Homeಕರ್ನಾಟಕಎಲ್ಲರೂ ನನ್ನ ಕೊಂದು ಬಿಡಿ: ಶ್ರೀರಾಮಸೇನೆಯ ಗೂಂಡಾಗಳಿಂದ ದಾಳಿಗೊಳಗಾದ ಮುಸ್ಲಿಂ ವ್ಯಾಪಾರಿಯ ಸಂಕಟ

ಎಲ್ಲರೂ ನನ್ನ ಕೊಂದು ಬಿಡಿ: ಶ್ರೀರಾಮಸೇನೆಯ ಗೂಂಡಾಗಳಿಂದ ದಾಳಿಗೊಳಗಾದ ಮುಸ್ಲಿಂ ವ್ಯಾಪಾರಿಯ ಸಂಕಟ

- Advertisement -
- Advertisement -

“ಕೈ ಎತ್ತಿಬಿಡ್ತೀನಿ… ಎಲ್ಲರೂ ನನ್ನ ಕೊಂದು ಬಿಡಿ…”- ಹೀಗೆ ಮನನೊಂದು ಹೇಳುತ್ತಾರೆ ಧಾರವಾಡದ ಮುಸ್ಲಿಂ ವ್ಯಾಪಾರಿ ನಬಿಸಾಬ್‌. ಈ ಮಾತು ಮನುಷ್ಯರಾದವರನ್ನು ಕಲಕದೆ ಇರದು.

ಧಾರವಾಡದ ನುಗ್ಗಿಕೇರಿಯಲ್ಲಿನ ಹನುಮಾನ್‌ ದೇವಸ್ಥಾನದ ಬಳಿ ಕಳೆದ ಹದಿನೈದು ವರ್ಷಗಳಿಂದ ವ್ಯಾಪಾರ ಮಾಡುತ್ತಿರುವ ನಬಿಸಾಬ್‌‌, ಶ್ರೀರಾಮಸೇನೆಯ ಗೂಂಡಾಗಳಿಂದ ತೊಂದರೆಗೊಳಗಾಗಿದ್ದಾರೆ. ದೇವಸ್ಥಾನದ ಬಳಿ ಕಲ್ಲಂಗಡಿ ಮಾರುತ್ತಿದ್ದ ಕಾರಣಕ್ಕೆ ಗೂಂಡಾಗಳು ದಾಂಧಲೆ ನಡೆಸಿದ್ದಾರೆ. ಐದು ಕ್ವಿಂಟಾಲ್‌ ಕಲ್ಲಂಗಡಿಯನ್ನು ಒಡೆದು ಹಾಕಿ, ಬಡ ವ್ಯಾಪಾರಿಯ  ಹೊಟ್ಟೆ ಮೇಲೆ ಹೊಡೆದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಾಧ್ಯಮಗಳ ಮುಂದೆ ನೋವು ತೋಡಿಕೊಂಡಿರುವ ನಬಿಸಾಬ್‌, “ಬಂದವರು ಪಟ್‌ ಪಟ್‌ ಅಂತ ಕಲ್ಲಂಗಡಿ ಕಾಯಿಗಳನ್ನು ಒಡೆದುಕೊಂಡು ಬಂದರು. ಒಂದೆರಡು ಕಾಯಿಯಲ್ಲ, ತೆಗೆದುಕೊಳ್ಳುತ್ತೀವಿ ಸ್ವಾಮಿ ಸ್ವಲ್ಪ ನಿಲ್ಲಿಸಿ ಎಂದರೂ ಕೇಳಲಿಲ್ಲ. ಎಲ್ಲವನ್ನೂ ಒಡೆದುಹಾಕಿದರು. ನಾನೇನು ಮಾಡಬೇಕಾಗುತ್ರೀ?” ಎಂದು ಸಂಕಟ ವ್ಯಕ್ತಪಡಿಸಿದ್ದಾರೆ.

“ನಾವು ಸರಿದು ನಿಂತುಬಿಟ್ಟಿವಿ. ಅವರು ಒಡೆಯುತ್ತಿದ್ದಾಗ ನಾವೇನು ಮಾಡಲು ಆಗುತ್ರೀ? ಅವರು ಎಂಟು ಹತ್ತು ಇದ್ದರು, ನಾವೊಬ್ಬ ಇದ್ದೀನಿ. ಒಂದು ಕಾಯಿ ತೆಗೆದು ಇಡುವಷ್ಟರಲ್ಲಿ ಹತ್ತು ಕಾಯಿ ಒಡೆಯುತ್ತಿದ್ದರು. ಆರು ಕಿಂಟ್ವಾಲ್‌ ತೆಗೆದುಕೊಂಡು ಬಂದಿದೆ. ಒಂದು ಕಿಂಟ್ವಾಲ್ ಮಾಗ್ರ ಮಾರಿದ್ದೆ. ಉಳಿದೆಲ್ಲವನ್ನೂ ಒಡೆದು ಹಾಕಿದ್ರು” ಎಂದು ನೋವು ತೋಡಿಕೊಂಡಿದ್ದಾರೆ.

