Homeಕರ್ನಾಟಕಎಲ್ಲರೂ ನನ್ನ ಕೊಂದು ಬಿಡಿ: ಶ್ರೀರಾಮಸೇನೆಯ ಗೂಂಡಾಗಳಿಂದ ದಾಳಿಗೊಳಗಾದ ಮುಸ್ಲಿಂ ವ್ಯಾಪಾರಿಯ ಸಂಕಟ

ಎಲ್ಲರೂ ನನ್ನ ಕೊಂದು ಬಿಡಿ: ಶ್ರೀರಾಮಸೇನೆಯ ಗೂಂಡಾಗಳಿಂದ ದಾಳಿಗೊಳಗಾದ ಮುಸ್ಲಿಂ ವ್ಯಾಪಾರಿಯ ಸಂಕಟ

- Advertisement -
- Advertisement -

“ಕೈ ಎತ್ತಿಬಿಡ್ತೀನಿ… ಎಲ್ಲರೂ ನನ್ನ ಕೊಂದು ಬಿಡಿ…”- ಹೀಗೆ ಮನನೊಂದು ಹೇಳುತ್ತಾರೆ ಧಾರವಾಡದ ಮುಸ್ಲಿಂ ವ್ಯಾಪಾರಿ ನಬಿಸಾಬ್‌. ಈ ಮಾತು ಮನುಷ್ಯರಾದವರನ್ನು ಕಲಕದೆ ಇರದು.

ಧಾರವಾಡದ ನುಗ್ಗಿಕೇರಿಯಲ್ಲಿನ ಹನುಮಾನ್‌ ದೇವಸ್ಥಾನದ ಬಳಿ ಕಳೆದ ಹದಿನೈದು ವರ್ಷಗಳಿಂದ ವ್ಯಾಪಾರ ಮಾಡುತ್ತಿರುವ ನಬಿಸಾಬ್‌‌, ಶ್ರೀರಾಮಸೇನೆಯ ಗೂಂಡಾಗಳಿಂದ ತೊಂದರೆಗೊಳಗಾಗಿದ್ದಾರೆ. ದೇವಸ್ಥಾನದ ಬಳಿ ಕಲ್ಲಂಗಡಿ ಮಾರುತ್ತಿದ್ದ ಕಾರಣಕ್ಕೆ ಗೂಂಡಾಗಳು ದಾಂಧಲೆ ನಡೆಸಿದ್ದಾರೆ. ಐದು ಕ್ವಿಂಟಾಲ್‌ ಕಲ್ಲಂಗಡಿಯನ್ನು ಒಡೆದು ಹಾಕಿ, ಬಡ ವ್ಯಾಪಾರಿಯ  ಹೊಟ್ಟೆ ಮೇಲೆ ಹೊಡೆದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಾಧ್ಯಮಗಳ ಮುಂದೆ ನೋವು ತೋಡಿಕೊಂಡಿರುವ ನಬಿಸಾಬ್‌, “ಬಂದವರು ಪಟ್‌ ಪಟ್‌ ಅಂತ ಕಲ್ಲಂಗಡಿ ಕಾಯಿಗಳನ್ನು ಒಡೆದುಕೊಂಡು ಬಂದರು. ಒಂದೆರಡು ಕಾಯಿಯಲ್ಲ, ತೆಗೆದುಕೊಳ್ಳುತ್ತೀವಿ ಸ್ವಾಮಿ ಸ್ವಲ್ಪ ನಿಲ್ಲಿಸಿ ಎಂದರೂ ಕೇಳಲಿಲ್ಲ. ಎಲ್ಲವನ್ನೂ ಒಡೆದುಹಾಕಿದರು. ನಾನೇನು ಮಾಡಬೇಕಾಗುತ್ರೀ?” ಎಂದು ಸಂಕಟ ವ್ಯಕ್ತಪಡಿಸಿದ್ದಾರೆ.

“ನಾವು ಸರಿದು ನಿಂತುಬಿಟ್ಟಿವಿ. ಅವರು ಒಡೆಯುತ್ತಿದ್ದಾಗ ನಾವೇನು ಮಾಡಲು ಆಗುತ್ರೀ? ಅವರು ಎಂಟು ಹತ್ತು ಇದ್ದರು, ನಾವೊಬ್ಬ ಇದ್ದೀನಿ. ಒಂದು ಕಾಯಿ ತೆಗೆದು ಇಡುವಷ್ಟರಲ್ಲಿ ಹತ್ತು ಕಾಯಿ ಒಡೆಯುತ್ತಿದ್ದರು. ಆರು ಕಿಂಟ್ವಾಲ್‌ ತೆಗೆದುಕೊಂಡು ಬಂದಿದೆ. ಒಂದು ಕಿಂಟ್ವಾಲ್ ಮಾಗ್ರ ಮಾರಿದ್ದೆ. ಉಳಿದೆಲ್ಲವನ್ನೂ ಒಡೆದು ಹಾಕಿದ್ರು” ಎಂದು ನೋವು ತೋಡಿಕೊಂಡಿದ್ದಾರೆ.

