Homeಕರ್ನಾಟಕಟಿಪ್ಪು ಅನುಯಾಯಿಗಳನ್ನು ಕೊಲ್ಲಿರಿ: ನಳಿನ್ ಕುಮಾರ್‌‌ ಪ್ರಚೋದನಾತ್ಮಕ ಹೇಳಿಕೆ

ಟಿಪ್ಪು ಅನುಯಾಯಿಗಳನ್ನು ಕೊಲ್ಲಿರಿ: ನಳಿನ್ ಕುಮಾರ್‌‌ ಪ್ರಚೋದನಾತ್ಮಕ ಹೇಳಿಕೆ

- Advertisement -
- Advertisement -

ವಿವಾದಾತ್ಮಕ ಹೇಳಿಕೆಗಳಿಗೆ ಹೆಸರಾಗಿರುವ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, “ಟಿಪ್ಪು ಸುಲ್ತಾನನ ಎಲ್ಲಾ ಅನುಯಾಯಿಗಳನ್ನು ಕೊಲ್ಲಬೇಕು” ಎಂದು ಹೇಳಿರುವುದಾಗಿ ‘ಎನ್‌ಡಿಟಿವಿ’ ವರದಿ ಮಾಡಿದೆ. ಟಿಪ್ಪು ಸುಲ್ತಾನ್ ವಂಶಸ್ಥರನ್ನು ಓಡಿಸಿ ಕಾಡಿಗೆ ಕಳುಹಿಸಬೇಕು ಎಂದು ಅವರು ಕರೆ ನೀಡಿದ್ದಾರೆ.

ಇಂದು ಕೊಪ್ಪಳ ಜಿಲ್ಲೆಯ ಯಲಬುರ್ಗಾ ಪಂಚಾಯತ್ ಪಟ್ಟಣದಲ್ಲಿ ಬಿಜೆಪಿ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಕಟೀಲು, “ನಾವು ಶ್ರೀರಾಮ, ಹನುಮಂತನ ಭಕ್ತರು. ನಾವು ಹನುಮಂತ ದೇವರಿಗೆ ಪ್ರಾರ್ಥನೆ ಮತ್ತು ನಮನ ಸಲ್ಲಿಸುತ್ತೇವೆ. ನಾವು ಟಿಪ್ಪು ವಂಶಸ್ಥರಲ್ಲ. ಟಿಪ್ಪು ವಂಶಸ್ಥರನ್ನು ಮನೆಗೆ ಕಳುಹಿಸೋಣ” ಎಂದಿದ್ದಾರೆ.

“ನೀವು ಹನುಮಂತನನ್ನು ಪ್ರಾರ್ಥಿಸುತ್ತೀರೋ, ಟಿಪ್ಪುವಿಗೆ ಪ್ರಾರ್ಥನೆ ಸಲ್ಲಿಸುತ್ತೀರೋ ಎಂದು ಕೇಳುತ್ತಿದ್ದೇನೆ. ಹಾಗಾದರೆ ನೀವು ಟಿಪ್ಪುವಿನ ಕಟ್ಟಾ ಅನುಯಾಯಿಗಳನ್ನು ಕಾಡಿಗೆ ಕಳುಹಿಸುತ್ತೀರಾ? ಯೋಚಿಸಿ. ಈ ರಾಜ್ಯಕ್ಕೆ ಭಗವಾನ್ ಹನುಮಾನ್ ಭಕ್ತರು ಬೇಕೋ ಅಥವಾ ಟಿಪ್ಪುವಿನ ವಂಶಸ್ಥರು ಬೇಕೋ? ಟಿಪ್ಪುವಿನ ಕಟ್ಟಾ ಅನುಯಾಯಿಗಳು ಈ ನೆಲದಲ್ಲಿ ಜೀವಂತವಾಗಿರಬಾರದು” ಎಂದು ಅವರು ಪ್ರಚೋದಿಸಿರುವುದಾಗಿ ವರದಿ ತಿಳಿಸಿದೆ.

