Homeಕರ್ನಾಟಕಟಿಪ್ಪು ಅನುಯಾಯಿಗಳನ್ನು ಕೊಲ್ಲಿರಿ: ನಳಿನ್ ಕುಮಾರ್‌‌ ಪ್ರಚೋದನಾತ್ಮಕ ಹೇಳಿಕೆ

ಟಿಪ್ಪು ಅನುಯಾಯಿಗಳನ್ನು ಕೊಲ್ಲಿರಿ: ನಳಿನ್ ಕುಮಾರ್‌‌ ಪ್ರಚೋದನಾತ್ಮಕ ಹೇಳಿಕೆ

- Advertisement -
- Advertisement -

ವಿವಾದಾತ್ಮಕ ಹೇಳಿಕೆಗಳಿಗೆ ಹೆಸರಾಗಿರುವ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, “ಟಿಪ್ಪು ಸುಲ್ತಾನನ ಎಲ್ಲಾ ಅನುಯಾಯಿಗಳನ್ನು ಕೊಲ್ಲಬೇಕು” ಎಂದು ಹೇಳಿರುವುದಾಗಿ ‘ಎನ್‌ಡಿಟಿವಿ’ ವರದಿ ಮಾಡಿದೆ. ಟಿಪ್ಪು ಸುಲ್ತಾನ್ ವಂಶಸ್ಥರನ್ನು ಓಡಿಸಿ ಕಾಡಿಗೆ ಕಳುಹಿಸಬೇಕು ಎಂದು ಅವರು ಕರೆ ನೀಡಿದ್ದಾರೆ.

ಇಂದು ಕೊಪ್ಪಳ ಜಿಲ್ಲೆಯ ಯಲಬುರ್ಗಾ ಪಂಚಾಯತ್ ಪಟ್ಟಣದಲ್ಲಿ ಬಿಜೆಪಿ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಕಟೀಲು, “ನಾವು ಶ್ರೀರಾಮ, ಹನುಮಂತನ ಭಕ್ತರು. ನಾವು ಹನುಮಂತ ದೇವರಿಗೆ ಪ್ರಾರ್ಥನೆ ಮತ್ತು ನಮನ ಸಲ್ಲಿಸುತ್ತೇವೆ. ನಾವು ಟಿಪ್ಪು ವಂಶಸ್ಥರಲ್ಲ. ಟಿಪ್ಪು ವಂಶಸ್ಥರನ್ನು ಮನೆಗೆ ಕಳುಹಿಸೋಣ” ಎಂದಿದ್ದಾರೆ.

“ನೀವು ಹನುಮಂತನನ್ನು ಪ್ರಾರ್ಥಿಸುತ್ತೀರೋ, ಟಿಪ್ಪುವಿಗೆ ಪ್ರಾರ್ಥನೆ ಸಲ್ಲಿಸುತ್ತೀರೋ ಎಂದು ಕೇಳುತ್ತಿದ್ದೇನೆ. ಹಾಗಾದರೆ ನೀವು ಟಿಪ್ಪುವಿನ ಕಟ್ಟಾ ಅನುಯಾಯಿಗಳನ್ನು ಕಾಡಿಗೆ ಕಳುಹಿಸುತ್ತೀರಾ? ಯೋಚಿಸಿ. ಈ ರಾಜ್ಯಕ್ಕೆ ಭಗವಾನ್ ಹನುಮಾನ್ ಭಕ್ತರು ಬೇಕೋ ಅಥವಾ ಟಿಪ್ಪುವಿನ ವಂಶಸ್ಥರು ಬೇಕೋ? ಟಿಪ್ಪುವಿನ ಕಟ್ಟಾ ಅನುಯಾಯಿಗಳು ಈ ನೆಲದಲ್ಲಿ ಜೀವಂತವಾಗಿರಬಾರದು” ಎಂದು ಅವರು ಪ್ರಚೋದಿಸಿರುವುದಾಗಿ ವರದಿ ತಿಳಿಸಿದೆ.

