Homeಮುಖಪುಟಅಪ್ರಾಪ್ತ ಮುಸ್ಲಿಂ ಬಾಲಕಿಯ ಅಪಹರಣ: ಸಾಕ್ಷ್ಯ ನೀಡಿದರೂ ಆರೋಪಿಯ ಬಂಧಿಸದ ಪೊಲೀಸರು

ಅಪ್ರಾಪ್ತ ಮುಸ್ಲಿಂ ಬಾಲಕಿಯ ಅಪಹರಣ: ಸಾಕ್ಷ್ಯ ನೀಡಿದರೂ ಆರೋಪಿಯ ಬಂಧಿಸದ ಪೊಲೀಸರು

- Advertisement -
- Advertisement -

ಅಸ್ಸಾಂನ ಧುಬ್ರಿ ಜಿಲ್ಲೆಯ ಚಿರಕೋಟಾ ಗ್ರಾಮದ 13 ವರ್ಷದ ಮುಸ್ಲಿಂ ಬಾಲಕಿಯನ್ನು ಉತ್ತರ ಪ್ರದೇಶದ ಯುವಕನೊಬ್ಬ ಪ್ರೀತಿಯ ಬಲೆಯಲ್ಲಿ ಸಿಲುಕಿಸಿ ಅಪಹರಿಸಿರುವ ಘಟನೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಯು ಸ್ಥಳೀಯ ಮುಸ್ಲಿಂ ಸಮುದಾಯದಲ್ಲಿ ಹೆಚ್ಚುತ್ತಿರುವ ಕೋಪಕ್ಕೆ ಕಾರಣವಾಗಿದ್ದು, ಈ ಕುರಿತು ಪೊಲೀಸರ ನಿರ್ಲಕ್ಷ್ಯವು ಸ್ಥಳೀಯರ ಆಕ್ರೋಶಕ್ಕೆ ತುತ್ತಾಗಿದೆ.

ಧುಬ್ರಿಯ ಬಾಲಾಜಿ ಇಟ್ಟಿಗೆ ಉದ್ಯಮದಲ್ಲಿ ಕೆಲಸ ಮಾಡುತ್ತುದ್ದ ಪ್ರೇಮಚಂದ್ ಅಲಿಯಾಸ್ ಲಕ್ಕಿ ಎಂದು ಗುರುತಿಸಲಾದ ಆರೋಪಿಯು ತನ್ನ ಮಗಳೊಂದಿಗೆ ಸ್ನೇಹ ಬೆಳೆಸಿ ಅಂತಿಮವಾಗಿ ಅವಳನ್ನು ಕರೆದೊಯ್ದಿದ್ದಾನೆ ಎಂದು ಹುಡುಗಿಯ ತಂದೆ ಹೇಳಿದ್ದಾರೆ. ತನ್ನ ಮಗಳನ್ನು ವೇಶ್ಯಾವಾಟಿಕೆ ಅಥವಾ ಮಾನವ ಕಳ್ಳಸಾಗಣೆಕೆಗೆ ಮಾರಾಟ ಮಾಡಬಹುದೆಂಬ ಭಯದಿಂದ ತಂದೆ ಒಂದು ವಾರದ ಹಿಂದೆ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆದರೆ, ಪೊಲೀಸರು ಇನ್ನೂ ಯಾವುದೇ ಮಹತ್ವದ ಕ್ರಮ ಕೈಗೊಳ್ಳದಿರುವುದು ಸಮುದಾಯದೊಳಗೆ ಬೇಸರ ಮೂಡಿಸಿದೆ.