ಬ್ರಿಟಿಷರೊಂದಿಗೆ ಹೋರಾಡಿದ ಟಿಪ್ಪು ಸುಲ್ತಾನ್‌ನನ್ನು ವಿರೋಧಿಸುತ್ತಾ ಬಂದಿರುವ ಬಿಜೆಪಿ ಮೊದಲಿನಿಂದಲೂ ಕೋಮು ಧ್ರುವೀಕರಣದ ರಾಜಕೀಯ ಮಾಡುತ್ತಿದೆ. ಟಿಪ್ಪು ಸುಲ್ತಾನ್ ವರ್ಸಸ್ ಹನುಮಾನ್ ಚರ್ಚೆಯನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕರ್ನಾಟಕದಲ್ಲಿ 2018 ರ ಚುನಾವಣೆಗೆ ಮುಂಚಿತವಾಗಿ ಪ್ರಚೋದಿಸಿದ್ದರು.

“ಹನುಮಂತನನ್ನು ಮತ್ತು ವಿಜಯನಗರವನ್ನು ಪೂಜಿಸುವ ಬದಲು ಕಾಂಗ್ರೆಸ್ ಟಿಪ್ಪು ಸುಲ್ತಾನ್‌ನನ್ನು ಪೂಜಿಸುತ್ತಿರುವುದು ದುರದೃಷ್ಟಕರ ಸಂಗತಿಯಾಗಿದೆ. ಕಾಂಗ್ರೆಸ್ ಅನ್ನು ಕರ್ನಾಟಕ ವಜಾಗೊಳಿಸಿದರೆ, ಟಿಪ್ಪು ಸುಲ್ತಾನ್ ಪೂಜೆಗೆ ಬೇರೆ ಯಾರೂ ಬರುವುದಿಲ್ಲ” ಎಂದಿದ್ದರು.

ಈ ತಿಂಗಳ ಆರಂಭದಲ್ಲಿ ಮಾತನಾಡಿದ್ದ ಕಟೀಲ್, ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯು “ಟಿಪ್ಪು ವರ್ಸಸ್ ಸಾವರ್ಕರ್” ಎಂದು ಹೇಳುವ ಮೂಲಕ ವಿವಾದವನ್ನು ಹುಟ್ಟುಹಾಕಿದ್ದರು. “ಅಗತ್ಯವಿಲ್ಲದ ಟಿಪ್ಪು ಜಯಂತಿಯನ್ನು ಆಚರಿಸಲು ಕಾಂಗ್ರೆಸ್‌ನವರು ಅವಕಾಶ ಮಾಡಿಕೊಟ್ಟರು. ಸಾವರ್ಕರ್ ಬಗ್ಗೆ ಅವಮಾನಕರವಾಗಿ ಮಾತನಾಡಿದರು” ಎಂದು ದೂರಿದ್ದರು.

ಏಪ್ರಿಲ್-ಮೇ ತಿಂಗಳಲ್ಲಿ ಕರ್ನಾಟಕದಲ್ಲಿ 224 ಸ್ಥಾನಗಳಿಗೆ ವಿಧಾನಸಭೆ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್‌- ಬಿಜೆಪಿ ನಡುವೆ ಭಾರೀ ಪೈಪೋಟಿ ಏರ್ಪಟ್ಟಿದೆ.

ಟಿಪ್ಪುವಿನ ಕುರಿತು ತಪ್ಪು ಕಲ್ಪನೆಗಳು

ಮೈಸೂರು ರಾಜ್ಯವನ್ನು ಆಳಿದ ’ಟಿಪ್ಪು ಸುಲ್ತಾನ್‌’ ಮತಾಂಧ, ಹಿಂದೂಗಳ ವಿರೋಧಿ, ನರಮೇಧ ನಡೆಸಿದವನು, ಕನ್ನಡ ವಿರೋಧಿ, ಅಸಂಖ್ಯಾತ ಹಿಂದೂಗಳನ್ನು ಇಸ್ಲಾಂಗೆ ಮತಾಂತರ ಮಾಡಿದವನು, ದೇವಾಲಯಗಳನ್ನು ಧ್ವಂಸ ಮಾಡಿದವನು- ಇತ್ಯಾದಿ ಸುಳ್ಳುಗಳನ್ನು ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ಪ್ರಚಾರ ಮಾಡಲಾಗುತ್ತಿದೆ. ಟಿಪ್ಪುವಿನ ಕುರಿತು ಹಬ್ಬಿಸಲಾದ ಇಂತಹ ಸುಳ್ಳುಗಳ ಕುರಿತು ಇತಿಹಾಸಕಾರರು, ವಿಚಾರವಂತರು ಸಾಕಷ್ಟು ಚರ್ಚೆ ಮಾಡಿದ್ದಾರೆ.

