Homeಮುಖಪುಟಇಬ್ಬರು ಮುಸ್ಲಿಮರ ಹತ್ಯೆ ವಿವಾದ; ರಾಜಸ್ಥಾನ ಪೊಲೀಸರ ವಿರುದ್ಧ ಹರಿಯಾಣ ಪೊಲೀಸರಿಂದ ಪ್ರಕರಣ ದಾಖಲು

ಇಬ್ಬರು ಮುಸ್ಲಿಮರ ಹತ್ಯೆ ವಿವಾದ; ರಾಜಸ್ಥಾನ ಪೊಲೀಸರ ವಿರುದ್ಧ ಹರಿಯಾಣ ಪೊಲೀಸರಿಂದ ಪ್ರಕರಣ ದಾಖಲು

ರಾಜಸ್ಥಾನ- ಹರಿಯಾಣ ಗಡಿಯಲ್ಲಿ ಗೋರಕ್ಷಣೆಯ ಹೆಸರಲ್ಲಿ ಇಬ್ಬರು ಮುಸ್ಲಿಮರನ್ನು ಕೊಲ್ಲಲಾಗಿದೆ

- Advertisement -
- Advertisement -

ಬಜರಂಗದಳದ ಗೂಂಡಾಗಳು ಇಬ್ಬರು ಮುಸ್ಲಿಮರನ್ನು ಹರಿಯಾಣ- ರಾಜಸ್ಥಾನ ಗಡಿಯಲ್ಲಿ ಹತ್ಯೆ ಮಾಡಿದ್ದಾರೆಂಬ ಪ್ರಕರಣ ಹಲವು ತಿರುವುಗಳನ್ನು ಪಡೆದುಕೊಳ್ಳುತ್ತಿದೆ.

ರಾಜಸ್ಥಾನದ ಮುಸ್ಲಿಂ ವ್ಯಕ್ತಿಗಳನ್ನು ಹರಿಯಾಣಕ್ಕೆ ಎಳೆದೊಯ್ದು, ಕಾರಿನಲ್ಲಿ ಕೂಡಿಹಾಕಿ ಕೊಲೆ ಮಾಡಲಾಗಿದ್ದು, ಈಗ ಎರಡು ರಾಜ್ಯಗಳ ನಡುವೆ ತಿಕ್ಕಾಟ ಆರಂಭವಾಗಿದೆ.

ಹರಿಯಾಣ ಪೊಲೀಸರು ರಾಜಸ್ಥಾನ ಪೊಲೀಸರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. 30 ರಿಂದ 40 ಅನಾಮಧೇಯ ಪೊಲೀಸರ ವಿರುದ್ಧ ಎಫ್‌ಐಆರ್‌ ಆಗಿದೆ.

ಗೋರಕ್ಷಕರು ಕೊಂದಿದ್ದಾರೆ ಎಂದು ಹೇಳಲಾದ ಇಬ್ಬರು ಮುಸ್ಲಿಮರ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಿದ ಸಂದರ್ಭದಲ್ಲಿ ರಾಜಸ್ಥಾನ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಮಹಿಳೆಯೊಬ್ಬರು ದೂರು ನೀಡಿದ್ದಾರೆ. ಅದರ ಅನ್ವಯ ಪ್ರಕರಣ ದಾಖಲಿಸಲಾಗಿದೆ.

