Homeಕರ್ನಾಟಕಟಿಪ್ಪು ಅನುಯಾಯಿಗಳನ್ನು ಕೊಲ್ಲಿರಿ: ನಳಿನ್ ಕುಮಾರ್‌‌ ಪ್ರಚೋದನಾತ್ಮಕ ಹೇಳಿಕೆ

ಟಿಪ್ಪು ಅನುಯಾಯಿಗಳನ್ನು ಕೊಲ್ಲಿರಿ: ನಳಿನ್ ಕುಮಾರ್‌‌ ಪ್ರಚೋದನಾತ್ಮಕ ಹೇಳಿಕೆ

- Advertisement -
- Advertisement -

ವಿವಾದಾತ್ಮಕ ಹೇಳಿಕೆಗಳಿಗೆ ಹೆಸರಾಗಿರುವ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, “ಟಿಪ್ಪು ಸುಲ್ತಾನನ ಎಲ್ಲಾ ಅನುಯಾಯಿಗಳನ್ನು ಕೊಲ್ಲಬೇಕು” ಎಂದು ಹೇಳಿರುವುದಾಗಿ ‘ಎನ್‌ಡಿಟಿವಿ’ ವರದಿ ಮಾಡಿದೆ. ಟಿಪ್ಪು ಸುಲ್ತಾನ್ ವಂಶಸ್ಥರನ್ನು ಓಡಿಸಿ ಕಾಡಿಗೆ ಕಳುಹಿಸಬೇಕು ಎಂದು ಅವರು ಕರೆ ನೀಡಿದ್ದಾರೆ.

ಇಂದು ಕೊಪ್ಪಳ ಜಿಲ್ಲೆಯ ಯಲಬುರ್ಗಾ ಪಂಚಾಯತ್ ಪಟ್ಟಣದಲ್ಲಿ ಬಿಜೆಪಿ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಕಟೀಲು, “ನಾವು ಶ್ರೀರಾಮ, ಹನುಮಂತನ ಭಕ್ತರು. ನಾವು ಹನುಮಂತ ದೇವರಿಗೆ ಪ್ರಾರ್ಥನೆ ಮತ್ತು ನಮನ ಸಲ್ಲಿಸುತ್ತೇವೆ. ನಾವು ಟಿಪ್ಪು ವಂಶಸ್ಥರಲ್ಲ. ಟಿಪ್ಪು ವಂಶಸ್ಥರನ್ನು ಮನೆಗೆ ಕಳುಹಿಸೋಣ” ಎಂದಿದ್ದಾರೆ.

“ನೀವು ಹನುಮಂತನನ್ನು ಪ್ರಾರ್ಥಿಸುತ್ತೀರೋ, ಟಿಪ್ಪುವಿಗೆ ಪ್ರಾರ್ಥನೆ ಸಲ್ಲಿಸುತ್ತೀರೋ ಎಂದು ಕೇಳುತ್ತಿದ್ದೇನೆ. ಹಾಗಾದರೆ ನೀವು ಟಿಪ್ಪುವಿನ ಕಟ್ಟಾ ಅನುಯಾಯಿಗಳನ್ನು ಕಾಡಿಗೆ ಕಳುಹಿಸುತ್ತೀರಾ? ಯೋಚಿಸಿ. ಈ ರಾಜ್ಯಕ್ಕೆ ಭಗವಾನ್ ಹನುಮಾನ್ ಭಕ್ತರು ಬೇಕೋ ಅಥವಾ ಟಿಪ್ಪುವಿನ ವಂಶಸ್ಥರು ಬೇಕೋ? ಟಿಪ್ಪುವಿನ ಕಟ್ಟಾ ಅನುಯಾಯಿಗಳು ಈ ನೆಲದಲ್ಲಿ ಜೀವಂತವಾಗಿರಬಾರದು” ಎಂದು ಅವರು ಪ್ರಚೋದಿಸಿರುವುದಾಗಿ ವರದಿ ತಿಳಿಸಿದೆ.

