Homeಮುಖಪುಟಬಲವಂತದ ಮದುವೆಗೆ ಒಪ್ಪದ ಅಪ್ರಾಪ್ತ ಬಾಲಕಿಯ ಅಪಹರಣ: ಪೊಲೀಸ್ ನಿಷ್ಕ್ರಿಯತೆಯ ಬಗ್ಗೆ ತಾಯಿ ಆರೋಪ

ಬಲವಂತದ ಮದುವೆಗೆ ಒಪ್ಪದ ಅಪ್ರಾಪ್ತ ಬಾಲಕಿಯ ಅಪಹರಣ: ಪೊಲೀಸ್ ನಿಷ್ಕ್ರಿಯತೆಯ ಬಗ್ಗೆ ತಾಯಿ ಆರೋಪ

- Advertisement -
- Advertisement -

ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ 17 ವರ್ಷದ ಬಾಲಕಿಯನ್ನು ಬಲವಂತದ ಮದುವೆಗೆ ಒತ್ತಡದ ನಡುವೆ ಅಪಹರಿಸಲಾಗಿದೆ ಎಂದು ಆರೋಪಿಸಲಾಗಿದೆ. ಪೊಲೀಸ್ ದೂರು ನೀಡಿ ಸಹಾಯಕ್ಕಾಗಿ ಪದೇ ಪದೇ ಮನವಿ ಮಾಡಿದರೂ ಸ್ಥಳೀಯ ಅಧಿಕಾರಿಗಳು ಕ್ರಮ ಕೈಗೊಳ್ಳಲು ವಿಫಲರಾಗಿದ್ದಾರೆ ಎಂದು ಸಂತ್ರಸ್ತೆಯ ಕುಟುಂಬ ಆರೋಪಿಸಿರುವುದಾಗಿ ಮಕ್ತೂಬ್ ಮೀಡಿಯಾ ವರದಿ ಮಾಡಿದೆ. 

11ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದ ಅಪ್ರಾಪ್ತ ಬಾಲಕಿಯನ್ನು ರಾಜಾ ಮತ್ತು ಡಕುವಾ ಎಂದು ಕುಟುಂಬದಿಂದ ಗುರುತಿಸಲ್ಪಟ್ಟ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆಕೆಯ ತಾಯಿ ಹೌರಾ ನಿವಾಸಿ ಗುಲ್ಶನ್ ಬೇಗಂ ತಿಳಿಸಿದ್ದಾರೆ.

ಬಲವಂತದ ಮದುವೆಗೆ ಹುಡುಗಿ ನಿರಂತರ ಒತ್ತಡಕ್ಕೊಳಗಾಗಿದ್ದಳು, ಆದರೆ ಅವಳು ಕಾನೂನುಬದ್ಧವಾಗಿ ಅಪ್ರಾಪ್ತ ವಯಸ್ಕಳಾಗಿದ್ದರಿಂದ ಮತ್ತು ಹುಡುಗ ಸೂಕ್ತನಲ್ಲದ ಕಾರಣ ಮದುವೆಯನ್ನು ನಿರಾಕರಿಸಿದ್ದಾಗಿ ಕುಟುಂಬ ತಿಳಿಸಿದೆ. 

ಈ ಬಗ್ಗೆ ಮಕ್ತೂಬ್ ಮೀಡಿಯಾದ ಜೊತೆ ಮಾತನಾಡಿರುವ ಬಾಲಕಿಯ ತಾಯಿ ಗುಲ್ಶನ್ ಬೇಗಂ, ಬೆದರಿಕೆಗಳು ಸ್ಪಷ್ಟವಾಗಿದ್ದವು ಎಂದು ಹೇಳಿದ್ದಾರೆ. “ಸುಲ್ತಾನ್‌ಪುರದ ಹುಡುಗ ಮತ್ತು ಅವನ ಚಿಕ್ಕಪ್ಪ ನಮಗೆ ಸ್ಪಷ್ಟವಾಗಿ ಹೇಳಿದ್ದರು, ನೀವು ಮದುವೆಗೆ ಒಪ್ಪದಿದ್ದರೆ, ನಾವು ನಿಮ್ಮ ಮಗಳನ್ನು ಕರೆದುಕೊಂಡು ಹೋಗುತ್ತೇವೆ” ಎಂದು ಹೇಳಿದ್ದರು. “ಈ ಮದುವೆಗೆ ನಾವು ಬೇಡ ಅಂದೆವು ಏಕೆಂದರೆ ಅವಳಿಗೆ ಕೇವಲ 17 ವರ್ಷ ಮತ್ತು ಇನ್ನೂ ಓದುತ್ತಿದ್ದಳು. ಅವಳು ಓದಲು ಬಯಸಿದ್ದಳು ಮತ್ತು ಅವಳಿಗೆ ಆ ಹುಡುಗ ಇಷ್ಟವಿರಲಿಲ್ಲ” ಎಂದು ಹೇಳಿದ್ದಾರೆ. 

