Homeಕರ್ನಾಟಕಕೊಲ್ಲುವ ದೈವ, ಮನಸ್ಸನ್ನು ಪರಿವರ್ತಿಸಲಾರದೇ?: ಮೂಢನಂಬಿಕೆ ವಿರುದ್ಧ ನಟ ಕಿಶೋರ್‌ ಜಾಗೃತಿ

ಕೊಲ್ಲುವ ದೈವ, ಮನಸ್ಸನ್ನು ಪರಿವರ್ತಿಸಲಾರದೇ?: ಮೂಢನಂಬಿಕೆ ವಿರುದ್ಧ ನಟ ಕಿಶೋರ್‌ ಜಾಗೃತಿ

- Advertisement -
- Advertisement -

“ಕೊಲ್ಲುವ ದೈವ, ಮನಸ್ಸನ್ನು ಪರಿವರ್ತಿಸಲಾರದೇ?” ಎಂಬ ಪ್ರಶ್ನೆಯನ್ನು ಕೇಳುವ ಮೂಲಕ ನಟ ಕಿಶೋರ್‌, “ನಂಬಿಕೆ ಇರಲಿ ಮೂಢನಂಬಿಕೆ ಬೇಡ” ಜಾಗೃತಿ ಮೂಡಿಸಿದ್ದಾರೆ.

“ಕಾಂತಾರದ ದೈವವನ್ನು ಅವಮಾನಿಸಿದ ಯುವಕ ರಕ್ತಕಾರಿ ಸಾವು ಅನ್ನೊ ವೈರಲ್ ವಿಡಿಯೊ ವಾಟ್ಸಾಪಿನಲ್ಲಿ ಹರಿದು ಬಂತು. ಆ ಸಿನಿಮಾದ ಭಾಗವಾಗಿ ಈ ಥರದ ತಪ್ಪು ತಿಳಿವಳಿಕೆಗಳನ್ನು ತಿದ್ದುವುದು ನನ್ನ ಬಾಧ್ಯತೆ ಎಂದು ನಂಬಿ ಬರೆಯುತ್ತಿದ್ದೇನೆ” ಎಂದು ಅವರು ತಮ್ಮ ಫೇಸ್‌ಬುಕ್‌ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

“ಕೊಲ್ಲುವ ಶಕ್ತಿಯಿರುವ ದೈವಕ್ಕೆ ಅದರ ಬದಲು ಮನಃಪರಿವರ್ತನೆ ಮಾಡುವ ಶಕ್ತಿ ಏಕೆ ಇರುವುದಿಲ್ಲ? ಏಕೆಂದರೆ ಕತೆಗಾರನಿಗೆ ಕಥೆ ಮುಂದೆ ಸಾಗುವುದಿಲ್ಲ. ಅವನ ಮಟ್ಟಿಗೆ ಒಂದು ಕಥೆಯನ್ನು ಪರಿಣಾಮಕಾರಿಯಾಗಿ ಹೇಳುವ ತನ್ನ ಉದ್ದೇಶ ಸಾಧನೆಗೆ ದೈವವೊ, ದೆವ್ವವೊ ಒಂದು ಸಾಧನವಷ್ಟೆ, ಸಿನಿಮಾವಾಗಲಿ ಪುರಾಣವಾಗಲಿ” ಎಂದಿದ್ದಾರೆ.

“ದೈವವೋ ದೆವ್ವವೋ ನಮ್ಮ ನಮ್ಮ ನಂಬಿಕೆಯಷ್ಟೇ. ನಂಬಿದರೆ ಉಂಟು ನಂಬದಿದ್ದರೆ ಇಲ್ಲ. ಹಾಗೆಂದು ಕಷ್ಟಕಾಲದಲ್ಲಿ ಮನಸ್ಥೈರ್ಯ ಕೊಡುವ ನಂಬಿಕೆಗಳನ್ನು ಅವಮಾನಿಸುವ ಅವಶ್ಯಕತೆಯೂ ಇಲ್ಲ.‘ ಕಿಡಿಗೇಡಿಗಳನ್ನು ಶಿಕ್ಷಿಸಲು ಕಾನೂನಿದೆ. ಅವರವರ ನಂಬಿಕೆ ಅವರಿಗೆ. ನಂಬಿಕೆ ಇರಲಿ ಮೂಢನಂಬಿಕೆ ಬೇಡ. ಅದರ ಹೆಸರಲ್ಲಿ ದ್ವೇಷವೂ” ಎಂದು ತಿಳಿಸಿದ್ದಾರೆ.

ಕಾಂತಾರ ಸಿನಿಮಾ ಬಳಿಕ ಹಲವು ಚರ್ಚೆ

‘ಕಾಂತಾರ’ ಸಿನಿಮಾ ಬಿಡುಗಡೆಯಾಗಿ ಸದ್ದು ಮಾಡಿದ ಬೆನ್ನಲ್ಲೇ ಹಲವಾರು ಚರ್ಚೆಗಳು ಮುನ್ನೆಲೆಗೆ ಬಂದಿವೆ. ಕರಾವಳಿ ಭಾಗದಲ್ಲಿನ ದೈವಾರಾಧನೆಯ ಕುರಿತು ಬೆಳಕು ಚೆಲ್ಲಿದ್ದ ಕಾಂತಾರ, “ದೈವವನ್ನು ಚಿತ್ರಿಸಿರುವ ರೀತಿ”ಯ ಕಾರಣ ಹಲವು ವಿಶ್ಲೇಷಣೆಗಳಿಗೆ ಒಳಪಟ್ಟಿತ್ತು.

