Homeಕರ್ನಾಟಕದೇವನಹಳ್ಳಿ| ಕೆಐಎಡಿಬಿ ಅಂತಿಮ ಅಧಿಸೂಚನೆ ಪ್ರತಿ ಸುಟ್ಟು ಆಕ್ರೋಶ; ಸರ್ಕಾರದ ವಿರುದ್ಧ ಸೆಟೆದು ನಿಂತ ಚನ್ನರಾಯಪಟ್ಟಣ...

ದೇವನಹಳ್ಳಿ| ಕೆಐಎಡಿಬಿ ಅಂತಿಮ ಅಧಿಸೂಚನೆ ಪ್ರತಿ ಸುಟ್ಟು ಆಕ್ರೋಶ; ಸರ್ಕಾರದ ವಿರುದ್ಧ ಸೆಟೆದು ನಿಂತ ಚನ್ನರಾಯಪಟ್ಟಣ ರೈತರು

- Advertisement -
- Advertisement -

ರೈತರ ಪ್ರತಿರೋಧವನ್ನೂ ಲೆಕ್ಕಿಸದೆ ಬಲವಂತದ ಭೂಸ್ವಾಧೀನಕ್ಕೆ ಮುಂದಾಗಿರುವ ಸರ್ಕಾರ, ಎರಡು ದಿನಗಳ ಹಿಂದಷ್ಟೇ ಚನ್ನರಾಯಪಟ್ಟಣ ಹೋಬಳಿಯ ಎಂಟು ಹಳ್ಳಿಗಳಿಗೆ ಅಂತಿಮ ಅಧಿಸೂಚನೆಯನ್ನು ಹೊರಡಿಸಿದೆ. ಈ ಬಗ್ಗೆ ಆಕ್ರೋಶಗೊಂಡಿರುವ ರೈತರು, ಚನ್ನರಾಯಪಟ್ಟಣ ನಾಡ ಕಚೇರಿ ಮುಂಭಾಗದ ಧರಣಿ ಸ್ಥಳದಲ್ಲಿ ಸಭೆ ನಡೆಸಿದರು. ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಹೊರಡಿಸಿರುವ ಅಂತಿಮ‌ ಅಧಿಸೂಚನೆಯನ್ನು ಸುಡುವ ಮೂಲಕ ಪ್ರತಿರೋಧ ವ್ಯಕ್ತಪಡಿಸಿದರು.

“ಯಾವುದೇ ಕಾರಣಕ್ಕೂ ಭೂಮಿ ಬಿಡುವ ಪ್ರಶ್ನೆಯೇ ಇಲ್ಲ, ನಮ್ಮ ಪ್ರಾಣತ್ಯಾಗವಾದರೂ ಸರಿ ನಾವು ಭೂಮಿ ಬಿಡುವುದಿಲ್ಲ, ಭೂಮಿ ತಂಟೆಗೆ ಬಂದವರನ್ನೂ ಸುಮ್ಮನೆ ಬಿಡುವುದಿಲ್ಲ” ಎಂದು ರೈತರು ಸರ್ಕಾರದ ವಿರುದ್ಧ ಸೆಟೆದು ನಿಂತಿದ್ದಾರೆ.

ಕಳೆದ ಮೂರುವರೆ ವರ್ಷಗಳಿಂದ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ 1777 ಎಕರೆ ಭೂಸ್ವಾಧೀನವನ್ನು ವಿರೋಧಿಸಿ ನಿರಂತರ ಧರಣಿ ನಡೆಸುತ್ತಿದ್ದರೂ, ಈ ಪೈಕಿ ಇದುವರೆಗೂ ಎರಡು ಹಂತದಲ್ಲಿ 10 ಹಳ್ಳಿಗಳ 1280 ಎಕರೆ ಭೂಮಿಗೆ ಅಂತಿಮ ಅಧಿಸೂಚನೆಯನ್ನು ಹೊರಡಿಸಿದೆ. ಈ ಸರ್ಕಾರದ ಆದೇಶವನ್ನು ಖಂಡಿಸಿ ಮಾತನಾಡಿದ ರೈತರು “ಜನರ ಸಂಪೂರ್ಣ ವಿರೋಧದ ನಡುವೆಯು ಸರ್ಕಾರ ಬಲವಂತವಾಗಿ ಭೂಸ್ವಾಧೀನಕ್ಕೆ ಮುಂದಾಗಿರುವುದು ರೈತಸಮುದಾಯಕ್ಕೆ ಮಾಡುತ್ತಿರುವ ದ್ರೋಹ, ಇದನ್ನು ಸಹಿಸಲು ಸಾದ್ಯವೇ ಇಲ್ಲ” ಎಂದು ಆಕ್ರೋಶ ಹೊರಹಾಕಿದರು.