ಬ್ರಿಟಿಷರೊಂದಿಗೆ ಹೋರಾಡಿದ ಟಿಪ್ಪು ಸುಲ್ತಾನ್‌ನನ್ನು ವಿರೋಧಿಸುತ್ತಾ ಬಂದಿರುವ ಬಿಜೆಪಿ ಮೊದಲಿನಿಂದಲೂ ಕೋಮು ಧ್ರುವೀಕರಣದ ರಾಜಕೀಯ ಮಾಡುತ್ತಿದೆ. ಟಿಪ್ಪು ಸುಲ್ತಾನ್ ವರ್ಸಸ್ ಹನುಮಾನ್ ಚರ್ಚೆಯನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕರ್ನಾಟಕದಲ್ಲಿ 2018 ರ ಚುನಾವಣೆಗೆ ಮುಂಚಿತವಾಗಿ ಪ್ರಚೋದಿಸಿದ್ದರು.

“ಹನುಮಂತನನ್ನು ಮತ್ತು ವಿಜಯನಗರವನ್ನು ಪೂಜಿಸುವ ಬದಲು ಕಾಂಗ್ರೆಸ್ ಟಿಪ್ಪು ಸುಲ್ತಾನ್‌ನನ್ನು ಪೂಜಿಸುತ್ತಿರುವುದು ದುರದೃಷ್ಟಕರ ಸಂಗತಿಯಾಗಿದೆ. ಕಾಂಗ್ರೆಸ್ ಅನ್ನು ಕರ್ನಾಟಕ ವಜಾಗೊಳಿಸಿದರೆ, ಟಿಪ್ಪು ಸುಲ್ತಾನ್ ಪೂಜೆಗೆ ಬೇರೆ ಯಾರೂ ಬರುವುದಿಲ್ಲ” ಎಂದಿದ್ದರು.

ಈ ತಿಂಗಳ ಆರಂಭದಲ್ಲಿ ಮಾತನಾಡಿದ್ದ ಕಟೀಲ್, ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯು “ಟಿಪ್ಪು ವರ್ಸಸ್ ಸಾವರ್ಕರ್” ಎಂದು ಹೇಳುವ ಮೂಲಕ ವಿವಾದವನ್ನು ಹುಟ್ಟುಹಾಕಿದ್ದರು. “ಅಗತ್ಯವಿಲ್ಲದ ಟಿಪ್ಪು ಜಯಂತಿಯನ್ನು ಆಚರಿಸಲು ಕಾಂಗ್ರೆಸ್‌ನವರು ಅವಕಾಶ ಮಾಡಿಕೊಟ್ಟರು. ಸಾವರ್ಕರ್ ಬಗ್ಗೆ ಅವಮಾನಕರವಾಗಿ ಮಾತನಾಡಿದರು” ಎಂದು ದೂರಿದ್ದರು.

ಏಪ್ರಿಲ್-ಮೇ ತಿಂಗಳಲ್ಲಿ ಕರ್ನಾಟಕದಲ್ಲಿ 224 ಸ್ಥಾನಗಳಿಗೆ ವಿಧಾನಸಭೆ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್‌- ಬಿಜೆಪಿ ನಡುವೆ ಭಾರೀ ಪೈಪೋಟಿ ಏರ್ಪಟ್ಟಿದೆ.

ಟಿಪ್ಪುವಿನ ಕುರಿತು ತಪ್ಪು ಕಲ್ಪನೆಗಳು

ಮೈಸೂರು ರಾಜ್ಯವನ್ನು ಆಳಿದ ’ಟಿಪ್ಪು ಸುಲ್ತಾನ್‌’ ಮತಾಂಧ, ಹಿಂದೂಗಳ ವಿರೋಧಿ, ನರಮೇಧ ನಡೆಸಿದವನು, ಕನ್ನಡ ವಿರೋಧಿ, ಅಸಂಖ್ಯಾತ ಹಿಂದೂಗಳನ್ನು ಇಸ್ಲಾಂಗೆ ಮತಾಂತರ ಮಾಡಿದವನು, ದೇವಾಲಯಗಳನ್ನು ಧ್ವಂಸ ಮಾಡಿದವನು- ಇತ್ಯಾದಿ ಸುಳ್ಳುಗಳನ್ನು ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ಪ್ರಚಾರ ಮಾಡಲಾಗುತ್ತಿದೆ. ಟಿಪ್ಪುವಿನ ಕುರಿತು ಹಬ್ಬಿಸಲಾದ ಇಂತಹ ಸುಳ್ಳುಗಳ ಕುರಿತು ಇತಿಹಾಸಕಾರರು, ವಿಚಾರವಂತರು ಸಾಕಷ್ಟು ಚರ್ಚೆ ಮಾಡಿದ್ದಾರೆ.

