Homeಕರ್ನಾಟಕಎಲ್ಲರೂ ನನ್ನ ಕೊಂದು ಬಿಡಿ: ಶ್ರೀರಾಮಸೇನೆಯ ಗೂಂಡಾಗಳಿಂದ ದಾಳಿಗೊಳಗಾದ ಮುಸ್ಲಿಂ ವ್ಯಾಪಾರಿಯ ಸಂಕಟ

ಎಲ್ಲರೂ ನನ್ನ ಕೊಂದು ಬಿಡಿ: ಶ್ರೀರಾಮಸೇನೆಯ ಗೂಂಡಾಗಳಿಂದ ದಾಳಿಗೊಳಗಾದ ಮುಸ್ಲಿಂ ವ್ಯಾಪಾರಿಯ ಸಂಕಟ

- Advertisement -
- Advertisement -

“ಕೈ ಎತ್ತಿಬಿಡ್ತೀನಿ… ಎಲ್ಲರೂ ನನ್ನ ಕೊಂದು ಬಿಡಿ…”- ಹೀಗೆ ಮನನೊಂದು ಹೇಳುತ್ತಾರೆ ಧಾರವಾಡದ ಮುಸ್ಲಿಂ ವ್ಯಾಪಾರಿ ನಬಿಸಾಬ್‌. ಈ ಮಾತು ಮನುಷ್ಯರಾದವರನ್ನು ಕಲಕದೆ ಇರದು.

ಧಾರವಾಡದ ನುಗ್ಗಿಕೇರಿಯಲ್ಲಿನ ಹನುಮಾನ್‌ ದೇವಸ್ಥಾನದ ಬಳಿ ಕಳೆದ ಹದಿನೈದು ವರ್ಷಗಳಿಂದ ವ್ಯಾಪಾರ ಮಾಡುತ್ತಿರುವ ನಬಿಸಾಬ್‌‌, ಶ್ರೀರಾಮಸೇನೆಯ ಗೂಂಡಾಗಳಿಂದ ತೊಂದರೆಗೊಳಗಾಗಿದ್ದಾರೆ. ದೇವಸ್ಥಾನದ ಬಳಿ ಕಲ್ಲಂಗಡಿ ಮಾರುತ್ತಿದ್ದ ಕಾರಣಕ್ಕೆ ಗೂಂಡಾಗಳು ದಾಂಧಲೆ ನಡೆಸಿದ್ದಾರೆ. ಐದು ಕ್ವಿಂಟಾಲ್‌ ಕಲ್ಲಂಗಡಿಯನ್ನು ಒಡೆದು ಹಾಕಿ, ಬಡ ವ್ಯಾಪಾರಿಯ  ಹೊಟ್ಟೆ ಮೇಲೆ ಹೊಡೆದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಾಧ್ಯಮಗಳ ಮುಂದೆ ನೋವು ತೋಡಿಕೊಂಡಿರುವ ನಬಿಸಾಬ್‌, “ಬಂದವರು ಪಟ್‌ ಪಟ್‌ ಅಂತ ಕಲ್ಲಂಗಡಿ ಕಾಯಿಗಳನ್ನು ಒಡೆದುಕೊಂಡು ಬಂದರು. ಒಂದೆರಡು ಕಾಯಿಯಲ್ಲ, ತೆಗೆದುಕೊಳ್ಳುತ್ತೀವಿ ಸ್ವಾಮಿ ಸ್ವಲ್ಪ ನಿಲ್ಲಿಸಿ ಎಂದರೂ ಕೇಳಲಿಲ್ಲ. ಎಲ್ಲವನ್ನೂ ಒಡೆದುಹಾಕಿದರು. ನಾನೇನು ಮಾಡಬೇಕಾಗುತ್ರೀ?” ಎಂದು ಸಂಕಟ ವ್ಯಕ್ತಪಡಿಸಿದ್ದಾರೆ.

“ನಾವು ಸರಿದು ನಿಂತುಬಿಟ್ಟಿವಿ. ಅವರು ಒಡೆಯುತ್ತಿದ್ದಾಗ ನಾವೇನು ಮಾಡಲು ಆಗುತ್ರೀ? ಅವರು ಎಂಟು ಹತ್ತು ಇದ್ದರು, ನಾವೊಬ್ಬ ಇದ್ದೀನಿ. ಒಂದು ಕಾಯಿ ತೆಗೆದು ಇಡುವಷ್ಟರಲ್ಲಿ ಹತ್ತು ಕಾಯಿ ಒಡೆಯುತ್ತಿದ್ದರು. ಆರು ಕಿಂಟ್ವಾಲ್‌ ತೆಗೆದುಕೊಂಡು ಬಂದಿದೆ. ಒಂದು ಕಿಂಟ್ವಾಲ್ ಮಾಗ್ರ ಮಾರಿದ್ದೆ. ಉಳಿದೆಲ್ಲವನ್ನೂ ಒಡೆದು ಹಾಕಿದ್ರು” ಎಂದು ನೋವು ತೋಡಿಕೊಂಡಿದ್ದಾರೆ.