ಈ ಹಿಂದೆ ನಟ ಚೇತನ್‌, “ನಮ್ಮ ಕನ್ನಡದ ಚಲನಚಿತ್ರ ಕಾಂತಾರವು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಖುಷಿಯ ಸಂಗತಿ. ಭೂತಕೋಲವು ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ನಿರ್ದೇಶಕ ರಿಷಬ್ ಶೆಟ್ಟಿಯವರು ಹೇಳಿದ್ದಾರೆ. ಇದು ನಿಜವಲ್ಲ” ಎಂದಿದ್ದರು.

“ನಮ್ಮ ಪಂಬದ/ನಲಿಕೆ/ಪರವರ ಬಹುಜನ ಸಂಪ್ರದಾಯಗಳು, ವೈದಿಕ-ಬ್ರಾಹ್ಮಣ್ಯದ ಹಿಂದೂ ಧರ್ಮಕ್ಕಿಂತ ಹಿಂದಿನಿಂದ ಇರುವವು. ಮೂಲನಿವಾಸಿ ಸಂಸ್ಕೃತಿಗಳನ್ನು ಪರದೆಯ ಮೇಲೆಯಾಗಲಿ, ಅದರಾಚೆಯಾಗಲಿ, ಸತ್ಯ ಸಂಗತಿಗಳೊಂದಿಗೆ ತೋರಿಸಬೇಕೆಂದು ನಾವು ಕೇಳುತ್ತೇವೆ” ಎಂದು ತಿಳಿಸಿದ್ದರು.

ದೈವವನ್ನು ವೈಚಾರಿಕವಾಗಿಸದೆ ಮೌಢ್ಯವಾಗಿಸಿದ ಹೆಗ್ಗಳಿಕೆ ‘ಕಾಂತಾರ’ ಸಿನಿಮಾಕ್ಕೆ ಸಲ್ಲುತ್ತದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗಿದ್ದವು.

‘ಕಾಂತಾರ- ಒಂದು ದಂತಕಥೆ’ ಎಂದು ರಿಷಬ್ ಹೇಳಿದ್ದಾರೆ. ಆದರೆ ಇದನ್ನು ಸಾಮಾನ್ಯ ಜನಸಮೂಹ ದಂತಕಥೆಯಾಗಿಯೋ, ಕಾಲ್ಪನಿಕವಾಗಿಯೋ ಗ್ರಹಿಸುವುದಕ್ಕಿಂತ ವಾಸ್ತವವೆಂಬಂತೆ ನಂಬಿಬಿಡುವ ಹಾಗೂ ಹಿಂದುತ್ವವಾದಿಗಳು ತಮ್ಮ ರಾಜಕಾರಣಕ್ಕೆ ಬಳಸಿಕೊಳ್ಳುವ ಅಪಾಯವಿರುತ್ತದೆ. ಸಂಸ್ಕೃತಿಯ ನೆಪದಲ್ಲಿ ದೃಶ್ಯ ಮಾಧ್ಯಮವೊಂದು ಮೌಢ್ಯವನ್ನು ರಾರಾಜಿಸುವುದು ಆತಂಕದ ಸಂಗತಿ. ಸಾಂಸ್ಕೃತಿಕ ಪರಿಕರಗಳನ್ನು ದೃಶ್ಯಮಾಧ್ಯಮಕ್ಕೆ ಒಳಪಡಿಸಿದಾಗ ಕಲಾತ್ಮಕತೆ ಹೆಚ್ಚುತ್ತದೆ ಎಂಬುದು ನೂರಕ್ಕೆ ನೂರರಷ್ಟು ನಿಜ. ಆದರೆ ಆ ಸಾಂಸ್ಕೃತಿಕ ಕಲಾತ್ಮಕತೆ ಮೌಢ್ಯದ ರೂಪವಾಗಿರಬಾರದು‌. ಅದು ರೂಪಕವಾಗಿ ಹೊಮ್ಮಬೇಕು. ಆಗ ಮಾತ್ರ ವಿಶಿಷ್ಟ ಅನುಭೂತಿಯನ್ನು ಕಲಾ ಮಾಧ್ಯಮವೊಂದು ನೀಡಬಲ್ಲದು‌ ಎಂಬ ವಿಶ್ಲೇಷಣೆಗಳು ಬಂದಿದ್ದವು.

ಇದನ್ನೂ ಓದಿರಿ: ‘ಕಾಂತಾರ’ ದೈವಕ್ಕೂ ‘ಕರ್ಣನ್‌’ ದೈವಕ್ಕೂ ಎಷ್ಟೊಂದು ವ್ಯತ್ಯಾಸ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...