Homeಮುಖಪುಟಯುಪಿ ಪೊಲೀಸರಿಂದ 'ಯಾದವ ವ್ಯಕ್ತಿ'ಯ ಎನ್‌ಕೌಂಟರ್ : "ಜಾತಿಯ ಕಾರಣಕ್ಕೆ ಕೊಲ್ಲಲಾಗಿದೆ" ಎಂದ ಅಖಿಲೇಶ್ ಯಾದವ್

ಯುಪಿ ಪೊಲೀಸರಿಂದ ‘ಯಾದವ ವ್ಯಕ್ತಿ’ಯ ಎನ್‌ಕೌಂಟರ್ : “ಜಾತಿಯ ಕಾರಣಕ್ಕೆ ಕೊಲ್ಲಲಾಗಿದೆ” ಎಂದ ಅಖಿಲೇಶ್ ಯಾದವ್

- Advertisement -
- Advertisement -

ಉತ್ತರ ಪ್ರದೇಶದ ಸುಲ್ತಾನ್‌ಪುರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಪೊಲೀಸರ ಗುಂಡಿಗೆ ಬಲಿಯಾದ ಯಾದವ ಸಮುದಾಯದ ಯುವಕನ ಕುಟುಂಬವು, ಪೊಲೀಸರು ಆತನನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದೆ

ಡಕಾಯಿತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಮನೆಯಿಂದ ಕರೆದೊಯ್ದು ಅಕ್ರಮ ಬಂಧನದಲ್ಲಿಟ್ಟ ಎರಡು ದಿನಗಳ ನಂತರ, ಪೊಲೀಸರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಕುಟುಂಬ ದೂರಿದೆ.

ಸೆಪ್ಟೆಂಬರ್ 5ರಂದು ಉತ್ತರ ಪ್ರದೇಶ ಪೊಲೀಸರ ವಿಶೇಷ ಕಾರ್ಯಪಡೆ (ಎಸ್‌ಟಿಎಫ್‌) ನಡೆಸಿದ ಮಂಗೇಶ್ ಯಾದವ್ ಎನ್‌ಕೌಂಟರ್‌ ರಾಜ್ಯ ರಾಜಕೀಯದಲ್ಲಿ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿದೆ. ವಿರೋಧ ಪಕ್ಷಗಳು ಇದನ್ನು ‘ನಕಲಿ ಎನ್‌ಕೌಂಟರ್’ ಎಂದು ಟೀಕಿಸಿವೆ.

ಡಕಾಯಿತಿ ಪ್ರಕರಣದಲ್ಲಿ ಬಂಧಿತರಾಗಿರುವ ಪ್ರಬಲ ಜಾತಿಗಳು ಮತ್ತು ಇತರ ಸಮುದಾಯಗಳ ಆರೋಪಿಗಳ ವಿರುದ್ದ ಯಾವುದೇ ಕ್ರಮ ಕೈಗೊಂಡಿಲ್ಲ. ಆದರೆ, ಮಂಗೇಶ್ ಅನ್ನು ಮಾತ್ರ ಆತನ ಜಾತಿಯ ಕಾರಣಕ್ಕೆ ಪೊಲೀಸರು ಎನ್‌ಕೌಂಟರ್ ಮಾಡಿದ್ದಾರೆ ಎಂದು ಸಮಾಜವಾದಿ ಪಕ್ಷ (ಎಸ್‌ಪಿ)ದ ಅಧ್ಯಕ್ಷ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ.

ಯಾದವರು ಉತ್ತರ ಪ್ರದೇಶದ ಅತಿ ದೊಡ್ಡ ಇತರೆ ಹಿಂದುಳಿದ ವರ್ಗಗಳ ಸಮುದಾಯವಾಗಿದೆ ಮತ್ತು ಸಮಾಜವಾದಿ ಪಕ್ಷದ ರಾಜಕೀಯದ ತಳಹದಿ ಎಂದು ಪರಿಗಣಿಸಲಾಗಿದೆ.

