Homeಕರ್ನಾಟಕಸಿಎಂ ಬೊಮ್ಮಾಯಿ, ಗೃಹಸಚಿವರನ್ನು ಕೊಲ್ಲಿ: ಕಾಳಿ ಸ್ವಾಮೀಜಿ ಪ್ರಚೋದನೆ

ಸಿಎಂ ಬೊಮ್ಮಾಯಿ, ಗೃಹಸಚಿವರನ್ನು ಕೊಲ್ಲಿ: ಕಾಳಿ ಸ್ವಾಮೀಜಿ ಪ್ರಚೋದನೆ

- Advertisement -
- Advertisement -

ಒಂದು ಸಮುದಾಯದ ವಿರುದ್ಧ ಸದಾ ದ್ವೇಷದ ಹೇಳಿಕೆಗಳನ್ನು ನೀಡುವ ರಿಷಿಕುಮಾರ ಸ್ವಾಮೀಜಿ ಅಲಿಯಾಸ್ ಕಾಳಿ ಸ್ವಾಮೀಜಿ ಈಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೃಹಸಚಿವ ಆರಗ ಜ್ಞಾನೇಂದ್ರ ಅವರ ಕೊಲೆಗೆ ಪ್ರಚೋದನೆ ನೀಡಿದ್ದಾರೆ.

ಅತ್ಯಂತ ಅವಹೇಳನಕಾರಿಯಾಗಿ, ಸಮುದಾಯಗಳ ನಡುವೆ ದ್ವೇಷ ಬಿತ್ತುವಂತೆ, ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯನ್ನು ಅಣಕಿಸುವಂತೆ ಮಾತನಾಡಿರುವ ಕಾಳಿ ಸ್ವಾಮೀಜಿ, “ಇನ್ನೂ 9 ಜನ ಮುಸ್ಲಿಮರ ತಲೆ ಕಡಿಯಬೇಕು” ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸುರತ್ಕಲ್‌ನಲ್ಲಿ ಫಾಝಿಲ್‌ ಎಂಬ ವ್ಯಕ್ತಿಯನ್ನು ಕೊಂದಿರುವ ಕುರಿತು ಮಾತನಾಡಿರುವ ಕಾಳಿ ಸ್ವಾಮೀಜಿ, “ನಮ್ಮವರೇ ಏನಾದರೂ ಹೊಡೆದಿದ್ದರೆ ನಾನು ಅವರಿಗೆ ಅಭಿನಂದನೆ ಸಲ್ಲಿಸುವೆ. ಇನ್ನು ಒಬ್ಬರನ್ನೇ ಕೊಂದಿರುವುದೆಂದು ಹೇಳುತ್ತಿದ್ದೀರಿ. ಇನ್ನು 9 ತಲೆ ಬೇಕು. ಅವರವರೇ ಹೊಡೆದುಕೊಂಡು ಸತ್ತು ಹೋಗಿದ್ದರೆ ನಮ್ಮವರಿಗೆ ಇನ್ನೂ ಮನಸ್ಥಿತಿ ಗಟ್ಟಿಯಾಗಿಲ್ಲ ಎಂದಷ್ಟೇ. ತುರುಕರೇ ನಿಮ್ಮ ಒಂದೊಂದು ಕತ್ತು ತಗಿಯಲಿಲ್ಲ ಎಂದರೆ ದೇವರಾಣೆಯೂ ಸುಧಾರಿಸಿಕೊಳ್ಳುವುದಿಲ್ಲ” ಎಂದು ಹೇಳಿಕೆ ನೀಡಿದ್ದಾರೆ.

“ನೀವು ನನ್ನನ್ನು ಎತ್ತಿ. ಎಸ್‌ಡಿಪಿಐ, ಪಿಎಫ್‌ಐ ………. ನನ್ನನ್ನು ಎತ್ತಿ. ನಿಮ್ಮ ಕೈಲಾದ್ರೆ ನಳಿನ್‌ ಕುಮಾರ್‌ ಕಟೀಲ್‌ರನ್ನು ಎತ್ತಿ. ನಿಮ್ಮ ಕೈಲಾದರೆ ಬೊಮ್ಮಾಯಿ, ಹೋಮ್‌ಮಿನಿಸ್ಟರ್‌ರನ್ನು ಎತ್ತಿ….” ಎಂದು ಹೇಳಿಕೆ ನೀಡಿದ್ದಾರೆ.

