Homeಕರ್ನಾಟಕಸಿಎಂ ಬೊಮ್ಮಾಯಿ, ಗೃಹಸಚಿವರನ್ನು ಕೊಲ್ಲಿ: ಕಾಳಿ ಸ್ವಾಮೀಜಿ ಪ್ರಚೋದನೆ

ಸಿಎಂ ಬೊಮ್ಮಾಯಿ, ಗೃಹಸಚಿವರನ್ನು ಕೊಲ್ಲಿ: ಕಾಳಿ ಸ್ವಾಮೀಜಿ ಪ್ರಚೋದನೆ

- Advertisement -
- Advertisement -

ಒಂದು ಸಮುದಾಯದ ವಿರುದ್ಧ ಸದಾ ದ್ವೇಷದ ಹೇಳಿಕೆಗಳನ್ನು ನೀಡುವ ರಿಷಿಕುಮಾರ ಸ್ವಾಮೀಜಿ ಅಲಿಯಾಸ್ ಕಾಳಿ ಸ್ವಾಮೀಜಿ ಈಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೃಹಸಚಿವ ಆರಗ ಜ್ಞಾನೇಂದ್ರ ಅವರ ಕೊಲೆಗೆ ಪ್ರಚೋದನೆ ನೀಡಿದ್ದಾರೆ.

ಅತ್ಯಂತ ಅವಹೇಳನಕಾರಿಯಾಗಿ, ಸಮುದಾಯಗಳ ನಡುವೆ ದ್ವೇಷ ಬಿತ್ತುವಂತೆ, ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯನ್ನು ಅಣಕಿಸುವಂತೆ ಮಾತನಾಡಿರುವ ಕಾಳಿ ಸ್ವಾಮೀಜಿ, “ಇನ್ನೂ 9 ಜನ ಮುಸ್ಲಿಮರ ತಲೆ ಕಡಿಯಬೇಕು” ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸುರತ್ಕಲ್‌ನಲ್ಲಿ ಫಾಝಿಲ್‌ ಎಂಬ ವ್ಯಕ್ತಿಯನ್ನು ಕೊಂದಿರುವ ಕುರಿತು ಮಾತನಾಡಿರುವ ಕಾಳಿ ಸ್ವಾಮೀಜಿ, “ನಮ್ಮವರೇ ಏನಾದರೂ ಹೊಡೆದಿದ್ದರೆ ನಾನು ಅವರಿಗೆ ಅಭಿನಂದನೆ ಸಲ್ಲಿಸುವೆ. ಇನ್ನು ಒಬ್ಬರನ್ನೇ ಕೊಂದಿರುವುದೆಂದು ಹೇಳುತ್ತಿದ್ದೀರಿ. ಇನ್ನು 9 ತಲೆ ಬೇಕು. ಅವರವರೇ ಹೊಡೆದುಕೊಂಡು ಸತ್ತು ಹೋಗಿದ್ದರೆ ನಮ್ಮವರಿಗೆ ಇನ್ನೂ ಮನಸ್ಥಿತಿ ಗಟ್ಟಿಯಾಗಿಲ್ಲ ಎಂದಷ್ಟೇ. ತುರುಕರೇ ನಿಮ್ಮ ಒಂದೊಂದು ಕತ್ತು ತಗಿಯಲಿಲ್ಲ ಎಂದರೆ ದೇವರಾಣೆಯೂ ಸುಧಾರಿಸಿಕೊಳ್ಳುವುದಿಲ್ಲ” ಎಂದು ಹೇಳಿಕೆ ನೀಡಿದ್ದಾರೆ.

“ನೀವು ನನ್ನನ್ನು ಎತ್ತಿ. ಎಸ್‌ಡಿಪಿಐ, ಪಿಎಫ್‌ಐ ………. ನನ್ನನ್ನು ಎತ್ತಿ. ನಿಮ್ಮ ಕೈಲಾದ್ರೆ ನಳಿನ್‌ ಕುಮಾರ್‌ ಕಟೀಲ್‌ರನ್ನು ಎತ್ತಿ. ನಿಮ್ಮ ಕೈಲಾದರೆ ಬೊಮ್ಮಾಯಿ, ಹೋಮ್‌ಮಿನಿಸ್ಟರ್‌ರನ್ನು ಎತ್ತಿ….” ಎಂದು ಹೇಳಿಕೆ ನೀಡಿದ್ದಾರೆ.