“ಪೊಲೀಸರು ನನ್ನ ಮಗನನ್ನು ಕರೆದುಕೊಂಡು ಹೋಗಿ ಗುಂಡು ಹಾರಿಸಿ ಕೊಲೆ ಮಾಡಿದ್ದಾರೆ. ಕಸ್ಟಡಿಯಲ್ಲೇ ಅವರು ಹತ್ಯೆ ಮಾಡಿದ್ದಾರೆ” ಎಂದು ಮಂಗೇಶ್ ಅವರ ತಾಯಿ ಶೀಲಾ ದೇವಿ ಸ್ಥಳೀಯ ಜೌನ್‌ಪುರದ ಬಕ್ಷಾ ಪೊಲೀಸ್ ಠಾಣೆಯ ಠಾಣಾಧಿಕಾರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ.

ಮಂಗೇಶ್ ಅನ್ನು ಬಂಧಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಿದ ಪೊಲೀಸರು ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ. ನಂತರ ಆತನನ್ನು’ಎನ್‌ಕೌಂಟರ್‌’ನಲ್ಲಿ ಕೊಲ್ಲಲಾಯಿತು ಎಂದು ಪೊಲೀಸರು ಸಮರ್ಥಿಸಿಕೊಂಡಿದ್ದಾರೆ.

ಸಮಾಜವಾದಿ ಪಕ್ಷವನ್ನು ಬೆಂಬಲಿಸುತ್ತಿರುವ ಯಾದವ ಸಮುದಾಯವನ್ನು ಉತ್ತರ ಪ್ರದೇಶ ಪೊಲೀಸರು ಗುರಿಯಾಗಿಸಿಕೊಂಡಿದ್ದಾರೆ ಎಂದು ಅಖಿಲೇಶ್ ಯಾದವ್ ಆರೋಪಿಸಿದ್ದಾರೆ. ಮಂಗೇಶ್ ಅವರ ‘ಎನ್ಕೌಂಟರ್’ ನಲ್ಲಿ ಭಾಗವಹಿಸಿದ್ದ ಅಧಿಕಾರಿಗಳು ಸೇರಿದಂತೆ ಎಲ್ಲಾ 11 ಪೊಲೀಸ್ ಸಿಬ್ಬಂದಿ ಪ್ರಬಲ ಜಾತಿ ಗುಂಪುಗಳಿಗೆ, ವಿಶೇಷವಾಗಿ ಠಾಕೂರ್ ಮತ್ತು ಬ್ರಾಹ್ಮಣ ಜಾತಿಗೆ ಸೇರಿದವರು ಎಂದು ಸಮಾಜವಾದಿ ಪಕ್ಷದ ಬೆಂಬಲಿಗರು ಮತ್ತು ಸದಸ್ಯರು ಸಾಮಾಜಿಕ ಮಾಧ್ಯಮಗಳಲ್ಲಿ ಗಮನಸೆಳೆದಿದ್ದಾರೆ.

ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಕಾರ್ಯಾಚರಣೆಯ ನೇತೃತ್ವವನ್ನು ಪೊಲೀಸ್ ಉಪ ಅಧೀಕ್ಷಕ ಧರ್ಮೇಶ್ ಕುಮಾರ್ ಶಾಹಿ ವಹಿಸಿದ್ದರು. ಅವರ ಪತ್ನಿ ರಿತು ಶಾಹಿ ಗೋರಖ್‌ಪುರದ ಬಿಜೆಪಿ ಪದಾಧಿಕಾರಿಯಾಗಿದ್ದು, ಸೆಪ್ಟೆಂಬರ್ 3 ಮಂಗಳವಾರ ಉತ್ತರ ಪ್ರದೇಶ ರಾಜ್ಯ ಮಹಿಳಾ ಆಯೋಗದ ಸದಸ್ಯರಾಗಿ ನಾಮನಿರ್ದೇಶನಗೊಂಡಿದ್ದಾರೆ.

