Homeಕರ್ನಾಟಕಎಲ್ಲರೂ ನನ್ನ ಕೊಂದು ಬಿಡಿ: ಶ್ರೀರಾಮಸೇನೆಯ ಗೂಂಡಾಗಳಿಂದ ದಾಳಿಗೊಳಗಾದ ಮುಸ್ಲಿಂ ವ್ಯಾಪಾರಿಯ ಸಂಕಟ

ಎಲ್ಲರೂ ನನ್ನ ಕೊಂದು ಬಿಡಿ: ಶ್ರೀರಾಮಸೇನೆಯ ಗೂಂಡಾಗಳಿಂದ ದಾಳಿಗೊಳಗಾದ ಮುಸ್ಲಿಂ ವ್ಯಾಪಾರಿಯ ಸಂಕಟ

- Advertisement -
- Advertisement -

“ಕೈ ಎತ್ತಿಬಿಡ್ತೀನಿ… ಎಲ್ಲರೂ ನನ್ನ ಕೊಂದು ಬಿಡಿ…”- ಹೀಗೆ ಮನನೊಂದು ಹೇಳುತ್ತಾರೆ ಧಾರವಾಡದ ಮುಸ್ಲಿಂ ವ್ಯಾಪಾರಿ ನಬಿಸಾಬ್‌. ಈ ಮಾತು ಮನುಷ್ಯರಾದವರನ್ನು ಕಲಕದೆ ಇರದು.

ಧಾರವಾಡದ ನುಗ್ಗಿಕೇರಿಯಲ್ಲಿನ ಹನುಮಾನ್‌ ದೇವಸ್ಥಾನದ ಬಳಿ ಕಳೆದ ಹದಿನೈದು ವರ್ಷಗಳಿಂದ ವ್ಯಾಪಾರ ಮಾಡುತ್ತಿರುವ ನಬಿಸಾಬ್‌‌, ಶ್ರೀರಾಮಸೇನೆಯ ಗೂಂಡಾಗಳಿಂದ ತೊಂದರೆಗೊಳಗಾಗಿದ್ದಾರೆ. ದೇವಸ್ಥಾನದ ಬಳಿ ಕಲ್ಲಂಗಡಿ ಮಾರುತ್ತಿದ್ದ ಕಾರಣಕ್ಕೆ ಗೂಂಡಾಗಳು ದಾಂಧಲೆ ನಡೆಸಿದ್ದಾರೆ. ಐದು ಕ್ವಿಂಟಾಲ್‌ ಕಲ್ಲಂಗಡಿಯನ್ನು ಒಡೆದು ಹಾಕಿ, ಬಡ ವ್ಯಾಪಾರಿಯ  ಹೊಟ್ಟೆ ಮೇಲೆ ಹೊಡೆದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಾಧ್ಯಮಗಳ ಮುಂದೆ ನೋವು ತೋಡಿಕೊಂಡಿರುವ ನಬಿಸಾಬ್‌, “ಬಂದವರು ಪಟ್‌ ಪಟ್‌ ಅಂತ ಕಲ್ಲಂಗಡಿ ಕಾಯಿಗಳನ್ನು ಒಡೆದುಕೊಂಡು ಬಂದರು. ಒಂದೆರಡು ಕಾಯಿಯಲ್ಲ, ತೆಗೆದುಕೊಳ್ಳುತ್ತೀವಿ ಸ್ವಾಮಿ ಸ್ವಲ್ಪ ನಿಲ್ಲಿಸಿ ಎಂದರೂ ಕೇಳಲಿಲ್ಲ. ಎಲ್ಲವನ್ನೂ ಒಡೆದುಹಾಕಿದರು. ನಾನೇನು ಮಾಡಬೇಕಾಗುತ್ರೀ?” ಎಂದು ಸಂಕಟ ವ್ಯಕ್ತಪಡಿಸಿದ್ದಾರೆ.

“ನಾವು ಸರಿದು ನಿಂತುಬಿಟ್ಟಿವಿ. ಅವರು ಒಡೆಯುತ್ತಿದ್ದಾಗ ನಾವೇನು ಮಾಡಲು ಆಗುತ್ರೀ? ಅವರು ಎಂಟು ಹತ್ತು ಇದ್ದರು, ನಾವೊಬ್ಬ ಇದ್ದೀನಿ. ಒಂದು ಕಾಯಿ ತೆಗೆದು ಇಡುವಷ್ಟರಲ್ಲಿ ಹತ್ತು ಕಾಯಿ ಒಡೆಯುತ್ತಿದ್ದರು. ಆರು ಕಿಂಟ್ವಾಲ್‌ ತೆಗೆದುಕೊಂಡು ಬಂದಿದೆ. ಒಂದು ಕಿಂಟ್ವಾಲ್ ಮಾಗ್ರ ಮಾರಿದ್ದೆ. ಉಳಿದೆಲ್ಲವನ್ನೂ ಒಡೆದು ಹಾಕಿದ್ರು” ಎಂದು ನೋವು ತೋಡಿಕೊಂಡಿದ್ದಾರೆ.