ಕುಟುಂಬದ ಪ್ರಕಾರ, ಬೆದರಿಕೆಗಳ ನಂತರ ಬಾಲಕಿಯ ಅಪಹರಣ ನಡೆದಿದೆ. ಗುಲ್ಶನ್ ಬೇಗಂ ಅವರು ತಮ್ಮ ಮಗಳನ್ನು ಅಂದಿನಿಂದ ತನ್ನ ಇಚ್ಛೆಗೆ ವಿರುದ್ಧವಾಗಿ ಬಂಧಿಸಲಾಗಿದೆ ಎಂದು ಹೇಳಿದ್ದಾರೆ. 

“ನನ್ನ ಮಗಳನ್ನು ಬಲವಂತವಾಗಿ ಕರೆದುಕೊಂಡು ಹೋಗಲಾಗಿದೆ. ಅವಳು ಇನ್ನೂ ಮಗು,”ಅವಳು ದುಃಖಿಸುತ್ತಾ ಹೇಳಿದಳು. “ಅಂದಿನಿಂದ ನಾವು ಅವಳನ್ನು ನೋಡಿಲ್ಲ.”

ಜನವರಿ 22 ರಂದು ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿ, ಬೆದರಿಕೆಗಳು, ಬಲವಂತದ ಮದುವೆಗೆ ಯತ್ನಿಸಿದ್ದು ಮತ್ತು ಅಪಹರಣದ ಆರೋಪದ ಬಗ್ಗೆ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿರುವುದಾಗಿ ಕುಟುಂಬ ತಿಳಿಸಿದೆ. ಆದರೆ, ಯಾವುದೇ ನಿರ್ದಿಷ್ಟ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಅವರು ಹೇಳಿಕೊಂಡಿದ್ದಾರೆ.

“ಎರಡು ದಿನಗಳು ಕಳೆದಿವೆ. ನಾವು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಓಡುತ್ತಿದ್ದೇವೆ” ಎಂದು ಗುಲ್ಶನ್ ಬೇಗಂ ಹೇಳಿದರು.

“ನಾವು ಬಡವರು. ನಮ್ಮ ಮಗುವಿಗಾಗಿ ಹಗಲಿರುಳು ಅಳುತ್ತಿದ್ದೇವೆ, ಆದರೆ ಆಡಳಿತ ಮೌನವಾಗಿ ಕುಳಿತಿದೆ. ಎಫ್‌ಐಆರ್ ದಾಖಲಾದ ನಂತರವೂ ಆರೋಪಿಗಳು ಮತ್ತು ಅವರ ಸಹಚರರು ದೂರನ್ನು ಹಿಂಪಡೆಯುವಂತೆ ಕುಟುಂಬದ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ತಾಯಿ ಆರೋಪಿಸಿದ್ದಾರೆ.

ಅಲ್ಲದೇ “ಅವರು ಮತ್ತೆ ನಮಗೆ ಬೆದರಿಕೆ ಹಾಕುತ್ತಿದ್ದಾರೆ, ಪ್ರಕರಣವನ್ನು ಹಿಂದಕ್ಕೆ ತೆಗೆದುಕೊಳ್ಳುವಂತೆ ಕೇಳುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ. 

“ನಮಗೆ ಭಯವಾಗಿದೆ, ಆದರೆ ಒಬ್ಬ ತಾಯಿ ತನ್ನ ಮಗಳು ಕಾಣೆಯಾದಾಗ ಹೇಗೆ ಮೌನವಾಗಿರಲು ಸಾಧ್ಯ?” ಎಂದು ಪ್ರಶ್ನಿಸಿದ್ದಾರೆ. 

ಪ್ರಕರಣ ಸಂಬಂಢ ಅಪಹರಣಕ್ಕಾಗಿ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 137(20) ಮತ್ತು 140(3) ಅಡಿಯಲ್ಲಿ ಜಗಚಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

“ಹುಡುಗಿ ಮತ್ತು ಹುಡುಗ ಇಬ್ಬರೂ ಪತ್ತೆಯಾಗಿಲ್ಲ” ಎಂದು ಜಗಚಾ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. 

“ನಾವು ಹುಡುಗನ ಮೊಬೈಲ್ ಸಂಖ್ಯೆಯನ್ನು ಟ್ರ್ಯಾಕ್ ಮಾಡಲು ನಿರಂತರವಾಗಿ ಪ್ರಯತ್ನಿಸುತ್ತಿದ್ದೇವೆ, ಆದರೆ ಅದು ಇನ್ನೂ ಸ್ವಿಚ್ ಆಫ್ ಆಗಿದೆ. ಸುಳಿವು ಸಿಕ್ಕ ತಕ್ಷಣ, ನಾವು ಅವನನ್ನು ಬಂಧಿಸಿ ಮುಂದಿನ ತನಿಖೆಯನ್ನು ಮುಂದುವರಿಸುತ್ತೇವೆ ಎಂದಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...