Homeಮುಖಪುಟಯುಪಿ ಪೊಲೀಸರಿಂದ 'ಯಾದವ ವ್ಯಕ್ತಿ'ಯ ಎನ್‌ಕೌಂಟರ್ : "ಜಾತಿಯ ಕಾರಣಕ್ಕೆ ಕೊಲ್ಲಲಾಗಿದೆ" ಎಂದ ಅಖಿಲೇಶ್ ಯಾದವ್

ಯುಪಿ ಪೊಲೀಸರಿಂದ ‘ಯಾದವ ವ್ಯಕ್ತಿ’ಯ ಎನ್‌ಕೌಂಟರ್ : “ಜಾತಿಯ ಕಾರಣಕ್ಕೆ ಕೊಲ್ಲಲಾಗಿದೆ” ಎಂದ ಅಖಿಲೇಶ್ ಯಾದವ್

- Advertisement -
- Advertisement -

ಉತ್ತರ ಪ್ರದೇಶದ ಸುಲ್ತಾನ್‌ಪುರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಪೊಲೀಸರ ಗುಂಡಿಗೆ ಬಲಿಯಾದ ಯಾದವ ಸಮುದಾಯದ ಯುವಕನ ಕುಟುಂಬವು, ಪೊಲೀಸರು ಆತನನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದೆ

ಡಕಾಯಿತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಮನೆಯಿಂದ ಕರೆದೊಯ್ದು ಅಕ್ರಮ ಬಂಧನದಲ್ಲಿಟ್ಟ ಎರಡು ದಿನಗಳ ನಂತರ, ಪೊಲೀಸರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಕುಟುಂಬ ದೂರಿದೆ.

ಸೆಪ್ಟೆಂಬರ್ 5ರಂದು ಉತ್ತರ ಪ್ರದೇಶ ಪೊಲೀಸರ ವಿಶೇಷ ಕಾರ್ಯಪಡೆ (ಎಸ್‌ಟಿಎಫ್‌) ನಡೆಸಿದ ಮಂಗೇಶ್ ಯಾದವ್ ಎನ್‌ಕೌಂಟರ್‌ ರಾಜ್ಯ ರಾಜಕೀಯದಲ್ಲಿ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿದೆ. ವಿರೋಧ ಪಕ್ಷಗಳು ಇದನ್ನು ‘ನಕಲಿ ಎನ್‌ಕೌಂಟರ್’ ಎಂದು ಟೀಕಿಸಿವೆ.

ಡಕಾಯಿತಿ ಪ್ರಕರಣದಲ್ಲಿ ಬಂಧಿತರಾಗಿರುವ ಪ್ರಬಲ ಜಾತಿಗಳು ಮತ್ತು ಇತರ ಸಮುದಾಯಗಳ ಆರೋಪಿಗಳ ವಿರುದ್ದ ಯಾವುದೇ ಕ್ರಮ ಕೈಗೊಂಡಿಲ್ಲ. ಆದರೆ, ಮಂಗೇಶ್ ಅನ್ನು ಮಾತ್ರ ಆತನ ಜಾತಿಯ ಕಾರಣಕ್ಕೆ ಪೊಲೀಸರು ಎನ್‌ಕೌಂಟರ್ ಮಾಡಿದ್ದಾರೆ ಎಂದು ಸಮಾಜವಾದಿ ಪಕ್ಷ (ಎಸ್‌ಪಿ)ದ ಅಧ್ಯಕ್ಷ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ.

ಯಾದವರು ಉತ್ತರ ಪ್ರದೇಶದ ಅತಿ ದೊಡ್ಡ ಇತರೆ ಹಿಂದುಳಿದ ವರ್ಗಗಳ ಸಮುದಾಯವಾಗಿದೆ ಮತ್ತು ಸಮಾಜವಾದಿ ಪಕ್ಷದ ರಾಜಕೀಯದ ತಳಹದಿ ಎಂದು ಪರಿಗಣಿಸಲಾಗಿದೆ.