“ಮುಸಲ್ಮಾನರು ಅಂಗಡಿ ಇಡಬೇಡಿ ಎಂದು ತಿಳಿಸಿದ್ದು ನಿಜ. ನಾನು ಹದಿನೈದು ವರ್ಷಗಳಿಂದ ಇಲ್ಲಿ ವ್ಯಾಪಾರ ಮಾಡುತ್ತಿದ್ದೇನೆ. ಪ್ರತಿ ಕಿಂಟ್ವಾಲ್ ಕಲ್ಲಂಗಡಿಯನ್ನು 1700 ರೂಪಾಯಿ ಕೊಟ್ಟು ಖರೀದಿಸಿದ್ದೀನಿ. ಒಂದು ಕ್ವಿಂಟಾಲ್ ಮಾತ್ರ ಮಾರಿದ್ದೀನಿ. ಉಳಿದಿದೆಲ್ಲವನ್ನೂ ಒಡೆದು ಹಾಕಿದ್ದಾರೆ… ಕೈ ಎತ್ತಿಬಿಡ್ತೀನಿ, ಎಲ್ಲರೂ ನನ್ನ ಕೊಂದುಬಿಡಿ” ಎಂದು ಅಸಹಾಯಕತೆ ವ್ಯಕ್ತಪಡಿಸುತ್ತಾರೆ ನಬಿಸಾಬ್.

ದೇವಸ್ಥಾನದ ಪರ್ಯಾಯಸ್ತ ನರಸಿಂಹ ದೇಸಾಯಿಯವರು ಮಾತನಾಡಿ, “ಶ್ರೀರಾಮಸೇನೆಯವರು ನಮಗೆ ಮನವಿ ಕೊಟ್ಟಿಲ್ಲ.. ಹೋದ ತಿಂಗಳೇನೋ ಕೊಟ್ಟಿದ್ದರೇನೋ… ನಾನು ಬಂದು ಒಂದು ತಿಂಗಳಾಗಿದೆ. ಆ ಮನವಿ ಬಗ್ಗೆಯಾಗಲೀ, ಇಂದಿನ ಗಲಾಟೆ ಬಗ್ಗೆಯಾಗಲೀ ಸಮಿತಿಯ ಸಭೆ ಕರೆದು ಪ್ರತಿಕ್ರಿಯೆ ನೀಡುತ್ತೇನೆ…” ಎಂದಿದ್ದಾರೆ.

“ಅಂಗಡಿ ನಡೆಸಲು ಬಡವರಿಗೆ ಕೊಟ್ಟಿದ್ದೀವಿ. ಇಲ್ಲಿ ಶೇ. 99 ಜನ ಹಿಂದೂಗಳಿದ್ದಾರೆ. ಎಲ್ಲರಿಗೂ ಹೊಟ್ಟೆಪಾಡು ಇರುತ್ತೆ. ಅವರ ಹೊಟ್ಟೆಪಾಡಿಗೆ ನಾವು ಸಹಾಯ ಮಾಡುತ್ತಿದ್ದೇವೆ” ಎಂದು ತಿಳಿಸಿದ್ದಾರೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಮುಸ್ಲಿಂ ಜೊತೆ ಮದುವೆಯಾದರೆ ಬಹಿಷ್ಕರಿಸಿ ಎನ್ನುವ ಬಿಜೆಪಿ ಮುಖಂಡ, ‘ಅಂತರ್ಜಾತಿ ವಿವಾಹ’ ಎಂದರೆ ಉತ್ತರಿಸುವುದಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮನ ಕಲುಕಲಿಕ್ಕೆ ಇವರು ನಿಜವಾಗ್ಲೂ ಮನುಷ್ಯರಲ್ಲ ಪುರಾಣದಲ್ಲಿ ರಾಕ್ಷಸರಿಗಾದರೂ ಸ್ವಲ್ಪ ಕರುಣೆ ಇತ್ತೇನೋ ಇವರು ಗೋಮುಖ ವ್ಯಾಘ್ರರು ಅಲ್ರಿ ಬೀದಿಬದಿ ಹಣ್ಣು ವ್ಯಾಪಾರ ಮಾಡಿ ತಮ್ಮ ಕುಟುಂಬ ಸಾಕಲಿಕ್ಕೆ ಅಲ್ವಾ ಬಿಸಿಲಲ್ಲಿ ಶ್ರಮ ಪಡೋದು ಇದೇನು ದೇಶದ್ರೋಹಿ ಕೆಲಸನಾ ನೆನಪಿರಲಿ ಸೃಷ್ಟಿ ಕರ್ತ ಎಲ್ಲವನ್ನು ನೋಡುತ್ತಿದ್ದಾನೆ ಮುಂದೊಂದು ದಿನ ಈ ಬಡ ಮುಸಲ್ಮಾನರೇ ನಿಮ್ಮ ಹೆಣ ಹೊರಲಿಕ್ಕೆ ಸಮಯ ಬರಬಹುದು ಭಗವಂತನ laathiyalli ಸೌಂಡ್ ಇರುವುದಿಲ್ಲ b carefull

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...