“ಮುಸಲ್ಮಾನರು ಅಂಗಡಿ ಇಡಬೇಡಿ ಎಂದು ತಿಳಿಸಿದ್ದು ನಿಜ. ನಾನು ಹದಿನೈದು ವರ್ಷಗಳಿಂದ ಇಲ್ಲಿ ವ್ಯಾಪಾರ ಮಾಡುತ್ತಿದ್ದೇನೆ. ಪ್ರತಿ ಕಿಂಟ್ವಾಲ್ ಕಲ್ಲಂಗಡಿಯನ್ನು 1700 ರೂಪಾಯಿ ಕೊಟ್ಟು ಖರೀದಿಸಿದ್ದೀನಿ. ಒಂದು ಕ್ವಿಂಟಾಲ್ ಮಾತ್ರ ಮಾರಿದ್ದೀನಿ. ಉಳಿದಿದೆಲ್ಲವನ್ನೂ ಒಡೆದು ಹಾಕಿದ್ದಾರೆ… ಕೈ ಎತ್ತಿಬಿಡ್ತೀನಿ, ಎಲ್ಲರೂ ನನ್ನ ಕೊಂದುಬಿಡಿ” ಎಂದು ಅಸಹಾಯಕತೆ ವ್ಯಕ್ತಪಡಿಸುತ್ತಾರೆ ನಬಿಸಾಬ್.

ದೇವಸ್ಥಾನದ ಪರ್ಯಾಯಸ್ತ ನರಸಿಂಹ ದೇಸಾಯಿಯವರು ಮಾತನಾಡಿ, “ಶ್ರೀರಾಮಸೇನೆಯವರು ನಮಗೆ ಮನವಿ ಕೊಟ್ಟಿಲ್ಲ.. ಹೋದ ತಿಂಗಳೇನೋ ಕೊಟ್ಟಿದ್ದರೇನೋ… ನಾನು ಬಂದು ಒಂದು ತಿಂಗಳಾಗಿದೆ. ಆ ಮನವಿ ಬಗ್ಗೆಯಾಗಲೀ, ಇಂದಿನ ಗಲಾಟೆ ಬಗ್ಗೆಯಾಗಲೀ ಸಮಿತಿಯ ಸಭೆ ಕರೆದು ಪ್ರತಿಕ್ರಿಯೆ ನೀಡುತ್ತೇನೆ…” ಎಂದಿದ್ದಾರೆ.

“ಅಂಗಡಿ ನಡೆಸಲು ಬಡವರಿಗೆ ಕೊಟ್ಟಿದ್ದೀವಿ. ಇಲ್ಲಿ ಶೇ. 99 ಜನ ಹಿಂದೂಗಳಿದ್ದಾರೆ. ಎಲ್ಲರಿಗೂ ಹೊಟ್ಟೆಪಾಡು ಇರುತ್ತೆ. ಅವರ ಹೊಟ್ಟೆಪಾಡಿಗೆ ನಾವು ಸಹಾಯ ಮಾಡುತ್ತಿದ್ದೇವೆ” ಎಂದು ತಿಳಿಸಿದ್ದಾರೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಮುಸ್ಲಿಂ ಜೊತೆ ಮದುವೆಯಾದರೆ ಬಹಿಷ್ಕರಿಸಿ ಎನ್ನುವ ಬಿಜೆಪಿ ಮುಖಂಡ, ‘ಅಂತರ್ಜಾತಿ ವಿವಾಹ’ ಎಂದರೆ ಉತ್ತರಿಸುವುದಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮನ ಕಲುಕಲಿಕ್ಕೆ ಇವರು ನಿಜವಾಗ್ಲೂ ಮನುಷ್ಯರಲ್ಲ ಪುರಾಣದಲ್ಲಿ ರಾಕ್ಷಸರಿಗಾದರೂ ಸ್ವಲ್ಪ ಕರುಣೆ ಇತ್ತೇನೋ ಇವರು ಗೋಮುಖ ವ್ಯಾಘ್ರರು ಅಲ್ರಿ ಬೀದಿಬದಿ ಹಣ್ಣು ವ್ಯಾಪಾರ ಮಾಡಿ ತಮ್ಮ ಕುಟುಂಬ ಸಾಕಲಿಕ್ಕೆ ಅಲ್ವಾ ಬಿಸಿಲಲ್ಲಿ ಶ್ರಮ ಪಡೋದು ಇದೇನು ದೇಶದ್ರೋಹಿ ಕೆಲಸನಾ ನೆನಪಿರಲಿ ಸೃಷ್ಟಿ ಕರ್ತ ಎಲ್ಲವನ್ನು ನೋಡುತ್ತಿದ್ದಾನೆ ಮುಂದೊಂದು ದಿನ ಈ ಬಡ ಮುಸಲ್ಮಾನರೇ ನಿಮ್ಮ ಹೆಣ ಹೊರಲಿಕ್ಕೆ ಸಮಯ ಬರಬಹುದು ಭಗವಂತನ laathiyalli ಸೌಂಡ್ ಇರುವುದಿಲ್ಲ b carefull

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...