“ಪೊಲೀಸರು ನನ್ನ ಮಗನನ್ನು ಕರೆದುಕೊಂಡು ಹೋಗಿ ಗುಂಡು ಹಾರಿಸಿ ಕೊಲೆ ಮಾಡಿದ್ದಾರೆ. ಕಸ್ಟಡಿಯಲ್ಲೇ ಅವರು ಹತ್ಯೆ ಮಾಡಿದ್ದಾರೆ” ಎಂದು ಮಂಗೇಶ್ ಅವರ ತಾಯಿ ಶೀಲಾ ದೇವಿ ಸ್ಥಳೀಯ ಜೌನ್‌ಪುರದ ಬಕ್ಷಾ ಪೊಲೀಸ್ ಠಾಣೆಯ ಠಾಣಾಧಿಕಾರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ.

ಮಂಗೇಶ್ ಅನ್ನು ಬಂಧಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಿದ ಪೊಲೀಸರು ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ. ನಂತರ ಆತನನ್ನು’ಎನ್‌ಕೌಂಟರ್‌’ನಲ್ಲಿ ಕೊಲ್ಲಲಾಯಿತು ಎಂದು ಪೊಲೀಸರು ಸಮರ್ಥಿಸಿಕೊಂಡಿದ್ದಾರೆ.

ಸಮಾಜವಾದಿ ಪಕ್ಷವನ್ನು ಬೆಂಬಲಿಸುತ್ತಿರುವ ಯಾದವ ಸಮುದಾಯವನ್ನು ಉತ್ತರ ಪ್ರದೇಶ ಪೊಲೀಸರು ಗುರಿಯಾಗಿಸಿಕೊಂಡಿದ್ದಾರೆ ಎಂದು ಅಖಿಲೇಶ್ ಯಾದವ್ ಆರೋಪಿಸಿದ್ದಾರೆ. ಮಂಗೇಶ್ ಅವರ ‘ಎನ್ಕೌಂಟರ್’ ನಲ್ಲಿ ಭಾಗವಹಿಸಿದ್ದ ಅಧಿಕಾರಿಗಳು ಸೇರಿದಂತೆ ಎಲ್ಲಾ 11 ಪೊಲೀಸ್ ಸಿಬ್ಬಂದಿ ಪ್ರಬಲ ಜಾತಿ ಗುಂಪುಗಳಿಗೆ, ವಿಶೇಷವಾಗಿ ಠಾಕೂರ್ ಮತ್ತು ಬ್ರಾಹ್ಮಣ ಜಾತಿಗೆ ಸೇರಿದವರು ಎಂದು ಸಮಾಜವಾದಿ ಪಕ್ಷದ ಬೆಂಬಲಿಗರು ಮತ್ತು ಸದಸ್ಯರು ಸಾಮಾಜಿಕ ಮಾಧ್ಯಮಗಳಲ್ಲಿ ಗಮನಸೆಳೆದಿದ್ದಾರೆ.

ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಕಾರ್ಯಾಚರಣೆಯ ನೇತೃತ್ವವನ್ನು ಪೊಲೀಸ್ ಉಪ ಅಧೀಕ್ಷಕ ಧರ್ಮೇಶ್ ಕುಮಾರ್ ಶಾಹಿ ವಹಿಸಿದ್ದರು. ಅವರ ಪತ್ನಿ ರಿತು ಶಾಹಿ ಗೋರಖ್‌ಪುರದ ಬಿಜೆಪಿ ಪದಾಧಿಕಾರಿಯಾಗಿದ್ದು, ಸೆಪ್ಟೆಂಬರ್ 3 ಮಂಗಳವಾರ ಉತ್ತರ ಪ್ರದೇಶ ರಾಜ್ಯ ಮಹಿಳಾ ಆಯೋಗದ ಸದಸ್ಯರಾಗಿ ನಾಮನಿರ್ದೇಶನಗೊಂಡಿದ್ದಾರೆ.

