Homeಕರ್ನಾಟಕಸಿಎಂ ಬೊಮ್ಮಾಯಿ, ಗೃಹಸಚಿವರನ್ನು ಕೊಲ್ಲಿ: ಕಾಳಿ ಸ್ವಾಮೀಜಿ ಪ್ರಚೋದನೆ

ಸಿಎಂ ಬೊಮ್ಮಾಯಿ, ಗೃಹಸಚಿವರನ್ನು ಕೊಲ್ಲಿ: ಕಾಳಿ ಸ್ವಾಮೀಜಿ ಪ್ರಚೋದನೆ

- Advertisement -
- Advertisement -

ಒಂದು ಸಮುದಾಯದ ವಿರುದ್ಧ ಸದಾ ದ್ವೇಷದ ಹೇಳಿಕೆಗಳನ್ನು ನೀಡುವ ರಿಷಿಕುಮಾರ ಸ್ವಾಮೀಜಿ ಅಲಿಯಾಸ್ ಕಾಳಿ ಸ್ವಾಮೀಜಿ ಈಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೃಹಸಚಿವ ಆರಗ ಜ್ಞಾನೇಂದ್ರ ಅವರ ಕೊಲೆಗೆ ಪ್ರಚೋದನೆ ನೀಡಿದ್ದಾರೆ.

ಅತ್ಯಂತ ಅವಹೇಳನಕಾರಿಯಾಗಿ, ಸಮುದಾಯಗಳ ನಡುವೆ ದ್ವೇಷ ಬಿತ್ತುವಂತೆ, ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯನ್ನು ಅಣಕಿಸುವಂತೆ ಮಾತನಾಡಿರುವ ಕಾಳಿ ಸ್ವಾಮೀಜಿ, “ಇನ್ನೂ 9 ಜನ ಮುಸ್ಲಿಮರ ತಲೆ ಕಡಿಯಬೇಕು” ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸುರತ್ಕಲ್‌ನಲ್ಲಿ ಫಾಝಿಲ್‌ ಎಂಬ ವ್ಯಕ್ತಿಯನ್ನು ಕೊಂದಿರುವ ಕುರಿತು ಮಾತನಾಡಿರುವ ಕಾಳಿ ಸ್ವಾಮೀಜಿ, “ನಮ್ಮವರೇ ಏನಾದರೂ ಹೊಡೆದಿದ್ದರೆ ನಾನು ಅವರಿಗೆ ಅಭಿನಂದನೆ ಸಲ್ಲಿಸುವೆ. ಇನ್ನು ಒಬ್ಬರನ್ನೇ ಕೊಂದಿರುವುದೆಂದು ಹೇಳುತ್ತಿದ್ದೀರಿ. ಇನ್ನು 9 ತಲೆ ಬೇಕು. ಅವರವರೇ ಹೊಡೆದುಕೊಂಡು ಸತ್ತು ಹೋಗಿದ್ದರೆ ನಮ್ಮವರಿಗೆ ಇನ್ನೂ ಮನಸ್ಥಿತಿ ಗಟ್ಟಿಯಾಗಿಲ್ಲ ಎಂದಷ್ಟೇ. ತುರುಕರೇ ನಿಮ್ಮ ಒಂದೊಂದು ಕತ್ತು ತಗಿಯಲಿಲ್ಲ ಎಂದರೆ ದೇವರಾಣೆಯೂ ಸುಧಾರಿಸಿಕೊಳ್ಳುವುದಿಲ್ಲ” ಎಂದು ಹೇಳಿಕೆ ನೀಡಿದ್ದಾರೆ.

“ನೀವು ನನ್ನನ್ನು ಎತ್ತಿ. ಎಸ್‌ಡಿಪಿಐ, ಪಿಎಫ್‌ಐ ………. ನನ್ನನ್ನು ಎತ್ತಿ. ನಿಮ್ಮ ಕೈಲಾದ್ರೆ ನಳಿನ್‌ ಕುಮಾರ್‌ ಕಟೀಲ್‌ರನ್ನು ಎತ್ತಿ. ನಿಮ್ಮ ಕೈಲಾದರೆ ಬೊಮ್ಮಾಯಿ, ಹೋಮ್‌ಮಿನಿಸ್ಟರ್‌ರನ್ನು ಎತ್ತಿ….” ಎಂದು ಹೇಳಿಕೆ ನೀಡಿದ್ದಾರೆ.