‘ಎನ್‌ಕೌಂಟರ್’ ನಲ್ಲಿ ಭಾಗವಹಿಸಿದ್ದ ಡಿಎಸ್‌ಪಿ ಶಾಹಿ ಅವರು ಮಂಗೇಶ್ ಅವರ ಮೃತ ಶರೀರದ ಪಕ್ಕ ಸ್ಲೈಡ್-ಇನ್ ಚಪ್ಪಲಿ ಧರಿಸಿದ್ದರು. ಅದು ಅವರು ಮುಂದೆ ಬ್ಲಡ್‌ ಪೂಲ್‌ಗೆ ಇಳಿಯಲು ಸಿದ್ದರಾಗಿದ್ದ ರೀತಿ ತೋರಿಸುತ್ತಿತ್ತು ಎಂದು ಎಸ್‌ಪಿ ಲೋಹಿಯಾ ವಾಹಿನಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಯಾದವ್ ಎಕ್ಸ್‌ನಲ್ಲಿ ವ್ಯಂಗ್ಯವಾಗಿ ಹೇಳಿದ್ದಾರೆ.

ಮಂಗೇಶ್ ಅವರ ಹತ್ಯೆಯ ನಂತರ ಎಸ್‌ಟಿಎಫ್ ತಂಡದ ಗುಂಪು ಛಾಯಾಚಿತ್ರವನ್ನು ಯುಪಿ ಪೊಲೀಸರು ಅಧಿಕೃತವಾಗಿ ಬಿಡುಗಡೆ ಮಾಡಿದ್ದಾರೆ. ಅಖಿಲೇಶ್ ಯಾದವ್ ಅವರು ಮಂಗೇಶ್ ಅವರ ‘ಎನ್ಕೌಂಟರ್ ಅನ್ನು ನಕಲಿ ಎಂದು ಕರೆದಿದ್ದು, ರಾಜ್ಯ ಪೊಲೀಸರ ಸಂಪೂರ್ಣ ಕಾರ್ಯಾಚರಣೆಯ ಕುರಿತು ಪ್ರಶ್ನೆಗಳನ್ನು ಎತ್ತಿದ್ದಾರೆ.

“ಆಡಳಿತ ಪಕ್ಷವು ಸುಲ್ತಾನ್‌ಪುರ ಡಕಾಯಿತಿಯಲ್ಲಿ ಭಾಗಿಯಾಗಿರುವವರೊಂದಿಗೆ ಆಳವಾದ ಸಂಬಂಧ ಹೊಂದಿರುವಂತೆ ತೋರುತ್ತಿದೆ. ಅದಕ್ಕಾಗಿಯೇ, ನಕಲಿ ಎನ್‌ಕೌಂಟರ್‌ಗೆ ಮೊದಲು, ಅವರು ‘ಮುಖ್ಯ ಆರೋಪಿ’ಯನ್ನು ಸಂಪರ್ಕಿಸಿದ್ದಾರೆ. ಅಲ್ಲದೆ, ಇತರರ ಕಾಲಿಗೆ ಗುಂಡು ಹಾರಿಸುವಾಗ ಶರಣಾಗುಂತೆ ಹೇಳಿದ್ದಾರೆ. ಆದರೆ, ಒಬ್ಬರನ್ನು(ಮಂಗೇಶ್ ಯಾದವ್) ಮಾತ್ರ ಅವರ ಜಾತಿಯ ಕಾರಣಕ್ಕೆ ಕೊಲೆ ಮಾಡಿದ್ದಾರೆ” ಎಂದು ಅಖಿಲೇಶ್ ಯಾದವ್ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ದ ವಾಗ್ದಾಳಿ ನಡೆಸಿರುವ ಅಖಿಲೇಶ್ ಯಾವದ್ ” ನಕಲಿ ಎನ್‌ಕೌಂಟರ್‌ಗಳು ರಕ್ಷಕನನ್ನು ಪರಭಕ್ಷಕನನ್ನಾಗಿ ಮಾಡುತ್ತದೆ. ನಿಜವಾದ ಪರಿಹಾರ ನಕಲಿ ಎನ್‌ಕೌಂಟರ್‌ಗಳಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವುದಾಗಿದೆ ಎಂದು ಹೇಳಿದ್ದಾರೆ.

