Homeಮುಖಪುಟಯುಪಿ ಪೊಲೀಸರಿಂದ 'ಯಾದವ ವ್ಯಕ್ತಿ'ಯ ಎನ್‌ಕೌಂಟರ್ : "ಜಾತಿಯ ಕಾರಣಕ್ಕೆ ಕೊಲ್ಲಲಾಗಿದೆ" ಎಂದ ಅಖಿಲೇಶ್ ಯಾದವ್

ಯುಪಿ ಪೊಲೀಸರಿಂದ ‘ಯಾದವ ವ್ಯಕ್ತಿ’ಯ ಎನ್‌ಕೌಂಟರ್ : “ಜಾತಿಯ ಕಾರಣಕ್ಕೆ ಕೊಲ್ಲಲಾಗಿದೆ” ಎಂದ ಅಖಿಲೇಶ್ ಯಾದವ್

- Advertisement -
- Advertisement -

ಉತ್ತರ ಪ್ರದೇಶದ ಸುಲ್ತಾನ್‌ಪುರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಪೊಲೀಸರ ಗುಂಡಿಗೆ ಬಲಿಯಾದ ಯಾದವ ಸಮುದಾಯದ ಯುವಕನ ಕುಟುಂಬವು, ಪೊಲೀಸರು ಆತನನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದೆ

ಡಕಾಯಿತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಮನೆಯಿಂದ ಕರೆದೊಯ್ದು ಅಕ್ರಮ ಬಂಧನದಲ್ಲಿಟ್ಟ ಎರಡು ದಿನಗಳ ನಂತರ, ಪೊಲೀಸರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಕುಟುಂಬ ದೂರಿದೆ.

ಸೆಪ್ಟೆಂಬರ್ 5ರಂದು ಉತ್ತರ ಪ್ರದೇಶ ಪೊಲೀಸರ ವಿಶೇಷ ಕಾರ್ಯಪಡೆ (ಎಸ್‌ಟಿಎಫ್‌) ನಡೆಸಿದ ಮಂಗೇಶ್ ಯಾದವ್ ಎನ್‌ಕೌಂಟರ್‌ ರಾಜ್ಯ ರಾಜಕೀಯದಲ್ಲಿ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿದೆ. ವಿರೋಧ ಪಕ್ಷಗಳು ಇದನ್ನು ‘ನಕಲಿ ಎನ್‌ಕೌಂಟರ್’ ಎಂದು ಟೀಕಿಸಿವೆ.

ಡಕಾಯಿತಿ ಪ್ರಕರಣದಲ್ಲಿ ಬಂಧಿತರಾಗಿರುವ ಪ್ರಬಲ ಜಾತಿಗಳು ಮತ್ತು ಇತರ ಸಮುದಾಯಗಳ ಆರೋಪಿಗಳ ವಿರುದ್ದ ಯಾವುದೇ ಕ್ರಮ ಕೈಗೊಂಡಿಲ್ಲ. ಆದರೆ, ಮಂಗೇಶ್ ಅನ್ನು ಮಾತ್ರ ಆತನ ಜಾತಿಯ ಕಾರಣಕ್ಕೆ ಪೊಲೀಸರು ಎನ್‌ಕೌಂಟರ್ ಮಾಡಿದ್ದಾರೆ ಎಂದು ಸಮಾಜವಾದಿ ಪಕ್ಷ (ಎಸ್‌ಪಿ)ದ ಅಧ್ಯಕ್ಷ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ.

ಯಾದವರು ಉತ್ತರ ಪ್ರದೇಶದ ಅತಿ ದೊಡ್ಡ ಇತರೆ ಹಿಂದುಳಿದ ವರ್ಗಗಳ ಸಮುದಾಯವಾಗಿದೆ ಮತ್ತು ಸಮಾಜವಾದಿ ಪಕ್ಷದ ರಾಜಕೀಯದ ತಳಹದಿ ಎಂದು ಪರಿಗಣಿಸಲಾಗಿದೆ.