ಶೃಂಗೇರಿಯ ಮಠಾಧೀಶರಾಗಿದ್ದ ಸಚ್ಚಿದಾನಂದ ಭಾರತಿ ಸ್ವಾಮೀಜಿಯವರಿಗೆ ಟಿಪ್ಪು ಬರೆದಿರುವ ಹಲವು ಪತ್ರಗಳೇ ಆತನ ಪರಧರ್ಮ ಸಹಿಷ್ಣುತೆಗೆ ಸಾಕ್ಷಿಯಾಗಿವೆ. ಸ್ವಾಮೀಜಿಯವರಿಗೆ ಟಿಪ್ಪು ಬರೆದಿರುವ ಪತ್ರಗಳು ಕನ್ನಡದಲ್ಲಿರುವುದು- ಟಿಪ್ಪು ಕನ್ನಡ ವಿರೋಧಿ ಎನ್ನುವವರಿಗೆ ಉತ್ತರವಾಗಿವೆ. ಮರಾಠರ ಸೇನೆ ಶೃಂಗೇರಿ ಮಠದ ಮೇಲೆ ದಾಳಿ ಮಾಡಿದಾಗ, ಟಿಪ್ಪು ಸ್ವಾಮೀಜಿಯವರಿಗೆ ಪತ್ರ ಬರೆದು ಸಂತೈಸಿದ್ದಾರೆ. ಮಠಕ್ಕೆ, ಧಾರ್ಮಿಕ ಆಚರಣೆಗಳಿಗೆ ಬೇಕಾದ ಎಲ್ಲ ಸಹಕಾರವನ್ನು ಟಿಪ್ಪು ನೀಡಿರುವುದು ಇಲ್ಲಿನ ಪತ್ರಗಳಿಂದ ಸ್ಪಷ್ಟವಾಗುತ್ತದೆ. ಅಲ್ಲದೇ ಸ್ವಾಮೀಜಿಯವರ ಕುರಿತು ಟಿಪ್ಪುವಿಗೆ ಇದ್ದ ಪ್ರೀತಿ, ಗೌರವ ಮಹತ್ವದ್ದು.

ಸ್ವಾಮೀಜಿಯವರು ಪುಣೆಗೆ ಹೋಗಿ ಹಲವು ದಿನಗಳಾದರೂ ವಾಪಸ್ ಬರದಿದ್ದಾಗ ಟಿಪ್ಪು ಪತ್ರ ಬರೆದು, “ಶ್ರೀ ಸ್ವಾಮೀಜಿಯವರಿಗೆ ಟಿಪ್ಪು ಸುಲ್ತಾನ್ ಬಾದಶಹರವರ ಸಲಾಮು…. ತಮ್ಮಂಥಾ ದೊಡ್ಡವರು ಯಾವ ದೇಶದಲ್ಲಿ ಇದ್ದರೂ ಆ ದೇಶಕ್ಕೆ ಮಳೆ, ಬೆಳೆ ಸಕಲವೂ ಆಗಿ ಸುಭಿಕ್ಷೆಯೂ ಆಗಿ ಇರತಕ್ಕದ್ದರಿಂದ ಪರಸ್ಥಳದಲ್ಲಿ ಬಹಳ ದಿವಸ ತಾವು ಯಾತಕ್ಕೆ ಇರಬೇಕು? ಹೋದ ಕೆಲಸವನ್ನು ಕ್ಷಿಪ್ರದಲ್ಲಿ ಅನುಕೂಲ ಮಾಡಿಸಿಕೊಂಡು ಸ್ಥಳಕ್ಕೆ ಸಾಗಿಬರುವಂತೆ ಮಾಡಿಸುವುದು…” ಎಂದು ಭಿನ್ನವಿಸಿಕೊಳ್ಳುವುದು ಹೃದಯಸ್ಪರ್ಶಿಯಾಗಿದೆ. ಟಿಪ್ಪುವಿಗೆ ಇಸ್ಲಾಮೀ ಶಿಕ್ಷಣವನ್ನು ಮೌಲವಿ ಉಬೇದುಲ್ಲಾಹ್ ನೀಡಿದರೆ, ಹಿಂದೂ ಧಾರ್ಮಿಕ ಶಿಕ್ಷಣವನ್ನು ಗೋವರ್ಧನ ಪಂಡಿತರು ನೀಡಿದ್ದರು.

