Homeಕರ್ನಾಟಕಎಲ್ಲರೂ ನನ್ನ ಕೊಂದು ಬಿಡಿ: ಶ್ರೀರಾಮಸೇನೆಯ ಗೂಂಡಾಗಳಿಂದ ದಾಳಿಗೊಳಗಾದ ಮುಸ್ಲಿಂ ವ್ಯಾಪಾರಿಯ ಸಂಕಟ

ಎಲ್ಲರೂ ನನ್ನ ಕೊಂದು ಬಿಡಿ: ಶ್ರೀರಾಮಸೇನೆಯ ಗೂಂಡಾಗಳಿಂದ ದಾಳಿಗೊಳಗಾದ ಮುಸ್ಲಿಂ ವ್ಯಾಪಾರಿಯ ಸಂಕಟ

- Advertisement -
- Advertisement -

“ಕೈ ಎತ್ತಿಬಿಡ್ತೀನಿ… ಎಲ್ಲರೂ ನನ್ನ ಕೊಂದು ಬಿಡಿ…”- ಹೀಗೆ ಮನನೊಂದು ಹೇಳುತ್ತಾರೆ ಧಾರವಾಡದ ಮುಸ್ಲಿಂ ವ್ಯಾಪಾರಿ ನಬಿಸಾಬ್‌. ಈ ಮಾತು ಮನುಷ್ಯರಾದವರನ್ನು ಕಲಕದೆ ಇರದು.

ಧಾರವಾಡದ ನುಗ್ಗಿಕೇರಿಯಲ್ಲಿನ ಹನುಮಾನ್‌ ದೇವಸ್ಥಾನದ ಬಳಿ ಕಳೆದ ಹದಿನೈದು ವರ್ಷಗಳಿಂದ ವ್ಯಾಪಾರ ಮಾಡುತ್ತಿರುವ ನಬಿಸಾಬ್‌‌, ಶ್ರೀರಾಮಸೇನೆಯ ಗೂಂಡಾಗಳಿಂದ ತೊಂದರೆಗೊಳಗಾಗಿದ್ದಾರೆ. ದೇವಸ್ಥಾನದ ಬಳಿ ಕಲ್ಲಂಗಡಿ ಮಾರುತ್ತಿದ್ದ ಕಾರಣಕ್ಕೆ ಗೂಂಡಾಗಳು ದಾಂಧಲೆ ನಡೆಸಿದ್ದಾರೆ. ಐದು ಕ್ವಿಂಟಾಲ್‌ ಕಲ್ಲಂಗಡಿಯನ್ನು ಒಡೆದು ಹಾಕಿ, ಬಡ ವ್ಯಾಪಾರಿಯ  ಹೊಟ್ಟೆ ಮೇಲೆ ಹೊಡೆದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಾಧ್ಯಮಗಳ ಮುಂದೆ ನೋವು ತೋಡಿಕೊಂಡಿರುವ ನಬಿಸಾಬ್‌, “ಬಂದವರು ಪಟ್‌ ಪಟ್‌ ಅಂತ ಕಲ್ಲಂಗಡಿ ಕಾಯಿಗಳನ್ನು ಒಡೆದುಕೊಂಡು ಬಂದರು. ಒಂದೆರಡು ಕಾಯಿಯಲ್ಲ, ತೆಗೆದುಕೊಳ್ಳುತ್ತೀವಿ ಸ್ವಾಮಿ ಸ್ವಲ್ಪ ನಿಲ್ಲಿಸಿ ಎಂದರೂ ಕೇಳಲಿಲ್ಲ. ಎಲ್ಲವನ್ನೂ ಒಡೆದುಹಾಕಿದರು. ನಾನೇನು ಮಾಡಬೇಕಾಗುತ್ರೀ?” ಎಂದು ಸಂಕಟ ವ್ಯಕ್ತಪಡಿಸಿದ್ದಾರೆ.

“ನಾವು ಸರಿದು ನಿಂತುಬಿಟ್ಟಿವಿ. ಅವರು ಒಡೆಯುತ್ತಿದ್ದಾಗ ನಾವೇನು ಮಾಡಲು ಆಗುತ್ರೀ? ಅವರು ಎಂಟು ಹತ್ತು ಇದ್ದರು, ನಾವೊಬ್ಬ ಇದ್ದೀನಿ. ಒಂದು ಕಾಯಿ ತೆಗೆದು ಇಡುವಷ್ಟರಲ್ಲಿ ಹತ್ತು ಕಾಯಿ ಒಡೆಯುತ್ತಿದ್ದರು. ಆರು ಕಿಂಟ್ವಾಲ್‌ ತೆಗೆದುಕೊಂಡು ಬಂದಿದೆ. ಒಂದು ಕಿಂಟ್ವಾಲ್ ಮಾಗ್ರ ಮಾರಿದ್ದೆ. ಉಳಿದೆಲ್ಲವನ್ನೂ ಒಡೆದು ಹಾಕಿದ್ರು” ಎಂದು ನೋವು ತೋಡಿಕೊಂಡಿದ್ದಾರೆ.

