Homeಕರ್ನಾಟಕಸಿಎಂ ಬೊಮ್ಮಾಯಿ, ಗೃಹಸಚಿವರನ್ನು ಕೊಲ್ಲಿ: ಕಾಳಿ ಸ್ವಾಮೀಜಿ ಪ್ರಚೋದನೆ

ಸಿಎಂ ಬೊಮ್ಮಾಯಿ, ಗೃಹಸಚಿವರನ್ನು ಕೊಲ್ಲಿ: ಕಾಳಿ ಸ್ವಾಮೀಜಿ ಪ್ರಚೋದನೆ

- Advertisement -
- Advertisement -

ಒಂದು ಸಮುದಾಯದ ವಿರುದ್ಧ ಸದಾ ದ್ವೇಷದ ಹೇಳಿಕೆಗಳನ್ನು ನೀಡುವ ರಿಷಿಕುಮಾರ ಸ್ವಾಮೀಜಿ ಅಲಿಯಾಸ್ ಕಾಳಿ ಸ್ವಾಮೀಜಿ ಈಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೃಹಸಚಿವ ಆರಗ ಜ್ಞಾನೇಂದ್ರ ಅವರ ಕೊಲೆಗೆ ಪ್ರಚೋದನೆ ನೀಡಿದ್ದಾರೆ.

ಅತ್ಯಂತ ಅವಹೇಳನಕಾರಿಯಾಗಿ, ಸಮುದಾಯಗಳ ನಡುವೆ ದ್ವೇಷ ಬಿತ್ತುವಂತೆ, ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯನ್ನು ಅಣಕಿಸುವಂತೆ ಮಾತನಾಡಿರುವ ಕಾಳಿ ಸ್ವಾಮೀಜಿ, “ಇನ್ನೂ 9 ಜನ ಮುಸ್ಲಿಮರ ತಲೆ ಕಡಿಯಬೇಕು” ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸುರತ್ಕಲ್‌ನಲ್ಲಿ ಫಾಝಿಲ್‌ ಎಂಬ ವ್ಯಕ್ತಿಯನ್ನು ಕೊಂದಿರುವ ಕುರಿತು ಮಾತನಾಡಿರುವ ಕಾಳಿ ಸ್ವಾಮೀಜಿ, “ನಮ್ಮವರೇ ಏನಾದರೂ ಹೊಡೆದಿದ್ದರೆ ನಾನು ಅವರಿಗೆ ಅಭಿನಂದನೆ ಸಲ್ಲಿಸುವೆ. ಇನ್ನು ಒಬ್ಬರನ್ನೇ ಕೊಂದಿರುವುದೆಂದು ಹೇಳುತ್ತಿದ್ದೀರಿ. ಇನ್ನು 9 ತಲೆ ಬೇಕು. ಅವರವರೇ ಹೊಡೆದುಕೊಂಡು ಸತ್ತು ಹೋಗಿದ್ದರೆ ನಮ್ಮವರಿಗೆ ಇನ್ನೂ ಮನಸ್ಥಿತಿ ಗಟ್ಟಿಯಾಗಿಲ್ಲ ಎಂದಷ್ಟೇ. ತುರುಕರೇ ನಿಮ್ಮ ಒಂದೊಂದು ಕತ್ತು ತಗಿಯಲಿಲ್ಲ ಎಂದರೆ ದೇವರಾಣೆಯೂ ಸುಧಾರಿಸಿಕೊಳ್ಳುವುದಿಲ್ಲ” ಎಂದು ಹೇಳಿಕೆ ನೀಡಿದ್ದಾರೆ.

“ನೀವು ನನ್ನನ್ನು ಎತ್ತಿ. ಎಸ್‌ಡಿಪಿಐ, ಪಿಎಫ್‌ಐ ………. ನನ್ನನ್ನು ಎತ್ತಿ. ನಿಮ್ಮ ಕೈಲಾದ್ರೆ ನಳಿನ್‌ ಕುಮಾರ್‌ ಕಟೀಲ್‌ರನ್ನು ಎತ್ತಿ. ನಿಮ್ಮ ಕೈಲಾದರೆ ಬೊಮ್ಮಾಯಿ, ಹೋಮ್‌ಮಿನಿಸ್ಟರ್‌ರನ್ನು ಎತ್ತಿ….” ಎಂದು ಹೇಳಿಕೆ ನೀಡಿದ್ದಾರೆ.