ಶೃಂಗೇರಿಯ ಮಠಾಧೀಶರಾಗಿದ್ದ ಸಚ್ಚಿದಾನಂದ ಭಾರತಿ ಸ್ವಾಮೀಜಿಯವರಿಗೆ ಟಿಪ್ಪು ಬರೆದಿರುವ ಹಲವು ಪತ್ರಗಳೇ ಆತನ ಪರಧರ್ಮ ಸಹಿಷ್ಣುತೆಗೆ ಸಾಕ್ಷಿಯಾಗಿವೆ. ಸ್ವಾಮೀಜಿಯವರಿಗೆ ಟಿಪ್ಪು ಬರೆದಿರುವ ಪತ್ರಗಳು ಕನ್ನಡದಲ್ಲಿರುವುದು- ಟಿಪ್ಪು ಕನ್ನಡ ವಿರೋಧಿ ಎನ್ನುವವರಿಗೆ ಉತ್ತರವಾಗಿವೆ. ಮರಾಠರ ಸೇನೆ ಶೃಂಗೇರಿ ಮಠದ ಮೇಲೆ ದಾಳಿ ಮಾಡಿದಾಗ, ಟಿಪ್ಪು ಸ್ವಾಮೀಜಿಯವರಿಗೆ ಪತ್ರ ಬರೆದು ಸಂತೈಸಿದ್ದಾರೆ. ಮಠಕ್ಕೆ, ಧಾರ್ಮಿಕ ಆಚರಣೆಗಳಿಗೆ ಬೇಕಾದ ಎಲ್ಲ ಸಹಕಾರವನ್ನು ಟಿಪ್ಪು ನೀಡಿರುವುದು ಇಲ್ಲಿನ ಪತ್ರಗಳಿಂದ ಸ್ಪಷ್ಟವಾಗುತ್ತದೆ. ಅಲ್ಲದೇ ಸ್ವಾಮೀಜಿಯವರ ಕುರಿತು ಟಿಪ್ಪುವಿಗೆ ಇದ್ದ ಪ್ರೀತಿ, ಗೌರವ ಮಹತ್ವದ್ದು.

ಸ್ವಾಮೀಜಿಯವರು ಪುಣೆಗೆ ಹೋಗಿ ಹಲವು ದಿನಗಳಾದರೂ ವಾಪಸ್ ಬರದಿದ್ದಾಗ ಟಿಪ್ಪು ಪತ್ರ ಬರೆದು, “ಶ್ರೀ ಸ್ವಾಮೀಜಿಯವರಿಗೆ ಟಿಪ್ಪು ಸುಲ್ತಾನ್ ಬಾದಶಹರವರ ಸಲಾಮು…. ತಮ್ಮಂಥಾ ದೊಡ್ಡವರು ಯಾವ ದೇಶದಲ್ಲಿ ಇದ್ದರೂ ಆ ದೇಶಕ್ಕೆ ಮಳೆ, ಬೆಳೆ ಸಕಲವೂ ಆಗಿ ಸುಭಿಕ್ಷೆಯೂ ಆಗಿ ಇರತಕ್ಕದ್ದರಿಂದ ಪರಸ್ಥಳದಲ್ಲಿ ಬಹಳ ದಿವಸ ತಾವು ಯಾತಕ್ಕೆ ಇರಬೇಕು? ಹೋದ ಕೆಲಸವನ್ನು ಕ್ಷಿಪ್ರದಲ್ಲಿ ಅನುಕೂಲ ಮಾಡಿಸಿಕೊಂಡು ಸ್ಥಳಕ್ಕೆ ಸಾಗಿಬರುವಂತೆ ಮಾಡಿಸುವುದು…” ಎಂದು ಭಿನ್ನವಿಸಿಕೊಳ್ಳುವುದು ಹೃದಯಸ್ಪರ್ಶಿಯಾಗಿದೆ. ಟಿಪ್ಪುವಿಗೆ ಇಸ್ಲಾಮೀ ಶಿಕ್ಷಣವನ್ನು ಮೌಲವಿ ಉಬೇದುಲ್ಲಾಹ್ ನೀಡಿದರೆ, ಹಿಂದೂ ಧಾರ್ಮಿಕ ಶಿಕ್ಷಣವನ್ನು ಗೋವರ್ಧನ ಪಂಡಿತರು ನೀಡಿದ್ದರು.

