Homeಮುಖಪುಟಅಪ್ರಾಪ್ತ ಮುಸ್ಲಿಂ ಬಾಲಕಿಯ ಅಪಹರಣ: ಸಾಕ್ಷ್ಯ ನೀಡಿದರೂ ಆರೋಪಿಯ ಬಂಧಿಸದ ಪೊಲೀಸರು

ಅಪ್ರಾಪ್ತ ಮುಸ್ಲಿಂ ಬಾಲಕಿಯ ಅಪಹರಣ: ಸಾಕ್ಷ್ಯ ನೀಡಿದರೂ ಆರೋಪಿಯ ಬಂಧಿಸದ ಪೊಲೀಸರು

- Advertisement -
- Advertisement -

ಅಸ್ಸಾಂನ ಧುಬ್ರಿ ಜಿಲ್ಲೆಯ ಚಿರಕೋಟಾ ಗ್ರಾಮದ 13 ವರ್ಷದ ಮುಸ್ಲಿಂ ಬಾಲಕಿಯನ್ನು ಉತ್ತರ ಪ್ರದೇಶದ ಯುವಕನೊಬ್ಬ ಪ್ರೀತಿಯ ಬಲೆಯಲ್ಲಿ ಸಿಲುಕಿಸಿ ಅಪಹರಿಸಿರುವ ಘಟನೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಯು ಸ್ಥಳೀಯ ಮುಸ್ಲಿಂ ಸಮುದಾಯದಲ್ಲಿ ಹೆಚ್ಚುತ್ತಿರುವ ಕೋಪಕ್ಕೆ ಕಾರಣವಾಗಿದ್ದು, ಈ ಕುರಿತು ಪೊಲೀಸರ ನಿರ್ಲಕ್ಷ್ಯವು ಸ್ಥಳೀಯರ ಆಕ್ರೋಶಕ್ಕೆ ತುತ್ತಾಗಿದೆ.

ಧುಬ್ರಿಯ ಬಾಲಾಜಿ ಇಟ್ಟಿಗೆ ಉದ್ಯಮದಲ್ಲಿ ಕೆಲಸ ಮಾಡುತ್ತುದ್ದ ಪ್ರೇಮಚಂದ್ ಅಲಿಯಾಸ್ ಲಕ್ಕಿ ಎಂದು ಗುರುತಿಸಲಾದ ಆರೋಪಿಯು ತನ್ನ ಮಗಳೊಂದಿಗೆ ಸ್ನೇಹ ಬೆಳೆಸಿ ಅಂತಿಮವಾಗಿ ಅವಳನ್ನು ಕರೆದೊಯ್ದಿದ್ದಾನೆ ಎಂದು ಹುಡುಗಿಯ ತಂದೆ ಹೇಳಿದ್ದಾರೆ. ತನ್ನ ಮಗಳನ್ನು ವೇಶ್ಯಾವಾಟಿಕೆ ಅಥವಾ ಮಾನವ ಕಳ್ಳಸಾಗಣೆಕೆಗೆ ಮಾರಾಟ ಮಾಡಬಹುದೆಂಬ ಭಯದಿಂದ ತಂದೆ ಒಂದು ವಾರದ ಹಿಂದೆ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆದರೆ, ಪೊಲೀಸರು ಇನ್ನೂ ಯಾವುದೇ ಮಹತ್ವದ ಕ್ರಮ ಕೈಗೊಳ್ಳದಿರುವುದು ಸಮುದಾಯದೊಳಗೆ ಬೇಸರ ಮೂಡಿಸಿದೆ.