ಬ್ರಿಟಿಷರೊಂದಿಗೆ ಹೋರಾಡಿದ ಟಿಪ್ಪು ಸುಲ್ತಾನ್‌ನನ್ನು ವಿರೋಧಿಸುತ್ತಾ ಬಂದಿರುವ ಬಿಜೆಪಿ ಮೊದಲಿನಿಂದಲೂ ಕೋಮು ಧ್ರುವೀಕರಣದ ರಾಜಕೀಯ ಮಾಡುತ್ತಿದೆ. ಟಿಪ್ಪು ಸುಲ್ತಾನ್ ವರ್ಸಸ್ ಹನುಮಾನ್ ಚರ್ಚೆಯನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕರ್ನಾಟಕದಲ್ಲಿ 2018 ರ ಚುನಾವಣೆಗೆ ಮುಂಚಿತವಾಗಿ ಪ್ರಚೋದಿಸಿದ್ದರು.

“ಹನುಮಂತನನ್ನು ಮತ್ತು ವಿಜಯನಗರವನ್ನು ಪೂಜಿಸುವ ಬದಲು ಕಾಂಗ್ರೆಸ್ ಟಿಪ್ಪು ಸುಲ್ತಾನ್‌ನನ್ನು ಪೂಜಿಸುತ್ತಿರುವುದು ದುರದೃಷ್ಟಕರ ಸಂಗತಿಯಾಗಿದೆ. ಕಾಂಗ್ರೆಸ್ ಅನ್ನು ಕರ್ನಾಟಕ ವಜಾಗೊಳಿಸಿದರೆ, ಟಿಪ್ಪು ಸುಲ್ತಾನ್ ಪೂಜೆಗೆ ಬೇರೆ ಯಾರೂ ಬರುವುದಿಲ್ಲ” ಎಂದಿದ್ದರು.

ಈ ತಿಂಗಳ ಆರಂಭದಲ್ಲಿ ಮಾತನಾಡಿದ್ದ ಕಟೀಲ್, ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯು “ಟಿಪ್ಪು ವರ್ಸಸ್ ಸಾವರ್ಕರ್” ಎಂದು ಹೇಳುವ ಮೂಲಕ ವಿವಾದವನ್ನು ಹುಟ್ಟುಹಾಕಿದ್ದರು. “ಅಗತ್ಯವಿಲ್ಲದ ಟಿಪ್ಪು ಜಯಂತಿಯನ್ನು ಆಚರಿಸಲು ಕಾಂಗ್ರೆಸ್‌ನವರು ಅವಕಾಶ ಮಾಡಿಕೊಟ್ಟರು. ಸಾವರ್ಕರ್ ಬಗ್ಗೆ ಅವಮಾನಕರವಾಗಿ ಮಾತನಾಡಿದರು” ಎಂದು ದೂರಿದ್ದರು.

ಏಪ್ರಿಲ್-ಮೇ ತಿಂಗಳಲ್ಲಿ ಕರ್ನಾಟಕದಲ್ಲಿ 224 ಸ್ಥಾನಗಳಿಗೆ ವಿಧಾನಸಭೆ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್‌- ಬಿಜೆಪಿ ನಡುವೆ ಭಾರೀ ಪೈಪೋಟಿ ಏರ್ಪಟ್ಟಿದೆ.

ಟಿಪ್ಪುವಿನ ಕುರಿತು ತಪ್ಪು ಕಲ್ಪನೆಗಳು

ಮೈಸೂರು ರಾಜ್ಯವನ್ನು ಆಳಿದ ’ಟಿಪ್ಪು ಸುಲ್ತಾನ್‌’ ಮತಾಂಧ, ಹಿಂದೂಗಳ ವಿರೋಧಿ, ನರಮೇಧ ನಡೆಸಿದವನು, ಕನ್ನಡ ವಿರೋಧಿ, ಅಸಂಖ್ಯಾತ ಹಿಂದೂಗಳನ್ನು ಇಸ್ಲಾಂಗೆ ಮತಾಂತರ ಮಾಡಿದವನು, ದೇವಾಲಯಗಳನ್ನು ಧ್ವಂಸ ಮಾಡಿದವನು- ಇತ್ಯಾದಿ ಸುಳ್ಳುಗಳನ್ನು ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ಪ್ರಚಾರ ಮಾಡಲಾಗುತ್ತಿದೆ. ಟಿಪ್ಪುವಿನ ಕುರಿತು ಹಬ್ಬಿಸಲಾದ ಇಂತಹ ಸುಳ್ಳುಗಳ ಕುರಿತು ಇತಿಹಾಸಕಾರರು, ವಿಚಾರವಂತರು ಸಾಕಷ್ಟು ಚರ್ಚೆ ಮಾಡಿದ್ದಾರೆ.