“ಪೊಲೀಸರು ನನ್ನ ಮಗನನ್ನು ಕರೆದುಕೊಂಡು ಹೋಗಿ ಗುಂಡು ಹಾರಿಸಿ ಕೊಲೆ ಮಾಡಿದ್ದಾರೆ. ಕಸ್ಟಡಿಯಲ್ಲೇ ಅವರು ಹತ್ಯೆ ಮಾಡಿದ್ದಾರೆ” ಎಂದು ಮಂಗೇಶ್ ಅವರ ತಾಯಿ ಶೀಲಾ ದೇವಿ ಸ್ಥಳೀಯ ಜೌನ್‌ಪುರದ ಬಕ್ಷಾ ಪೊಲೀಸ್ ಠಾಣೆಯ ಠಾಣಾಧಿಕಾರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ.

ಮಂಗೇಶ್ ಅನ್ನು ಬಂಧಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಿದ ಪೊಲೀಸರು ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ. ನಂತರ ಆತನನ್ನು’ಎನ್‌ಕೌಂಟರ್‌’ನಲ್ಲಿ ಕೊಲ್ಲಲಾಯಿತು ಎಂದು ಪೊಲೀಸರು ಸಮರ್ಥಿಸಿಕೊಂಡಿದ್ದಾರೆ.

ಸಮಾಜವಾದಿ ಪಕ್ಷವನ್ನು ಬೆಂಬಲಿಸುತ್ತಿರುವ ಯಾದವ ಸಮುದಾಯವನ್ನು ಉತ್ತರ ಪ್ರದೇಶ ಪೊಲೀಸರು ಗುರಿಯಾಗಿಸಿಕೊಂಡಿದ್ದಾರೆ ಎಂದು ಅಖಿಲೇಶ್ ಯಾದವ್ ಆರೋಪಿಸಿದ್ದಾರೆ. ಮಂಗೇಶ್ ಅವರ ‘ಎನ್ಕೌಂಟರ್’ ನಲ್ಲಿ ಭಾಗವಹಿಸಿದ್ದ ಅಧಿಕಾರಿಗಳು ಸೇರಿದಂತೆ ಎಲ್ಲಾ 11 ಪೊಲೀಸ್ ಸಿಬ್ಬಂದಿ ಪ್ರಬಲ ಜಾತಿ ಗುಂಪುಗಳಿಗೆ, ವಿಶೇಷವಾಗಿ ಠಾಕೂರ್ ಮತ್ತು ಬ್ರಾಹ್ಮಣ ಜಾತಿಗೆ ಸೇರಿದವರು ಎಂದು ಸಮಾಜವಾದಿ ಪಕ್ಷದ ಬೆಂಬಲಿಗರು ಮತ್ತು ಸದಸ್ಯರು ಸಾಮಾಜಿಕ ಮಾಧ್ಯಮಗಳಲ್ಲಿ ಗಮನಸೆಳೆದಿದ್ದಾರೆ.

ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಕಾರ್ಯಾಚರಣೆಯ ನೇತೃತ್ವವನ್ನು ಪೊಲೀಸ್ ಉಪ ಅಧೀಕ್ಷಕ ಧರ್ಮೇಶ್ ಕುಮಾರ್ ಶಾಹಿ ವಹಿಸಿದ್ದರು. ಅವರ ಪತ್ನಿ ರಿತು ಶಾಹಿ ಗೋರಖ್‌ಪುರದ ಬಿಜೆಪಿ ಪದಾಧಿಕಾರಿಯಾಗಿದ್ದು, ಸೆಪ್ಟೆಂಬರ್ 3 ಮಂಗಳವಾರ ಉತ್ತರ ಪ್ರದೇಶ ರಾಜ್ಯ ಮಹಿಳಾ ಆಯೋಗದ ಸದಸ್ಯರಾಗಿ ನಾಮನಿರ್ದೇಶನಗೊಂಡಿದ್ದಾರೆ.