ದೂರು ನೀಡಿದ ಮಹಿಳೆಯ ಮಗನಾಗಿರುವ ಶ್ರೀಕಾಂತ್ ಪಂಡಿತ್, ಈ ಇಬ್ಬರು ಮುಸ್ಲಿಮರ (ನಾಸಿರ್‌ ಮತ್ತು ಜುನೈದ್‌) ಅಪಹರಣ ಮತ್ತು ಹತ್ಯೆಯಲ್ಲಿ ಆರೋಪಿಯಾಗಿದ್ದಾನೆ. ಬಜರಂಗದಳದ ಮುಖಂಡನಾದ ಮೋನು ಮಾನೇಸರ್ ನೇತೃತ್ವದ ಗೋಸಂರಕ್ಷಣಾ ಗುಂಪಿನ ಸದಸ್ಯನಾಗಿ ಶ್ರೀಕಾಂತ್ ಗುರುತಿಸಿಕೊಂಡಿದ್ದಾನೆ. ಬಂಧನದಿಂದ ತಪ್ಪಿಸಿಕೊಳ್ಳುತ್ತಿರುವ ಐವರು ಆರೋಪಿಗಳಲ್ಲಿ ಈತನೂ ಒಬ್ಬನಾಗಿದ್ದಾನೆ.

ಶ್ರೀಕಾಂತ್‌ನ ತಾಯಿ ದುಲಾರಿ ದೇವಿ ಅವರು ತಮ್ಮ ದೂರಿನಲ್ಲಿ, “ರಾಜಸ್ಥಾನ ಪೊಲೀಸರು ನನ್ನ ಕುಟುಂಬದ ಸದಸ್ಯರ ಮೇಲೆ ಹಲ್ಲೆ ನಡೆಸಿದರು. ನನ್ನ ಗರ್ಭಿಣಿ ಸೊಸೆಯ ಹೊಟ್ಟೆಗೆ ಒದ್ದು ಗರ್ಭಪಾತಕ್ಕೆ ಕಾರಣವಾಗಿದ್ದಾರೆ” ಎಂದು ಆರೋಪಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 148 (ಗಲಭೆ, ಮಾರಣಾಂತಿಕ ಆಯುಧಗಳೊಂದಿಗೆ ಶಸ್ತ್ರಸಜ್ಜಿತ), 149 (ಕಾನೂನುಬಾಹಿರ ಸಭೆ), 354 (ಹೆಣ್ಣಿನ ನಮ್ರತೆಯನ್ನು ಆಕ್ರೋಶಗೊಳಿಸುವ ಉದ್ದೇಶದಿಂದ ಹಲ್ಲೆ), 452 (ಮನೆ-ಅತಿಕ್ರಮಣ) ಮತ್ತು 312 (ಗರ್ಭಪಾತಕ್ಕೆ ಕಾರಣವಾಗುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ದೇವಿಯವರು ಮಾಡಿರುವ ಆರೋಪಗಳನ್ನು ರಾಜಸ್ಥಾನ ಪೊಲೀಸರು ನಿರಾಕರಿಸಿದ್ದಾರೆ. “ಮಗುವಿನ ಸಾವಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ, ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಯನ್ನು ನಿರೀಕ್ಷಿಸಲಾಗುತ್ತಿದೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆಂದು ‘ಎನ್‌ಡಿಟಿವಿ’ ವರದಿ ಮಾಡಿದೆ.

“ರಾಜಸ್ಥಾನ ಪೊಲೀಸ್‌ ತಂಡದ ಸುಮಾರು 40 ಸಿಬ್ಬಂದಿ ನನ್ನ ಮನೆಗೆ ಬಲವಂತವಾಗಿ ಪ್ರವೇಶಿಸಿ, ನಮ್ಮನ್ನು ನಿಂದಿಸಿದ್ದಾರೆ. ನನ್ನ ಇತರ ಇಬ್ಬರು ಗಂಡು ಮಕ್ಕಳನ್ನು ಕರೆದುಕೊಂಡು ಹೋಗಿದ್ದಾರೆ” ಎಂದು ಮಹಿಳೆ ಹೇಳಿಕೆ ನೀಡಿದ್ದಾರೆ.