ಮಂಗೇಶ್ ಹತ್ಯೆಯ ನಂತರ ಡಿಎಸ್ಪಿ ಶಾಹಿ ದಾಖಲಿಸಿರುವ ಎಫ್ಐಆರ್ ಪ್ರಕಾರ, ಸೆಪ್ಟೆಂಬರ್ 5 ರಂದು ಮುಂಜಾನೆ 3:15ಕ್ಕೆ ‘ಎನ್‌ಕೌಂಟರ್ ನಡೆದಿದೆ. ಎಸ್‌ಟಿಎಫ್‌ ತಂಡದಲ್ಲಿ ಡಿಎಸ್ಪಿಗಳಾದ ಶಾಹಿ ಮತ್ತು ವಿಮಲ್ ಕುಮಾರ್ ಸಿಂಗ್, ಇನ್‌ಸ್ಪೆಕ್ಟರ್‌ಗಳಾದ ರಾಘವೇಂದ್ರ ಸಿಂಗ್ ಮತ್ತು ಮಹಾವೀರ್ ಸಿಂಗ್, ಸಬ್ ಇನ್‌ಸ್ಪೆಕ್ಟರ್‌ಗಳಾದ ಅತುಲ್ ಚತುರ್ವೇದಿ ಮತ್ತು ಪ್ರದೀಪ್ ಸಿಂಗ್, ಹೆಡ್ ಕಾನ್‌ಸ್ಟೆಬಲ್‌ಗಳಾದ ನೀರಜ್ ಪಾಂಡೆ, ಸುಶೀಲ್ ಸಿಂಗ್ ಮತ್ತು ರಾಮ್ ನಿವಾಸ್ ಶುಕ್ಲಾ ಕಾನ್‌ಸ್ಟೆಬಲ್‌ಗಳಾದ ಅಮಿತ್ ತ್ರಿಪಾಠಿ ಮತ್ತು ಅಮರ್ ಶ್ರೀವಾಸ್ತವ ಇದ್ದರು.

ಸೆಪ್ಟೆಂಬರ್ 5 ಗುರುವಾರ ಮುಂಜಾನೆ ಹಲವು ಅಪರಾಧ ಆರೋಪಗಳನ್ನು ಹೊತ್ತಿದ್ದ ಮಂಗೇಶ್ ಯಾದವ್ ಅವರನ್ನು ಪೊಲೀಸರು ಎನ್‌ಕೌಂಟರ್ ಮಾಡಿದ್ದಾರೆ. ಪೊಲೀಸರ ಪ್ರಕಾರ, ಆಗಸ್ಟ್ ಅಂತ್ಯದಲ್ಲಿ ಸುಲ್ತಾನ್‌ಪುರದ ಆಭರಣ ಮಳಿಗೆಯಲ್ಲಿ 1.5 ಕೋಟಿ ರೂಪಾಯಿಯ ದರೋಡೆ ನಡೆದಿತ್ತು. ಅದರಲ್ಲಿ ಮಂಗೇಶ್ ಭಾಗಿಯಾಗಿದ್ದ ಎನ್ನಲಾಗಿದೆ. ಆತನ ತಲೆಯ ಪೊಲೀಸರು 1 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದರು ಎಂದು ವರದಿಯಾಗಿದೆ.

ಇದನ್ನೂ ಓದಿ : ಜಾರ್ಖಂಡ್ | ಪೊಲೀಸ್ ನೇಮಕಾತಿ ಪರೀಕ್ಷೆ ವೇಳೆ 12 ಅಭ್ಯರ್ಥಿಗಳು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...