ಬೀದಿಗೆ ತಳ್ಳುತ್ತಿರುವುದೆ ಇವರ ಅತಿದೊಡ್ಡ ಸಾಧನೆ, ಇದೇ ಈ ಕಾಲದ ವ್ಯಂಗ್ಯ. ಇದು ಈ ತಾಲ್ಲೂಕಿನ ಬಡ ರೈತರ ಸಮಾದಿಗಳ ಮೇಲೆ ನಡೆಸುತ್ತಿರುವ ಸಮಾವೇಶ” ಎಂದರು.

“ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪನವರನ್ನು ಇತ್ತೀಚೆಗೆ ಬೇಟಿಯಾದಾಗಲೂ ರೈತರಿಗೆ ಯಾವುದೇ ಆತಂಕ ಬೇಡ, ನಾನು ರೈತರ ಪರವಾಗಿದ್ದು ಭೂಮಿಯನ್ನು ಉಳಿಸುತ್ತೇನೆ ಎಂದು ಹೇಳಿರುತ್ತಾರೆ. ಆದ್ದರಿಂದ, ರೈತರಿಗೆ ವಿಶ್ವಾಸದ್ರೋಹ‌ ಮಾಡದೆ, ತಕ್ಷಣವೇ ಈ ಅಧಿಸೂಚನೆಯನ್ನು ಹಿಂಪಡೆಯುವಂತೆ ಸರ್ಕಾರದ ಮೇಲೆ ಒತ್ತಡ ಹೇರಿ ರೈತರಿಗೆ ನ್ಯಾಯ ಒದಗಿಸಬೇಕು” ಎಂದು ರೈತರು ಒತ್ತಾಯಿಸಿದರು.

“ಸರ್ಕಾರಕ್ಕೆ ಕಿಂಚಿತ್ತಾದರೂ ಬದ್ದತೆ ಇದ್ದರೆ, ನಾಳೆ ನಡೆಯುವ ಸಮಾವೇಶದಲ್ಲಿ ಚನ್ನರಾಯಪಟ್ಟಣ ಹೋಬಳಿಯ ರೈತರ ಭೂಮಿಯನ್ನು ಸ್ವಾಧೀನದಿಂದ ಕೈಬಿಡುವ ಘೋಷಣೆ ಮಾಡುವ ಮೂಲಕ ತಮ್ಮ ಘನತೆಯನ್ನು ಉಳಿಸಿಕೊಳ್ಳಲಿ. ಇಲ್ಲವಾದಲ್ಲಿ ಅತಿ ಶೀಘ್ರದಲ್ಲಿ ರೈತರ ತೀವ್ರ ಪ್ರತಿರೋಧ ಎದುರಿಸಲು ಸಜ್ಜಾಗಿ. ಇಷ್ಟು ದಿನಗಳ ಕಾಲ ಶಾಂತಿಯುತವಾಗಿ ಧರಣಿ ಕುಳಿತಿದ್ದೆವು. ಆದರೆ, ಈ ಬಾರಿ ರಕ್ತಪಾತವಾದರೂ ಸರಿ, ನಮ್ಮ ಪ್ರಾಣತ್ಯಾಗವಾದರು ಸರಿ ನಮ್ಮ ಭೂಮಿಯನ್ನು ಉಳಿಸಿಕೊಳ್ಳುವ ಶಪತ ತೊಟ್ಟು ಹೋರಾಟಕ್ಕೆ ದುಮುಕುತ್ತೇವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಭೆಯಲ್ಲಿ ನೀರಾವರಿ ಹೋರಾಟಗಾರರಾದ ಆಂಜನೇಯರೆಡ್ಡಿ, ಪ್ರಾಂತ್ಯ ರೈತ ಸಂಘದ ಚಂದ್ರತೇಜಸ್ವಿ, ಪ್ರಭಾ ಬೆಳವಂಗಲ, ರೈತ ಮುಖಂಡರಾದ ಕಾರಳ್ಳಿ ಶ್ರೀನಿವಾಸ್, ನಲ್ಲಪ್ಪನಹಳ್ಳಿ ನಂಜಪ್ಪ, ಅಶ್ವತ್ಥಪ್ಪ, ತಿಮ್ಮರಾಯಪ್ಪ,ವೆಂಕಟೇಶ್, ಮುಕುಂದ, ಪ್ರಮೋದ್, ಮೋಹನ್, ಮಂಜುನಾಥ್, ಮಾರೇಗೌಡ ಸೇರಿದಂತೆ ನೂರಾರು ರೈತರು ಭಾಗಿಯಾಗಿದ್ದರು.

ಎದೆಗೆ ಬಿದ್ದ ಸಂವಿಧಾನ-ಭೂಮಿಗೆ ಬಿದ್ದ ಬೀಜ ಒಂದಲ್ಲ ಒಂದು ದಿನ ಫಲ ಕೊಡುತ್ತದೆ: ಮಾವಳ್ಳಿ ಶಂಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...