ಶೃಂಗೇರಿಯ ಮಠಾಧೀಶರಾಗಿದ್ದ ಸಚ್ಚಿದಾನಂದ ಭಾರತಿ ಸ್ವಾಮೀಜಿಯವರಿಗೆ ಟಿಪ್ಪು ಬರೆದಿರುವ ಹಲವು ಪತ್ರಗಳೇ ಆತನ ಪರಧರ್ಮ ಸಹಿಷ್ಣುತೆಗೆ ಸಾಕ್ಷಿಯಾಗಿವೆ. ಸ್ವಾಮೀಜಿಯವರಿಗೆ ಟಿಪ್ಪು ಬರೆದಿರುವ ಪತ್ರಗಳು ಕನ್ನಡದಲ್ಲಿರುವುದು- ಟಿಪ್ಪು ಕನ್ನಡ ವಿರೋಧಿ ಎನ್ನುವವರಿಗೆ ಉತ್ತರವಾಗಿವೆ. ಮರಾಠರ ಸೇನೆ ಶೃಂಗೇರಿ ಮಠದ ಮೇಲೆ ದಾಳಿ ಮಾಡಿದಾಗ, ಟಿಪ್ಪು ಸ್ವಾಮೀಜಿಯವರಿಗೆ ಪತ್ರ ಬರೆದು ಸಂತೈಸಿದ್ದಾರೆ. ಮಠಕ್ಕೆ, ಧಾರ್ಮಿಕ ಆಚರಣೆಗಳಿಗೆ ಬೇಕಾದ ಎಲ್ಲ ಸಹಕಾರವನ್ನು ಟಿಪ್ಪು ನೀಡಿರುವುದು ಇಲ್ಲಿನ ಪತ್ರಗಳಿಂದ ಸ್ಪಷ್ಟವಾಗುತ್ತದೆ. ಅಲ್ಲದೇ ಸ್ವಾಮೀಜಿಯವರ ಕುರಿತು ಟಿಪ್ಪುವಿಗೆ ಇದ್ದ ಪ್ರೀತಿ, ಗೌರವ ಮಹತ್ವದ್ದು.

ಸ್ವಾಮೀಜಿಯವರು ಪುಣೆಗೆ ಹೋಗಿ ಹಲವು ದಿನಗಳಾದರೂ ವಾಪಸ್ ಬರದಿದ್ದಾಗ ಟಿಪ್ಪು ಪತ್ರ ಬರೆದು, “ಶ್ರೀ ಸ್ವಾಮೀಜಿಯವರಿಗೆ ಟಿಪ್ಪು ಸುಲ್ತಾನ್ ಬಾದಶಹರವರ ಸಲಾಮು…. ತಮ್ಮಂಥಾ ದೊಡ್ಡವರು ಯಾವ ದೇಶದಲ್ಲಿ ಇದ್ದರೂ ಆ ದೇಶಕ್ಕೆ ಮಳೆ, ಬೆಳೆ ಸಕಲವೂ ಆಗಿ ಸುಭಿಕ್ಷೆಯೂ ಆಗಿ ಇರತಕ್ಕದ್ದರಿಂದ ಪರಸ್ಥಳದಲ್ಲಿ ಬಹಳ ದಿವಸ ತಾವು ಯಾತಕ್ಕೆ ಇರಬೇಕು? ಹೋದ ಕೆಲಸವನ್ನು ಕ್ಷಿಪ್ರದಲ್ಲಿ ಅನುಕೂಲ ಮಾಡಿಸಿಕೊಂಡು ಸ್ಥಳಕ್ಕೆ ಸಾಗಿಬರುವಂತೆ ಮಾಡಿಸುವುದು…” ಎಂದು ಭಿನ್ನವಿಸಿಕೊಳ್ಳುವುದು ಹೃದಯಸ್ಪರ್ಶಿಯಾಗಿದೆ. ಟಿಪ್ಪುವಿಗೆ ಇಸ್ಲಾಮೀ ಶಿಕ್ಷಣವನ್ನು ಮೌಲವಿ ಉಬೇದುಲ್ಲಾಹ್ ನೀಡಿದರೆ, ಹಿಂದೂ ಧಾರ್ಮಿಕ ಶಿಕ್ಷಣವನ್ನು ಗೋವರ್ಧನ ಪಂಡಿತರು ನೀಡಿದ್ದರು.