ಅತ್ಯಂತ ಕೆಟ್ಟ ಪದಗಳನ್ನು ಮುಸ್ಲಿಂ ಸಮುದಾಯದ ವಿರುದ್ಧ ಕಾಳಿ ಸ್ವಾಮೀಜಿ ಬಳಸಿದ್ದಾರೆ. “ನೀವು ನನ್ನನ್ನು ಹೊಡೆದ ತಕ್ಷಣ ಗೋದ್ರಾ ಹತ್ಯಾಕಾಂಡ ಶುರುವಾಗುತ್ತದೆ. ಗೋರಿಪಾಳ್ಯ, ಕಲಾಸಿಪಾಳ್ಯಕ್ಕೆ ನುಗ್ಗಿ ಬೆಂಕಿ ಹಚ್ಚಲಾಗುತ್ತದೆ. ನಮ್ಮ ತಾಕತ್ತು ಏನೆಂಬುದು ತೋರಿಸುತ್ತೇವೆ. ಹೊಡೆಯುವುದಾದರೆ ದೊಡ್ಡದನ್ನು ಹೊಡೆಯಿರಿ…. ಯಾವ ಶಾಂತಿ ಕಾಪಾಡಬೇಕು ಮುಖ್ಯಮಂತ್ರಿಗಳೇ…” ಎಂದು ಬಾಯಿಗೆ ಬಂದಂತೆ ಮಾತನಾಡಿರುವ ಅವರು ಸಿಕ್ಕಸಿಕ್ಕವರನ್ನು ಗುಂಡಿಕ್ಕಿ ಕೊಲ್ಲಲು ಪ್ರಚೋದಿಸಿದ್ದಾರೆ.

“ಮೂರು ದಿನದೊಳಗೆ ಎನ್‌ಕೌಂಟರ್‌ ಮಾಡಿ. ಇಲ್ಲವಾದರೆ ಪಾದಯಾತ್ರೆ ಮಾಡ್ತೀವಿ. ಒಂದು ಕತ್ತಿಗೆ ಹತ್ತು ಕತ್ತು ಉದುರಿಸಬೇಕು” ಎಂದು ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿರಿ: ಕೋಮುದ್ವೇಷ: ಕಾಳಿ ಸ್ವಾಮೀಜಿ ಮಾಡಿದ ಅವಾಂತರಗಳಿವು!

ಸರಣಿ ಕೊಲೆಗಳಿಂದ ಕರಾವಳಿ ಜನರು ಆತಂಕಿತರಾಗಿದ್ದಾರೆ. ಆದರೆ ಇಂತಹ ಸಂದರ್ಭದಲ್ಲಿ ಉರಿಯೋ ಬೆಂಕಿಗೆ ಪೆಟ್ರೋಲ್ ಸುರಿಯುವಂತೆ ಸ್ವಾಮೀಜಿ ಮಾತನಾಡಿದ್ದಾರೆ. ‌ಎಲ್ಲ ಸಮುದಾಯಗಳನ್ನು ಪ್ರೀತಿಯಿಂದ ನೋಡಬೇಕಾದ ಸ್ವಾಮೀಜಿ ಪಟ್ಟಕ್ಕೆ ಅಗೌರವ ತೋರಿದ್ದಾರೆಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊಲೆ ಪ್ರಕರಣಗಳ ತನಿಖೆ ನಡೆಯುತ್ತಿದ್ದು, ನಿಜ ಆರೋಪಿಗಳು ಯಾರೆಂಬುದು ಇನ್ನೂ ಬಯಲಾಗಿಲ್ಲ. ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಪೊಲೀಸರು, ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಲು ನ್ಯಾಯಾಂಗ ವ್ಯವಸ್ಥೆ ಇರುವಾಗ- ಫ್ರಿಂಜ್ ಎಲಿಮೆಂಟ್‌ಗಳೇ ಎಲ್ಲ ತೀರ್ಪುಗಳನ್ನು ನೀಡುತ್ತಿವೆ. ಸಮುದಾಯಗಳ ನಡುವೆ ಬೆಂಕಿ ಹಚ್ಚಲು ಪ್ರಚೋದಿಸಲಾಗುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕಾಳಿ ಸ್ವಾಮೀಜಿಯಂತಹ ಕೋಮುದ್ವೇಷಿಗಳ ಮೇಲೆ ಸಾಂವಿಧಾನಿಕವಾಗಿ ಕ್ರಮ ಜರುಗಿಸುತ್ತಾರೋ ಎಂಬುದೇ ಸದ್ಯದ ಪ್ರಶ್ನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ರಾಜ್ಯ ಸರ್ಕಾರ ಮೊದಲು ಈ ಕಾಳಿ ಸ್ವಾಮೀಜಿಯ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸಬೇಕು.

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...