“ಈ ವಚನ ಭ್ರಷ್ಟ ಸರ್ಕಾರ, ಮಾತು ತಪ್ಪಿದ ಮುಖ್ಯಮಂತ್ರಿ ಮತ್ತು ಮಂತ್ರಿಗಳು ನಾಳೆ ನಮ್ಮ ಜಿಲ್ಲೆಯಲ್ಲಿ ಸಾಧನೆ ಸಮಾವೇಶ ಮಾಡುತ್ತಿದ್ದು, ಬಡ ರೈತರ ಭೂಮಿ ಕಸಿದುಕೊಂಡು ಬೀದಿಗೆ ತಳ್ಳುತ್ತಿರುವುದೆ ಇವರ ಅತಿದೊಡ್ಡ ಸಾಧನೆ, ಇದೇ ಈ ಕಾಲದ ವ್ಯಂಗ್ಯ. ಇದು ಈ ತಾಲ್ಲೂಕಿನ ಬಡ ರೈತರ ಸಮಾದಿಗಳ ಮೇಲೆ ನಡೆಸುತ್ತಿರುವ ಸಮಾವೇಶ” ಎಂದರು.

“ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪನವರನ್ನು ಇತ್ತೀಚೆಗೆ ಬೇಟಿಯಾದಾಗಲೂ ರೈತರಿಗೆ ಯಾವುದೇ ಆತಂಕ ಬೇಡ, ನಾನು ರೈತರ ಪರವಾಗಿದ್ದು ಭೂಮಿಯನ್ನು ಉಳಿಸುತ್ತೇನೆ ಎಂದು ಹೇಳಿರುತ್ತಾರೆ. ಆದ್ದರಿಂದ, ರೈತರಿಗೆ ವಿಶ್ವಾಸದ್ರೋಹ‌ ಮಾಡದೆ, ತಕ್ಷಣವೇ ಈ ಅಧಿಸೂಚನೆಯನ್ನು ಹಿಂಪಡೆಯುವಂತೆ ಸರ್ಕಾರದ ಮೇಲೆ ಒತ್ತಡ ಹೇರಿ ರೈತರಿಗೆ ನ್ಯಾಯ ಒದಗಿಸಬೇಕು” ಎಂದು ರೈತರು ಒತ್ತಾಯಿಸಿದರು.

“ಸರ್ಕಾರಕ್ಕೆ ಕಿಂಚಿತ್ತಾದರೂ ಬದ್ದತೆ ಇದ್ದರೆ, ನಾಳೆ ನಡೆಯುವ ಸಮಾವೇಶದಲ್ಲಿ ಚನ್ನರಾಯಪಟ್ಟಣ ಹೋಬಳಿಯ ರೈತರ ಭೂಮಿಯನ್ನು ಸ್ವಾಧೀನದಿಂದ ಕೈಬಿಡುವ ಘೋಷಣೆ ಮಾಡುವ ಮೂಲಕ ತಮ್ಮ ಘನತೆಯನ್ನು ಉಳಿಸಿಕೊಳ್ಳಲಿ. ಇಲ್ಲವಾದಲ್ಲಿ ಅತಿ ಶೀಘ್ರದಲ್ಲಿ ರೈತರ ತೀವ್ರ ಪ್ರತಿರೋಧ ಎದುರಿಸಲು ಸಜ್ಜಾಗಿ. ಇಷ್ಟು ದಿನಗಳ ಕಾಲ ಶಾಂತಿಯುತವಾಗಿ ಧರಣಿ ಕುಳಿತಿದ್ದೆವು. ಆದರೆ, ಈ ಬಾರಿ ರಕ್ತಪಾತವಾದರೂ ಸರಿ, ನಮ್ಮ ಪ್ರಾಣತ್ಯಾಗವಾದರು ಸರಿ ನಮ್ಮ ಭೂಮಿಯನ್ನು ಉಳಿಸಿಕೊಳ್ಳುವ ಶಪತ ತೊಟ್ಟು ಹೋರಾಟಕ್ಕೆ ದುಮುಕುತ್ತೇವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಭೆಯಲ್ಲಿ ನೀರಾವರಿ ಹೋರಾಟಗಾರರಾದ ಆಂಜನೇಯರೆಡ್ಡಿ, ಪ್ರಾಂತ್ಯ ರೈತ ಸಂಘದ ಚಂದ್ರತೇಜಸ್ವಿ, ಪ್ರಭಾ ಬೆಳವಂಗಲ, ರೈತ ಮುಖಂಡರಾದ ಕಾರಳ್ಳಿ ಶ್ರೀನಿವಾಸ್, ನಲ್ಲಪ್ಪನಹಳ್ಳಿ ನಂಜಪ್ಪ, ಅಶ್ವತ್ಥಪ್ಪ, ತಿಮ್ಮರಾಯಪ್ಪ,ವೆಂಕಟೇಶ್, ಮುಕುಂದ, ಪ್ರಮೋದ್, ಮೋಹನ್, ಮಂಜುನಾಥ್, ಮಾರೇಗೌಡ ಸೇರಿದಂತೆ ನೂರಾರು ರೈತರು ಭಾಗಿಯಾಗಿದ್ದರು.

ಎದೆಗೆ ಬಿದ್ದ ಸಂವಿಧಾನ-ಭೂಮಿಗೆ ಬಿದ್ದ ಬೀಜ ಒಂದಲ್ಲ ಒಂದು ದಿನ ಫಲ ಕೊಡುತ್ತದೆ: ಮಾವಳ್ಳಿ ಶಂಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...