“ಮುಸಲ್ಮಾನರು ಅಂಗಡಿ ಇಡಬೇಡಿ ಎಂದು ತಿಳಿಸಿದ್ದು ನಿಜ. ನಾನು ಹದಿನೈದು ವರ್ಷಗಳಿಂದ ಇಲ್ಲಿ ವ್ಯಾಪಾರ ಮಾಡುತ್ತಿದ್ದೇನೆ. ಪ್ರತಿ ಕಿಂಟ್ವಾಲ್ ಕಲ್ಲಂಗಡಿಯನ್ನು 1700 ರೂಪಾಯಿ ಕೊಟ್ಟು ಖರೀದಿಸಿದ್ದೀನಿ. ಒಂದು ಕ್ವಿಂಟಾಲ್ ಮಾತ್ರ ಮಾರಿದ್ದೀನಿ. ಉಳಿದಿದೆಲ್ಲವನ್ನೂ ಒಡೆದು ಹಾಕಿದ್ದಾರೆ… ಕೈ ಎತ್ತಿಬಿಡ್ತೀನಿ, ಎಲ್ಲರೂ ನನ್ನ ಕೊಂದುಬಿಡಿ” ಎಂದು ಅಸಹಾಯಕತೆ ವ್ಯಕ್ತಪಡಿಸುತ್ತಾರೆ ನಬಿಸಾಬ್.

ದೇವಸ್ಥಾನದ ಪರ್ಯಾಯಸ್ತ ನರಸಿಂಹ ದೇಸಾಯಿಯವರು ಮಾತನಾಡಿ, “ಶ್ರೀರಾಮಸೇನೆಯವರು ನಮಗೆ ಮನವಿ ಕೊಟ್ಟಿಲ್ಲ.. ಹೋದ ತಿಂಗಳೇನೋ ಕೊಟ್ಟಿದ್ದರೇನೋ… ನಾನು ಬಂದು ಒಂದು ತಿಂಗಳಾಗಿದೆ. ಆ ಮನವಿ ಬಗ್ಗೆಯಾಗಲೀ, ಇಂದಿನ ಗಲಾಟೆ ಬಗ್ಗೆಯಾಗಲೀ ಸಮಿತಿಯ ಸಭೆ ಕರೆದು ಪ್ರತಿಕ್ರಿಯೆ ನೀಡುತ್ತೇನೆ…” ಎಂದಿದ್ದಾರೆ.

“ಅಂಗಡಿ ನಡೆಸಲು ಬಡವರಿಗೆ ಕೊಟ್ಟಿದ್ದೀವಿ. ಇಲ್ಲಿ ಶೇ. 99 ಜನ ಹಿಂದೂಗಳಿದ್ದಾರೆ. ಎಲ್ಲರಿಗೂ ಹೊಟ್ಟೆಪಾಡು ಇರುತ್ತೆ. ಅವರ ಹೊಟ್ಟೆಪಾಡಿಗೆ ನಾವು ಸಹಾಯ ಮಾಡುತ್ತಿದ್ದೇವೆ” ಎಂದು ತಿಳಿಸಿದ್ದಾರೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಮುಸ್ಲಿಂ ಜೊತೆ ಮದುವೆಯಾದರೆ ಬಹಿಷ್ಕರಿಸಿ ಎನ್ನುವ ಬಿಜೆಪಿ ಮುಖಂಡ, ‘ಅಂತರ್ಜಾತಿ ವಿವಾಹ’ ಎಂದರೆ ಉತ್ತರಿಸುವುದಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮನ ಕಲುಕಲಿಕ್ಕೆ ಇವರು ನಿಜವಾಗ್ಲೂ ಮನುಷ್ಯರಲ್ಲ ಪುರಾಣದಲ್ಲಿ ರಾಕ್ಷಸರಿಗಾದರೂ ಸ್ವಲ್ಪ ಕರುಣೆ ಇತ್ತೇನೋ ಇವರು ಗೋಮುಖ ವ್ಯಾಘ್ರರು ಅಲ್ರಿ ಬೀದಿಬದಿ ಹಣ್ಣು ವ್ಯಾಪಾರ ಮಾಡಿ ತಮ್ಮ ಕುಟುಂಬ ಸಾಕಲಿಕ್ಕೆ ಅಲ್ವಾ ಬಿಸಿಲಲ್ಲಿ ಶ್ರಮ ಪಡೋದು ಇದೇನು ದೇಶದ್ರೋಹಿ ಕೆಲಸನಾ ನೆನಪಿರಲಿ ಸೃಷ್ಟಿ ಕರ್ತ ಎಲ್ಲವನ್ನು ನೋಡುತ್ತಿದ್ದಾನೆ ಮುಂದೊಂದು ದಿನ ಈ ಬಡ ಮುಸಲ್ಮಾನರೇ ನಿಮ್ಮ ಹೆಣ ಹೊರಲಿಕ್ಕೆ ಸಮಯ ಬರಬಹುದು ಭಗವಂತನ laathiyalli ಸೌಂಡ್ ಇರುವುದಿಲ್ಲ b carefull

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...