ಪ್ರೇಮಚಂದ್ ಕುರಿತು ತಿಳಿದಿರುವ ಇಟ್ಟಿಗೆ ಉದ್ಯಮದ ಹಲವಾರು ಕಾರ್ಮಿಕರು ಮುಂದೆ ಬಂದು, ಅವನು ಹುಡುಗಿಯೊಂದಿಗೆ ಉತ್ತರ ಪ್ರದೇಶಕ್ಕೆ ಹಿಂತಿರುಗಿದ್ದಾನೆ ಎಂದು ಖಚಿತಪಡಿಸಿದ್ದಾರೆ. ಇಷ್ಟೆಲ್ಲಾ ಸಾಕ್ಷ್ಯಗಳಿದ್ದರೂ ಪೊಲೀಸರು ಪ್ರಕರಣದಲ್ಲಿ ಯಾವುದೇ ಪ್ರಗತಿ ಸಾಧಿಸಿಲ್ಲ. ಮುಸ್ಲಿಮ್ ಯುವಕರು ಮತ್ತು ಮುಸ್ಲಿಮೇತರ ಅಪರಾಧಿಗಳನ್ನು ಒಳಗೊಂಡ ಪ್ರಕರಣಗಳಲ್ಲಿ ಪೊಲೀಸರು ನಡೆದುಕೊಳ್ಳುವ ರೀತಿಯಲ್ಲಿ ಸಂಪೂರ್ಣ ವ್ಯತಿರಿಕ್ತತೆಯನ್ನು ಇದು ತೋರಿಸುತ್ತದೆ. ಇದು ಬಾಲಕಿಯ ಕುಟುಂಬ ಮತ್ತು ಸ್ಥಳೀಯರಲ್ಲಿ ಹೆಚ್ಚುತ್ತಿರುವ ಅಸಮಾಧಾನವನ್ನು ತೋರ್ಪಡಿಸುತ್ತಿದೆ.

ಪ್ರತಿ ಬಾರಿ ಮುಸ್ಲಿಂ ಹುಡುಗನು ಇದೇ ರೀತಿಯ ಪರಿಸ್ಥಿತಿಯಲ್ಲಿ ತೊಡಗಿಸಿಕೊಂಡಾಗ, ಅವನನ್ನು ತ್ವರಿತವಾಗಿ ಬಂಧಿಸಲಾಗುತ್ತದೆ ಮತ್ತು ಅದನ್ನು ಲವ್ ಜಿಹಾದ್ ನ ಹಣೆಪಟ್ಟಿ ಕಟ್ಟಲಾಗುತ್ತದೆ ಎಂದು ಹುಡುಗಿಯ ತಂದೆ ಹೇಳಿದ್ದಾರೆ. ಆದರೆ ಇಲ್ಲಿ, ಆರೋಪಿ ಮುಸ್ಲಿಮೇತರನಾಗಿದ್ದಕ್ಕಾಗಿ ಪೊಲೀಸರು ಅಸಡ್ಡೆ ತೋರುತ್ತಿದ್ದಾರೆ. ಯಾಕೆ ಈ ಡಬಲ್ ಸ್ಟಾಂಡರ್ಡ್? ಎಂದು ಅವರು ಪ್ರಶ್ನಿಸಿದ್ದಾರೆ.

ಆರೋಪಿ ಮತ್ತು ಬಲಿಪಶುವಿನ ಧಾರ್ಮಿಕ ಗುರುತಿನಿಂದಾಗಿ ಅಧಿಕಾರಿಗಳು ಈ ಪ್ರಕರಣದಲ್ಲಿ ಕಣ್ಣು ಮುಚ್ಚಿದ್ದಾರೆ ಎಂದು ಸಮುದಾಯವು ಆರೋಪಿಸುತ್ತಿದೆ. ಇದು ಸ್ಥಳೀಯರ ಇನ್ನಷ್ಟು ಕೋಪಕ್ಕೆ ಕಾರಣವಾಗಿದೆ.

ರಾಜ್ಯದ ವಕೀಲ ಸಮುದಾಯದ ಪ್ರಮುಖರಾದ ಹಿರಿಯ ವಕೀಲ ಇಲ್ಯಾಸ್ ಅಹಮದ್ ಅವರು ತಮ್ಮ ಕಳವಳವನ್ನು ವ್ಯಕ್ತಪಡಿಸಿದ್ದಾರೆ. “ಇವಳು ಹಿಂದೂ ಹುಡುಗಿಯಾಗಿದ್ದರೆ, ಈ ವಿಷಯವನ್ನು ಲವ್ ಜಿಹಾದ್ ಎಂದು ಹಣೆಪಟ್ಟಿ ಕಟ್ಟಲಾಗುತ್ತಿತ್ತು ಮತ್ತು ಪೊಲೀಸರು ಶೀಘ್ರವಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ಅಹ್ಮದ್ ಹೇಳಿದ್ದಾರೆ. “ಆದರೆ ಇದು ಮುಸ್ಲಿಂ ಬಾಲಕಿಯ ವಿಷಯವಾಗಿರುವುದರಿಂದ ಇದಕ್ಕೆ ಪೊಲೀಸರ ಪ್ರತಿಕ್ರಿಯೆಯು ಆಲಸ್ಯದಿಂದ ಕೂಡಿದೆ. ಇದು ಗಂಭೀರ ಅನ್ಯಾಯವಾಗಿದೆ” ಎಂದಿದ್ದಾರೆ.