‘ಎನ್‌ಕೌಂಟರ್’ ನಲ್ಲಿ ಭಾಗವಹಿಸಿದ್ದ ಡಿಎಸ್‌ಪಿ ಶಾಹಿ ಅವರು ಮಂಗೇಶ್ ಅವರ ಮೃತ ಶರೀರದ ಪಕ್ಕ ಸ್ಲೈಡ್-ಇನ್ ಚಪ್ಪಲಿ ಧರಿಸಿದ್ದರು. ಅದು ಅವರು ಮುಂದೆ ಬ್ಲಡ್‌ ಪೂಲ್‌ಗೆ ಇಳಿಯಲು ಸಿದ್ದರಾಗಿದ್ದ ರೀತಿ ತೋರಿಸುತ್ತಿತ್ತು ಎಂದು ಎಸ್‌ಪಿ ಲೋಹಿಯಾ ವಾಹಿನಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಯಾದವ್ ಎಕ್ಸ್‌ನಲ್ಲಿ ವ್ಯಂಗ್ಯವಾಗಿ ಹೇಳಿದ್ದಾರೆ.

ಮಂಗೇಶ್ ಅವರ ಹತ್ಯೆಯ ನಂತರ ಎಸ್‌ಟಿಎಫ್ ತಂಡದ ಗುಂಪು ಛಾಯಾಚಿತ್ರವನ್ನು ಯುಪಿ ಪೊಲೀಸರು ಅಧಿಕೃತವಾಗಿ ಬಿಡುಗಡೆ ಮಾಡಿದ್ದಾರೆ. ಅಖಿಲೇಶ್ ಯಾದವ್ ಅವರು ಮಂಗೇಶ್ ಅವರ ‘ಎನ್ಕೌಂಟರ್ ಅನ್ನು ನಕಲಿ ಎಂದು ಕರೆದಿದ್ದು, ರಾಜ್ಯ ಪೊಲೀಸರ ಸಂಪೂರ್ಣ ಕಾರ್ಯಾಚರಣೆಯ ಕುರಿತು ಪ್ರಶ್ನೆಗಳನ್ನು ಎತ್ತಿದ್ದಾರೆ.

“ಆಡಳಿತ ಪಕ್ಷವು ಸುಲ್ತಾನ್‌ಪುರ ಡಕಾಯಿತಿಯಲ್ಲಿ ಭಾಗಿಯಾಗಿರುವವರೊಂದಿಗೆ ಆಳವಾದ ಸಂಬಂಧ ಹೊಂದಿರುವಂತೆ ತೋರುತ್ತಿದೆ. ಅದಕ್ಕಾಗಿಯೇ, ನಕಲಿ ಎನ್‌ಕೌಂಟರ್‌ಗೆ ಮೊದಲು, ಅವರು ‘ಮುಖ್ಯ ಆರೋಪಿ’ಯನ್ನು ಸಂಪರ್ಕಿಸಿದ್ದಾರೆ. ಅಲ್ಲದೆ, ಇತರರ ಕಾಲಿಗೆ ಗುಂಡು ಹಾರಿಸುವಾಗ ಶರಣಾಗುಂತೆ ಹೇಳಿದ್ದಾರೆ. ಆದರೆ, ಒಬ್ಬರನ್ನು(ಮಂಗೇಶ್ ಯಾದವ್) ಮಾತ್ರ ಅವರ ಜಾತಿಯ ಕಾರಣಕ್ಕೆ ಕೊಲೆ ಮಾಡಿದ್ದಾರೆ” ಎಂದು ಅಖಿಲೇಶ್ ಯಾದವ್ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ದ ವಾಗ್ದಾಳಿ ನಡೆಸಿರುವ ಅಖಿಲೇಶ್ ಯಾವದ್ ” ನಕಲಿ ಎನ್‌ಕೌಂಟರ್‌ಗಳು ರಕ್ಷಕನನ್ನು ಪರಭಕ್ಷಕನನ್ನಾಗಿ ಮಾಡುತ್ತದೆ. ನಿಜವಾದ ಪರಿಹಾರ ನಕಲಿ ಎನ್‌ಕೌಂಟರ್‌ಗಳಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವುದಾಗಿದೆ ಎಂದು ಹೇಳಿದ್ದಾರೆ.