ಟಿಪ್ಪುವಿನ ನ್ಯಾಯದಾನ ವ್ಯವಸ್ಥೆಯೂ ಮಾನವೀಯವಾಗಿತ್ತು. ತಿರುವಾಂಕೂರಿನ ನಂಬೂದಿರಿ ಜಾತಿಯ ಅರಸರು ಕೇರಳದಲ್ಲಿ ’ಮುಲಕ್ಕರ’ (ಸ್ತನ ತೆರಿಗೆ) ಎಂಬ ಅಮಾನವೀಯ ತೆರಿಗೆಯನ್ನು ಅಲ್ಲಿನ ಕೆಳವರ್ಗದ ಮಹಿಳೆಯರಿಗೆ ವಿಧಿಸುತ್ತಿದ್ದರು. ಋತುಮತಿಯಾದ ಕೆಳವರ್ಗದ ಮಹಿಳೆಯರು ಮೇಲ್ವಸ್ತ್ರ ಧರಿಸದೇ
ತಮ್ಮ ಸ್ತನಗಳು ಕಾಣುವಂತೆ ಅವರು ನಡೆದಾಡಬೇಕಿತ್ತು. ಒಂದು ವೇಳೆ ಯಾರಾದರೂ ಸ್ತನ ಮುಚ್ಚುವ ಮೇಲ್ವಸ್ತ್ರ ಧರಿಸಿದರೆ ಅದಕ್ಕಾಗಿ ತೆರಿಗೆ ಕಟ್ಟಬೇಕಾಗಿತ್ತು. ಇಂತಹ ಅಮಾನವೀಯ ಪದ್ಧತಿಯ ವಿರುದ್ಧ ಮೊಟ್ಟಮೊದಲು ಕಾನೂನು ಜಾರಿಗೆ ತಂದು ಕೆಳವರ್ಗದ ಮಹಿಳೆಯರಿಗೆ ಗೌರವ ಕೊಟ್ಟ ಅರಸ ಟಿಪ್ಪು ಸುಲ್ತಾನ್. ಭೂಮಿ ಇಲ್ಲದವರು ಭೂಮಿ ಹೊಂದಲು ಅವಕಾಶ ನೀಡಿದರು. ರೈತರ ಮೇಲಿನ ತೆರಿಗೆ ಭಾರ ಕಡಿಮೆ ಮಾಡಿದರು. ಕೃಷಿ ಪರಿಕರಗಳನ್ನು ಖರೀದಿಸಲು ಮುಂಗಡ ಹಣ ನೀಡುವ ಪದ್ಧತಿ ಶುರುಮಾಡಿದರು. ಕೆ.ಆರ್.ಎಸ್. ಅಣೆಕಟ್ಟೆಗೆ ಅಡಿಗಲ್ಲು ಹಾಕಿದರು. ಕಾರ್ಮಿಕರ ಘನತೆಯನ್ನು ಎತ್ತಿ ಹಿಡಿದರು – ಇಂತಹ ಹಲವು ಸುಧಾರಣೆಗಳತ್ತ ಗಮನ ಹರಿಸಿದ ಟಿಪ್ಪು, ಮೂವರು ಶತ್ರುಗಳನ್ನು (ಬ್ರಿಟಿಷರು, ಮರಾಠರು, ನಿಜಾಮರು) ಸದಾ ಎದುರಿಸಬೇಕಾಯಿತು.

(ಟಿಪ್ಪುವಿನ ಆಡಳಿತ ಮತ್ತು ಹೋರಾಟದ ಕುರಿತು ‘ನಾನುಗೌರಿ.ಕಾಂ’ನಲ್ಲಿ ಸಾಕಷ್ಟು ಲೇಖನಗಳು ಪ್ರಕಟವಾಗಿವೆ. ಅವುಗಳನ್ನು ಓದಲು ‘ಇಲ್ಲಿ’ ‘ಕ್ಲಿಕ್’ ಮಾಡಿರಿ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...