ಅಸ್ಸಾಂ ಸರ್ಕಾರ ಮತ್ತು ಪೊಲೀಸರು ತುರ್ತಾಗಿ ಮಧ್ಯಪ್ರವೇಶಿಸಬೇಕು ಎಂದು ವಕೀಲ ಅಹ್ಮದ್ ಕರೆ ನೀಡಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾಗಿ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ. ಇಂತಹ ಪ್ರಕರಣದಲ್ಲಿ ಪೊಲೀಸರು ಕಾರ್ಯನಿರ್ವಹಿಸದಿರುವುದು ವಿಭಜಕ ಮನಸ್ಥಿತಿಯನ್ನು ಇನ್ನಷ್ಟು ಆಳವಾಗಿಸಲು ಮತ್ತು ಕಾನೂನು ಜಾರಿಯ ನಿಷ್ಪಕ್ಷಪಾತದ ಬಗ್ಗೆ ಪ್ರಶ್ನೆಗಳನ್ನು ಎತ್ತುವಂತೆ ಮಾಡುತ್ತದೆ ಎಂದು ಅವರು ಒತ್ತಿ ಹೇಳಿದ್ದಾರೆ.

ಹೆಚ್ಚುತ್ತಿರುವ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಗ್ರಾಮಸ್ಥರು ಮತ್ತು ಸ್ಥಳೀಯ ಮುಸ್ಲಿಂ ಸಮುದಾಯದ ಸದಸ್ಯರು  ತಮ್ಮ ಕಳವಳವನ್ನು ಅಧಿಕಾರಿಗಳು ಪರಿಹರಿಸಬೇಕು ಮತ್ತು ಪೊಲೀಸರು ತೋರುತ್ತಿರುವ ಪಕ್ಷಪಾತವನ್ನು ನಿಲ್ಲಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ. “ಸಂತ್ರಸ್ತರು ಅಥವಾ ಆರೋಪಿಯು ಯಾವುದೇ ಸಮುದಾಯಕ್ಕೆ ಸೇರಿದವರಾಗಿದ್ದರೂ ಕಾನೂನನ್ನು ಸಮಾನವಾಗಿ ಅನ್ವಯಿಸಬೇಕು” ಎಂದು ನಿವಾಸಿಯೊಬ್ಬರು ಹೇಳಿದ್ದಾರೆ.

ಕುಟುಂಬವು ನ್ಯಾಯಕ್ಕಾಗಿ ಕಾಯುತ್ತಿರುವಾಗ, ಈ ಪ್ರಕರಣದಲ್ಲಿ ತಾರತಮ್ಯ ಮಾಡುತ್ತಿರುವುದನ್ನು ಎತ್ತಿ ತೋರಿಸುತ್ತದೆ ಮತ್ತು ಅವರ ಧಾರ್ಮಿಕ ಹಿನ್ನೆಲೆಯನ್ನು ಲೆಕ್ಕಿಸದೆ ಎಲ್ಲಾ ನಾಗರಿಕರಿಗೆ ಕಾನೂನಿನ ಅಡಿಯಲ್ಲಿ ಸಮಾನ ರಕ್ಷಣೆಯ ಅಗತ್ಯವನ್ನು ತೋರಿಸುತ್ತದೆ.

ಅಲ್ಲಾ ಕುರಿತು ಸಾಲು: ‘ರಘುಪತಿ ರಾಘವ ರಾಜ ರಾಮ್’ ಹಾಡದಂತೆ ತಡೆದ ಬಿಜೆಪಿ ನಾಯಕರು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...