Homeಕರ್ನಾಟಕಎಲ್ಲರೂ ನನ್ನ ಕೊಂದು ಬಿಡಿ: ಶ್ರೀರಾಮಸೇನೆಯ ಗೂಂಡಾಗಳಿಂದ ದಾಳಿಗೊಳಗಾದ ಮುಸ್ಲಿಂ ವ್ಯಾಪಾರಿಯ ಸಂಕಟ

ಎಲ್ಲರೂ ನನ್ನ ಕೊಂದು ಬಿಡಿ: ಶ್ರೀರಾಮಸೇನೆಯ ಗೂಂಡಾಗಳಿಂದ ದಾಳಿಗೊಳಗಾದ ಮುಸ್ಲಿಂ ವ್ಯಾಪಾರಿಯ ಸಂಕಟ

- Advertisement -
- Advertisement -

“ಕೈ ಎತ್ತಿಬಿಡ್ತೀನಿ… ಎಲ್ಲರೂ ನನ್ನ ಕೊಂದು ಬಿಡಿ…”- ಹೀಗೆ ಮನನೊಂದು ಹೇಳುತ್ತಾರೆ ಧಾರವಾಡದ ಮುಸ್ಲಿಂ ವ್ಯಾಪಾರಿ ನಬಿಸಾಬ್‌. ಈ ಮಾತು ಮನುಷ್ಯರಾದವರನ್ನು ಕಲಕದೆ ಇರದು.

ಧಾರವಾಡದ ನುಗ್ಗಿಕೇರಿಯಲ್ಲಿನ ಹನುಮಾನ್‌ ದೇವಸ್ಥಾನದ ಬಳಿ ಕಳೆದ ಹದಿನೈದು ವರ್ಷಗಳಿಂದ ವ್ಯಾಪಾರ ಮಾಡುತ್ತಿರುವ ನಬಿಸಾಬ್‌‌, ಶ್ರೀರಾಮಸೇನೆಯ ಗೂಂಡಾಗಳಿಂದ ತೊಂದರೆಗೊಳಗಾಗಿದ್ದಾರೆ. ದೇವಸ್ಥಾನದ ಬಳಿ ಕಲ್ಲಂಗಡಿ ಮಾರುತ್ತಿದ್ದ ಕಾರಣಕ್ಕೆ ಗೂಂಡಾಗಳು ದಾಂಧಲೆ ನಡೆಸಿದ್ದಾರೆ. ಐದು ಕ್ವಿಂಟಾಲ್‌ ಕಲ್ಲಂಗಡಿಯನ್ನು ಒಡೆದು ಹಾಕಿ, ಬಡ ವ್ಯಾಪಾರಿಯ  ಹೊಟ್ಟೆ ಮೇಲೆ ಹೊಡೆದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಾಧ್ಯಮಗಳ ಮುಂದೆ ನೋವು ತೋಡಿಕೊಂಡಿರುವ ನಬಿಸಾಬ್‌, “ಬಂದವರು ಪಟ್‌ ಪಟ್‌ ಅಂತ ಕಲ್ಲಂಗಡಿ ಕಾಯಿಗಳನ್ನು ಒಡೆದುಕೊಂಡು ಬಂದರು. ಒಂದೆರಡು ಕಾಯಿಯಲ್ಲ, ತೆಗೆದುಕೊಳ್ಳುತ್ತೀವಿ ಸ್ವಾಮಿ ಸ್ವಲ್ಪ ನಿಲ್ಲಿಸಿ ಎಂದರೂ ಕೇಳಲಿಲ್ಲ. ಎಲ್ಲವನ್ನೂ ಒಡೆದುಹಾಕಿದರು. ನಾನೇನು ಮಾಡಬೇಕಾಗುತ್ರೀ?” ಎಂದು ಸಂಕಟ ವ್ಯಕ್ತಪಡಿಸಿದ್ದಾರೆ.

“ನಾವು ಸರಿದು ನಿಂತುಬಿಟ್ಟಿವಿ. ಅವರು ಒಡೆಯುತ್ತಿದ್ದಾಗ ನಾವೇನು ಮಾಡಲು ಆಗುತ್ರೀ? ಅವರು ಎಂಟು ಹತ್ತು ಇದ್ದರು, ನಾವೊಬ್ಬ ಇದ್ದೀನಿ. ಒಂದು ಕಾಯಿ ತೆಗೆದು ಇಡುವಷ್ಟರಲ್ಲಿ ಹತ್ತು ಕಾಯಿ ಒಡೆಯುತ್ತಿದ್ದರು. ಆರು ಕಿಂಟ್ವಾಲ್‌ ತೆಗೆದುಕೊಂಡು ಬಂದಿದೆ. ಒಂದು ಕಿಂಟ್ವಾಲ್ ಮಾಗ್ರ ಮಾರಿದ್ದೆ. ಉಳಿದೆಲ್ಲವನ್ನೂ ಒಡೆದು ಹಾಕಿದ್ರು” ಎಂದು ನೋವು ತೋಡಿಕೊಂಡಿದ್ದಾರೆ.