ಪ್ರೇಮಚಂದ್ ಕುರಿತು ತಿಳಿದಿರುವ ಇಟ್ಟಿಗೆ ಉದ್ಯಮದ ಹಲವಾರು ಕಾರ್ಮಿಕರು ಮುಂದೆ ಬಂದು, ಅವನು ಹುಡುಗಿಯೊಂದಿಗೆ ಉತ್ತರ ಪ್ರದೇಶಕ್ಕೆ ಹಿಂತಿರುಗಿದ್ದಾನೆ ಎಂದು ಖಚಿತಪಡಿಸಿದ್ದಾರೆ. ಇಷ್ಟೆಲ್ಲಾ ಸಾಕ್ಷ್ಯಗಳಿದ್ದರೂ ಪೊಲೀಸರು ಪ್ರಕರಣದಲ್ಲಿ ಯಾವುದೇ ಪ್ರಗತಿ ಸಾಧಿಸಿಲ್ಲ. ಮುಸ್ಲಿಮ್ ಯುವಕರು ಮತ್ತು ಮುಸ್ಲಿಮೇತರ ಅಪರಾಧಿಗಳನ್ನು ಒಳಗೊಂಡ ಪ್ರಕರಣಗಳಲ್ಲಿ ಪೊಲೀಸರು ನಡೆದುಕೊಳ್ಳುವ ರೀತಿಯಲ್ಲಿ ಸಂಪೂರ್ಣ ವ್ಯತಿರಿಕ್ತತೆಯನ್ನು ಇದು ತೋರಿಸುತ್ತದೆ. ಇದು ಬಾಲಕಿಯ ಕುಟುಂಬ ಮತ್ತು ಸ್ಥಳೀಯರಲ್ಲಿ ಹೆಚ್ಚುತ್ತಿರುವ ಅಸಮಾಧಾನವನ್ನು ತೋರ್ಪಡಿಸುತ್ತಿದೆ.

ಪ್ರತಿ ಬಾರಿ ಮುಸ್ಲಿಂ ಹುಡುಗನು ಇದೇ ರೀತಿಯ ಪರಿಸ್ಥಿತಿಯಲ್ಲಿ ತೊಡಗಿಸಿಕೊಂಡಾಗ, ಅವನನ್ನು ತ್ವರಿತವಾಗಿ ಬಂಧಿಸಲಾಗುತ್ತದೆ ಮತ್ತು ಅದನ್ನು ಲವ್ ಜಿಹಾದ್ ನ ಹಣೆಪಟ್ಟಿ ಕಟ್ಟಲಾಗುತ್ತದೆ ಎಂದು ಹುಡುಗಿಯ ತಂದೆ ಹೇಳಿದ್ದಾರೆ. ಆದರೆ ಇಲ್ಲಿ, ಆರೋಪಿ ಮುಸ್ಲಿಮೇತರನಾಗಿದ್ದಕ್ಕಾಗಿ ಪೊಲೀಸರು ಅಸಡ್ಡೆ ತೋರುತ್ತಿದ್ದಾರೆ. ಯಾಕೆ ಈ ಡಬಲ್ ಸ್ಟಾಂಡರ್ಡ್? ಎಂದು ಅವರು ಪ್ರಶ್ನಿಸಿದ್ದಾರೆ.

ಆರೋಪಿ ಮತ್ತು ಬಲಿಪಶುವಿನ ಧಾರ್ಮಿಕ ಗುರುತಿನಿಂದಾಗಿ ಅಧಿಕಾರಿಗಳು ಈ ಪ್ರಕರಣದಲ್ಲಿ ಕಣ್ಣು ಮುಚ್ಚಿದ್ದಾರೆ ಎಂದು ಸಮುದಾಯವು ಆರೋಪಿಸುತ್ತಿದೆ. ಇದು ಸ್ಥಳೀಯರ ಇನ್ನಷ್ಟು ಕೋಪಕ್ಕೆ ಕಾರಣವಾಗಿದೆ.

ರಾಜ್ಯದ ವಕೀಲ ಸಮುದಾಯದ ಪ್ರಮುಖರಾದ ಹಿರಿಯ ವಕೀಲ ಇಲ್ಯಾಸ್ ಅಹಮದ್ ಅವರು ತಮ್ಮ ಕಳವಳವನ್ನು ವ್ಯಕ್ತಪಡಿಸಿದ್ದಾರೆ. “ಇವಳು ಹಿಂದೂ ಹುಡುಗಿಯಾಗಿದ್ದರೆ, ಈ ವಿಷಯವನ್ನು ಲವ್ ಜಿಹಾದ್ ಎಂದು ಹಣೆಪಟ್ಟಿ ಕಟ್ಟಲಾಗುತ್ತಿತ್ತು ಮತ್ತು ಪೊಲೀಸರು ಶೀಘ್ರವಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ಅಹ್ಮದ್ ಹೇಳಿದ್ದಾರೆ. “ಆದರೆ ಇದು ಮುಸ್ಲಿಂ ಬಾಲಕಿಯ ವಿಷಯವಾಗಿರುವುದರಿಂದ ಇದಕ್ಕೆ ಪೊಲೀಸರ ಪ್ರತಿಕ್ರಿಯೆಯು ಆಲಸ್ಯದಿಂದ ಕೂಡಿದೆ. ಇದು ಗಂಭೀರ ಅನ್ಯಾಯವಾಗಿದೆ” ಎಂದಿದ್ದಾರೆ.