ಅತ್ಯಂತ ಕೆಟ್ಟ ಪದಗಳನ್ನು ಮುಸ್ಲಿಂ ಸಮುದಾಯದ ವಿರುದ್ಧ ಕಾಳಿ ಸ್ವಾಮೀಜಿ ಬಳಸಿದ್ದಾರೆ. “ನೀವು ನನ್ನನ್ನು ಹೊಡೆದ ತಕ್ಷಣ ಗೋದ್ರಾ ಹತ್ಯಾಕಾಂಡ ಶುರುವಾಗುತ್ತದೆ. ಗೋರಿಪಾಳ್ಯ, ಕಲಾಸಿಪಾಳ್ಯಕ್ಕೆ ನುಗ್ಗಿ ಬೆಂಕಿ ಹಚ್ಚಲಾಗುತ್ತದೆ. ನಮ್ಮ ತಾಕತ್ತು ಏನೆಂಬುದು ತೋರಿಸುತ್ತೇವೆ. ಹೊಡೆಯುವುದಾದರೆ ದೊಡ್ಡದನ್ನು ಹೊಡೆಯಿರಿ…. ಯಾವ ಶಾಂತಿ ಕಾಪಾಡಬೇಕು ಮುಖ್ಯಮಂತ್ರಿಗಳೇ…” ಎಂದು ಬಾಯಿಗೆ ಬಂದಂತೆ ಮಾತನಾಡಿರುವ ಅವರು ಸಿಕ್ಕಸಿಕ್ಕವರನ್ನು ಗುಂಡಿಕ್ಕಿ ಕೊಲ್ಲಲು ಪ್ರಚೋದಿಸಿದ್ದಾರೆ.

“ಮೂರು ದಿನದೊಳಗೆ ಎನ್‌ಕೌಂಟರ್‌ ಮಾಡಿ. ಇಲ್ಲವಾದರೆ ಪಾದಯಾತ್ರೆ ಮಾಡ್ತೀವಿ. ಒಂದು ಕತ್ತಿಗೆ ಹತ್ತು ಕತ್ತು ಉದುರಿಸಬೇಕು” ಎಂದು ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿರಿ: ಕೋಮುದ್ವೇಷ: ಕಾಳಿ ಸ್ವಾಮೀಜಿ ಮಾಡಿದ ಅವಾಂತರಗಳಿವು!

ಸರಣಿ ಕೊಲೆಗಳಿಂದ ಕರಾವಳಿ ಜನರು ಆತಂಕಿತರಾಗಿದ್ದಾರೆ. ಆದರೆ ಇಂತಹ ಸಂದರ್ಭದಲ್ಲಿ ಉರಿಯೋ ಬೆಂಕಿಗೆ ಪೆಟ್ರೋಲ್ ಸುರಿಯುವಂತೆ ಸ್ವಾಮೀಜಿ ಮಾತನಾಡಿದ್ದಾರೆ. ‌ಎಲ್ಲ ಸಮುದಾಯಗಳನ್ನು ಪ್ರೀತಿಯಿಂದ ನೋಡಬೇಕಾದ ಸ್ವಾಮೀಜಿ ಪಟ್ಟಕ್ಕೆ ಅಗೌರವ ತೋರಿದ್ದಾರೆಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊಲೆ ಪ್ರಕರಣಗಳ ತನಿಖೆ ನಡೆಯುತ್ತಿದ್ದು, ನಿಜ ಆರೋಪಿಗಳು ಯಾರೆಂಬುದು ಇನ್ನೂ ಬಯಲಾಗಿಲ್ಲ. ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಪೊಲೀಸರು, ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಲು ನ್ಯಾಯಾಂಗ ವ್ಯವಸ್ಥೆ ಇರುವಾಗ- ಫ್ರಿಂಜ್ ಎಲಿಮೆಂಟ್‌ಗಳೇ ಎಲ್ಲ ತೀರ್ಪುಗಳನ್ನು ನೀಡುತ್ತಿವೆ. ಸಮುದಾಯಗಳ ನಡುವೆ ಬೆಂಕಿ ಹಚ್ಚಲು ಪ್ರಚೋದಿಸಲಾಗುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕಾಳಿ ಸ್ವಾಮೀಜಿಯಂತಹ ಕೋಮುದ್ವೇಷಿಗಳ ಮೇಲೆ ಸಾಂವಿಧಾನಿಕವಾಗಿ ಕ್ರಮ ಜರುಗಿಸುತ್ತಾರೋ ಎಂಬುದೇ ಸದ್ಯದ ಪ್ರಶ್ನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ರಾಜ್ಯ ಸರ್ಕಾರ ಮೊದಲು ಈ ಕಾಳಿ ಸ್ವಾಮೀಜಿಯ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸಬೇಕು.

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...