ಅತ್ಯಂತ ಕೆಟ್ಟ ಪದಗಳನ್ನು ಮುಸ್ಲಿಂ ಸಮುದಾಯದ ವಿರುದ್ಧ ಕಾಳಿ ಸ್ವಾಮೀಜಿ ಬಳಸಿದ್ದಾರೆ. “ನೀವು ನನ್ನನ್ನು ಹೊಡೆದ ತಕ್ಷಣ ಗೋದ್ರಾ ಹತ್ಯಾಕಾಂಡ ಶುರುವಾಗುತ್ತದೆ. ಗೋರಿಪಾಳ್ಯ, ಕಲಾಸಿಪಾಳ್ಯಕ್ಕೆ ನುಗ್ಗಿ ಬೆಂಕಿ ಹಚ್ಚಲಾಗುತ್ತದೆ. ನಮ್ಮ ತಾಕತ್ತು ಏನೆಂಬುದು ತೋರಿಸುತ್ತೇವೆ. ಹೊಡೆಯುವುದಾದರೆ ದೊಡ್ಡದನ್ನು ಹೊಡೆಯಿರಿ…. ಯಾವ ಶಾಂತಿ ಕಾಪಾಡಬೇಕು ಮುಖ್ಯಮಂತ್ರಿಗಳೇ…” ಎಂದು ಬಾಯಿಗೆ ಬಂದಂತೆ ಮಾತನಾಡಿರುವ ಅವರು ಸಿಕ್ಕಸಿಕ್ಕವರನ್ನು ಗುಂಡಿಕ್ಕಿ ಕೊಲ್ಲಲು ಪ್ರಚೋದಿಸಿದ್ದಾರೆ.

“ಮೂರು ದಿನದೊಳಗೆ ಎನ್‌ಕೌಂಟರ್‌ ಮಾಡಿ. ಇಲ್ಲವಾದರೆ ಪಾದಯಾತ್ರೆ ಮಾಡ್ತೀವಿ. ಒಂದು ಕತ್ತಿಗೆ ಹತ್ತು ಕತ್ತು ಉದುರಿಸಬೇಕು” ಎಂದು ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿರಿ: ಕೋಮುದ್ವೇಷ: ಕಾಳಿ ಸ್ವಾಮೀಜಿ ಮಾಡಿದ ಅವಾಂತರಗಳಿವು!

ಸರಣಿ ಕೊಲೆಗಳಿಂದ ಕರಾವಳಿ ಜನರು ಆತಂಕಿತರಾಗಿದ್ದಾರೆ. ಆದರೆ ಇಂತಹ ಸಂದರ್ಭದಲ್ಲಿ ಉರಿಯೋ ಬೆಂಕಿಗೆ ಪೆಟ್ರೋಲ್ ಸುರಿಯುವಂತೆ ಸ್ವಾಮೀಜಿ ಮಾತನಾಡಿದ್ದಾರೆ. ‌ಎಲ್ಲ ಸಮುದಾಯಗಳನ್ನು ಪ್ರೀತಿಯಿಂದ ನೋಡಬೇಕಾದ ಸ್ವಾಮೀಜಿ ಪಟ್ಟಕ್ಕೆ ಅಗೌರವ ತೋರಿದ್ದಾರೆಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊಲೆ ಪ್ರಕರಣಗಳ ತನಿಖೆ ನಡೆಯುತ್ತಿದ್ದು, ನಿಜ ಆರೋಪಿಗಳು ಯಾರೆಂಬುದು ಇನ್ನೂ ಬಯಲಾಗಿಲ್ಲ. ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಪೊಲೀಸರು, ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಲು ನ್ಯಾಯಾಂಗ ವ್ಯವಸ್ಥೆ ಇರುವಾಗ- ಫ್ರಿಂಜ್ ಎಲಿಮೆಂಟ್‌ಗಳೇ ಎಲ್ಲ ತೀರ್ಪುಗಳನ್ನು ನೀಡುತ್ತಿವೆ. ಸಮುದಾಯಗಳ ನಡುವೆ ಬೆಂಕಿ ಹಚ್ಚಲು ಪ್ರಚೋದಿಸಲಾಗುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕಾಳಿ ಸ್ವಾಮೀಜಿಯಂತಹ ಕೋಮುದ್ವೇಷಿಗಳ ಮೇಲೆ ಸಾಂವಿಧಾನಿಕವಾಗಿ ಕ್ರಮ ಜರುಗಿಸುತ್ತಾರೋ ಎಂಬುದೇ ಸದ್ಯದ ಪ್ರಶ್ನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ರಾಜ್ಯ ಸರ್ಕಾರ ಮೊದಲು ಈ ಕಾಳಿ ಸ್ವಾಮೀಜಿಯ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸಬೇಕು.

LEAVE A REPLY

Please enter your comment!
Please enter your name here

- Advertisment -

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...