ಅಸ್ಸಾಂ ಸರ್ಕಾರ ಮತ್ತು ಪೊಲೀಸರು ತುರ್ತಾಗಿ ಮಧ್ಯಪ್ರವೇಶಿಸಬೇಕು ಎಂದು ವಕೀಲ ಅಹ್ಮದ್ ಕರೆ ನೀಡಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾಗಿ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ. ಇಂತಹ ಪ್ರಕರಣದಲ್ಲಿ ಪೊಲೀಸರು ಕಾರ್ಯನಿರ್ವಹಿಸದಿರುವುದು ವಿಭಜಕ ಮನಸ್ಥಿತಿಯನ್ನು ಇನ್ನಷ್ಟು ಆಳವಾಗಿಸಲು ಮತ್ತು ಕಾನೂನು ಜಾರಿಯ ನಿಷ್ಪಕ್ಷಪಾತದ ಬಗ್ಗೆ ಪ್ರಶ್ನೆಗಳನ್ನು ಎತ್ತುವಂತೆ ಮಾಡುತ್ತದೆ ಎಂದು ಅವರು ಒತ್ತಿ ಹೇಳಿದ್ದಾರೆ.

ಹೆಚ್ಚುತ್ತಿರುವ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಗ್ರಾಮಸ್ಥರು ಮತ್ತು ಸ್ಥಳೀಯ ಮುಸ್ಲಿಂ ಸಮುದಾಯದ ಸದಸ್ಯರು  ತಮ್ಮ ಕಳವಳವನ್ನು ಅಧಿಕಾರಿಗಳು ಪರಿಹರಿಸಬೇಕು ಮತ್ತು ಪೊಲೀಸರು ತೋರುತ್ತಿರುವ ಪಕ್ಷಪಾತವನ್ನು ನಿಲ್ಲಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ. “ಸಂತ್ರಸ್ತರು ಅಥವಾ ಆರೋಪಿಯು ಯಾವುದೇ ಸಮುದಾಯಕ್ಕೆ ಸೇರಿದವರಾಗಿದ್ದರೂ ಕಾನೂನನ್ನು ಸಮಾನವಾಗಿ ಅನ್ವಯಿಸಬೇಕು” ಎಂದು ನಿವಾಸಿಯೊಬ್ಬರು ಹೇಳಿದ್ದಾರೆ.

ಕುಟುಂಬವು ನ್ಯಾಯಕ್ಕಾಗಿ ಕಾಯುತ್ತಿರುವಾಗ, ಈ ಪ್ರಕರಣದಲ್ಲಿ ತಾರತಮ್ಯ ಮಾಡುತ್ತಿರುವುದನ್ನು ಎತ್ತಿ ತೋರಿಸುತ್ತದೆ ಮತ್ತು ಅವರ ಧಾರ್ಮಿಕ ಹಿನ್ನೆಲೆಯನ್ನು ಲೆಕ್ಕಿಸದೆ ಎಲ್ಲಾ ನಾಗರಿಕರಿಗೆ ಕಾನೂನಿನ ಅಡಿಯಲ್ಲಿ ಸಮಾನ ರಕ್ಷಣೆಯ ಅಗತ್ಯವನ್ನು ತೋರಿಸುತ್ತದೆ.

ಅಲ್ಲಾ ಕುರಿತು ಸಾಲು: ‘ರಘುಪತಿ ರಾಘವ ರಾಜ ರಾಮ್’ ಹಾಡದಂತೆ ತಡೆದ ಬಿಜೆಪಿ ನಾಯಕರು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...