“ಮುಸಲ್ಮಾನರು ಅಂಗಡಿ ಇಡಬೇಡಿ ಎಂದು ತಿಳಿಸಿದ್ದು ನಿಜ. ನಾನು ಹದಿನೈದು ವರ್ಷಗಳಿಂದ ಇಲ್ಲಿ ವ್ಯಾಪಾರ ಮಾಡುತ್ತಿದ್ದೇನೆ. ಪ್ರತಿ ಕಿಂಟ್ವಾಲ್ ಕಲ್ಲಂಗಡಿಯನ್ನು 1700 ರೂಪಾಯಿ ಕೊಟ್ಟು ಖರೀದಿಸಿದ್ದೀನಿ. ಒಂದು ಕ್ವಿಂಟಾಲ್ ಮಾತ್ರ ಮಾರಿದ್ದೀನಿ. ಉಳಿದಿದೆಲ್ಲವನ್ನೂ ಒಡೆದು ಹಾಕಿದ್ದಾರೆ… ಕೈ ಎತ್ತಿಬಿಡ್ತೀನಿ, ಎಲ್ಲರೂ ನನ್ನ ಕೊಂದುಬಿಡಿ” ಎಂದು ಅಸಹಾಯಕತೆ ವ್ಯಕ್ತಪಡಿಸುತ್ತಾರೆ ನಬಿಸಾಬ್.

ದೇವಸ್ಥಾನದ ಪರ್ಯಾಯಸ್ತ ನರಸಿಂಹ ದೇಸಾಯಿಯವರು ಮಾತನಾಡಿ, “ಶ್ರೀರಾಮಸೇನೆಯವರು ನಮಗೆ ಮನವಿ ಕೊಟ್ಟಿಲ್ಲ.. ಹೋದ ತಿಂಗಳೇನೋ ಕೊಟ್ಟಿದ್ದರೇನೋ… ನಾನು ಬಂದು ಒಂದು ತಿಂಗಳಾಗಿದೆ. ಆ ಮನವಿ ಬಗ್ಗೆಯಾಗಲೀ, ಇಂದಿನ ಗಲಾಟೆ ಬಗ್ಗೆಯಾಗಲೀ ಸಮಿತಿಯ ಸಭೆ ಕರೆದು ಪ್ರತಿಕ್ರಿಯೆ ನೀಡುತ್ತೇನೆ…” ಎಂದಿದ್ದಾರೆ.

“ಅಂಗಡಿ ನಡೆಸಲು ಬಡವರಿಗೆ ಕೊಟ್ಟಿದ್ದೀವಿ. ಇಲ್ಲಿ ಶೇ. 99 ಜನ ಹಿಂದೂಗಳಿದ್ದಾರೆ. ಎಲ್ಲರಿಗೂ ಹೊಟ್ಟೆಪಾಡು ಇರುತ್ತೆ. ಅವರ ಹೊಟ್ಟೆಪಾಡಿಗೆ ನಾವು ಸಹಾಯ ಮಾಡುತ್ತಿದ್ದೇವೆ” ಎಂದು ತಿಳಿಸಿದ್ದಾರೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಮುಸ್ಲಿಂ ಜೊತೆ ಮದುವೆಯಾದರೆ ಬಹಿಷ್ಕರಿಸಿ ಎನ್ನುವ ಬಿಜೆಪಿ ಮುಖಂಡ, ‘ಅಂತರ್ಜಾತಿ ವಿವಾಹ’ ಎಂದರೆ ಉತ್ತರಿಸುವುದಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮನ ಕಲುಕಲಿಕ್ಕೆ ಇವರು ನಿಜವಾಗ್ಲೂ ಮನುಷ್ಯರಲ್ಲ ಪುರಾಣದಲ್ಲಿ ರಾಕ್ಷಸರಿಗಾದರೂ ಸ್ವಲ್ಪ ಕರುಣೆ ಇತ್ತೇನೋ ಇವರು ಗೋಮುಖ ವ್ಯಾಘ್ರರು ಅಲ್ರಿ ಬೀದಿಬದಿ ಹಣ್ಣು ವ್ಯಾಪಾರ ಮಾಡಿ ತಮ್ಮ ಕುಟುಂಬ ಸಾಕಲಿಕ್ಕೆ ಅಲ್ವಾ ಬಿಸಿಲಲ್ಲಿ ಶ್ರಮ ಪಡೋದು ಇದೇನು ದೇಶದ್ರೋಹಿ ಕೆಲಸನಾ ನೆನಪಿರಲಿ ಸೃಷ್ಟಿ ಕರ್ತ ಎಲ್ಲವನ್ನು ನೋಡುತ್ತಿದ್ದಾನೆ ಮುಂದೊಂದು ದಿನ ಈ ಬಡ ಮುಸಲ್ಮಾನರೇ ನಿಮ್ಮ ಹೆಣ ಹೊರಲಿಕ್ಕೆ ಸಮಯ ಬರಬಹುದು ಭಗವಂತನ laathiyalli ಸೌಂಡ್ ಇರುವುದಿಲ್ಲ b carefull

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....