“ಮುಸಲ್ಮಾನರು ಅಂಗಡಿ ಇಡಬೇಡಿ ಎಂದು ತಿಳಿಸಿದ್ದು ನಿಜ. ನಾನು ಹದಿನೈದು ವರ್ಷಗಳಿಂದ ಇಲ್ಲಿ ವ್ಯಾಪಾರ ಮಾಡುತ್ತಿದ್ದೇನೆ. ಪ್ರತಿ ಕಿಂಟ್ವಾಲ್ ಕಲ್ಲಂಗಡಿಯನ್ನು 1700 ರೂಪಾಯಿ ಕೊಟ್ಟು ಖರೀದಿಸಿದ್ದೀನಿ. ಒಂದು ಕ್ವಿಂಟಾಲ್ ಮಾತ್ರ ಮಾರಿದ್ದೀನಿ. ಉಳಿದಿದೆಲ್ಲವನ್ನೂ ಒಡೆದು ಹಾಕಿದ್ದಾರೆ… ಕೈ ಎತ್ತಿಬಿಡ್ತೀನಿ, ಎಲ್ಲರೂ ನನ್ನ ಕೊಂದುಬಿಡಿ” ಎಂದು ಅಸಹಾಯಕತೆ ವ್ಯಕ್ತಪಡಿಸುತ್ತಾರೆ ನಬಿಸಾಬ್.

ದೇವಸ್ಥಾನದ ಪರ್ಯಾಯಸ್ತ ನರಸಿಂಹ ದೇಸಾಯಿಯವರು ಮಾತನಾಡಿ, “ಶ್ರೀರಾಮಸೇನೆಯವರು ನಮಗೆ ಮನವಿ ಕೊಟ್ಟಿಲ್ಲ.. ಹೋದ ತಿಂಗಳೇನೋ ಕೊಟ್ಟಿದ್ದರೇನೋ… ನಾನು ಬಂದು ಒಂದು ತಿಂಗಳಾಗಿದೆ. ಆ ಮನವಿ ಬಗ್ಗೆಯಾಗಲೀ, ಇಂದಿನ ಗಲಾಟೆ ಬಗ್ಗೆಯಾಗಲೀ ಸಮಿತಿಯ ಸಭೆ ಕರೆದು ಪ್ರತಿಕ್ರಿಯೆ ನೀಡುತ್ತೇನೆ…” ಎಂದಿದ್ದಾರೆ.

“ಅಂಗಡಿ ನಡೆಸಲು ಬಡವರಿಗೆ ಕೊಟ್ಟಿದ್ದೀವಿ. ಇಲ್ಲಿ ಶೇ. 99 ಜನ ಹಿಂದೂಗಳಿದ್ದಾರೆ. ಎಲ್ಲರಿಗೂ ಹೊಟ್ಟೆಪಾಡು ಇರುತ್ತೆ. ಅವರ ಹೊಟ್ಟೆಪಾಡಿಗೆ ನಾವು ಸಹಾಯ ಮಾಡುತ್ತಿದ್ದೇವೆ” ಎಂದು ತಿಳಿಸಿದ್ದಾರೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಮುಸ್ಲಿಂ ಜೊತೆ ಮದುವೆಯಾದರೆ ಬಹಿಷ್ಕರಿಸಿ ಎನ್ನುವ ಬಿಜೆಪಿ ಮುಖಂಡ, ‘ಅಂತರ್ಜಾತಿ ವಿವಾಹ’ ಎಂದರೆ ಉತ್ತರಿಸುವುದಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮನ ಕಲುಕಲಿಕ್ಕೆ ಇವರು ನಿಜವಾಗ್ಲೂ ಮನುಷ್ಯರಲ್ಲ ಪುರಾಣದಲ್ಲಿ ರಾಕ್ಷಸರಿಗಾದರೂ ಸ್ವಲ್ಪ ಕರುಣೆ ಇತ್ತೇನೋ ಇವರು ಗೋಮುಖ ವ್ಯಾಘ್ರರು ಅಲ್ರಿ ಬೀದಿಬದಿ ಹಣ್ಣು ವ್ಯಾಪಾರ ಮಾಡಿ ತಮ್ಮ ಕುಟುಂಬ ಸಾಕಲಿಕ್ಕೆ ಅಲ್ವಾ ಬಿಸಿಲಲ್ಲಿ ಶ್ರಮ ಪಡೋದು ಇದೇನು ದೇಶದ್ರೋಹಿ ಕೆಲಸನಾ ನೆನಪಿರಲಿ ಸೃಷ್ಟಿ ಕರ್ತ ಎಲ್ಲವನ್ನು ನೋಡುತ್ತಿದ್ದಾನೆ ಮುಂದೊಂದು ದಿನ ಈ ಬಡ ಮುಸಲ್ಮಾನರೇ ನಿಮ್ಮ ಹೆಣ ಹೊರಲಿಕ್ಕೆ ಸಮಯ ಬರಬಹುದು ಭಗವಂತನ laathiyalli ಸೌಂಡ್ ಇರುವುದಿಲ್ಲ b carefull

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...