ಅತ್ಯಂತ ಕೆಟ್ಟ ಪದಗಳನ್ನು ಮುಸ್ಲಿಂ ಸಮುದಾಯದ ವಿರುದ್ಧ ಕಾಳಿ ಸ್ವಾಮೀಜಿ ಬಳಸಿದ್ದಾರೆ. “ನೀವು ನನ್ನನ್ನು ಹೊಡೆದ ತಕ್ಷಣ ಗೋದ್ರಾ ಹತ್ಯಾಕಾಂಡ ಶುರುವಾಗುತ್ತದೆ. ಗೋರಿಪಾಳ್ಯ, ಕಲಾಸಿಪಾಳ್ಯಕ್ಕೆ ನುಗ್ಗಿ ಬೆಂಕಿ ಹಚ್ಚಲಾಗುತ್ತದೆ. ನಮ್ಮ ತಾಕತ್ತು ಏನೆಂಬುದು ತೋರಿಸುತ್ತೇವೆ. ಹೊಡೆಯುವುದಾದರೆ ದೊಡ್ಡದನ್ನು ಹೊಡೆಯಿರಿ…. ಯಾವ ಶಾಂತಿ ಕಾಪಾಡಬೇಕು ಮುಖ್ಯಮಂತ್ರಿಗಳೇ…” ಎಂದು ಬಾಯಿಗೆ ಬಂದಂತೆ ಮಾತನಾಡಿರುವ ಅವರು ಸಿಕ್ಕಸಿಕ್ಕವರನ್ನು ಗುಂಡಿಕ್ಕಿ ಕೊಲ್ಲಲು ಪ್ರಚೋದಿಸಿದ್ದಾರೆ.

“ಮೂರು ದಿನದೊಳಗೆ ಎನ್‌ಕೌಂಟರ್‌ ಮಾಡಿ. ಇಲ್ಲವಾದರೆ ಪಾದಯಾತ್ರೆ ಮಾಡ್ತೀವಿ. ಒಂದು ಕತ್ತಿಗೆ ಹತ್ತು ಕತ್ತು ಉದುರಿಸಬೇಕು” ಎಂದು ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿರಿ: ಕೋಮುದ್ವೇಷ: ಕಾಳಿ ಸ್ವಾಮೀಜಿ ಮಾಡಿದ ಅವಾಂತರಗಳಿವು!

ಸರಣಿ ಕೊಲೆಗಳಿಂದ ಕರಾವಳಿ ಜನರು ಆತಂಕಿತರಾಗಿದ್ದಾರೆ. ಆದರೆ ಇಂತಹ ಸಂದರ್ಭದಲ್ಲಿ ಉರಿಯೋ ಬೆಂಕಿಗೆ ಪೆಟ್ರೋಲ್ ಸುರಿಯುವಂತೆ ಸ್ವಾಮೀಜಿ ಮಾತನಾಡಿದ್ದಾರೆ. ‌ಎಲ್ಲ ಸಮುದಾಯಗಳನ್ನು ಪ್ರೀತಿಯಿಂದ ನೋಡಬೇಕಾದ ಸ್ವಾಮೀಜಿ ಪಟ್ಟಕ್ಕೆ ಅಗೌರವ ತೋರಿದ್ದಾರೆಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊಲೆ ಪ್ರಕರಣಗಳ ತನಿಖೆ ನಡೆಯುತ್ತಿದ್ದು, ನಿಜ ಆರೋಪಿಗಳು ಯಾರೆಂಬುದು ಇನ್ನೂ ಬಯಲಾಗಿಲ್ಲ. ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಪೊಲೀಸರು, ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಲು ನ್ಯಾಯಾಂಗ ವ್ಯವಸ್ಥೆ ಇರುವಾಗ- ಫ್ರಿಂಜ್ ಎಲಿಮೆಂಟ್‌ಗಳೇ ಎಲ್ಲ ತೀರ್ಪುಗಳನ್ನು ನೀಡುತ್ತಿವೆ. ಸಮುದಾಯಗಳ ನಡುವೆ ಬೆಂಕಿ ಹಚ್ಚಲು ಪ್ರಚೋದಿಸಲಾಗುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕಾಳಿ ಸ್ವಾಮೀಜಿಯಂತಹ ಕೋಮುದ್ವೇಷಿಗಳ ಮೇಲೆ ಸಾಂವಿಧಾನಿಕವಾಗಿ ಕ್ರಮ ಜರುಗಿಸುತ್ತಾರೋ ಎಂಬುದೇ ಸದ್ಯದ ಪ್ರಶ್ನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ರಾಜ್ಯ ಸರ್ಕಾರ ಮೊದಲು ಈ ಕಾಳಿ ಸ್ವಾಮೀಜಿಯ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸಬೇಕು.

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...