ಟಿಪ್ಪುವಿನ ನ್ಯಾಯದಾನ ವ್ಯವಸ್ಥೆಯೂ ಮಾನವೀಯವಾಗಿತ್ತು. ತಿರುವಾಂಕೂರಿನ ನಂಬೂದಿರಿ ಜಾತಿಯ ಅರಸರು ಕೇರಳದಲ್ಲಿ ’ಮುಲಕ್ಕರ’ (ಸ್ತನ ತೆರಿಗೆ) ಎಂಬ ಅಮಾನವೀಯ ತೆರಿಗೆಯನ್ನು ಅಲ್ಲಿನ ಕೆಳವರ್ಗದ ಮಹಿಳೆಯರಿಗೆ ವಿಧಿಸುತ್ತಿದ್ದರು. ಋತುಮತಿಯಾದ ಕೆಳವರ್ಗದ ಮಹಿಳೆಯರು ಮೇಲ್ವಸ್ತ್ರ ಧರಿಸದೇ
ತಮ್ಮ ಸ್ತನಗಳು ಕಾಣುವಂತೆ ಅವರು ನಡೆದಾಡಬೇಕಿತ್ತು. ಒಂದು ವೇಳೆ ಯಾರಾದರೂ ಸ್ತನ ಮುಚ್ಚುವ ಮೇಲ್ವಸ್ತ್ರ ಧರಿಸಿದರೆ ಅದಕ್ಕಾಗಿ ತೆರಿಗೆ ಕಟ್ಟಬೇಕಾಗಿತ್ತು. ಇಂತಹ ಅಮಾನವೀಯ ಪದ್ಧತಿಯ ವಿರುದ್ಧ ಮೊಟ್ಟಮೊದಲು ಕಾನೂನು ಜಾರಿಗೆ ತಂದು ಕೆಳವರ್ಗದ ಮಹಿಳೆಯರಿಗೆ ಗೌರವ ಕೊಟ್ಟ ಅರಸ ಟಿಪ್ಪು ಸುಲ್ತಾನ್. ಭೂಮಿ ಇಲ್ಲದವರು ಭೂಮಿ ಹೊಂದಲು ಅವಕಾಶ ನೀಡಿದರು. ರೈತರ ಮೇಲಿನ ತೆರಿಗೆ ಭಾರ ಕಡಿಮೆ ಮಾಡಿದರು. ಕೃಷಿ ಪರಿಕರಗಳನ್ನು ಖರೀದಿಸಲು ಮುಂಗಡ ಹಣ ನೀಡುವ ಪದ್ಧತಿ ಶುರುಮಾಡಿದರು. ಕೆ.ಆರ್.ಎಸ್. ಅಣೆಕಟ್ಟೆಗೆ ಅಡಿಗಲ್ಲು ಹಾಕಿದರು. ಕಾರ್ಮಿಕರ ಘನತೆಯನ್ನು ಎತ್ತಿ ಹಿಡಿದರು – ಇಂತಹ ಹಲವು ಸುಧಾರಣೆಗಳತ್ತ ಗಮನ ಹರಿಸಿದ ಟಿಪ್ಪು, ಮೂವರು ಶತ್ರುಗಳನ್ನು (ಬ್ರಿಟಿಷರು, ಮರಾಠರು, ನಿಜಾಮರು) ಸದಾ ಎದುರಿಸಬೇಕಾಯಿತು.

(ಟಿಪ್ಪುವಿನ ಆಡಳಿತ ಮತ್ತು ಹೋರಾಟದ ಕುರಿತು ‘ನಾನುಗೌರಿ.ಕಾಂ’ನಲ್ಲಿ ಸಾಕಷ್ಟು ಲೇಖನಗಳು ಪ್ರಕಟವಾಗಿವೆ. ಅವುಗಳನ್ನು ಓದಲು ‘ಇಲ್ಲಿ’ ‘ಕ್ಲಿಕ್’ ಮಾಡಿರಿ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...