‘ಎನ್‌ಕೌಂಟರ್’ ನಲ್ಲಿ ಭಾಗವಹಿಸಿದ್ದ ಡಿಎಸ್‌ಪಿ ಶಾಹಿ ಅವರು ಮಂಗೇಶ್ ಅವರ ಮೃತ ಶರೀರದ ಪಕ್ಕ ಸ್ಲೈಡ್-ಇನ್ ಚಪ್ಪಲಿ ಧರಿಸಿದ್ದರು. ಅದು ಅವರು ಮುಂದೆ ಬ್ಲಡ್‌ ಪೂಲ್‌ಗೆ ಇಳಿಯಲು ಸಿದ್ದರಾಗಿದ್ದ ರೀತಿ ತೋರಿಸುತ್ತಿತ್ತು ಎಂದು ಎಸ್‌ಪಿ ಲೋಹಿಯಾ ವಾಹಿನಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಯಾದವ್ ಎಕ್ಸ್‌ನಲ್ಲಿ ವ್ಯಂಗ್ಯವಾಗಿ ಹೇಳಿದ್ದಾರೆ.

ಮಂಗೇಶ್ ಅವರ ಹತ್ಯೆಯ ನಂತರ ಎಸ್‌ಟಿಎಫ್ ತಂಡದ ಗುಂಪು ಛಾಯಾಚಿತ್ರವನ್ನು ಯುಪಿ ಪೊಲೀಸರು ಅಧಿಕೃತವಾಗಿ ಬಿಡುಗಡೆ ಮಾಡಿದ್ದಾರೆ. ಅಖಿಲೇಶ್ ಯಾದವ್ ಅವರು ಮಂಗೇಶ್ ಅವರ ‘ಎನ್ಕೌಂಟರ್ ಅನ್ನು ನಕಲಿ ಎಂದು ಕರೆದಿದ್ದು, ರಾಜ್ಯ ಪೊಲೀಸರ ಸಂಪೂರ್ಣ ಕಾರ್ಯಾಚರಣೆಯ ಕುರಿತು ಪ್ರಶ್ನೆಗಳನ್ನು ಎತ್ತಿದ್ದಾರೆ.

“ಆಡಳಿತ ಪಕ್ಷವು ಸುಲ್ತಾನ್‌ಪುರ ಡಕಾಯಿತಿಯಲ್ಲಿ ಭಾಗಿಯಾಗಿರುವವರೊಂದಿಗೆ ಆಳವಾದ ಸಂಬಂಧ ಹೊಂದಿರುವಂತೆ ತೋರುತ್ತಿದೆ. ಅದಕ್ಕಾಗಿಯೇ, ನಕಲಿ ಎನ್‌ಕೌಂಟರ್‌ಗೆ ಮೊದಲು, ಅವರು ‘ಮುಖ್ಯ ಆರೋಪಿ’ಯನ್ನು ಸಂಪರ್ಕಿಸಿದ್ದಾರೆ. ಅಲ್ಲದೆ, ಇತರರ ಕಾಲಿಗೆ ಗುಂಡು ಹಾರಿಸುವಾಗ ಶರಣಾಗುಂತೆ ಹೇಳಿದ್ದಾರೆ. ಆದರೆ, ಒಬ್ಬರನ್ನು(ಮಂಗೇಶ್ ಯಾದವ್) ಮಾತ್ರ ಅವರ ಜಾತಿಯ ಕಾರಣಕ್ಕೆ ಕೊಲೆ ಮಾಡಿದ್ದಾರೆ” ಎಂದು ಅಖಿಲೇಶ್ ಯಾದವ್ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ದ ವಾಗ್ದಾಳಿ ನಡೆಸಿರುವ ಅಖಿಲೇಶ್ ಯಾವದ್ ” ನಕಲಿ ಎನ್‌ಕೌಂಟರ್‌ಗಳು ರಕ್ಷಕನನ್ನು ಪರಭಕ್ಷಕನನ್ನಾಗಿ ಮಾಡುತ್ತದೆ. ನಿಜವಾದ ಪರಿಹಾರ ನಕಲಿ ಎನ್‌ಕೌಂಟರ್‌ಗಳಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವುದಾಗಿದೆ ಎಂದು ಹೇಳಿದ್ದಾರೆ.