ಟಿಪ್ಪುವಿನ ನ್ಯಾಯದಾನ ವ್ಯವಸ್ಥೆಯೂ ಮಾನವೀಯವಾಗಿತ್ತು. ತಿರುವಾಂಕೂರಿನ ನಂಬೂದಿರಿ ಜಾತಿಯ ಅರಸರು ಕೇರಳದಲ್ಲಿ ’ಮುಲಕ್ಕರ’ (ಸ್ತನ ತೆರಿಗೆ) ಎಂಬ ಅಮಾನವೀಯ ತೆರಿಗೆಯನ್ನು ಅಲ್ಲಿನ ಕೆಳವರ್ಗದ ಮಹಿಳೆಯರಿಗೆ ವಿಧಿಸುತ್ತಿದ್ದರು. ಋತುಮತಿಯಾದ ಕೆಳವರ್ಗದ ಮಹಿಳೆಯರು ಮೇಲ್ವಸ್ತ್ರ ಧರಿಸದೇ
ತಮ್ಮ ಸ್ತನಗಳು ಕಾಣುವಂತೆ ಅವರು ನಡೆದಾಡಬೇಕಿತ್ತು. ಒಂದು ವೇಳೆ ಯಾರಾದರೂ ಸ್ತನ ಮುಚ್ಚುವ ಮೇಲ್ವಸ್ತ್ರ ಧರಿಸಿದರೆ ಅದಕ್ಕಾಗಿ ತೆರಿಗೆ ಕಟ್ಟಬೇಕಾಗಿತ್ತು. ಇಂತಹ ಅಮಾನವೀಯ ಪದ್ಧತಿಯ ವಿರುದ್ಧ ಮೊಟ್ಟಮೊದಲು ಕಾನೂನು ಜಾರಿಗೆ ತಂದು ಕೆಳವರ್ಗದ ಮಹಿಳೆಯರಿಗೆ ಗೌರವ ಕೊಟ್ಟ ಅರಸ ಟಿಪ್ಪು ಸುಲ್ತಾನ್. ಭೂಮಿ ಇಲ್ಲದವರು ಭೂಮಿ ಹೊಂದಲು ಅವಕಾಶ ನೀಡಿದರು. ರೈತರ ಮೇಲಿನ ತೆರಿಗೆ ಭಾರ ಕಡಿಮೆ ಮಾಡಿದರು. ಕೃಷಿ ಪರಿಕರಗಳನ್ನು ಖರೀದಿಸಲು ಮುಂಗಡ ಹಣ ನೀಡುವ ಪದ್ಧತಿ ಶುರುಮಾಡಿದರು. ಕೆ.ಆರ್.ಎಸ್. ಅಣೆಕಟ್ಟೆಗೆ ಅಡಿಗಲ್ಲು ಹಾಕಿದರು. ಕಾರ್ಮಿಕರ ಘನತೆಯನ್ನು ಎತ್ತಿ ಹಿಡಿದರು – ಇಂತಹ ಹಲವು ಸುಧಾರಣೆಗಳತ್ತ ಗಮನ ಹರಿಸಿದ ಟಿಪ್ಪು, ಮೂವರು ಶತ್ರುಗಳನ್ನು (ಬ್ರಿಟಿಷರು, ಮರಾಠರು, ನಿಜಾಮರು) ಸದಾ ಎದುರಿಸಬೇಕಾಯಿತು.

(ಟಿಪ್ಪುವಿನ ಆಡಳಿತ ಮತ್ತು ಹೋರಾಟದ ಕುರಿತು ‘ನಾನುಗೌರಿ.ಕಾಂ’ನಲ್ಲಿ ಸಾಕಷ್ಟು ಲೇಖನಗಳು ಪ್ರಕಟವಾಗಿವೆ. ಅವುಗಳನ್ನು ಓದಲು ‘ಇಲ್ಲಿ’ ‘ಕ್ಲಿಕ್’ ಮಾಡಿರಿ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...