ಕಳೆದ ವಾರ ಹರಿಯಾಣದಲ್ಲಿ ರಾಜಸ್ಥಾನದ ಇಬ್ಬರು ವ್ಯಕ್ತಿಗಳು ಎಸ್‌ಯುವಿಯೊಳಗೆ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಹರಿಯಾಣದ ನುಹ್‌ನಲ್ಲಿ ಗೋವುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದರೆಂಬ ಶಂಕೆಯ ಮೇರೆಗೆ ಗೋರಕ್ಷಣೆಯ ಹೆಸರಿನ ಗೂಂಡಾಗಳು ದಾಳಿ ನಡೆಸಿರುವುದಾಗಿ ವರದಿಯಾಗಿದೆ.

ಈ ಪ್ರಕರಣದಲ್ಲಿ ಬಜರಂಗದಳದ ಸದಸ್ಯ ಮೋನು ಮಾನೇಸರ್ ಸೇರಿದಂತೆ ಐವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಭಿವಾನಿ ಜಿಲ್ಲೆಯಲ್ಲಿ ಇಬ್ಬರು ಮುಸ್ಲಿಮರ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧ ತನಿಖಾ ಸಂಸ್ಥೆ ನಿರ್ಲಕ್ಷ್ಯ ತಾಳಿದೆ ಎಂಬ ಆರೋಪಗಳನ್ನು ಪರಿಶೀಲಿಸಲು ಹರಿಯಾಣ ಪೊಲೀಸರು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದ್ದಾರೆ.

ಇದನ್ನೂ ಓದಿರಿ: ಹರಿರ್ಯಾಣ- ರಾಜಸ್ಥಾನ ಗಡಿ: ಇಬ್ಬರು ಮುಸ್ಲಿಮರನ್ನು ಜೀವಂತವಾಗಿ ಸುಟ್ಟ ದುಷ್ಕರ್ಮಿಗಳು; ಸ್ಥಳೀಯರಲ್ಲಿ ಭೀತಿ

ನಾಸಿರ್ ಮತ್ತು ಜುನೈದ್ ಅವರನ್ನು ಅಪಹರಿಸಿದ ನಂತರ ಆರೋಪಿಗಳು ಪೊಲೀಸರನ್ನು ಭೇಟಿ ನೀಡಿದ್ದಾರೆ ಎಂಬ ಅಂಶವನ್ನು ಗಂಭೀರವಾಗಿ ರಾಜಸ್ಥಾನ ಪೊಲೀಸರು ಪರಿಗಣಿಸಿದ್ದಾರೆ. ‘ಅಪರಾಧ ತನಿಖಾ ಸಂಸ್ಥೆ ಪೊಲೀಸ್ ಠಾಣೆ’ಯ ಸಮೀಪವಿರುವ ಎಲ್ಲಾ ಸಂಸ್ಥೆಗಳ ಸಿಸಿಟಿವಿ ದೃಶ್ಯಗಳನ್ನು ರಾಜಸ್ಥಾನ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆದರೆ, ಈ ಆರೋಪ ನಿರಾಧಾರ ಎಂದು ನುಹ್ ಪೊಲೀಸ್ ವರಿಷ್ಠಾಧಿಕಾರಿ ವರುಣ್ ಸಿಂಗ್ಲಾ ತಿಳಿಸಿದ್ದಾರೆ. ಆರೋಪಗಳನ್ನು ಪರಿಶೀಲಿಸಲು ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಉಷಾ ಕುಂದು ನೇತೃತ್ವದಲ್ಲಿ ಎಸ್‌ಐಟಿ ರಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

“ಅಪರಾಧ ತನಿಖಾ ಸಂಸ್ಥೆಯ ಪಾತ್ರದ ಕುರಿತು ರಾಜಸ್ಥಾನ ಪೊಲೀಸರ ವರದಿ ಏನು ತಿಳಿಸುತ್ತಿದೆ ಎಂದು ತಿಳಿಯಲು ನಾನು ಕಾಯುತ್ತಿದ್ದೇನೆ. ನಮ್ಮ ಪೊಲೀಸರು ಭಾಗಿಯಾಗಿರುವುದು ಕಂಡುಬಂದರೆ, ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...