ಮಂಗೇಶ್ ಹತ್ಯೆಯ ನಂತರ ಡಿಎಸ್ಪಿ ಶಾಹಿ ದಾಖಲಿಸಿರುವ ಎಫ್ಐಆರ್ ಪ್ರಕಾರ, ಸೆಪ್ಟೆಂಬರ್ 5 ರಂದು ಮುಂಜಾನೆ 3:15ಕ್ಕೆ ‘ಎನ್‌ಕೌಂಟರ್ ನಡೆದಿದೆ. ಎಸ್‌ಟಿಎಫ್‌ ತಂಡದಲ್ಲಿ ಡಿಎಸ್ಪಿಗಳಾದ ಶಾಹಿ ಮತ್ತು ವಿಮಲ್ ಕುಮಾರ್ ಸಿಂಗ್, ಇನ್‌ಸ್ಪೆಕ್ಟರ್‌ಗಳಾದ ರಾಘವೇಂದ್ರ ಸಿಂಗ್ ಮತ್ತು ಮಹಾವೀರ್ ಸಿಂಗ್, ಸಬ್ ಇನ್‌ಸ್ಪೆಕ್ಟರ್‌ಗಳಾದ ಅತುಲ್ ಚತುರ್ವೇದಿ ಮತ್ತು ಪ್ರದೀಪ್ ಸಿಂಗ್, ಹೆಡ್ ಕಾನ್‌ಸ್ಟೆಬಲ್‌ಗಳಾದ ನೀರಜ್ ಪಾಂಡೆ, ಸುಶೀಲ್ ಸಿಂಗ್ ಮತ್ತು ರಾಮ್ ನಿವಾಸ್ ಶುಕ್ಲಾ ಕಾನ್‌ಸ್ಟೆಬಲ್‌ಗಳಾದ ಅಮಿತ್ ತ್ರಿಪಾಠಿ ಮತ್ತು ಅಮರ್ ಶ್ರೀವಾಸ್ತವ ಇದ್ದರು.

ಸೆಪ್ಟೆಂಬರ್ 5 ಗುರುವಾರ ಮುಂಜಾನೆ ಹಲವು ಅಪರಾಧ ಆರೋಪಗಳನ್ನು ಹೊತ್ತಿದ್ದ ಮಂಗೇಶ್ ಯಾದವ್ ಅವರನ್ನು ಪೊಲೀಸರು ಎನ್‌ಕೌಂಟರ್ ಮಾಡಿದ್ದಾರೆ. ಪೊಲೀಸರ ಪ್ರಕಾರ, ಆಗಸ್ಟ್ ಅಂತ್ಯದಲ್ಲಿ ಸುಲ್ತಾನ್‌ಪುರದ ಆಭರಣ ಮಳಿಗೆಯಲ್ಲಿ 1.5 ಕೋಟಿ ರೂಪಾಯಿಯ ದರೋಡೆ ನಡೆದಿತ್ತು. ಅದರಲ್ಲಿ ಮಂಗೇಶ್ ಭಾಗಿಯಾಗಿದ್ದ ಎನ್ನಲಾಗಿದೆ. ಆತನ ತಲೆಯ ಪೊಲೀಸರು 1 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದರು ಎಂದು ವರದಿಯಾಗಿದೆ.

ಇದನ್ನೂ ಓದಿ : ಜಾರ್ಖಂಡ್ | ಪೊಲೀಸ್ ನೇಮಕಾತಿ ಪರೀಕ್ಷೆ ವೇಳೆ 12 ಅಭ್ಯರ್ಥಿಗಳು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...