“ಮುಸಲ್ಮಾನರು ಅಂಗಡಿ ಇಡಬೇಡಿ ಎಂದು ತಿಳಿಸಿದ್ದು ನಿಜ. ನಾನು ಹದಿನೈದು ವರ್ಷಗಳಿಂದ ಇಲ್ಲಿ ವ್ಯಾಪಾರ ಮಾಡುತ್ತಿದ್ದೇನೆ. ಪ್ರತಿ ಕಿಂಟ್ವಾಲ್ ಕಲ್ಲಂಗಡಿಯನ್ನು 1700 ರೂಪಾಯಿ ಕೊಟ್ಟು ಖರೀದಿಸಿದ್ದೀನಿ. ಒಂದು ಕ್ವಿಂಟಾಲ್ ಮಾತ್ರ ಮಾರಿದ್ದೀನಿ. ಉಳಿದಿದೆಲ್ಲವನ್ನೂ ಒಡೆದು ಹಾಕಿದ್ದಾರೆ… ಕೈ ಎತ್ತಿಬಿಡ್ತೀನಿ, ಎಲ್ಲರೂ ನನ್ನ ಕೊಂದುಬಿಡಿ” ಎಂದು ಅಸಹಾಯಕತೆ ವ್ಯಕ್ತಪಡಿಸುತ್ತಾರೆ ನಬಿಸಾಬ್.

ದೇವಸ್ಥಾನದ ಪರ್ಯಾಯಸ್ತ ನರಸಿಂಹ ದೇಸಾಯಿಯವರು ಮಾತನಾಡಿ, “ಶ್ರೀರಾಮಸೇನೆಯವರು ನಮಗೆ ಮನವಿ ಕೊಟ್ಟಿಲ್ಲ.. ಹೋದ ತಿಂಗಳೇನೋ ಕೊಟ್ಟಿದ್ದರೇನೋ… ನಾನು ಬಂದು ಒಂದು ತಿಂಗಳಾಗಿದೆ. ಆ ಮನವಿ ಬಗ್ಗೆಯಾಗಲೀ, ಇಂದಿನ ಗಲಾಟೆ ಬಗ್ಗೆಯಾಗಲೀ ಸಮಿತಿಯ ಸಭೆ ಕರೆದು ಪ್ರತಿಕ್ರಿಯೆ ನೀಡುತ್ತೇನೆ…” ಎಂದಿದ್ದಾರೆ.

“ಅಂಗಡಿ ನಡೆಸಲು ಬಡವರಿಗೆ ಕೊಟ್ಟಿದ್ದೀವಿ. ಇಲ್ಲಿ ಶೇ. 99 ಜನ ಹಿಂದೂಗಳಿದ್ದಾರೆ. ಎಲ್ಲರಿಗೂ ಹೊಟ್ಟೆಪಾಡು ಇರುತ್ತೆ. ಅವರ ಹೊಟ್ಟೆಪಾಡಿಗೆ ನಾವು ಸಹಾಯ ಮಾಡುತ್ತಿದ್ದೇವೆ” ಎಂದು ತಿಳಿಸಿದ್ದಾರೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಮುಸ್ಲಿಂ ಜೊತೆ ಮದುವೆಯಾದರೆ ಬಹಿಷ್ಕರಿಸಿ ಎನ್ನುವ ಬಿಜೆಪಿ ಮುಖಂಡ, ‘ಅಂತರ್ಜಾತಿ ವಿವಾಹ’ ಎಂದರೆ ಉತ್ತರಿಸುವುದಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮನ ಕಲುಕಲಿಕ್ಕೆ ಇವರು ನಿಜವಾಗ್ಲೂ ಮನುಷ್ಯರಲ್ಲ ಪುರಾಣದಲ್ಲಿ ರಾಕ್ಷಸರಿಗಾದರೂ ಸ್ವಲ್ಪ ಕರುಣೆ ಇತ್ತೇನೋ ಇವರು ಗೋಮುಖ ವ್ಯಾಘ್ರರು ಅಲ್ರಿ ಬೀದಿಬದಿ ಹಣ್ಣು ವ್ಯಾಪಾರ ಮಾಡಿ ತಮ್ಮ ಕುಟುಂಬ ಸಾಕಲಿಕ್ಕೆ ಅಲ್ವಾ ಬಿಸಿಲಲ್ಲಿ ಶ್ರಮ ಪಡೋದು ಇದೇನು ದೇಶದ್ರೋಹಿ ಕೆಲಸನಾ ನೆನಪಿರಲಿ ಸೃಷ್ಟಿ ಕರ್ತ ಎಲ್ಲವನ್ನು ನೋಡುತ್ತಿದ್ದಾನೆ ಮುಂದೊಂದು ದಿನ ಈ ಬಡ ಮುಸಲ್ಮಾನರೇ ನಿಮ್ಮ ಹೆಣ ಹೊರಲಿಕ್ಕೆ ಸಮಯ ಬರಬಹುದು ಭಗವಂತನ laathiyalli ಸೌಂಡ್ ಇರುವುದಿಲ್ಲ b carefull

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...