ಮಂಗೇಶ್ ಹತ್ಯೆಯ ನಂತರ ಡಿಎಸ್ಪಿ ಶಾಹಿ ದಾಖಲಿಸಿರುವ ಎಫ್ಐಆರ್ ಪ್ರಕಾರ, ಸೆಪ್ಟೆಂಬರ್ 5 ರಂದು ಮುಂಜಾನೆ 3:15ಕ್ಕೆ ‘ಎನ್‌ಕೌಂಟರ್ ನಡೆದಿದೆ. ಎಸ್‌ಟಿಎಫ್‌ ತಂಡದಲ್ಲಿ ಡಿಎಸ್ಪಿಗಳಾದ ಶಾಹಿ ಮತ್ತು ವಿಮಲ್ ಕುಮಾರ್ ಸಿಂಗ್, ಇನ್‌ಸ್ಪೆಕ್ಟರ್‌ಗಳಾದ ರಾಘವೇಂದ್ರ ಸಿಂಗ್ ಮತ್ತು ಮಹಾವೀರ್ ಸಿಂಗ್, ಸಬ್ ಇನ್‌ಸ್ಪೆಕ್ಟರ್‌ಗಳಾದ ಅತುಲ್ ಚತುರ್ವೇದಿ ಮತ್ತು ಪ್ರದೀಪ್ ಸಿಂಗ್, ಹೆಡ್ ಕಾನ್‌ಸ್ಟೆಬಲ್‌ಗಳಾದ ನೀರಜ್ ಪಾಂಡೆ, ಸುಶೀಲ್ ಸಿಂಗ್ ಮತ್ತು ರಾಮ್ ನಿವಾಸ್ ಶುಕ್ಲಾ ಕಾನ್‌ಸ್ಟೆಬಲ್‌ಗಳಾದ ಅಮಿತ್ ತ್ರಿಪಾಠಿ ಮತ್ತು ಅಮರ್ ಶ್ರೀವಾಸ್ತವ ಇದ್ದರು.

ಸೆಪ್ಟೆಂಬರ್ 5 ಗುರುವಾರ ಮುಂಜಾನೆ ಹಲವು ಅಪರಾಧ ಆರೋಪಗಳನ್ನು ಹೊತ್ತಿದ್ದ ಮಂಗೇಶ್ ಯಾದವ್ ಅವರನ್ನು ಪೊಲೀಸರು ಎನ್‌ಕೌಂಟರ್ ಮಾಡಿದ್ದಾರೆ. ಪೊಲೀಸರ ಪ್ರಕಾರ, ಆಗಸ್ಟ್ ಅಂತ್ಯದಲ್ಲಿ ಸುಲ್ತಾನ್‌ಪುರದ ಆಭರಣ ಮಳಿಗೆಯಲ್ಲಿ 1.5 ಕೋಟಿ ರೂಪಾಯಿಯ ದರೋಡೆ ನಡೆದಿತ್ತು. ಅದರಲ್ಲಿ ಮಂಗೇಶ್ ಭಾಗಿಯಾಗಿದ್ದ ಎನ್ನಲಾಗಿದೆ. ಆತನ ತಲೆಯ ಪೊಲೀಸರು 1 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದರು ಎಂದು ವರದಿಯಾಗಿದೆ.

ಇದನ್ನೂ ಓದಿ : ಜಾರ್ಖಂಡ್ | ಪೊಲೀಸ್ ನೇಮಕಾತಿ ಪರೀಕ್ಷೆ ವೇಳೆ 12 ಅಭ್ಯರ್ಥಿಗಳು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...